ಅ.ನಾ.ಪ್ರಹ್ಲಾದ ರಾವ್ರವರು, ಕನ್ನಡದ ಪದಬಂಧ ಲೇಖಕರಲ್ಲಿ ಪ್ರಮುಖರು.
ಈ ಲೇಖನವನ್ನು ತಟಸ್ಥ ದೃಷ್ಟಿಕೋನದಲ್ಲಿ ಬರೆದಂತಿಲ್ಲ. ಬದಲಿಗೆ ಓರ್ವ ಅಭಿಮಾನಿಯ ನೆಲೆಯಲ್ಲಿ ಬರೆದಂತಿದೆ. (21 April 2021) |
ಇವರು ಕನ್ನಡದಲ್ಲಿ ಸುಮಾರು ೪೦,೦೦೦ ಪದಬಂಧಗಳನ್ನು ರಚಿಸಿದ್ದಾರೆ. ಇದುವರೆವಿಗೂ ಇವರು ರಚಿಸಿರುವ ಪದಬಂಧಗಳಿಗಾಗಿ ಹನ್ನೆರಡು ಲಕ್ಷ ಸುಳುಹುಗಳನ್ನು ನೀಡಿದ್ದಾರೆ. ಇವರ ಪದಬಂಧಗಳು ಕನ್ನದದ ಪ್ರಮುಖ ಪ್ರತ್ರಿಕೆಗಳು ಹಾಗು ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಪದಬಂಧ ರಚನೆಯಲ್ಲಿ ಭಾರತದಲ್ಲೇ ಇವರು ಅಗ್ರಗಣ್ಯರು ಎಂದು ಹೇಳಲಾಗಿದೆ. ಭಾರತದ ಪ್ರಾದೇಶಿಕ ಭಾಷೆಗಳಲ್ಲಿಯೇ ಅತಿ ಹೆಚ್ಚು ಪದಬಂಧ ರಚಿಸುವ ಮೂಲಕ 2015, 2016 ಹಾಗೂ 2017ರ ಲಿಮ್ಕಾ ದಾಖಲೆ ಪುಸ್ತಕದಲ್ಲಿ ಸೇರಿಕೊಳ್ಳುವ ಮೂಲಕ ರಾಷ್ಟ್ರೀಯ ದಾಖಲೆ ಮಾಡಿದ್ದಾರೆ
ಅ.ನಾ.ಪ್ರಹ್ಲಾದರಾವ್ ಕೋಲಾರ ಜಿಲ್ಲೆಯ ಅಬ್ಬಣಿ ಗ್ರಾಮದಲ್ಲಿ ಜುಲೈ ೨೪, ೧೯೫೩ರಂದು ಜನಿಸಿದರು. ತಂದೆ ಎ.ಆರ್.ನಾರಾಯಣರಾವ್, ತಾಯಿ ಕಾವೇರಮ್ಮ. ಅಬ್ಬಣಿ, ಬೆಂಗಳೂರು, ಕೋಲಾರದಲ್ಲಿ ವ್ಯಾಸಂಗ ಮುಗಿಸಿ, ವಿಜ್ಞಾನ ಪದವೀಧರರಾದರು. ಮುಕ್ತ ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಎಂ.ಎ ಸ್ನಾತಕೋತ್ತರ ಪದವಿಯನ್ನು ಗಳಿಸಿದರು. ೧೯೭೫ರಲ್ಲಿ ಪತ್ರಕರ್ತರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು.
This biographical section is written like a résumé.(21 April 2021) |
ಕೋಲಾರದಿದ ಪ್ರಕಟಗೊಳ್ಳುವ ಕೋಲಾರಪತ್ರಿಕೆ ದೈನಿಕದಲ್ಲಿ ಪತ್ರಕರ್ತರಾಗಿ (೧೯೭೫) ವೃತ್ತಿ ಆರಂಭಿಸಿದರು. ಕೋಲಾರದಿಂದ ಪ್ರಕಟಗೊಳ್ಳುತ್ತಿರುವ ಹೊನ್ನುಡಿ ದಿನಪತ್ರಿಕೆಯ ಸ್ಥಾಪಕ ಸಂಪಾದಕರಾಗಿ (1979) ಮೂರು ವರ್ಷ ಕಾಲ ಆ ಪತ್ರಿಕೆಯನ್ನು ಮುನ್ನೆಡೆಸಿದರು. ಜಿಲ್ಲಾ ಮಟ್ಟದಲ್ಲಿ ಪ್ರಕಟಗೊಳ್ಳುವ ದೈನಿಕಗಳಲ್ಲಿ ಪ್ರತಿ ನಿತ್ಯ ಸಂಪಾದಕೀಯ ಲೇಖನ ಬರೆದ ಹೆಗ್ಗಳಿಕೆಗೆ `ಹೊನ್ನುಡಿ` ಪಾತ್ರವಾಯಿತು.
