ಉರ್ದೂ

ಉರ್ದೂ(اردو) ಇದನ್ನು ಲಷ್ಕರಿ (لشکری) ಎಂದೂ ಕರೆಯುತ್ತಾರೆ, ಇಂಡೊ-ಆರ್ಯನ್ ಭಾಷಾ ಪಂಗಡದ ಇಂಡೊ-ಯೂರೋಪಿಯನ್ ಉಪ ಪಂಗಡಕ್ಕೆ ಸೇರಿದ್ದು.

ಪರ್ಷಿಯನ್, ಟರ್ಕಿಷ್, ಅರೇಬಿಕ್ ಮತ್ತು ಹಿಂದಿ ಭಾಷೆಗಳ ಪ್ರಭಾವವಿರುವ ಈ ಭಾಷೆ, ದೆಹಲಿಯ ಶಾಹಿ ಮತ್ತು ಮೊಘಲ್ ಸಾಮ್ರಾಜ್ಯದ ಆಳ್ವಿಕೆಯ ಕಾಲದಲ್ಲಿ ಬೆಳೆಯಿತು.

ಉರ್ದೂ
(لشکری) اُردُو
ಉರ್ದೂ 
ಉಚ್ಛಾರಣೆ: IPA: ಟೆಂಪ್ಲೇಟು:IPA-ur
ಬಳಕೆಯಲ್ಲಿರುವ 
ಪ್ರದೇಶಗಳು:
ಪಾಕಿಸ್ತಾನ, ಭಾರತ, ಬಾಂಗ್ಲಾದೇಶ ("ಬಿಹಾರಿ"), ನೇಪಾಲ
ಒಟ್ಟು 
ಮಾತನಾಡುವವರು:
೬೫೦ ಲಕ್ಷ
ಭಾಷಾ ಕುಟುಂಬ:
 ಇಂಡೋ -ಇರಾನಿಯನ್
  ಇಂಡೋ -ಆರ್ಯನ್
   ದಕ್ಷಿಣ ವಲಯ
    ಪಶ್ಚಿಮ ಹಿಂದಿ
     ಹಿಂದೂಸ್ಥಾನಿ
      Khariboli
       ಉರ್ದೂ 
ಬರವಣಿಗೆ: ಉರ್ದೂ ಅಕ್ಷರಮಾಲೆ (ಅರೇಬಿಕ್ ಲಿಪಿ)
ದೇವನಾಗರಿ
Indian Urdu Braille (ಭಾರತಿ)
Pakistani Urdu Braille 
ಅಧಿಕೃತ ಸ್ಥಾನಮಾನ
ಅಧಿಕೃತ ಭಾಷೆ: ಉರ್ದೂ ಪಾಕಿಸ್ತಾನ
ಉರ್ದೂ ಭಾರತ (ರಾಜ್ಯಗಳು ಉತ್ತರ ಪ್ರದೇಶ, ಬಿಹಾರ, ಆಂಧ್ರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ,ಮತ್ತು ನವದೆಹಲಿ)
ನಿಯಂತ್ರಿಸುವ
ಪ್ರಾಧಿಕಾರ:
National Language Authority (Pakistan);
National Council for Promotion of Urdu Language (India)
ಭಾಷೆಯ ಸಂಕೇತಗಳು
ISO 639-1: ur
ISO 639-2: urd
ISO/FDIS 639-3: urd 
Urdu_official-language_areas.png
ಉರ್ದೂ
ಉರ್ದು ಭಾಷೆಯು ಬಳಕೆಯಲ್ಲಿರುವ ಪ್ರದೇಶ
ಉರ್ದೂ
ಉರ್ದೂ ಭಾಷೆಯ ಅಕ್ಷರಮಾಲೆ

ಉಗಮ

ಉರ್ದುಭಾಷೆ ಇಂಡೋ-ಯೂರೋಪಿಯನ್ ಭಾಷಾವರ್ಗಕ್ಕೆ ಸೇರಿದ ಆರ್ಯ ಭಾಷೆ. ಸಿಮಿಟಿಕ್ ಲಿಪಿಯ ಗುಂಪಿಗೆ ಸೇರಿದ ಅರಬ್ಬೀ ಲಿಪಿಯನ್ನು ಕೊಂಚ ಬದಲಾವಣೆ ಮಾಡಿ ಇದಕ್ಕೆ ಅಳವಡಿಸಿಕೊಳ್ಳಲಾಗಿದೆ. ಪರ್ಷಿಯನ್ ಲಿಪಿಯೂ ಇದನ್ನೇ ಹೋಲುತ್ತದೆ. ಬರವಣಿಗೆ ಬಲದಿಂದ ಎಡಕ್ಕೆ, ದೆಹಲಿಯ ಸುತ್ತಮುತ್ತ ಆಡುತ್ತಿದ್ದ ಶೌರಸೇನೀ ಅಥವಾ ಅಪಭ್ರಂಶದಿಂದ (12ನೆಯ ಶತಮಾನ) ಈ ಭಾಷೆ ರೂಪುಗೊಂಡಿದೆಯೆಂದು ತೋರುತ್ತದೆ. ಆ ಕಾಲದಲ್ಲಿ ದೆಹಲಿಯ ಸುತ್ತಮುತ್ತ ವಾಡಿಕೆಯಲ್ಲಿದ್ದ ಬ್ರಜ್, ಹರ್ಯಾನಿ, ಪಂಜಾಬಿ ಮತ್ತು ರಾಜಸ್ತಾನೀ ಪ್ರಾಕೃತ ಭಾಷೆಗಳಿಂದ ಉರ್ದು ಕೆಲಮಟ್ಟಿಗೆ ಪ್ರಭಾವಗೊಂಡಿದೆಯಾದರೂ ಅನಂತರ ಪರ್ಷಿಯನ್ ಭಾಷೆಯ ಶಕ್ತಿ ಪೂರ್ಣ ಪ್ರಭಾವದಲ್ಲಿ ಕಳೆಯಿತು, ಇದರ ಬಹುಪಾಲು ಪದಸಂಪತ್ತು ಪರ್ಷಿಯನ್‍ನಿಂದ ಬಂದದ್ದು. ಆದರೆ ಇದು ತನ್ನ ಮೂಲ ಹಾಗೂ ವಿಶಿಷ್ಟ ಲಕ್ಷಣವನ್ನು ವ್ಯಾಕರಣ, ನುಡಿಗಟ್ಟು ಮತ್ತು ಹೇರಳ ಪ್ರಾಕೃತಪದಗಳ ಮೂಲಕ ಉಳಿಸಿಕೊಂಡಿದೆ, ಈ ಭಾಷೆ ಪರ್ಷಿಯನ್ ಮತ್ತು ತುರ್ಕಿ ಮಾತನಾಡುವ, ಆಫ್ಘಾನಿಸ್ಥಾನದಿಂದ ಬಂದು ಮೊದಲು ಲಾಹೋರಿನಲ್ಲೂ ಕಾಲಾನಂತರ ದೆಹಲಿಯಲ್ಲೂ ನೆಲೆಸಿದ ಮುಸ್ಲಿಂ ವಲಸೆಗಾರರ, ವರ್ತಕರ, ಸೂಫಿಗಳ ಮತ್ತು ದಾಳಿಕಾರರ ನಿಕಟಸಂಪರ್ಕದಿಂದ ರೂಪುಗೊಂಡಿತು.

