ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ.
ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ. ೨೦೧೧ರ ಜನಗಣತಿಯ ಪ್ರಕಾರ ಜಗತ್ತಿನಲ್ಲಿ ೬.೪ ಕೋಟಿ ಜನರು ಕನ್ನಡ ಮಾತನಾಡುತ್ತಾರೆ ಎಂದು ತಿಳಿದುಬಂದಿದೆ. ಇವರಲ್ಲಿ ೫.೫ ಕೋಟಿ ಜನರ ಮಾತೃಭಾಷೆ ಕನ್ನಡವಾಗಿದೆ. ಬ್ರಾಹ್ಮಿ ಲಿಪಿಯಿಂದ ರೂಪುಗೊಂಡ ಕನ್ನಡ ಲಿಪಿಯನ್ನು ಉಪಯೋಗಿಸಿ ಕನ್ನಡ ಭಾಷೆಯನ್ನು ಬರೆಯಲಾಗುತ್ತದೆ. ಕನ್ನಡ ಬರಹದ ಮಾದರಿಗಳಿಗೆ ಸಾವಿರದ ಐನೂರು ವರುಷಗಳ ಚರಿತ್ರೆಯಿದೆ. ಕ್ರಿ.ಶ. ಆರನೆಯ ಶತಮಾನದ ಪಶ್ಚಿಮ ಗಂಗ ಸಾಮ್ರಾಜ್ಯದ ಕಾಲದಲ್ಲಿ ಮತ್ತು ಒಂಬತ್ತನೆಯ ಶತಮಾನದ ರಾಷ್ಟ್ರಕೂಟ ಸಾಮ್ರಾಜ್ಯದ ಕಾಲದಲ್ಲಿ ಹಳಗನ್ನಡ ಸಾಹಿತ್ಯ ಅತ್ಯಂತ ಹೆಚ್ಚಿನ ರಾಜಾಶ್ರಯ ಪಡೆಯಿತು. ಅದಲ್ಲದೆ ಸಾವಿರ ವರುಷಗಳ ಸಾಹಿತ್ಯ ಪರಂಪರೆ ಕನ್ನಡಕ್ಕಿದೆ.ವಿನೋಬಾ ಭಾವೆ ಕನ್ನಡ ಲಿಪಿಯನ್ನು ಲಿಪಿಗಳ ರಾಣಿಯೆಂದು ಹೊಗಳಿದ್ದಾರೆ.[ಸೂಕ್ತ ಉಲ್ಲೇಖನ ಬೇಕು]
ಕನ್ನಡ | ||
---|---|---|
ಬಳಕೆಯಲ್ಲಿರುವ ಪ್ರದೇಶಗಳು: | ಕರ್ನಾಟಕ, ಭಾರತ, ಕೇರಳಕ್ಕೆ ಸೇರಿಹೋಗಿರುವ ಕಾಸರಗೋಡು, ಮಹಾರಾಷ್ಟ್ರ, ಆಂಧ್ರಪ್ರದೇಶ,ತೆಲಂಗಾಣ, ಗೋವಾ, ತಮಿಳುನಾಡು ಮುಂತಾದೆಡೆಗಳಲ್ಲಿಯೂ ಭಾರತದಿಂದ ಹೊರಗಿರುವ ಕೆನಡಾ, ಆಸ್ಟ್ರೇಲಿಯ, ಮಲೇಷಿಯಾ, ಸಿಂಗಾಪುರ, ಯು.ಕೆ., ಜರ್ಮನಿ, ಹಾಂಗ್ ಕಾಂಗ್, ನ್ಯೂಜಿಲ್ಯಾಂಡ್, ಮೌರೀಷಿಯಸ್, ಯುನೈಟೆಡ್ ಅರಬ್ ಎಮಿರೇಟ್ಸ್, ಥಾಯ್ಲ್ಯಾಂಡ್. ಮುಂತಾದೆಡೆಗಳಲ್ಲಿಯೂ ಬದುಕಿರುವ ಜನಗಳು ಕನ್ನಡ ಭಾಷೆಯನ್ನು ಬಳಸುತ್ತಾರೆಂಬುದರ ಬಗ್ಗೆ ಅಧಿಕೃತ ವಿವರಗಳು ಲಭ್ಯವಾಗಿವೆ. | |