೧೯೮೩ರಲ್ಲಿ ವಾರ್ತಾ ಇಲಾಖೆ ಸೇರ್ಪಡೆಗೊಂಡು, ಸುದ್ದಿ ಮತ್ತು ಪತ್ರಿಕಾ ಶಾಖೆಯಲ್ಲಿ ಕಾರ್ಯನಿರ್ವಹಿಸಿದರು. ೧೯೮೮ರಿಂದ ೧೯೯೦ರವರೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿಯಲ್ಲಿ ಸಹಾಯಕ ಸಂಪರ್ಕ ಅಧಿಕಾರಿಯಾಗಿ, ೧೯೯೦ರಲ್ಲಿ ಹಾಸನ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಕಛೇರಿಯಲ್ಲಿ ವಾರ್ತಾ ಸಹಾಯಕರಾಗಿ ಕಾರ್ಯ ನಿರ್ವಹಿಸಿದರು. ೧೯೯೨ರಿ0ದ ೧೯೯೬ರವರೆಗೆ ಮುಖ್ಯಮಂತ್ರಿಗಳ ಪತ್ರಿಕಾ ಕಾರ್ಯಾಲಯದಲ್ಲಿ ಕೆಲಸ ಮಾಡಿ ಅನುಭವಹೊಂದಿದರು. ೧೯೯೬ರಿಂದ ೨೦೦೦ರವರೆವಿಗೂ ಮಂಡ್ಯ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ೨೦೦೦ರಿ0ದ ೨೦೦೩ರವರೆವಿಗೂ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. ೨೦೦೩ರಿಂದ ಬೆಂಗಳೂರಿನಲ್ಲಿ ವಾರ್ತಾ ಇಲಾಖೆಯ ಸುದ್ದಿ ಶಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ, ೨೦೦೪ರ ನವೆಂಬರ್ನಿಂದ ೨೦೧೧ರ ಆಗಸ್ಟ್ ತಿಂಗಳವರೆಗೆ ಸುಮಾರು ಏಳು ವರ್ಷಗಳ ಕಾಲ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಲಿಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪ್ರಸ್ತುತ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2013ರಲ್ಲಿ ರಾಮನಗರ ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸಿ, 2013ರ ಜುಲೈ ತಿಂಗಳಾಂತ್ಯದಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದರು. 2014ರಿಂದ ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಬಿ.ಎಂ.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
This biographical section is written like a résumé.(21 April 2021) |
೧೯೮೪ರಲ್ಲಿ ಪತ್ರಿಕೆಗಳಿಗೆ ಪದಬಂಧಗಳನ್ನು ರಚಿಸಲು ಆರಂಭಿಸಿದ ಇವರು ಇಲ್ಲಿಯವರೆವಿಗೂ 40,000 ಪದಬಂಧಗಳನ್ನು ರಚಿಸಿದ್ದಾರೆ. ಕನ್ನಡ ಪತ್ರಿಕೆಗಳಲ್ಲಿ ಪ್ರತಿ ನಿತ್ಯ ಪ್ರಕಟಗೊಳ್ಳುವ ನಿತ್ಯ ಪದಬಂಧಗಳಲ್ಲಿ ಬಹುಪಾಲು ಪ್ರಹ್ಲಾದ್ ಅವರದೆ. ದಿನ ಪತ್ರಿಕೆಗಳ ಪುರವಣಿಗಳಲ್ಲಿ ಹಾಗೂ ನಿಯತಕಾಲಿಕೆಗಳಲ್ಲಿ ಇವರ ಪದಬಂಧಗಳು ಪ್ರಕಟಗೊಳ್ಳುತ್ತಿವೆ. ಸಾಮಾನ್ಯ ಬಂಧಗಳೊಂದಿಗೆ, ಸಿನಿಮಾ, ಸಾಹಿತ್ಯ, ಅಪರಾಧ, ವಿಜ್ಞಾನ, ಪುರಾಣ, ತಿಂಡಿ-ತಿನಿಸು, ಕ್ರೀಡೆ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದ ಪದಬಂಧಗಳನ್ನು ಇವರು ರಚಿಸಿದ್ದಾರೆ. ಇದುವರೆವಿಗೂ 8 ಸಾವಿರ ಸಿನಿಮಾ ಪದಬಂಧಗಳು ಸೇರಿದಂತೆ 40 ಸಾವಿರಕ್ಕೂ ಮಿಗಿಲು ಪದಬಂಧಗಳು ಇವರಿಂದ ರಚಿತಗೊಂಡಿವೆ. ಇದಕ್ಕಾಗಿ ಪ್ರಹ್ಲಾದ್ ಅವರು ಸುಮಾರು 12 ಲಕ್ಷ ಸುಳುಹುಗಳನ್ನು ಬರೆದಿದ್ದಾರೆ. ಇವರು ರಚಿಸಿದ ಪದಬಂಧಗಳು, ಕರ್ನಾಟಕದ ಪ್ರಮುಖ ಪತ್ರಿಕೆಗಳಾದ, ಪ್ರಜಾವಾಣಿ, ವಿಜಯ ಕರ್ನಾಟಕ, ಕನ್ನಡ ಪ್ರಭ, ಸಂಯುಕ್ತ ಕರ್ನಾಟಕ, ಮಂಗಳ, ಬಾಲಮಂಗಳ, ತರಂಗ, ಈ ಸಂಜೆ, ಅರಗಿಣಿ, ಪ್ರಿಯಾಂಕ, ಚಿತ್ರ, ಕಂದಾಯವಾತೆ೯ ಮುಂತಾದ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
ಪ್ರತಿನಿತ್ಯ `ವಿಜಯಕರ್ನಾಟಕ`, `ಕನ್ನಡಪ್ರಭ`, `ಸಂಯುಕ್ತಕರ್ನಾಟಕ` ಪತ್ರಿಕೆಗಳಲ್ಲಿ ಇವರು ನಿತ್ಯ ಪದಬಂಧ ರಚಿಸಿದ್ದಾರೆ. ಪ್ರತಿ ನಿತ್ಯ ಪದಬಂಧ ಪ್ರಕಟಿಸಲಾರಂಭಿಸಿದ ಹೆಗ್ಗಳಿಕೆ ವೈ.ಎನ್.ಕೆ ಸಾರಥ್ಯದ `ಕನ್ನಡಪ್ರಭ` ಪತ್ರಿಕೆಯದಾದರೆ, ಈ ಪತ್ರಿಕೆಗಾಗಿ ಮೊದಲು ಪದಬಂಧ ಬರಯಲಾರಂಭಿಸಿದವರು ಅ.ನಾ.ಪ್ರಹ್ಲಾದರಾವ್. `ಪ್ರಜಾವಾಣಿ` ಸಿನಿಮಾರಂಜನೆ ಪುರವಣಿಯಲ್ಲಿ ಸುಮಾರು 15 ವರ್ಷಗಳ ಕಾಲ ಪ್ರತಿ ಶುಕ್ರವಾರ ಇವರ ಸಿನಿಮಾ ಪದಬಂಧ ಪ್ರಕಟಗೊಂಡಿದೆ. `ಮಂಗಳ` ವಾರ ಪತ್ರಿಕೆಯಲ್ಲಿ ಕಳೆದ 25 ವರ್ಷಗಳಿಂದ ಪ್ರತಿವಾರ ಪದಬಂಧ ಹಾಗೂ ಪದಾನ್ವೇಷಣೆ ಕ್ವಿಜ್ ಪ್ರಕಟವಾಗುತ್ತಿವೆ. `ಬಾಲಮಂಗಳ` ಪಾಕ್ಷಿಕ ಪತ್ರಿಕೆಯಲ್ಲಿ ಕನ್ನಡ ಸುಳಿವುಗಳ ಮೂಲಕ ಇಂಗ್ಲಿಷ್ ಪದಗಳನ್ನು ತುಂಬಿಸುವ ವಿಶಿಷ್ಟ ಪದಬಂಧ ಹಾಗೂ ಸಾಮಾನ್ ಜ್ಞಾನ ಕ್ವಿಜ್ ಪ್ರಕಟಗೊಂಡಿದೆ. `ಪ್ರಿಯಾಂಕ` ಮಾಸ ಪತ್ರಿಕೆಗಾಗಿ ಸುಮಾರು 12 ವರ್ಷಗಳಿಂದ ಪದಬಂಧ ಸಿದ್ಧಪಡಿಸಿಕೊಡುತ್ತಿದ್ದಾರೆ. ರವಿ ಬೆಳಗೆರೆ ಸಂಪಾದಕತ್ವದಲ್ಲಿ ಪುನರಾರಂಭಗೊಂಡ `ಕರ್ಮವೀರ` ವಾರಪತ್ರಿಕೆಗಾಗಿ ಮೊದಲ ಸಂಚಿಕೆಯಿಂದ ಪದಸಂಪದ ಬರೆದುಕೊಟ್ಟ ಖ್ಯಾತಿಯೂ ಪ್ರಹ್ಲಾದ್ ಅವರದೆ. `ಕರ್ಮವೀರ` ಸಾಪ್ತಾಹಿಕಕ್ಕಾಗಿ ಚರ್ವಿತಚರ್ವಣ ಹಾಗೂ ಒಳಗುಟ್ಟು ಹೆಸರಿನ ವಿಶೇಷ ಫಜಲ್ ರಚಿಸಿದ್ದಾರೆ. ಕರ್ನಾಟಕ ಸರ್ಕಾರ ಪ್ರಕಟಿಸುತ್ತಿರುವ `ಕಂದಾಯ ವಾರ್ತೆ` ಮಾಸ ಪತ್ರಿಕೆಗಾಗಿ ಕಂದಾಯ ಇಲಾಖೆಗೆ ಪ್ರಸ್ತುತವೆನಿಸುವ ಪದಬಂಧ ರಚಿಸುತ್ತಿದ್ದಾರೆ. ಚಲನಚಿತ್ರ ಮಾಸಿಕ `ಚಿತ್ರ` ಪತ್ರಿಕೆಗಾಗಿ ಪದಬಂಧ ಹಾಗೂ ಸಿನಿಮಾ ಕ್ವಿಜ್ ಬರೆದುಕೊಡುತ್ತಿದ್ದಾರೆ. `ಈಸಂಜೆ` ಪತ್ರಿಕೆಗಾಗಿ ಪ್ರತಿವಾರ ಚಲನಚಿತ್ರ ಪದಬಂಧಗಳನ್ನು ರಚಿಸಿದ್ದಾರೆ. ಕನ್ನಡದ ಏಕಮೇವ ಸಿನಿಮಾ ಸಾಪ್ತಾಹಿಕ `ಅರಗಿಣಿ` ಮೊದಲ ಸಂಚಿಕೆಯಿಂದ ಇವರ ಗಿಣಿಬಂಧ ಪ್ರಕಟಿಸುತ್ತಾ ಬಂದಿದೆ.