ಆರಂಭಿಕ ಬೆಳವಣಿಗೆ

ಘಜ್ನೀ ಸೈನ್ಯ 1027 ರಲ್ಲಿ ಮೊಟ್ಟ ಮೊದಲಿಗೆ ಲಾಹೋರಿನಲ್ಲಿ ನೆಲೆಸಿದಾಗ ಉರ್ದು ಭಾಷೆಯ ಆಸ್ತಿಭಾರವಾಯಿತು. ಪರ್ಷಿಯನ್ ಮತ್ತು ತುರ್ಕಿ ಮಾತನಾಡುವ ಸೈನಿಕರು ಅನಿವಾರ್ಯವಾಗಿ ಪ್ರಾದೇಶಿಕ ಭಾಷೆಯನ್ನು ಬಳಸಬೇಕಾಯಿತು. ಅದು ಮುಂದೆ ಪಂಜಾಭಿ ಭಾಷೆಯಾಗಿ ಬೆಳೆಯಿತಲ್ಲದೆ ಆಗಿನ ಕಾಲದ ಪರ್ಷಿಯನ್, ಅರಬ್ಬೀ ಮತ್ತು ತುರ್ಕಿ ಭಾಷೆಗಳ ಮಿಶ್ರಣವಾಗಿದ್ದು ಖಡಿಬೋಲಿಯಿಂದ ಅಷ್ಟೇನೂ ಬೇರೆಯಾಗಿರಲಿಲ್ಲ. ಅಲ್ಲಿನ ಜನತೆ ಇದರ ಪದಸಂಪತ್ತನ್ನು ಸ್ವೀಕರಿಸತೊಡಗಿತು, ಹೀಗೆ ಪರಸ್ಪರ ಸಾಮಾಜಿಕ ವ್ಯವಹಾರ ಇಬ್ಬರಿಗೆ ಅರ್ಥವಾಗುವ, ಸಮ್ಮಿಶ್ರ ಪದಸಂಪತ್ತಿನ ಆವಶ್ಯಕತೆಯನ್ನು ಎತ್ತಿಹಿಡಿಯಿತು. ಪ್ರಾಕೃತ ಪದಗಳು ಸಮಕಾಲೀನ ಇರಾನೀ ಕವಿಗಳಾದ ಫರ್ಕೂಸಿ, ಸನಈ ಮತ್ತು ಮಿನೂ ಚೆಹ್ರಿ ಅವರ ಕಾವ್ಯಗಳಲ್ಲಿ ಪ್ರವೇಶಿಸಿದುವು. ಪೃಥ್ವಿರಾಜನ ಆಸ್ಥಾನಕವಿ ಚಂದ್‍ಬರ್ದಾಯಿ ಮತ್ತು ಇನ್ನಿತರರ ಪ್ರಾಕೃತ ಕವಿಗಳಲ್ಲಿ ಪರ್ಷಿಯನ್ ಪದಗಳು ಬಳಕೆಗೆ ಬಂದುವು.ಘಜ್ನಿ ಮತ್ತು ಘೋರಿ ಸೈನ್ಯಗಳು 1193 ಮತ್ತು 1206 ರಲ್ಲಿ ದೆಹಲಿಯನ್ನು ವಶಪಡಿಸಿಕೊಂಡ ಕಾಲದಲ್ಲಿ ಪರ್ಷಿಯನ್ ಮತ್ತು ತುರ್ಕಿ ಮಾತನಾಡುವ ಹೊಸಬರು ಅಲ್ಲಿ ತಳವೂರಿದರು. ಅವರ ಸಂಪರ್ಕ ಮತ್ತು ವ್ಯವಹಾರಗಳು ಆ ಜನರನ್ನು ದೆಹಲಿಯಲ್ಲಿ ಬಳಕೆಯಲ್ಲಿದ್ದ ಖಡಿಬೋಲಿಯನ್ನು ಬಳಸುವಂತೆ ಮಾಡಿತು. ಸ್ಥಳೀಯ ಜನತೆ ಪರ್ಷಿಯನ್ ಪದಗಳನ್ನು ತಮ್ಮ ಮಾತಿನಲ್ಲಿ ಉಪಯೋಗಿಸುವಂಥ ಪರಿಸ್ಥಿತಿಯುಂಟಾಯಿತು. ಹೊಸದಾಗಿ ಬಂದವರು ಪರ್ಷಿಯನ್‍ನಿಂದ ಪ್ರಭಾವಿತವಾದ ಪ್ರಾಕೃತವನ್ನು ಪಂಜಾಬ್ ಮತ್ತು ಹರ್ಯಾಣದಿಂದ ತಂದು ಸು, 2 ಶತಮಾನಗಳವರೆಗೂ ಬಳಸಿದರು. ಇದರಿಂದ ಖಡಿಬೋಲಿಗೆ ಹೊಂದಿಕೊಳ್ಳುವುದು ಅವರಿಗೆ ಸುಲಭವಾಯಿತು. ದೆಹಲಿ ಮತ್ತು ಉತ್ತರ ಭಾರತದಲ್ಲಿ ಪರ್ಷಿಯನ್ ಆಡಳಿತ, ಆಸ್ಥಾನ (ದರ್ಬಾರ್) ಮತ್ತು ಸಾಹಿತ್ಯಕ ಭಾಷೆಯಾಗಿರುವಾಗ ಉರ್ದು ನಾಲ್ಕು ಶತಮಾನಗಳ ಕಾಲ ಜನತೆಯ ಆಡುಭಾಷೆಯಾಗಿತ್ತು.