ಒಟ್ಟು ಮಾತನಾಡುವವರು: | ೬೪ ದಶಲಕ್ಷ (೨೦೧೧), ಇವರಲ್ಲಿ ೫೫ ದಶಲಕ್ಷ ಜನರಿಗೆ ಕನ್ನಡ ಮಾತೃಭಾಷೆಯಾಗಿದೆ. | |
ಶ್ರೇಯಾಂಕ: | ೨೯ | |
ಭಾಷಾ ಕುಟುಂಬ: | ದ್ರಾವಿಡ ಭಾಷೆಗಳು ದಕ್ಷಿಣ ದ್ರಾವಿಡ ತಮಿಳು - ಕನ್ನಡ ಕನ್ನಡ – ಬಡಗ ಕನ್ನಡ | |
ಅಧಿಕೃತ ಸ್ಥಾನಮಾನ | ||
ಅಧಿಕೃತ ಭಾಷೆ: | ಕರ್ನಾಟಕ, ಭಾರತ | |
ನಿಯಂತ್ರಿಸುವ ಪ್ರಾಧಿಕಾರ: | ಕರ್ನಾಟಕ ಸರ್ಕಾರದ ಹಲವು ಸಂಸ್ಥೆಗಳು | |
ಭಾಷೆಯ ಸಂಕೇತಗಳು | ||
ISO 639-1: | kn | |
ISO 639-2: | kan | |
ISO/FDIS 639-3: | kan | |
ಟಿಪ್ಪಣಿ: ಈ ಪುಟದಲ್ಲಿ IPA ಧ್ವನಿ ಸಂಕೇತಗಳು ಯುನಿಕೋಡ್ನಲ್ಲಿ ಇರಬಹುದು. |
ಕನ್ನಡವು ಒಂದು ದ್ರಾವಿಡ ಭಾಷೆಯಾಗಿದೆ. ಕನ್ನಡ ಲಿಪಿ ಸುಮಾರು ೧೫೦೦-೧೬೦೦ ವರ್ಷಗಳಿಗಿಂತಲೂ ಹಿಂದಿನದು. ಐದನೆಯ ಶತಮಾನದ ಹಲ್ಮಿಡಿ ಶಾಸನದ ಸಮಯಕ್ಕಾಗಲೇ ಕನ್ನಡವು ಸಾಕಷ್ಟು ಅಭಿವೃದ್ಧಿ ಹೊಂದಿತ್ತು. ದ್ರಾವಿಡ ಭಾಷಾತಜ್ಞ ಸ್ಟಾನ್ಫೋರ್ಡ್ ಸ್ಟೀವರ್ ಅವರ ಅಭಿಪ್ರಾಯದಂತೆ, ಕನ್ನಡದ ಭಾಷಿಕ ಚರಿತ್ರೆಯನ್ನು ಮೂರು ವಿಧವಾಗಿ ವಿಂಗಡಿಸಬಹುದು;
ಕನ್ನಡ ಭಾಷಾ ಪರಿಣತರು ಕನ್ನಡ ಸಾಹಿತ್ಯದ ಬೆಳವಣಿಗೆಯನ್ನು ಅಭ್ಯಾಸ ಮಾಡಬಹುದಾದ ಕಾಲಮಾನಗಳನ್ನು ಈ ಕೆಳಗಿನಂತೆಯೂ ನಿಷ್ಕರ್ಷಿಸಿದ್ದಾರೆ.
ಕಳೆದ ಶತಮಾನದಲ್ಲಿ ಎಂದರೆ ೨೦ನೆಯ ಶತಮಾನದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ ಬಹಳ ವ್ಯಾಪಕವಾಗಿ ನಡೆಯಿತು. ಕನ್ನಡ ಭಾಷೆಯು ಅಭಿಜಾತ ಭಾಷೆಯೆಂಬ ಸ್ಥಾನಮಾನವನ್ನು ಕೇಂದ್ರ ಸರಕಾರದಿಂದ ಪಡೆದಿದೆ. ಅಂತರಜಾಲದಲ್ಲಿ ಕನ್ನಡ ಭಾಷೆಯ ಬಳಕೆ ಯಥೇಚ್ಛವಾಗಿದೆ. ಕನ್ನಡ ಭಾಷೆ ವಾಣಿಜ್ಯ ಕ್ಷೇತ್ರದಲ್ಲಿಯೂ ಮುಂಚೂಣಿಯ ಭಾಷೆಯಾಗಿ ಬೆಳೆಯತೊಡಗಿದೆ.