`ಸಿಲ್ಲಿಲಲ್ಲಿ` ಹಾಗೂ `ಪಾಪಪಾಂಡು` ಧಾರಾವಾಹಿಗಳನ್ನು ಆಧರಿಸಿದ ಪದಬಂಧ ಪ್ರತಿ ಭಾನುವಾರ `ವಿಜಯಕರ್ನಾಟಕ` ಪತ್ರಿಕೆಯಲ್ಲಿ ಪ್ರಕಟಗೊಂಡಿದೆ. `ಜನವಾಹಿನಿ` ದಿನ ಪತ್ರಿಕೆ ಪ್ರತಿ ಭಾನುವಾರ ಇವರ ಪದವಾಹಿನಿ ಪ್ರಕಟಿಸಿದೆ. ಸಂಯುಕ್ತಕರ್ನಾಟಕ ಪ್ರತಿ ಭಾನುವಾರ ಇವರ ಪೋಣಿಸುಪದವ ಬಂಧವನ್ನು 15 ವರ್ಷಗಳ ಕಾಲ ಪ್ರಕಟಿಸಿದೆ. `ಮಂಗಳ` ವಾರಪತ್ರಿಕೆಗಾಗಿ ಒಂದು ವರ್ಷ ಕಾಲ ಕನ್ನಡದ ಖ್ಯಾತ ಬರಹಗಾರರ ಕಾದಂಬರಿಗಳನ್ನು ಆಧರಿಸಿ ಸಾಹಿತ್ಯ ಪದಬಂಧ ರಚಿಸಿದ್ದಾರೆ. ಹಂಪೆಯ ಕನ್ನಡ ವಿಶ್ವವಿದ್ಯಾಲಯ ಪ್ರಕಟಿಸುತ್ತಿದ್ದ ಜನಪ್ರಿಯ ವಿಜ್ಞಾನ ಪತ್ರಿಕೆ `ವಿಜ್ಞಾನಸಂಗಾತಿ`ಗಾಗಿ ಮೂರು ವರ್ಷ ಕಾಲ ವಿಜ್ಞಾನ ಪದಬಂಧ ಹಾಗೂ ವಿಜ್ಞಾನಕ್ಕೆ ಸಬಂಧಿಸಿದಂತೆ ಕ್ವಿಜ್ ಸಿದ್ಧಪಡಿಸಿಕೊಟ್ಟಿದ್ದಾರೆ. ಸಕಾಂರದ ಪ್ರಕಟಣೆಗಳಾದ `ಜನಪದ`, `ಯುವಕರ್ನಾಟಕ`, `ಮಾರ್ಚ್ಆಫ್ ಕರ್ನಾಟಕ` ಪತ್ರಿಕೆಗಳಿಗೂ ಇವರು ಪದಬಂಧ ರಚಿಸಿದ್ದಾರೆ. `ಸಂಚು`, `ಪಲೀಸ್ಫೈಲ್`, `ಪೊಲೀಸ್ ನ್ಯೂಸ್` ಪತ್ರಿಕೆಗಳಿಗಾಗಿ ಅಪರಾಧ ಪದಬಂಧಗಳನ್ನು ರಚಿಸಿದ್ದಾರೆ. `ಹೋಟೆಲ್ಪತ್ರಿಕೆ`ಗಾಗಿ ತಿಂಡಿ ತಿನಿಸು ಪದಬಂಧ ಇವರಿಂದ ಸಿದ್ದಗೊಂಡಿದೆ. ಮುಂಬಯಿನಿಂದ ಪ್ರಕಟಗೊಳ್ಳುತ್ತಿದ್ದ `ಉದಯರಾಗ` ಹಾಗೂ ನವದೆಹಲಿಯಿಂದ ಪ್ರಕಟಗೊಳ್ಳುತ್ತಿರುವ `ದೆಹಲಿ ವಾರ್ತೆ` ದಿನ ಪತ್ರಿಕೆಗಳಿಗಾಗಿ ನಿತ್ಯ ಪದಬಂಧ ರಚಿಸಿದ್ದಾರೆ. ಮದರಾಸಿನಿಂದ ಪ್ರಕಟಗೊಳ್ಳುತ್ತಿದ್ದ ಚಂದಮಾಮ ಅವರ ಜನಪ್ರಿಯ ಮಾಸಿಕಗಳಾದ `ವಿಜಯಚಿತ್ರ` ಹಾಗು `ವನಿತಾ` ಪತ್ರಿಕೆಗಳಿಗಾಗಿ ಹಲವಾರು ವರ್ಷ ಪದಬಂಧಗಳನ್ನು ರಚಿಸಿದ್ದಾರೆ. ಕನ್ನಡದ ಮೊದಲ ಕನ್ನಡ ಸುದ್ದಿಜಾಲ `ಕರ್ನಾಟಕ ನ್ಯೂಸ್ ನೆಟ್`ಗಾಗಿ ಇವರು ಸಿದ್ದಪಡಿಸಿಕೊಡುತ್ತಿದ್ದ ಪದಬಂಧ ರಾಜ್ಯದ ಹಲವಾರು ಜಿಲ್ಲಾ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಅಭಿಮಾನಿ ಪ್ರಕಾಶನ ಹೊರ ತರುತ್ತಿದ್ದ `ಅಭಿಮಾನಿ`, `ಅಭಿಮಾನ` ದಿನ ಪತ್ರಿಕೆ, `ತಾಯಿ`, `ಕ್ರೀಡಾಭಿಮಾನಿ` ಪತ್ರಿಕೆಗಳಿಗೆ ಹಲವು ವರ್ಷ ಕಾಲ ಪದಬಂಧಗಳನ್ನು ಬರೆದುಕೊಟ್ಟಿದ್ದಾರೆ. ಕನ್ನಡದ ಮೊದಲ ಪದಬಂಧಗಳಿಗೇ ಮೀಸಲಾಗಿ ಹೊರ ಬಂದ `ಶೃತಿ` ಪತ್ರಿಕೆಗಾಗಿ ಹಲವು ತಿಂಗಳು ಪ್ರತಿ ಬಾರಿಗೆ 50ರ0ತೆ ಪದಬಂಧಗಳನ್ನು ರಚಿಸಿದ್ದಾರೆ. ಚಲನಚಿತ್ರ ಪತ್ರಿಕೆಗಳಾದ `ರಂಗವಲ್ಲಿ`, `ಸ್ಟಾರ್`, `ಸಿನಿಮಾ ಮಕರಂದ` ಪತ್ರಿಕೆಗಳಿಗಾಗಿ ಚಲನಚಿತ್ರ ಪದಬಂಧಗಳನ್ನು ರಚಿಸಿದ್ದಾರೆ. ಕನ್ನಡದಲ್ಲಿ ಪ್ರಯೋಗಗೊಂಡ ಹಲವು ಪತ್ರಿಕೆಗಳ ಮೊದಲ ಸಂಚಿಕೆಗಳಲ್ಲ್ಲೇ ಇವರ ಪದಬಂಧ ಅಂಕಣ ಇತ್ತೆಂಬುದು ಗಮನಾರ್ಹ.