ಪ್ರಸರಣ

ಖಿಲ್ಜಿ ದಾಳಿಗಳ (2294-1311) ಮೂಲಕ ಹೊಸಭಾಷೆ ಗುಜರಾತಿನಿಂದ ದಕ್ಷಿಣ ಭಾರತಕ್ಕೆ ಬಂತು. ಮೊದಲು ಬಹಮನಿ ನಂತರ ಇದು ಹೊಮ್ಮಿದ ದಖನ್ನಿನ ಐದು ರಾಜ್ಯಗಳ 350 ವರ್ಷಗಳ ಆಳ್ವಿಕೆಯಲ್ಲಿ ಉರ್ದುಭಾಷೆ ದಕ್ಷಿಣ ಭಾರತದಲ್ಲಿ ಹೊರವಾಗಿ ಬೆಳೆಯಿತು. ಪ್ರದೇಶದ ಹೆಸರಿನಿಂದಲೇ ಅದಕ್ಕೆ ದಖನಿ ಎಂದು ಹೆಸರು ಬಂತು. ಆಗ ಈ ಭಾಷೆ 14ನೆಯ ಶತಮಾನದಲ್ಲಿ ದೆಹಲಿಯಲ್ಲಿ ಮಾತನಾಡುತ್ತಿದ್ದ ಭಾಷೆಯೇ ಆಗಿತ್ತು. ಅನಂತರ ಉತ್ತರದಲ್ಲಿ ಇದು ಪರ್ಷಿಯನ್ ಭಾಷೆಯ ತೀವ್ರ ಪ್ರಭಾವದಿಂದ ಅಭಿವೃದ್ಧಿಗೊಂಡು ಉರ್ದುವಾಯಿತು. ದಕ್ಷಿಣದಲ್ಲಿ ಇದು ತನ್ನ ಮೂಲ ಲಕ್ಷಣಗಳನ್ನು ಬಹುಪಾಲು ಉಳಿಸಿಕೊಂಡಿತಲ್ಲದೆ ಮರಾಠಿ, ಗುಜರಾತಿ ಮತ್ತು ಕೆಲವು ಪ್ರಾದೇಶಿಕ ಭಾಷೆಗಳಿಂದ ಕೆಲಮಟ್ಟಿಗೆ ಪ್ರಭಾವಗೊಂಡಿತು. ಗುಜರಾತಿನಲ್ಲಿ ಗುಜರಾತಿ ಭಾಷೆಗಳಿಂದ ಪ್ರಭಾವಗೊಂಡು `ಗುಜ್ರಿ ಹೆಸರು ಪಡೆಯಿತು. ಹೀಗೆ ದಕ್ಷಿಣ ಭಾರತದಲ್ಲಿ ದಖನಿ ಕಾವ್ಯ ಮತ್ತು ಸಾಹಿತ್ಯಕಭಾಷೆಯಾಗಿ ಬಳಕೆಯಾಯಿತು. ಕ್ರಮೇಣ ಉತ್ತರ ಮತ್ತು ದಕ್ಷಿಣದವರ ಪ್ರತ್ಯೇಕತಾ ಮನೋಭಾವ ಹೆಚ್ಚುತ್ತಾ ಹೋಯಿತು. ದಕ್ಷಿಣ ರಾಜ್ಯಗಳ ಆಡಳಿತಗಾರರು ತಮ್ಮನ್ನು ದಖನಿಗಳೆಂದೂ ಹೊರಗಿನವರನ್ನು ಅಂದರೆ ಉತ್ತರದವರನ್ನು ಆಫಾಕಿಗಳೆಂದೂ ಕರೆದುಕೊಂಡರು. ಈ ಭೇದ ಆಸ್ಥಾನದಲ್ಲಿ ಮತ್ತು ಸಾಮಾಜಿಕ ಜೀವನದಲ್ಲಿ ಉಳಿಯಿತು. ಪರಿಣಾಮವಾಗಿ ದೆಹಲಿಯ ಆಸ್ಥಾನ ಮತ್ತು ಸಾಹಿತ್ಯಕ ಭಾಷೆಯದ ಪರ್ಷಿಯನ್ನಿನ ಪೈಪೋಟಿಯಿಂದ ಉರ್ದು ಬೆಳೆಯತೊಡಗಿತು. ಸು. 