ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು).
ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು. ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಸೌರ ಹಾಗೂ ಸ್ಕಂದ ಮತಗಳನ್ನು ಒಗ್ಗೂಡಿಸಿ, ಷಣ್ಮತ ಪ್ರತಿಷ್ಠಾಪಕರಾದರು. ಆದಿಶಂಕರರು ಭಗವದ್ಗೀತೆ, ಉಪನಿಷತ್ ಹಾಗು ಬ್ರಹ್ಮ ಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾದರು.
ಆದಿ ಶಂಕರಾಚಾರ್ಯ | |
---|---|
ಜನನ | ೭೮೮ ಕ್ರಿಸ್ತಶಕ ಕಾಲಡಿ,ಚೇರ ಸಾಮ್ರಾಜ್ಯ ಈಗಿನ ಕೇರಳ ರಾಜ್ಯದಲ್ಲಿದೆ |
ಮರಣ | ೮೨೦ ಕ್ರಿಸ್ತಶಕ (ತೀರಿದಾಗ ವಯಸ್ಸು ೩೨) ಕೇದಾರನಾಥ, ಪಾಲಾ ರಾಜ್ಯ ಇಂದಿನ ಉತ್ತರಾಖಂಡ, ಭಾರತ |
ಜನ್ಮ ನಾಮ | ಶಂಕರ |
ಸಂಸ್ಥಾಪಕರು | ದಶನಾಮಿ ಸಂಪ್ರದಾಯ, ಅದ್ವೈತ ವೇದಾಂತ, ಷಣ್ಮತ |
ಗುರು | ಗೋವಿಂದ ಭಗವತ್ಪಾದ |
ತತ್ವಶಾಸ್ತ್ರ | ಅದ್ವೈತ ವೇದಾಂತ |
ಹಿಂದೂ ತತ್ತ್ವಶಾಸ್ತ್ರ ಸರಣಿಯ ಲೇಖನ | |
ಪಂಥಗಳು | |
---|---|
ಸಾಂಖ್ಯ · ನ್ಯಾಯ | |
ವೈಶೇಷಿಕ · ಯೋಗ | |
ಪೂರ್ವ ಮೀಮಾಂಸಾ · ವೇದಾಂತ | |
ವೇದಾಂತ ಪಂಥಗಳು | |
ಅದ್ವೈತ · ವಿಶಿಷ್ಟಾದ್ವೈತ | |
ದ್ವೈತ | |
ಪ್ರಮುಖ ವ್ಯಕ್ತಿಗಳು | |
ಕಪಿಲ · ಗೋತಮ | |
ಕಣಾದ · ಪತಂಜಲಿ | |
ಜೈಮಿನಿ · ವ್ಯಾಸ | |
ಮಧ್ಯಕಾಲೀನ | |
ಆದಿಶಂಕರ · ರಾಮಾನುಜ | |
ಮಧ್ವ · ಮಧುಸೂದನ | |
ವೇದಾಂತ ದೇಶಿಕ · ಜಯತೀರ್ಥ | |
ಆಧುನಿಕ | |
ರಾಮಕೃಷ್ಣ · ರಮಣ | |
ವಿವೇಕಾನಂದ · ನಾರಾಯಣ ಗುರು | |
ಅರವಿಂದ ·ಶಿವಾನಂದ | |
ಶಂಕರಾಚಾರ್ಯರ ಕಾಲದ ಬಗ್ಗೆ ವಿದ್ವಾಂಸರಲ್ಲಿ ಇನ್ನೂ ಜಿಜ್ಞಾಸೆಯಿದೆ. ಒಂದು ವಿಧದ ಪ್ರಕಾರ ಇವರು 8 ನೇ(ಕ್ರಿ.ಶ್.೭೮೮) ಶತಮಾನದಲ್ಲಿ ಜನಿಸಿದರು ಎಂದು ನಂಬಲಾಗಿದೆ. ಕೇರಳ ರಾಜ್ಯದ ಕಾಲಟಿ ಎಂಬ ಹಳ್ಳಿಯ ಒಂದು ಬಡ ನಂಬೂದರಿ ಬ್ರಾಹ್ಮಣ ಕುಟುಂಬದಲ್ಲಿ ಇವರು ಜನಿಸಿದರು. ತಂದೆ ಶಿವಗುರು, ತಾಯಿ ಆರ್ಯಾಂಬೆ. ಹುಟ್ಟಿದ ದಿನ ವಿಭವ ಸಂವತ್ಸರದ ವೈಶಾಖ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯಂದು. ಇವರು ಆತ್ರೇಯ ಗೋತ್ರದ ಯಜುರ್ ವೇದದ ತೈತ್ತ್ರೀಯ ಶಾಖೆಯವರು ಎಂದು ಹೇಳಲಾಗುತ್ತದೆ. ಇವರಿಗೆ ಎಲ್ಲಾ ಮಹಿಳೆಯರೂ ಮಾತೃಸ್ವರೂಪಿಣಿಯರು. ಬಾಲ್ಯದಲ್ಲೇ ತಂದೆ ಯನ್ನು ಕಳೆದುಕೊಂಡರು.
ಈ ನಾಲ್ಕೂ ಮಠಗಳು ಇಂದಿಗೂ ತಮ್ಮ ಗುರು ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದು ಅಸಂಖ್ಯಾತ ಮಂದಿ ಅನುಯಾಯಿಗಳನ್ನು ಹೊಂದಿವೆ. ಶಂಕರರು ಬಾದರಾಯಣರ "ಬ್ರಹ್ಮಸೂತ್ರ"(ವೇದಾಂತಸೂತ್ರ / ಶಾರೀರಿಕ ಸೂತ್ರ )ಗಳಿಗೆ ಭಾಷ್ಯವನ್ನು ರಚಿಸಿದರು. ಅಲ್ಲದೆ ಉಪನಿಷತ್ತುಗಳಿಗೆ ಮತ್ತು ಶ್ರೀಮದ್ಭಗವದ್ಗೀತೆಗೆ ಭಾಷ್ಯವನ್ನು ಬರೆದು ಪ್ರಸ್ಥಾನತ್ರಯಗಳನ್ನು ಪೂರ್ಣಗೊಳಿಸಿದರು. ಇವರು ರಚಿಸಿದ "ಭಜ ಗೋವಿಂದಮ್" ಸ್ತೋತ್ರ ಅತ್ಯಂತ ಪ್ರಸಿದ್ಧವಾದುದು. ಹಲವಾರು ಇತರ ಸ್ತೋತ್ರಗಳನ್ನೂ ಶಂಕರರು ರಚಿಸಿದ್ದಾರೆ
This article uses material from the Wikipedia ಕನ್ನಡ article ಆದಿ ಶಂಕರ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.