ಪದಬಂಧಗಳಷ್ಟೇ ಅಲ್ಲದೇ ಚಲನಚಿತ್ರ ಲೇಖನಗಳನ್ನು ಬರೆದಿದ್ದಾರೆ. `ಅರಗಿಣಿ` ಪತ್ರಿಕೆಗಾಗಿ ಸ್ಮರಣೀಯ ಚಿತ್ರಗಳು, ಕರ್ಮವೀರಕ್ಕಾಗಿ ಗತವೈಭವ, ಮಂಗಳ ಪತ್ರಿಕೆಗಾಗಿ ಚಲನಚಿತ್ರ ಇತಿಹಾಸ ಲೇಖನ ಮಾಲೆ ಹಲವಾರು ವರ್ಷ ಕಾಲ ನಿರಂತರವಾಗಿ ಪ್ರಕಟಗೊಂಡಿದೆ. ಕರ್ನಾಟಕ ವಿಶ್ವವಿದ್ಯಾಲಯ ಹೊರ ತಂದಿರುವ ಕಿರಿಯರ ಕರ್ನಾಟಕ ಹಾಗೂ ಚಲನಚಿತ್ರ ಇತಿಹಾಸ ಗ್ರಂಥಗಳಿಗೆ ಮತ್ತು ಉದಯಬಾನು ಕಲಾಸಂಘ ಹೊರ ತಂದಿರುವ ಬೃಹತ್ ಕೃತಿ ಬೆಂಗಳೂರುದರ್ಶನಕ್ಕಾಗಿ ಮಾಹಿತಿ ಲೇಖನಗಳನ್ನು ಬರೆದಿದ್ದಾರೆ. ಮಂಗಳ, ಬಾಲಮಂಗಳ, ಕರ್ಮವೀರ, ಅರಗಿಣಿ, ಸ್ಟಾರ್, ಸಂಯುಕ್ತಕರ್ನಾಟಕ, ಸಿನಿಮಾಮಕರಂದ, ಬೆಳ್ಳಿತೆರೆ ವಿಡಿಯೋ ಮ್ಯಾಗ್ಜೆನ್ಗಾಗಿ ಕ್ವಿಜ್ ರಚಿಸಿದ್ದಾರೆ. ವಾರ್ತ ಇಲಾಖೆ ಸಾದರ ಪಡಿಸುತ್ತಿದ್ದ ಕರ್ನಾಟಕ ವಾರ್ತಾಚಿತ್ರ, ಅವಲೋಕನಕ್ಕಾಗಿ ನಿರೂಪಣಾ ಸಾಹಿತ್ಯ ರಚಿಸಿದ್ದಾರೆ. ಸರ್ಕಾರ ಪ್ರಕಟಿಸುತ್ತಿರುವ ಜನಪದ, ಕರ್ನಾಟಕವಿಕಾಸ, ಸಹಕಾರ ಪತ್ರಿಕೆಗಳಿಗಾಗಿ ಅಭಿವೃದ್ದಿ ಲೇಖನಗಳನ್ನು ಬರೆದಿದ್ದಾರೆ. 1996ರಲ್ಲಿ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಕ್ರೀಡೆಗಳ ಸಂದರ್ಭದಲ್ಲಿ ಹೊರತಂದ `ನಂದೂಸ್ಪೀಕ್ಸ್` ಪತ್ರಿಕೆ ಒಂದು ತಿಂಗಳ ಕಾಲ ಪ್ರಕಟಗೊಳ್ಳಲು ಸಂಪಾದಕೀಯ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಹಲವಾರು ಲೇಖನಗಳು, ಕಥೆ, ಕವನಗಳು ಮಲ್ಲಿಗೆ, ವಾರಪತ್ರಿಕೆ, ತರಂಗ, ರೂಪತಾರ, ಸುಧಾ, ಚಿತ್ರ, ಪ್ರಿಯಾಂಕ ಮುಂತಾದ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಕವಿ ದೊಡ್ಡರಂಗೇಗೌಡರ ಅಭಿನಂದನ ಗ್ರಂಥ `ಜಾನಪದಜಂಗಮ`ಕ್ಕಾಗಿ ಜಾನಪದ ಸೊಗಡಿನ ಜೋಪಾನಕಾರ ಲೇಖನ ಬರೆದಿದ್ದಾರೆ.ಡಿ.ಎಸ್.ವೀರಯ್ಯನವರ ಅಭಿನಂದನ ಗ್ರಂಥ ಹೋರಾಟದ ಹೆಜ್ಜೆಗಳು ಕೃತಿಗಾಗಿ `ಕನ್ನಡ ಚಲನಚಿತ್ರ: ದಲಿತ ಸಂವೇದನೆ` ಲೇಖನ ರಚಿಸಿದ್ದಾರೆ. ಕರ್ನಾಟಕ ಸರ್ಕಾರ ಪ್ರಕಟಿಸಿರುವ ಕೋಲಾರ ಜಿಲ್ಲೆ ಗೆಜೆಟಿಯರ್ನಲ್ಲಿ ಮೂರು ಕಡೆ ಇವರ ಹೆಸರು ಉಲ್ಲೇಖಗೊಂಡಿದೆ. ಕರ್ನಾಟಕ ಗೆಜೆಟಿಯರ್ನಲ್ಲಿ ಇವರ ಹೆಸರನ್ನು ಉಲ್ಲೇಖಿಸಲಾಗಿದೆ. ಸಿ.