ಅಮರ್ತ್ಯ ಸೇನ್: ಭಾರತದ ಅರ್ಥಶಾಸ್ತ್ರಜ್ಞ

ಅಮರ್ತ್ಯ ಸೇನ್ (ನವೆಂಬರ್ ೩, ೧೯೩೩) ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞರಾಗಿ ವಿಶ್ವಮಾನ್ಯರಾಗಿದ್ದಾರೆ.

ಅಮರ್ತ್ಯ ಸೇನ್
ಅಮರ್ತ್ಯ ಸೇನ್: ಜೀವನ, ಗಣ್ಯ ಅರ್ಥಶಾಸ್ತ್ರಜ್ಞರಾಗಿ, ಮಹಾನ್ ಪ್ರಭಾವಿಗಳಲ್ಲೊಬ್ಬರು
ನೊಬೆಲ್ ಪಾರಿತೋಷಕ ಸಂಸ್ಥೆಯಲ್ಲಿನ ಅಧಿಕೃತ ಚಿತ್ರ
Bornನವೆಂಬರ್ ೩, ೧೯೩೩
Nationalityಭಾರತೀಯರು
Known forನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞರು

ಜೀವನ

ರವೀಂದ್ರರ ಶಾಂತಿನಿಕೇತನದಲ್ಲಿ ಜನಿಸಿದ ಅಮರ್ತ್ಯ ಸೇನ್ ಅವರು ಅರ್ಥಶಾಸ್ತ್ರದಲ್ಲಿ ಭಾರತಕ್ಕೆ ವಿಶ್ವಮನ್ನಣೆ ದೊರಕಿಸಿ ನೊಬೆಲ್ ಪಾರಿತೋಷಕ ಪಡೆದವರು. ಅಮರ್ತ್ಯ ಸೇನ್ ಅವರು ಜನಿಸಿದ್ದು ನವೆಂಬರ್ ೩, ೧೯೩೩ರಲ್ಲಿ. ಅಮರ್ತ್ಯ ಸೇನ್ ಅವರ ವಂಶಜರು ಇಂದಿನ ಬಾಂಗ್ಲಾದೇಶದ ಡಾಕ್ಕಾ ಪ್ರದೇಶದಿಂದ ಬಂದವರಾಗಿದ್ದು ಅವರ ಹಿರಿಯರು ರವೀಂದ್ರನಾಥ ಠಾಗೋರ್ರಿಗೆ ಆಪ್ತರಾಗಿಯೂ ಶಾಂತಿನಿಕೇತನದ ಶೈಕ್ಷಣಿಕ ಕಾರ್ಯಕ್ಷೇತ್ರದಲ್ಲಿ ನಿರಂತರ ಸಕ್ರಿಯರಾಗಿಯೂ ಇದ್ದವರು. ಹೀಗಾಗಿ ಅವರ ಜನನದಿಂದ ಮೊದಲ್ಗೊಂಡಂತೆ ಶಾಲಾ ಕಾಲೇಜುಗಳ ವಿದ್ಯಾಭ್ಯಾಸಗಳು ನಡೆದದ್ದೆಲ್ಲಾ ಶಾಂತಿನಿಕೇತನದಲ್ಲೇ. ಮುಂದೆ ಅವರು ಕೆಂಬ್ರಿಡ್ಜ್, ಹಾರ್ವರ್ಡ್ ಅಂತಹ ವಿಶ್ವವಿದ್ಯಾಲಯಗಳಲ್ಲಿ ಓದು, ಅಧ್ಯಾಪನ ಮತ್ತು ಸಂಶೋಧನೆಗಳಲ್ಲಿ ತಮ್ಮ ಬದುಕನ್ನು ನಡೆಸಿದರು.