ಕನ್ನಡದಲ್ಲಿ ಸಂಸ್ಕೃತದ ಪ್ರಭಾವ ಅಸಾಧಾರಣವಾದುದು. ಪ್ರಾಕೃತ, ಪಾಳಿ ಮುಂತಾದ ಭಾಷೆಗಳ ಪ್ರಭಾವವೂ ಕನ್ನಡಕ್ಕಿದೆ. ಕ್ರಿ.ಪೂ ಮೂರನೆಯ ಶತಮಾನಕ್ಕೂ ಮುನ್ನವೇ ಕನ್ನಡ ಮೌಖಿಕ ಪರಂಪರೆಯ ಭಾಷೆಯಾಗಿ ರೂಪುಗೊಂಡಿತ್ತೆಂಬುದಕ್ಕೂ ಪ್ರಾಕೃತ ಭಾಷೆಯಲ್ಲಿಯೂ ತಮಿಳು ಭಾಷೆಯಲ್ಲಿಯೂ ಬರೆಯಲ್ಪಟ್ಟ ಶಾಸನಗಳಲ್ಲಿ ಕನ್ನಡದ ಶಬ್ದಗಳು ಬಳಕೆಯಾಗಿವೆಯೆಂದೂ ಇತಿಹಾಸ ತಜ್ಞ ಐರಾವತಂ ಮಹಾದೇವನ್ ಸಾಬೀತುಪಡಿಸಿದ್ದಾರೆ. ಆ ಸಂಶೋಧನೆಯ ಪ್ರಕಾರ ಕನ್ನಡ ಅಗಾಧ ಪ್ರಮಾಣದ ಜನತೆ ಮಾತನಾಡುತ್ತಿದ್ದ ಭಾಷೆಯಾಗಿದ್ದಿತೆಂದೂ ತಿಳಿದುಬಂದಿದೆ. ಕೆ.ವಿ. ನಾರಾಯಣರು ಹೇಳುವಂತೆ, ಇಂದಿಗೆ ಕನ್ನಡದ ಉಪಭಾಷೆಗಳೆಂದು ಗುರುತಿಸಲ್ಪಡುವ ಭಾಷೆಗಳಲ್ಲಿ ಹೆಚ್ಚಿನವು ಕನ್ನಡದ ಹಳೆಯ ರೂಪವನ್ನು ಹೋಲುವಂಥದ್ದಾಗಿರಬಹುದು. ಅಲ್ಲದೆ ಅನ್ಯ ಭಾಷೆಗಳ ಪ್ರಭಾವ ವ್ಯಾಪಕವಾಗಿ ಒಳಗಾಗದ ಭಾಷೆಗಳು ಇವೆಂದೂ ಅಭಿಪ್ರಾಯಪಡುತ್ತಾರೆ.
ಕನ್ನಡದಲ್ಲಿ ತತ್ಸಮ ಶಬ್ದಗಳು ವ್ಯಾಪಕವಾಗಿ ಉಪಯೋಗಿಸಲ್ಪಡುತ್ತವೆ. ದಿನ, ಕೋಪ, ಸೂರ್ಯ, ಮುಖ, ನಿಮಿಷ, ಅನ್ನ ಎಂಬುವು ಕೆಲ ಉದಾಹರಣೆಗಳು.
ತ್ರಿಪದಿ ಛಂಧಸ್ಸಿನಲ್ಲಿ ರಚನೆಗೊಂಡ ಕನ್ನಡದ ಮೊದಲ ಕವಿತೆ ಕ್ರಿ.ಶ. ೭೦೦ರ ಕಪ್ಪೆ ಅರಭಟ್ಟನ ಶಾಸನದಲ್ಲಿ ಕಂಡುಬರುತ್ತದೆ. ರಾಜಾ ನೃಪತುಂಗ ಅಮೋಘ ವರ್ಷ ರಚಿಸಿದ ಕವಿರಾಜಮಾರ್ಗ ಕನ್ನಡದಲ್ಲಿ ರಚನೆಗೊಂಡ ಮೊದಲ ಕೃತಿಯಾಗಿದೆ. ಸಾಹಿತ್ಯ ವಿಮರ್ಶೆಗಳನ್ನೂ ಕಾವ್ಯರಚನೆಯನ್ನೂ ಒಳಗೊಂಡಂಥ ಈ ಕೃತಿ ಆ ಕಾಲದಲ್ಲಿ ಅಸ್ತಿತ್ವದಲ್ಲಿ ಕನ್ನಡದ ಉಪಭಾಷೆಗಳನ್ನು ಒಂದೆಡೆ ಸೇರುವ ಪ್ರಯತ್ನ ಮಾಡಿದೆ. ಈ ಕೃತಿ ಕ್ರಿ.