ಎಸ್.ನಂಜುಂಡಯ್ಯ ಅವರ `ಅಮ್ಮ ಪಂಡರಿಬಾಯಿ` ಹಾಗೂ `ಅಭಿನಯ ಸವ್ಯಸಾಚಿ ಹೆಚ್.ಎಲ್.ಎನ್.ಸಿಂಹ ಕೃತಿಗಳಲ್ಲಿ ಇವರ ಹೆಸರನ್ನು ಉಲ್ಲ್ಲೇಖಿಸಲಾಗಿದೆ. ಕವಿ ಕೆ.ಎಸ್.ನಿಸಾರ್ ಅಹಮದ್ ಅವರ ಅಭಿನಂದನಗ್ರಂಥ `ನಿಸಾರ್ ನಿಮಗಿದೋ ನಮನ` ಹೆಬ್ಬೊತ್ತಿಗೆಯಲ್ಲಿ ಡಾ.ರಾಜಕುಮಾರ್ ಹಾಗೂ ನಿಸಾರ್ ಕುರಿತ ಲೇಖನ ಬರೆದಿದ್ದಾರೆ. ಚಿಂತಾಮಣಿಯ ವೆ.ಎಸ್.ಗುಂಡಪ್ಪನವರ ಸ್ಮರಣಸಂಚಿಕೆ ಸೇರಿದಂತೆ ಹಲವಾರು ಸ್ಮರಣಸಂಚಿಕೆಗಳಿಗೆ ಲೇಖನಗಳನ್ನು ಬರೆದಿದ್ದಾರೆ. ಅ.ನಾ.ಪ್ರಹ್ಲಾದರಾವ್ ಅವರ ಪದಬಂಧ ಪ್ರಕಟಗೊಳ್ಳುತ್ತಿರುವ ಪತ್ರಿಕೆಗಳು: ವಿಜಯ ಕರ್ನಾಟಕ (ಪ್ರತಿನಿತ್ಯ), ಸಂಯುಕ್ತ ಕರ್ನಾಟಕ (ಪ್ರತಿ ನಿತ್ಯ), ಮಂಗಳ (ಪ್ರತಿವಾರ), ಅರಗಿಣಿ (ಚಲನಚಿತ್ರ), ಪ್ರಿಯಾಂಕ (ಮಾಸಿಕ), ಚಿತ್ರ (ಚಲನಚಿತ್ರ ಮಾಸಿಕ). ಆನ್ಲೈನ್ ಮೂಲಕ `ಇಂಡಿಕ್ರಾಸ್` ಜಾಲದಲ್ಲಿ ಪ್ರತಿನಿತ್ಯ ಅ.ನಾ.ಪ್ರಹ್ಲಾದರಾವ್ ಅವರ ಪದಬಂದಗಳು ಪ್ರಕಟಗೊಳ್ಳುತ್ತಿದ್ದು, ವಿಶ್ವದಾದ್ಯಂತ ಕನ್ನಡಿಗರು ನಿತ್ಯ ಪದಬಂಧ ತುಂಬಿಸುವಲ್ಲಿ ಸಹಕಾರಿಯಾಗಿದೆ. ಅ.ನಾ.ಪ್ರಹ್ಲಾದರಾವ್ ಅವರ ಪದಬಂಧ ಪ್ರಕಟಗೊಂಡ ಪತ್ರಿಕೆಗಳು: ಕನ್ನಡಪ್ರಭ (ಪ್ರತಿನಿತ್ಯ), ಈಸಂಜೆ (ಪ್ರತಿನಿತ್ಯ), ಪ್ರಜಾವಾಣಿ (ಚಲನಚಿತ್ರ-ಪ್ರತಿವಾರ), ಬಾಲಮಂಗಳ (ಪಾಕ್ಷಿಕ), ದೆಹಲಿವಾರ್ತೆ (ನವದೆಹಲಿ-ಪ್ರತಿನಿತ್ಯ), ಉದಯರಾಗ (ಮುಂಬಯಿ-ಪ್ರತಿನಿತ್ಯ), ರಂಗವಲ್ಲಿ (ವಾಪ), ಚೆಲುವೆ (ವಾರ ಪತ್ರಿಕೆÀ), ಹೋಟೆಲ್ ಪತ್ರಿಕೆ (ಪಾಕ್ಷಿಕ ತಿಂಡಿ ತಿನಿಸು), ರಾಜಕೀಯಸುದ್ದಿ (ವಾರ ಪತ್ರಿಕೆÀ), ಮಾರ್ಚ್ ಆಫ್ ಕರ್ನಾಟಕ (ಮಾಸಿಕ-ವಾರ್ತಾ ಇಲಾಖೆ), ಜನಪದ (ಮಾಸಿಕ-ವಾರ್ತಾಇಲಾಖೆ), ಯುವ ಕರ್ನಾಟಕ (ಮಾಸಿಕ-ಯುವಜನಸೇವಾ ಇಲಾಖೆ), ವಿಜ್ಞಾನ ಸಂಗಾತಿ (ಮಾಸಿಕ-ಕನ್ನಡ ವಿ.ವಿ, ಹಂಪೆ), ವಿಜಯಚಿತ್ರ (ಮಾಸಿಕ-ಚಲನಚಿತ್ರ, ಚಂದಮಾಮ ಪ್ರಕಟಣೆ), ವನಿತಾ (ಮಾಸಿಕ-ಚಂದಮಾಮ ಪ್ರಕಟಣೆ), ಪೆÇಲೀಸ್ ನ್ಯೂಸ್ (ವಾರ ಪತ್ರಿಕೆ-ಅಪರಾಧ), ಪೆÇಲಿಸ್ ಫೈಲ್ (ವಾರ ಪತ್ರಿಕೆ-ಅಪರಾಧ), ಸಂಚು (ಮಾಸಿಕ-ಅಪರಾಧ), ತಾಯಿ (ಮಾಸಿಕ-ಗೃಹ), ಕ್ರಿಡಾಭಿಮಾನಿ (ಮಾಸಿಕ-ಕ್ರೀಡೆ), ಅಭಿಮಾನಿ-(ವಾರ ಪತ್ರಿಕೆ), ಅಭಿಮಾನ (ಪ್ರತಿನಿತ್ಯ), ತರಂಗ (ಮಕ್ಕಳಿಗಾಗಿ), ಕನ್ನಡಮ್ಮ (ವಾರಕ್ಕೊಮ್ಮೆ), ಕೆ.