ತಮ್ಮ ೨೩ನೇ ವರ್ಷದಲ್ಲಿಯೇ ಕೊಲ್ಕತ್ತಾದ ಜಾದವ್‌ಪುರ್ ವಿಶ್ವವಿದ್ಯಾನಿಲಯದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದರು.ಅಲ್ಲಿಂದ ಪ್ರಾರಂಭವಾದ ಇವರ ಸಾಧನೆಗಳ ಸರಪಳಿ ಅವಿರತವಾಗಿ ಮುಂದುವರಿಯಿತು.೧೯೯೮ ರಿಂದ ೨೦೦೪ರವರೆಗೆ ಕೇಂಬ್ರಿಜ್ ವಿಶ್ವವಿದ್ಯಾನಿಲಯದ ಆಕ್ಸ್‌ಬ್ರಿಜ್‌ಕಾಲೇಜ್‌‌ನ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ ಅವರು ಹಾಗೆ ನೇಮಕಗೊಂಡ ಪ್ರಥಮ ಏಷ್ಯನ್ ಎಂಬ ಕೀರ್ತಿಗೆ ಪಾತ್ರರಾದವರು.

ಗಣ್ಯ ಅರ್ಥಶಾಸ್ತ್ರಜ್ಞರಾಗಿ

ಅಮರ್ತ್ಯ ಸೇನ್ ಅವರು ಮಾನವ ಕಲ್ಯಾಣ ಅರ್ಥಶಾಸ್ತ್ರ (welfare economics) ಮತ್ತು ಸಾಮಾಜಿಕ ಆಯ್ಕೆಗಳ ಪ್ರತಿಪಾದನೆ (social choice theory)ಗಳಲ್ಲಿ ಮಾಡಿರುವ ಮಹತ್ವದ ಕೆಲಸಕ್ಕೆ ವಿಶ್ವಮಾನ್ಯರಾಗಿದ್ದಾರೆ. ಅವರ ಚಿಂತನೆಗಳೆಲ್ಲವೂ ಬಡತನದ ದೌರ್ಭಾಗ್ಯಗಳಿಂದ ಬೆಂದು ಬಳಲಿದ ಜನರ ಕುರಿತಾದ ಖಾಳಜಿಗಳಿಂದ ಕೂಡಿದ್ದಾಗಿರುವುದು ಮಹತ್ವದ ಅಂಶವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಪ್ರತಿಪಾದಿಸಿದ ‘ಬರಗಾಲಕ್ಕೆ ಕುರಿತಾದ ಕಾರಣಗಳು’ ಮತ್ತು ‘ವಿಶ್ವದಲ್ಲಿ ಆಹಾರ ಕೊರತೆಯನ್ನು ನೀಗಿಸಲು ಕೈಗೊಳ್ಳಬಹುದಾದ ಸೂಕ್ತ ಕ್ರಮಗಳ ಚಿಂತನೆಗಳು’ ವಿಶ್ವದೆಲ್ಲೆಡೆ ಪ್ರಶಂಸೆ ಪಡೆದಿವೆ. 1998ರ ವರ್ಷದಲ್ಲಿ ನೊಬೆಲ್ ಪ್ರಶಸ್ತಿ ಆಯ್ಕೆ ಸಮಿತಿಯು ಅವರ ಮಾನವ ಕಲ್ಯಾಣ ಅರ್ಥಶಾಸ್ತ್ರದಲ್ಲಿನ ಸಾಧನೆಗಳನ್ನು ಪರಿಗಣಿಸಿ ಅವರಿಗೆ ಅರ್ಥಶಾಸ್ತ್ರದ ನೊಬೆಲ್ ಗೌರವವನ್ನು ಸಲ್ಲಿಸಿತು.

ಮಹಾನ್ ಪ್ರಭಾವಿಗಳಲ್ಲೊಬ್ಬರು

೨೦೧೦ರ ‘ನ್ಯೂ ಸ್ಟೇಟ್ಸ್ ಮನ್’ ಪತ್ರಿಕೆಯು ಅಮರ್ತ್ಯ ಸೇನ್ ಅವರನ್ನು ವಿಶ್ವದ ಐವತ್ತು ಮಹಾನ್ ಪ್ರಭಾವಿಗಳ ಪಟ್ಟಿಯಲ್ಲಿ ಹೆಸರಿಸಿದೆ. ಇದೇ ಅಭಿಪ್ರಾಯವನ್ನು ಈ ಹಿಂದೆ ‘ಟೈಮ್ಸ್’ ಕೂಡಾ ವ್ಯಕ್ತಪಡಿಸಿತ್ತು. ಅಮರ್ತ್ಯ ಸೇನ್ ಅವರು ವಿಶ್ವ ಸಮುದಾಯದ ‘ಆರ್ಥಿಕ ಶಾಂತಿ ಮತ್ತು ಭದ್ರತಾ ಸಮಿತಿಯ’ ನಿರ್ವಾಹಕರಾಗಿದ್ದಾರೆ. ಇದಲ್ಲದೆ ವಿಶ್ವದ ಆರ್ಥಿಕ ಚಿಂತನೆಗಳ ಬಹುಮುಖ ವೇದಿಕೆಗಳಲ್ಲಿ ಪ್ರಧಾನರೆನಿಸಿದ್ದಾರೆ.