ಶ. ೬ನೆಯ ಶತಮಾನದ ರಾಜ ದುರ್ವಿನೀತನ ಬಗ್ಗೆಯೂ ಕ್ರಿ. ೬೩೬ರ ಐಹೊಳೆ ಶಾಸನ ಬರೆದ ರವಿಕೀರ್ತಿಯ ಬಗ್ಗೆಯೂ ವಿವರಗಳನ್ನು ನೀಡುತ್ತದೆ. ಕನ್ನಡದಲ್ಲಿ ಲಭ್ಯವಾಗಿರುವ ಮೊದಲ ಕೃತಿ ವ್ಯಾಕರಣವನ್ನು ವಿವರಿಸುವಂಥದ್ದೂ ವಿವಿಧ ಕನ್ನಡ ಉಪಭಾಷೆಗಳನ್ನು ಒಂದೆಡೆ ಸೇರಿಸುವ ಪ್ರಯತ್ನ ಮಾಡುವುದರಿಂದಲೂ ಕನ್ನಡ ಭಾಷೆಯಲ್ಲಿ ಸಾಹಿತ್ಯ ರಚನೆ ಅದಕ್ಕಿಂತಲೂ ಕೆಲ ಶತಮಾನಗಳ ಹಿಂದೆಯೇ ಆರಂಭಗೊಂಡಿರಬಹುದೆಂದು ಊಹಿಸಬಹುದಾಗಿದೆ. ಕ್ರಿ.ಶ. ೯೦೦ರಲ್ಲಿ ಶಿವಕೋಟ್ಯಾಚಾರ್ಯರು ರಚಿಸಿದ ವಡ್ಡಾರಾಧನೆ ಎಂಬ ಗದ್ಯಕೃತಿಯಲ್ಲಿ ಶ್ರವಣಬೆಳಗೊಳದ ಭದ್ರಬಾಹುವಿನ ಕುರಿತಾದ ವಿವರಗಳು ಲಭ್ಯವಾಗುತ್ತವೆ. ಪಂಪನ ಕವಿಯು ಬರೆದ ವಿಕ್ರಮಾರ್ಜುನ ವಿಜಯಂ ಹಾಗೂ ಇನ್ನಿತರ ಕೃತಿಗಳು ಇವೆ.
ಉದಾಹರಣೆಗೆ:
ಣಿಚ್ಚವು ಹೊಸದಾಗಿರುವಂಕಾಕ್ಷರ ದಚ್ಚುಗಳೊಳಗೊಂಬತ್ತು
ಣೊಚ್ಚಿತ್ತು ಬಿನ್ನತ್ತಾಗಿರುತರುವಂಕದ ಅಚ್ಚಕಾವ್ಯಕೆ ಸೊನ್ನೆಯಾದಿಮ್
ನುಣುಪಾದ ಸೊನ್ನೆಯ ಮಧ್ಯದೊಳ್ ಕೂಡಿಸೆ ಗಣಿತರ್ಗೆ ಲೆಕ್ಕವ ತರುವ
ಅಣಿಯಾದ ಸೊನ್ನೆಗೆ ಮಣಿಯುತ ನಾನೀಗ ಗುಣಕರ್ಗೆ ಭೂವಲಯವನು
ವರುಷಭಾರತದೊಳು ಬೆಳಗುವೆತ್ತಿಹ ಕಾವ್ಯ ಕರುನಾಡ ಜನರಿಗನಾದಿ
ಅರುಹನಾಗಮದೊಂದಿಗೆ ನಯ ಬರುವಂತೆ ವರಕಾವ್ಯವನ್ನು ಕನ್ನದಿಪೆ
ಪುರ ಜಿನನಾಥ ತನ್ನಂಕದೊಳ್ ಬ್ರಾಹ್ಮಿಗೆ ಅರವತ್ನಾಲ್ಕಕ್ಷರವಿತ್ತ
ವರಕುವರಿಯರು ಸೌಂದರಿಗೆ ಒಂಬತ್ತನು ಕರುಣಿಸಿದನು ಸೊನ್ನೆ ಸಹಿತ
ಕನ್ನಡದೊಂದೆರಳ್ ಮೂರುನಾಲ್ಕೈದಾರು ಮುನ್ನ ಏಳೆಂಟೊಂಬತೆಂಬ
ಉನ್ನತವಾದಂಕ ಸೊನ್ನೆಯಿಂ ಹುಟ್ಟಿತೆಂದೆನ್ನುವುದನು ಕಲಿಸಿದನು
ಸರ್ವಜ್ಞದೇವನು ಸರ್ವಾಂಗದಿಂ ಪೇಳ್ದ ಸರ್ವಸ್ವ ಭಾಷೆಯ ಸರಣಿಗೆ
ಸಕಲವ ಕರ್ಮಾಟದಣುರೂಪ ಹೊಂದುತ ಪ್ರಕಟದ ಓಂದರೋಳ್ ಅಡಗಿ