ಎನ್.ಎನ್ ನ್ಯೂಸ್ನೆಟ್ ಮೂಲಕ ಹಲವಾರು ಜಿಲ್ಲಾಪತ್ರಿಕೆಗಳು, ಶೃತಿ (ಪದಬಂಧ ಮಾಸಿಕ), ಜನವಾಹಿನಿ (ಪ್ರತಿ ವಾರ), ಕರ್ಮವೀರ (ವಾರ ಪತ್ರಿಕೆÀ), ಈಸಂಜೆ (ಪ್ರತಿ ವಾರ-ಸಿನಿಮಾ), ಕಂದಾಯ ವಾರ್ತೆ (ಕಂದಾಯ ಇಲಾಖೆ ಮಾಸಿಕ), ಸಂಯುಕ್ತ ಕರ್ನಾಟಕ (ಪ್ರತಿ ವಾರ), ಕೃಷ್ಣವೇದಾಂತ ದರ್ಶನ (ಮಾಸಿಕ-ಇಸ್ಕಾನ್), ಇಂಡಿಕ್ರಾಸ್ ಆನ್ಲೈನ್ ಪದಬಂಧಗಳು ಮತ್ತು ಒಂಬತ್ತು ಪದಬಂಧ ಪುಸ್ತಕಗಳು.
2005ರ ಜುಲೆನಲ್ಲಿ ಡಾ.ರಾಜಕುಮಾರ್ ಅಭಿನಯದ ಐವತ್ತು ವರ್ಷಗಳ ಚಿನ್ನದ ಹಬ್ಬದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಬೆಂಗಳೂರಿನಲಿ ಏರ್ಪಡಿಸಿದ್ದ `ಸಾರ್ಥಕಸುವರ್ಣ` ಸಮಾರಂಭದಲ್ಲಿ ಡಾ.ರಾಜಕುಮಾರ್ ಜೀವನ ಸಾಧನೆ ಕುರಿತು ಇವರು ಬರೆದ `ಬಂಗಾರದಮನುಷ್ಯ` ಕೃತಿ ಬಿಡುಗಡೆ ಆಯಿತು. ಈ ಕೃತಿ ಅಮೆರಿಕಾದ ವಾಷಿಂಗ್ಟನ್ ಡಿಸಿ ನಗರದಲ್ಲಿ ನಡೆದ ಅಕ್ಕ ಸಮ್ಮೇಳನ, ಕುವೈತ್ ಕನ್ನಡ ಸಂಘ, ಲಂಡನ್ ಕನ್ನಡ ಸಂಘ ಹಾಗೂ ನ್ಯೂಜರ್ಸಿ ಕನ್ನಡ ಸಂಘಗಳಲ್ಲಿ ಬಿಡುಗಡೆಗೊಂಡಿದೆ. ಕನ್ನಡ ಚಲನಚಿತ್ರ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ 115 ಮಂದಿ ಮಹಾನುಭಾವರ ಪರಿಚಯ ಲೇಖನಗಳನ್ನೊಳಗೊಂಡ `ಬೆಳ್ಳಿತೆರೆ ಬೆಳಗಿದವರು` ಕೃತಿ 2007ರ ಮೇ ತಿಂಗಳಿನಲ್ಲಿ ಲೋಕಾರ್ಪಣೆಗೊಂಡಿತು. ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಇವರು ರಚಿಸಿದ ಪದಬಂಧಗಳ 5 ಪುಸ್ತಕಗಳು 2008ರಲ್ಲಿ ಬಿಡುಗಡೆಗೊಂಡಿತು. 2008ರ ಮೆ ತಿಂಗಳಿನಲ್ಲಿ `ಬಂಗಾರದಮನುಷ್ಯ` ಕೃತಿಯ ಇಂಗ್ಲಿಷ್ ಭಾಷಾಂತರ 'ದಿ ಇನ್ಮಿಟಬಲ್ ಆಕ್ಟರ್ ವಿತ್ ಗೋಲ್ಡನ್ ವಾಯ್ಸ್' ಅಮೆರಿಕದ ನ್ಯೂಜರ್ಸಿ ಕನ್ನಡ ಸಂಘ `ಬೃಂದಾವನ` ಲೋಕಾರ್ಪಣೆ ಮಾಡಿದ ಸಂದರ್ಭದಲ್ಲಿ ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅ.ನಾ.