ಪುಸ್ತಕಗಳು

ಅಮರ್ತ್ಯ ಸೇನ್ ಅವರು ಅರ್ಥಶಾಸ್ತ್ರ ಮತ್ತು ಮಾನವ ಕಲ್ಯಾಣದ ಕುರಿತಾಗಿ ಮೂಡಿಸಿರುವ ಮಹತ್ವದ ಚಿಂತನೆಗಳು ಮತ್ತು ಗ್ರಂಥಗಳೂ ವಿಶ್ವದಾದ್ಯಂತ ಬಹುತೇಕ ಭಾಷೆಗಳಲ್ಲಿ ಮೂಡಿಬಂದಿವೆ. ಅವರು ೩೦ಕೊ ಹೆಚ್ಚು ಕೃತಿಗಳನ್ನು ಹೊರತಂದಿದ್ದು ಈ ಕೆಳಗಿನ ಪ್ರಸಿದ್ಧ ಕೃತಿಗಳು ಅದರಲ್ಲಿ ಸೇರಿವೆ.

  • ದಿ ಆರ್ಗ್ಯುಮೆಂಟೇಟಿವ್ ಇಂಡಿಯನ್ (ವಿತಂಡವಾದಿ ಭಾರತೀಯ)
  • ವಯಲೆನ್ಸ್ ಅಂಡ್ ಐಡೆಂಟಿಟಿ (ಹಿಂಸೆ ಮತ್ತು ನೆಲೆ)

ಪ್ರಶಸ್ತಿ ಗೌರವಗಳು

  1. ಅಮರ್ತ್ಯ ಸೇನ್ ಅವರಿಗೆ 1998ರ ವರ್ಷದ ನೊಬೆಲ್ ಪ್ರಶಸ್ತಿ ಹಾಗೂ ೧೯೯೯ರ ವರ್ಷದಲ್ಲಿನ ಭಾರತ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿಯಾದ 'ಭಾರತ ರತ್ನ'ವೂ ಸೇರಿದಂತೆ ವಿಶ್ವದಾದ್ಯಂತ ಅನೇಕ ಪ್ರಶಸ್ತಿ ಗೌರವಗಳು ಸಂದಿವೆ.
  2. ನೊಬೆಲ್ ಪ್ರಶಸ್ತಿ ವಿಜೇತ, ಅಮರ್ತ್ಯ ಸೇನ್ ಅವರಿಗೆ ಸ್ಪೇನ್‌ನ ಉನ್ನತ ಸಾಮಾಜಿಕ ವಿಜ್ಞಾನ ಪ್ರಶಸ್ತಿ, ಕನ್ನಡ ಪ್ರಭ, ೨೬,ಮೇ ೨೦೨೧

ಆಕರಗಳು

  1. ಇಂಗ್ಲಿಷ್ ವಿಕಿಪೀಡಿಯಾ ಲೇಖನ

Tags:

ಅಮರ್ತ್ಯ ಸೇನ್ ಜೀವನಅಮರ್ತ್ಯ ಸೇನ್ ಗಣ್ಯ ಅರ್ಥಶಾಸ್ತ್ರಜ್ಞರಾಗಿಅಮರ್ತ್ಯ ಸೇನ್ ಮಹಾನ್ ಪ್ರಭಾವಿಗಳಲ್ಲೊಬ್ಬರುಅಮರ್ತ್ಯ ಸೇನ್ ಪುಸ್ತಕಗಳುಅಮರ್ತ್ಯ ಸೇನ್ ಪ್ರಶಸ್ತಿ ಗೌರವಗಳುಅಮರ್ತ್ಯ ಸೇನ್ ಆಕರಗಳುಅಮರ್ತ್ಯ ಸೇನ್ನವೆಂಬರ್ ೩೧೯೩೩

