ರಾಸಿಪುರಂ ಕೃಷ್ಣಸ್ವಾಮಿ ಲಕ್ಷ್ಮಣ್ ಅಯ್ಯರ್ ಅವರು, ಅವರ ಸ್ನೇಹಿತರಿಗೆ, ಆಪ್ತರಿಗೆ,ಹಾಗೂ ಅವರ ಕಾರ್ಟೂನ್ ಪ್ರಿಯರಿಗೆ, 'ಆರ್.ಕೆ.ಲಕ್ಷ್ಮಣ್' ಎನ್ನುವ ಹೆಸರಿನಲ್ಲಿ ಜನಪ್ರಿಯರಾಗಿದ್ದಾರೆ.
ಭಾರತದ ಇಂಗ್ಲೀಷ್ ಭಾಷೆಯ ಖ್ಯಾತ ವ್ಯಂಗ್ಯಚಿತ್ರಕಾರರಲ್ಲೊಬ್ಬರು. ಒಳ್ಳೆಯ ಲೇಖಕರಾಗಿಯೂ ಹೆಸರು ಪಡೆದಿದ್ದರು. ವ್ಯಂಗ್ಯಚಿತ್ರಕಾರರಾಗಿ ಆಂಗ್ಲಭಾಷಾ ಪತ್ರಿಕೆಯಲ್ಲಿ ದಶಕಗಳ ಕಾಲ ಕೆಲಸ ನಿರ್ವಹಿಸಿ ಜನಪ್ರಿಯರಾಗಿದ್ದರು.
ಲಕ್ಷ್ಮಣ್ ರವರು,ಅವರು ಅಕ್ಟೋಬರ್ ೨೪, ೧೯೨೧ ರಂದು ಮೈಸೂರಿನ ಲಕ್ಷ್ಮೀಪುರಂನಲ್ಲಿ ಜನಿಸಿದರು. ತಂದೆ ಕೃಷ್ಣಸ್ವಾಮಿ. ಇವರ ತಾಯಿಯವರು ಮೈಸೂರು ಮಹಾರಾಣಿಯವರಿಗೆ ತುಂಬ ಆಪ್ತರು. ಇವರು ತಮ್ಮ ಪ್ರಾಥಮಿಕ ಶಿಕ್ಷಣ ಪಡೆದದ್ದು ಕನ್ನಡ ಮಾಧ್ಯಮದಲ್ಲಿ. ಬಾಲ್ಯದಲ್ಲಿ ಗೋಡೆ, ನೆಲ, ಹೀಗೆ ಎಲ್ಲೆಂದರಲ್ಲಿ ಚಿತ್ರ ಬಿಡಿಸುತ್ತಿದ್ದರು. "ಪುಣ್ಯಕೋಟಿ" ಪದ್ಯ ಅವರ ಮೇಲೆ ಗಾಢ ಪರಿಣಾಮ ಬೀರಿತ್ತು. ತಂದೆಯವರು ತಮಿಳುನಾಡಿನ ಸೇಲಂನಿಂದ ಬಂದು ಮೈಸೂರಿನ ಮಹಾರಾಜಾ ಹೈಸ್ಕೂಲಿನಲ್ಲಿ ಮುಖ್ಯೋಪಾಧ್ಯರಾಗಿದ್ದರು. ಸುಪ್ರಸಿದ್ಧ ಕಾದಂಬರಿಕಾರ ಆರ್. ಕೆ. ನಾರಾಯಣ್ ಇವರ ಅಣ್ಣ, ಮಹಾರಾಜ ಕಾಲೇಜಿನಲ್ಲಿ ಬಿ.ಎ.ಪದವಿ ಪಡೆದರು.
.
This article uses material from the Wikipedia ಕನ್ನಡ article ಆರ್.ಕೆ.ಲಕ್ಷ್ಮಣ್, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.