1375ರ ವರೆವಿಗೂ ದೆಹಲಿ ಉರ್ದುವಿಗೂ ದಕ್ಷಿಣದ ಉರ್ದುವಿಗೂ ಯಾವುದೇ ವ್ಯತ್ಯಾಸವಿರಲಿಲ್ಲ. ಮುಂದೆ ಅವು ಎರಡು ರೀತಿಯಲ್ಲಿ ಬೆಳೆದವು. ದಖನಿ ಒಂದು ವಿಶಿಷ್ಟ ಭಾಷೆಯಾಗಿ ಅದರಲ್ಲಿ ಕವಿ ಮತ್ತು ಸಾಹಿತಿಗಳು ಶ್ರೀಮಂತ ಸಾಹಿತ್ಯವನ್ನು ರಚಿಸಿದರು. ದಕ್ಷಿಣದ ಸುಲ್ತಾನರು ಈ ಭಾಷೆಗೆ ಪ್ರೋತ್ಸಾಹವನು ನೀಡಿದರಲ್ಲದೇ ತಾವೇ ಸುಂದರ ಕಾವ್ಯಗಳನ್ನು ರಚಿಸಿದರು.ಔರಂಗಜೇಬನ ದಾಳಿ ಮತ್ತು ಮೊಘಲರ ಆಳ್ವಿಕೆಗಳು ಉತ್ತರದ ಉರ್ದುವಿನ ಪ್ರಭಾವ ದಖನಿಯ ಮೇಲೆ ಹೆಚ್ಚುವಂತೆ ಮಾಡಿದುವು. ಇದರಿಂದಾಗಿ ಈ ಕಾಲದ ಅಂತ್ಯದಲ್ಲಿ ಈ ಭಾಷೆ ತನ್ನ ಪಥವನ್ನು ಬದಲಾಯಿಸಿತು. ಕ್ರಮೇಣ ದಖನಿ ದಕ್ಷಿಣಭಾರತದಲ್ಲಿ 3ರಿಂದ 4 ಶತಮಾನದ ಉಜ್ಜ್ವಲ ಸಾಹಿತ್ಯಕ ಚಟುವಟಿಕೆಯಿಂದಾಗಿ ಉತ್ತರ ಭಾರತದ ಆಡುಭಾಷೆಯಾಗಿದ್ದ ಉರ್ದುವಿನ ಸಾಹಿತ್ಯಕ ಚಟುವಟಿಕೆಗೆ ನಾಂದಿಯಾಯಿತು. ದಖನಿ ಭಾಷೆಯ ಸಾಹಿತ್ಯಕ ಚಟುವಟಿಕೆ ದಕ್ಷಿಣ ಭಾರತದಲ್ಲಿ ಮೊಘಲರ ಆಳ್ವಿಕೆ ಮುಗಿದ ಮೇಲೂ ಹೈದರಾಬಾದಿನ ಆಸಿಫ್‍ಜಹಿ, ಹೈದರಾಲಿಯ ಖುದದಾದ ಸುಲ್ತಾನಶಾಹಿ, ಮೈಸೂರಿನ ಟಿಪ್ಪುಸುಲ್ತಾನ ಮುಂತಾದ ಅರಸರ ಆಶ್ರಯದಲ್ಲಿ ಮತ್ತು ಕರ್ಣಾಟಕದ ನವಾಬರು, ಸಿದ್ಹೋಟ್ (ಕಡಪ ಜಿಲ್ಲೆ) ಮತ್ತು ಕರ್ನೂಲುಗಳಲ್ಲಿ ಮುಂದುವರಿಯಿತು. ಆದರೆ ದಖನಿ ಭಾಷೆ ತನ್ನ ಮೂಲ ಲಕ್ಷಣವನ್ನು ಕ್ರಮೇಣ ಕಳೆದುಕೊಂಡು ಉರ್ದೀಕರಣಗೊಂಡಿತು. ದಕ್ಷಿಣ ಭಾರತದಲ್ಲಿ ಇಂದಿಗೂ ದಖನಿ ಆಡುಭಾಷೆಯಾಗಿಯೂ ಉರ್ದು ಸಾಹಿತ್ಯಕ ಭಾಷೆಯಾಗಿಯೂ ಉಳಿದಿವೆ.