ಹದಿನೆಂಟು ಭಾಷೆಯ ಮಹಾಭಾಷೆಯಾಗಲು ಬದಿಯ ಭಾಷೆಗಳೇಳುನೂರು
ಹೃದಯದೊಳಡಗಿಸಿ ಕರ್ಮಾಟ ಲಿಪಿಯಾಗಿ ಹುದುಗಿದಂಕ ಭೂವಲಯ
ಪರಭಾಷೆಗಳೆಲ್ಲ ಸಂಯೋಗವಾಗಲು ಸರಸ ಶಬ್ದಾಗಮ ಹುಟ್ಟಿ
ಸರವದು ಮಾಲೆಯಾದತಿಶಯ ಹಾರದ ಸರಸ್ವತಿ ಕೊರಳ ಆಭರಣ
ಸಂಸ್ಕೃತಿ ಸಚಿವಾಲಯ ನೇಮಿಸಿದ ಭಾಷಿಕ ನಿಪುಣರು ಶಿಫಾರಸ್ಸುಗಳನ್ನು ಅನುಮೋದಿಸುತ್ತ ಕೇಂದ್ರ ಸರಕಾರ ಕನ್ನಡ ಭಾಷೆಗೆ ಅಭಿಜಾತ ಭಾಷೆ ಎಂಬ ಗೌರವವನ್ನಿತ್ತು ಆದರಿಸಿತು. ಅದಲ್ಲದೆ ಭಾರತದ ಭಾಷೆಗಳಲ್ಲಿ ನಾಲ್ಕನೆಯ ಗೌರವ ಸ್ಥಾನವೂ ಕನ್ನಡಕ್ಕೆ ದೊರೆಯಿತು. ಜುಲೈ 2011ರಲ್ಲಿ ಮೈಸೂರಿನ ಕೇಂದ್ರೀಯ ಭಾರತೀಯ ಭಾಷೆಗಳ ಅಧ್ಯಯನ ಸಂಸ್ಥೆಯಲ್ಲಿ ಅಭಿಜಾತ ಕನ್ನಡದ ಅಧ್ಯಯನಕ್ಕಾಗಿ ಪ್ರತ್ಯೇಕ ಕೇಂದ್ರ ಆರಂಭಗೊಂಡಿತು.
ಕನ್ನಡದ ಮೊದಲ ಕನ್ನಡ-ಇಂಗ್ಲೀಷ್ ನಿಘಂಟನ್ನು ರಚಿಸಿದವರು ರೆವರೆಂಡ್ ಫರ್ಡಿನಾಂಡ್ ಕಿಟ್ಟೆಲ್. ಈ ನಿಘಂಟು ೭೦,೦೦೦ಕ್ಕೂ ಅಧಿಕ ಕನ್ನಡ ಪದಗಳನ್ನು ಒಳಗೊಂಡಿದೆ. ರೆವರೆಂಡ್ ಫರ್ಡಿನಾಂಡ್ ಕಿಟ್ಟೆಲ್ ಕನ್ನಡ ಭಾಷೆಯ ಮೂರು ಉಪಭಾಷೆಗಳನ್ನೊಳಗೊಂಡ ಪ್ರಧಾನ ವ್ಯಾಕರಣವನ್ನು ವಿವರಿಸುವ ಗ್ರಂಥವೊಂದನ್ನೂ ರಚಿಸಿದ್ದಾರೆ.
ಹೊಸಗನ್ನಡ ಕಾಲಘಟ್ಟದಲ್ಲಿ ಮೊದಲ ಕನ್ನಡ-ಕನ್ನಡ ನಿಘಂಟು ರಚಿಸಿದವರು ಪ್ರೊ.ಜಿ.ವೆಂಕಟಸುಬ್ಬಯ್ಯ. ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿದ ೯,೦೦೦ಕ್ಕೂ ಅಧಿಕ ಪುಟಗಳನ್ನೊಳಗೊಂಡ ಈ ನಿಘಂಟು ಒಂಬತ್ತು ಸಂಪುಟಗಳಲ್ಲಿ ಬಿಡುಗಡೆಗೊಂಡಿದೆ. ಪ್ರೊ. ಜಿ. ವೆಂಕಟಸುಬ್ಬಯ್ಯನವರು ಕನ್ನಡ-ಇಂಗ್ಲೀಷ್ ನಿಘಂಟನ್ನೂ ಕ್ಲಿಷ್ಟ ಪದಕೋಶ ಎಂಬ ಕನ್ನಡದ ಕ್ಲಿಷ್ಟ ಪದಗಳನ್ನೊಳಗೊಂಡ ನಿಘಂಟನ್ನೂ ರಚಿಸಿದ್ದಾರೆ.