ಪ್ರಹ್ಲಾದರಾವ್ ಮತ್ತು ಅವರ ಪತ್ನಿ ಶ್ರೀಮತಿ ಎಂ.ಬಿ.ಮಲ್ಲಿಕಾ ಪಾಲ್ಗೊಂಡಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಲಿ ವಜ್ರಮಹೋತ್ಸವ ಅಂಗವಾಗಿ ಡಾ.ಬರಗೂರು ರಾಮಚಂದ್ರಪ್ಪ ವರ ಸಂಪಾದಕತ್ವದಲ್ಲಿ ಹೊರ ತಂದ 75 ಪುಸ್ತಕಗಳಲ್ಲಿ ಡಾ.ರಾಜಕುಮಾರ್ ಹಾಗೂ ಕರಿಬಸಯ್ಯನವರ ಬಗ್ಗೆ 2 ಪುಸ್ತಕಗಳನ್ನು ರಚಿಸಿದ್ದಾರೆ. ಅ.ನಾ.ಪ್ರಹ್ಲಾದರಾವ್ ರಚಿಸಿದ ಭಾವಗೀತೆಗಳ ಸಾಂದ್ರಿಕೆ ವಸಂತ ಮಲ್ಲಿಕಾ 2009ರಲ್ಲಿ ಬಿಡುಗಡೆಗೊಂಡಿತು. ಪುತ್ತೂರು ನರಸಿಂಹ ನಾಯಕ್ ಸಂಗೀತ ನೀಡಿರುವ ಈ ಗೀತೆಗಳನ್ನು ಅಮೆರಿಕದಲ್ಲಿ ನೆಲೆಸಿರುವ ಗಾಯಕಿ ಶ್ರೀಮತಿ ವಸಂತ ಶಶಿ ಹಾಡಿದ್ದಾರೆ. 2008ರ ಮೆ ತಿಂಗಳಿನಲ್ಲಿ ಇವರು ರಚಿಸಿದ ಬಂಗಾರದಮನುಷ್ಯ ಕೃತಿಯ ಇಂಗ್ಲಿಷ್ ಭಾಷಾಂತರ 'ದಿ ಇನ್ಮಿಟಬಲ್ ಆಕ್ಟರ್ ವಿತ್ ಗೋಲ್ಡನ್ ವಾಯ್ಸ್' ಅಮೆರಿಕದ ನ್ಯೂಜರ್ಸಿ ನಗರದಲ್ಲಿ ಬಿಡುಗಡೆಗೊಂಡ ಸಂದರ್ಭದಲ್ಲಿ ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಸಿಂಗಪುರ, ಮಲೇಷಿಯಾ, ಫಿಲಿಫೈನ್ಸ್ ದೇಶಗಳಲ್ಲಿ ಅಧ್ಯಯನ ಪ್ರವಾಸ ಮಾಡಿದ್ದಾರೆ.
ಬೆಂಗಳೂರು, ಮಂಡ್ಯ ಹಾಗೂ ಕೋಲಾರದಲ್ಲಿ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿ `ಪ್ರಜಾರತ್ನ`, `ಪದಬಂಧಬ್ರಹ್ಮ`, `ಪದಬಂಧಸಾಮ್ರಾಟ್` ಮುಂತಾದ ಬಿರುದುಗಳನ್ನು ನೀಡಿವೆ. `ವಿಶ್ವೇಶ್ವರಯ್ಯಪ್ರಶಸ್ತಿ`, `ಕರುನಾಭೂಷಣ` `ಕರ್ನಾಟಕ ವಿಭೂಷಣ` ಮಂಡ್ಯ ಕರ್ನಾಟಕ ಸಂಘ ಪ್ರಶಸ್ತಿಗಳೇ ಅಲ್ಲದೆ ಪ್ರತಿಷ್ಠಿತ `ಆರ್ಯಭಟ`, ಬೆಂಗಳೂರು ಮಹಾನಗರಪಾಲಿಕೆ ಕೊಡಮಾಡುವ `ಕೆಂಪೇಗೌಡ ಪ್ರಶಸ್ತಿ` `ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಸದ್ಬಾವನ ಪ್ರಶಸ್ತಿ, `ಶ್ರೀಕಾಣ್ವಶ್ರೀ`, `ಶಿಂಷಾಶ್ರೀ` `ಬೆಂಗಳೂರು ರತ್ನ`, `ಹಂಸರತ್ನ` ಮುಂತಾದ ಪ್ರಶಸ್ತಿಗಳು ಸಂದಿವೆ.
This article uses material from the Wikipedia ಕನ್ನಡ article ಅ.ನಾ.ಪ್ರಹ್ಲಾದರಾವ್, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.