🔥 Trending searches on Wiki ಕನ್ನಡ:

ಹೆಚ್.ಡಿ.ದೇವೇಗೌಡಗರ್ಭಪಾತಸೀತಾ ರಾಮಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳುನಾಗರೀಕತೆಶ್ರೀಕೃಷ್ಣದೇವರಾಯಕಲೆಕ್ರಿಕೆಟ್ಬುಡಕಟ್ಟುಬೌದ್ಧ ಧರ್ಮಮಧ್ವಾಚಾರ್ಯಕಬಡ್ಡಿಕೇಂದ್ರ ಲೋಕ ಸೇವಾ ಆಯೋಗವೆಂಕಟೇಶ್ವರ ದೇವಸ್ಥಾನಭಾರತದ ಸರ್ವೋಚ್ಛ ನ್ಯಾಯಾಲಯಕವಿಗಳ ಕಾವ್ಯನಾಮಬಾರ್ಲಿಭಾರತದಲ್ಲಿ ತುರ್ತು ಪರಿಸ್ಥಿತಿಭಾರತ ಬಿಟ್ಟು ತೊಲಗಿ ಚಳುವಳಿಕಂಸಾಳೆಕೈಗಾರಿಕೆಗಳುಶ್ರವಣಬೆಳಗೊಳಗೂಗಲ್ಹಿಂದೂ ಮಾಸಗಳುತ್ರಿವೇಣಿಭಾರತ ಸಂವಿಧಾನದ ಪೀಠಿಕೆದೆಹಲಿಮಹಾವೀರ ಜಯಂತಿ1935ರ ಭಾರತ ಸರ್ಕಾರ ಕಾಯಿದೆವಿಧಾನಸೌಧಆಧುನಿಕ ಕನ್ನಡ ಕಾವ್ಯದ ಬೆಳವಣಿಗೆನಿರುದ್ಯೋಗಪಾಪಕನ್ನಡ ಸಾಹಿತ್ಯ ಪರಿಷತ್ತುಭಾರತದಲ್ಲಿನ ಶಿಕ್ಷಣತಾಳಗುಂದ ಶಾಸನರಚಿತಾ ರಾಮ್ಸ್ತ್ರೀವಾದಅಂತಾರಾಷ್ಟ್ರೀಯ ಸಂಬಂಧಗಳುಮೈಸೂರು ಅರಮನೆವಿಕ್ರಮಾರ್ಜುನ ವಿಜಯಕರ್ನಾಟಕದ ತಾಲೂಕುಗಳುಸಂಖ್ಯಾಶಾಸ್ತ್ರಟೊಮೇಟೊವ್ಯವಸಾಯರವಿಚಂದ್ರನ್ಜಾಗತಿಕ ತಾಪಮಾನಗಾದೆರಾಮಾಯಣಅಸಹಕಾರ ಚಳುವಳಿಝಾನ್ಸಿ ರಾಣಿ ಲಕ್ಷ್ಮೀಬಾಯಿಮಂಗಳೂರುಗಂಗ (ರಾಜಮನೆತನ)ಯಕೃತ್ತುರಾವಣತಾಳೆಮರಚಾಲುಕ್ಯಭಾರತದ ತ್ರಿವರ್ಣ ಧ್ವಜಶೂದ್ರ ತಪಸ್ವಿಅ.ನ.ಕೃಷ್ಣರಾಯಗುಬ್ಬಚ್ಚಿಸಂಕ್ಷಿಪ್ತ ಸಂಧ್ಯಾವಂದನೆ ಮಂತ್ರ ಮತ್ತು ಭೋಜನ ವಿಧಿಹಳೇಬೀಡುಸುಧಾ ಮೂರ್ತಿವಿಶ್ವ ವ್ಯಾಪಾರ ಸಂಸ್ಥೆವಿಜ್ಞಾನಉತ್ಪಾದನೆಯ ವೆಚ್ಚಕಿತ್ತೂರು ಚೆನ್ನಮ್ಮಸಾನೆಟ್ಶಿವವೀರಗಾಸೆಕರ್ನಾಟಕದ ಸಂಸ್ಕೃತಿಕನ್ನಡ ಬರಹಗಾರ್ತಿಯರುಚಂದ್ರಗುಪ್ತ ಮೌರ್ಯ🡆 More