ಮೂಲ-ದ್ರಾವಿಡ | |||||||||||||||||||||||||
ಮೂಲ-ದಕ್ಷಿಣ-ದ್ರಾವಿಡ | ಮೂಲ-ದಕ್ಷಿಣ-ಮಧ್ಯ ದ್ರಾವಿಡ | ||||||||||||||||||||||||
ಮೂಲ-ತಮಿಳು-ಕನ್ನಡ | ಮೂಲ-ತೆಲುಗು | ||||||||||||||||||||||||
ಮೂಲ-ತಮಿಳು-ತೋಡ | ಮೂಲ-ಕನ್ನಡ | ಮೂಲ-ತೆಲುಗು | |||||||||||||||||||||||
ಮೂಲ-ತಮಿಳು-ಕೊಡವ | ಕನ್ನಡ | ತೆಲುಗು | |||||||||||||||||||||||
ಮೂಲ-ತಮಿಳು-ಮಲೆಯಾಳ | |||||||||||||||||||||||||
ಮೂಲ-ತಮಿಳು | ಮಲೆಯಾಳ | ||||||||||||||||||||||||
ತಮಿಳು | |||||||||||||||||||||||||
ಕನ್ನಡ ಅಕ್ಷರಮಾಲೆಯಲ್ಲಿ ೪೯ ಅಕ್ಷರಗಳಿದ್ದು, ಇದು ಒಂದು ಶಾಬ್ದಿಕ ಅಕ್ಷರಮಾಲೆ. ಕನ್ನಡ ಅಕ್ಷರಮಾಲೆಯಲ್ಲಿ ಬರುವ ಅಕ್ಷರಗಳು ಸರಿ ಸುಮಾರು ಎಲ್ಲಾ ಭಾರತೀಯ ಭಾಷೆಗಳಲ್ಲಿ ಬರುತ್ತವೆ. ತೆಲುಗು ಲಿಪಿಗೆ ಕನ್ನಡ ಲಿಪಿಯೊಂದಿಗೆ ನಿಕಟವಾದ ಹೋಲಿಕೆಯಿದೆ ಮತ್ತು ಈ ಎರಡು ಲಿಪಿಗಳ ಮೂಲ ಒಂದೇ ಆಗಿದೆ. ಕನ್ನಡ ಮತ್ತು ತೆಲುಗು ಲಿಪಿಗಳೆರಡೂ ಕದಂಬ ಲಿಪಿಯಿಂದ ರೂಪುಗೊಂಡಂಥವು. ಕನ್ನಡ ಲಿಪಿ ಒತ್ತಕ್ಷರ ಹಾಗೂ ಕಾಗುಣಿತಗಳ ದೆಸೆಯಿಂದ ಸಾಕಷ್ಟು ಸಂಕೀರ್ಣವಾದದ್ದು. ಕನ್ನಡ ಬರವಣಿಗೆಯ ಪ್ರತಿ ಚಿಹ್ನೆ ಒಂದು ಶಾಬ್ದಿಕ ಮಾತ್ರೆಯನ್ನು ಪ್ರತಿನಿಧಿಸುತ್ತದೆ. ಇಂಗ್ಲೀಷಿನಂಥ ಭಾಷೆಗಳಲ್ಲಿ ಒಂದು ಚಿಹ್ನೆ ಒಂದು ಶಬ್ದವನ್ನು ಮಾತ್ರ ಪ್ರತಿನಿಧಿಸುತ್ತದೆ. ಮಾನವನು ತಿಳಿಸಬೇಕಾದ ಅರ್ಥಕ್ಕೆ ಭಾಷೆ ಸಂಕೇತವಾದರೆ, ಭಾಷೆಗೆ ಲಿಪಿ ಸಂಕೇತವಾಗುತ್ತದೆ. ಚಿತ್ರ ಲಿಪಿಯಿಂದ ಹಿಡಿದು ಇಂದಿನ ಮುದ್ರಣ ಮತ್ತು ಕಂಪ್ಯೂಟರ್ ಲಿಪಿಯವರೆಗೆ ಲಿಪಿಗಳು ಬೆಳೆದಿವೆ. ಭಾರತದಲ್ಲಿರುವ ಅನೇಕ ಭಾಷಾಲಿಪಿಗಳಿಗೂ ಅಶೋಕನ ಶಾಸನಗಳಲ್ಲಿ ವ್ಯಾಪಕವಾಗಿ ಬಳಕೆಯಾಗಿರುವ ಬ್ರಾಹ್ಮಿ ಲಿಪಿಯೇ ಮೂಲ. ಕನ್ನಡದ ಅಕ್ಷರ ಬ್ರಾಹ್ಮಿ ಲಿಪಿಯಿಂದ ರೂಪುಗೊಂಡ ಬಗೆಯನ್ನು ವಿಸ್ತೃತ ಅಧ್ಯಯನಗಳು ನಡೆದಿವೆ. ವಿದ್ವಾಂಸರು ಈ ಬಗ್ಗೆ ವರ್ಣಮಾಲೆಯ ಪಟಗಳನ್ನು ರಚಿಸಿ ಶತಮಾನಗಳ ಅಕ್ಷರ ಸ್ವರೂಪಗಳನ್ನು ಗುರುತಿಸಿದ್ದಾರೆ. ಇಂಥ ಅಧ್ಯಯನಗಳ ಸಹಾಯದೊಂದಿಗೆ ಅಕ್ಷರಗಳು ಮಾರ್ಪಟ್ಟ ಬಗೆಯನ್ನು ಕಂಡರಿಯಲು ಸಾಧ್ಯವಿದೆ. ಮುದ್ರಣದ ಆರಂಭದೊಂದಿಗೆ ಕನ್ನಡ ಲಿಪಿಗೆ ಈಗಿನ ರೂಪ ನೆಲೆನಿಂತಿರುವುದು ಗಮನಾರ್ಹ. ಪ್ರಪಂಚದಲ್ಲಿರುವ ೧೮ ಬಗೆಯ ಲಿಪಿಗಳಲ್ಲಿ ೮ ಅಕ್ಷರ ಲಿಪಿಗಳು. ಉಳಿದಂತೆ ಚಿತ್ರಲಿಪಿಯೇ ಮುಂತಾದುವುಗಳನ್ನು ಕಾಣಬಹುದು. ಭಾರತದಲ್ಲಿ ಅನೇಕ ಭಾಷೆಗಳವು ಬ್ರಾಹ್ಮಿಲಿಪಿಯಿಂದ ರೂಪುಗೊಂಡ ಲಿಪಿಗಳಾಗಿವೆ. ಪಾರ್ಸೋ-ಅರಬ್ಬಿ ಲಿಪಿಗಳೂ ಭಾರತದಲ್ಲಿ ರೂಢಿಯಲ್ಲಿವೆ. ಉದಾ: ಉರ್ದು, ಕಾಶ್ಮೀರಿ ಮತ್ತು ಪುಷ್ತು.
ಕನ್ನಡ ವರ್ಣಮಾಲೆಯಲ್ಲಿ ಇರುವ ಲಿಪಿ ಸಂಜ್ಞೆಗಳು ಇವು:
|
|
ಅವರ್ಗೀಯ ವ್ಯಂಜನಗಳು | ||||||||||||||
---|---|---|---|---|---|---|---|---|---|---|---|---|---|---|
ಅವರ್ಗೀಯ ವ್ಯಂಜನಗಳು | ಯ | ರ | ಲ | ವ | ಶ | ಷ | ಸ | ಹ | ಳ |
ಹೀಗೆ ಒಟ್ಟು ೪೯ ವರ್ಣಗಳು ಕನ್ನಡದಲ್ಲಿರುವಂಥವು.
ವಿಭಜಿಸಲು ಸಾಧ್ಯವಿಲ್ಲದ ಧ್ವನಿಯನ್ನು ವರ್ಣವೆನ್ನಲಾಗುತ್ತದೆ ಮತ್ತು ಭಾಷೆಯ ಅತ್ಯಂತ ಕಿರಿಯ ಅಂಶವನ್ನು ಸ್ವರವೆಂದು ಕರೆಯಲಾಗುತ್ತದೆ. (ಉದಾಃ ವಸ್ತ್ರ = ವ್+ಅ+ಸ್+ತ್+ರ್+ಅ) ಸ್ವತಂತ್ರವಾಗಿ ಉಚ್ಚರಿಸಬಹುದಾದ ವರ್ಣಗಳನ್ನು ಸ್ವರಗಳೆಂದೂ ಇತರ ವರ್ಣಗಳ ಸಹಾಯದಿಂದ ಉಚ್ಚರಿಸಬಹುದಾದ ವರ್ಣಗಳನ್ನೂ ವ್ಯಂಜನಗಳೆಂದೂ ಕರೆಯಲಾಗುತ್ತದೆ.
ಉದಾಹರಣೆಗೆ: ಅ, ಇ, ಉ, ಋ, ಎ, ಒ.
ಉದಾಹರಣೆಗೆ: ಆ, ಈ, ಊ, ೠ, ಏ, ಐ, ಓ, ಔ.
ಉದಾಹರಣೆಗೆ: ಋಷಿ, ಋಜುವಾತು, ಋಣ, ಋತುಮಾನ.
ಮೇಲಿನ ವರ್ಣಗಳು ಎರಡು ವಿಭಿನ್ನ ಸ್ವರಗಳ ಸಂಯೋಗದಿಂದ ಉಂಟಾಗುತ್ತವೆ. ಅ ಮತ್ತು ಇ ಸ್ವರಗಳ ಸಂಧಿಯಲ್ಲಿ "ಐ"ಕಾರವು ಉಂಟಾಗಿದ್ದು, ಅ ಮತ್ತು ಉ ಸ್ವರಗಳಿಂದ "ಔ"ಕಾರವು ಜನಿಸಿದೆ. ಈ ಎರಡು ಸ್ವರಗಳು ವಿಜಾತೀಯ ಸ್ವರಗಳ ಸಂಧಿಯಿಂದ ಆಗಿದ್ದು, ತಮ್ಮ ದೀರ್ಘ ಸ್ವರೂಪದಿಂದಲಾಗಿ ದೀರ್ಘಸ್ವರಗಳ ಪಟ್ಟಿಗೆ ಸೇರುತ್ತವೆ.
ವ್ಯಂಜನಗಳನ್ನು ಉಚ್ಚಾರಣೆಯ ಆಧಾರದ ಮೇಲೆ "ಕ್"ನಿಂದ "ಮ್"ಕಾರದ ವರೆಗಿನ ಇಪ್ಪತ್ತೈದು ವರ್ಣಗಳನ್ನು ವರ್ಗೀಯ ವ್ಯಂಜನಗಳೆಂದು ಕರೆಯುತ್ತೇವೆ.
"ಯ" ಕಾರದಿಂದ "ಳ" ಕಾರದ ವರೆಗಿನ ವ್ಯಂಜನಗಳನ್ನು ಅವರ್ಗೀಯ ವ್ಯಂಜನಗಳೆನ್ನುತ್ತೇವೆ.
ಕನ್ನಡ ಅಕ್ಷರಗಳನ್ನು ಗಣಕಯಂತ್ರದಲ್ಲಿ ಸಾಮಾನ್ಯ ಕೀಲಿಮಣೆಯ ಮೂಲಕ ಮೂಡಿಸಲು ಅನೇಕ ಲಿಪ್ಯಂತರಣ ವಿಧಾನಗಳಿವೆ. ಇವುಗಳಲ್ಲಿ ಕೆಲವೆಂದರೆ INSCRIPT, ITRANS, ಬರಹ ಮತ್ತು ನುಡಿ. ಕರ್ನಾಟಕ ಸರ್ಕಾರದ ಅಧಿಕೃತ ಲಿಪ್ಯಂತರಣ ವಿಧಾನ ನುಡಿ. INSCRIPT ಶಿಷ್ಟಾಚಾರವನ್ನು ವಿಂಡೋಸ್ ಹಾಗೆಯೇ GNOME ಬಳಸುವ ಎಲ್ಲಾ ಕಾರ್ಯಾಚರಣೆ ವ್ಯವಸ್ಥೆಗಳೂ ಗುರುತು ಹಿಡಿಯುತ್ತವೆ.ಇದನ್ನು ಸಿದ್ಧಪಡಿಸಿಕೊಟ್ಟವರು ಕೆ. ಪಿ. ರಾವ್ರವರು.
ಕನ್ನಡ ಅಂಕೆಗಳನ್ನು ಈ ಕೆಳಗಿನ ಪಟ್ಟಿಯಲ್ಲಿ ಕಾಣುವಂತೆ ಗುರುತಿಸಲಾಗುತ್ತದೆ.
ಕನ್ನಡ ಅಂಕೆಗಳು | ಇಂಡೋ ಅರೇಬಿಯನ್ ಅಂಕೆಗಳು | ||
---|---|---|---|
೦ | ಸೊನ್ನೆ | 0 | |
೧ | ಒಂದು | 1 | |
೨ | ಎರಡು | 2 | |
೩ | ಮೂರು | 3 | |
೪ | ನಾಲ್ಕು | 4 | |
೫ | ಐದು | 5 | |
೬ | ಆರು | 6 | |
೭ | ಏಳು | 7 | |
೮ | ಎಂಟು | 8 | |
೯ | ಒಂಬತ್ತು | 9 |
This article uses material from the Wikipedia ಕನ್ನಡ article ಕನ್ನಡ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.