ಸಾಹಿತ್ಯ

ಉರ್ದೂ 
ಮೀರ್ ತಕೀ ಮೀರ್ (೧೭೨೩-೧೮೧೦) (ಉರ್ದು: میر تقی میر) ೧೮ನೇ ಶತಮಾನದ ಮೊಘಲ್ ಹಾಗೂ ಅವಧಿನ ನವಾಬರ ಆಸ್ಥಾನಗಳಲ್ಲಿ ಪ್ರಸಿದ್ಧ ಉರ್ದು ಕವಿಯಾಗಿದ್ದನು.
ಉರ್ದೂ 
ಅಮೀರ್ ಖುಸ್ರೋವಿನ (೧೨೫೩-೧೩೨೫) ಪಾರಸಿ ಕವಿತೆಗಳ ಹಸ್ತಲಿಖಿತ ಗ್ರಂಥದಿಂದ ಉದಾಹರಣೆ
ಉರ್ದೂ 
ಪಾಕಿಸ್ತಾನದ ರಾಷ್ಟ್ರ ಕವಿ, ಆಲಮ್ ಮೊಹಮದ್ ಇಕ್ಬಾಲ್
ಉರ್ದೂ 
ಮೊಘಲ್ ಸಾಮ್ರಾಜ್ಯದ ಕೊನೆಯ ಸಾಮ್ರಾಟನಾದ ೨ನೇ ಬಹದ್ದೂರ್ ಷಾಹ್‍ನ ಹಸ್ತಾಕ್ಷರದಲ್ಲಿನ ಸಹಿ ಮತ್ತು ದೋಹೆ (೨೯ ಏಪ್ರಿಲ್, ೧೮೪೪)

ವಲೀ ಕವಿಯ ದಖನಿ ಕಾವ್ಯ ದೆಹಲಿಯನ್ನು ಪ್ರವೇಶಿಸಿದ ನಂತರ (17,00,1722) ಉತ್ತರ ಭಾರತದಲ್ಲಿ ಉರ್ದು ಕಾವ್ಯ ಮತ್ತು ಸಾಹಿತ್ಯದ ಉಬ್ಬರ ಕಂಡುಬಂತು. ಅಲ್ಲಿ ಪರ್ಷಿಯನ್ನಿನ ತೀವ್ರ ಪ್ರಭಾವಕ್ಕೆ ಉರ್ದುಭಾಷೆ ಒಳಗಾದುದಲ್ಲದೆ ಬಹುಪಾಲು ಪರ್ಷಿಯನ್ನೀಕರಣಗೊಂಡಿತು. ಇದಕ್ಕೆ ಕಾರಣ ಪರ್ಷಿಯನ್ ಭಾಷೆ ಸೊಗಸಾಗಿ ಬೆಳೆದು ಸಂಸ್ಕಾರಗೊಂಡು ಸಾಂಸ್ಕೃತಿಕ ಭಾಷೆಯಾಗಿದ್ದುದು. ಪರ್ಷಿಯನ್ನಿನ ಪದಸಂಪತ್ತಿಗೆ ಸಮಾನವಾಗಬಲ್ಲ ಪದಸಂಪತ್ತು ಪ್ರಾಕೃತ ಭಾಷೆಯಲ್ಲಿರಲಿಲ್ಲ. ಅದು ಕೇವಲ ಆಳುವವರ, ವೀರರ, ಯುದ್ಧದ ಮತ್ತು ಪ್ರೇಮದ ಭಾಷೆಯಾಗಿತ್ತು. ಅಲ್ಲದೆ ಪರ್ಷಿಯನ್ ಭಾಷೆಯಲ್ಲಿನ ಪದಗಳು ಮಧುರವಾಗಿಯೂ ಕಿವಿಗೆ ಹಿತವಾಗಿಯೂ ಇದ್ದುವು. ಖಿಲ್ಜಿ ಮತ್ತು ತುಘಲಕರ ಅನಂತರ ಬಂದ ಮೊಘಲರ ಕಾಲದಲ್ಲಿ ಅಂದರೆ 1857ರ ವರೆವಿಗೂ ಉರ್ದು ಭಾಷೆಯ ಪರ್ಷಿಯನ್ನೀಕರಣ ಮುಂದುವರಿಯಿತೆಂದೇ ಹೇಳಬೇಕು. ಪರ್ಷಿಯನ್ ಭಾಷೆ ಮತ್ತು ಸಾಹಿತ್ಯ ಉರ್ದುಭಾಷೆಗೆ ಮಾದರಿಯಾದುವು. ಪರ್ಷಿಯನ್ನೀಕರಣ ಉರ್ದುಭಾಷೆಗೆ ಕಾಂತಿಯನ್ನಿತ್ತಿತು.ಅಕ್ಬರನ ಆಳ್ವಿಕೆಯಲ್ಲಿ ಸರ್ಕಾರಿಸೇವೆಗೆ ಸೇರಲು ಪರ್ಷಿಯನ್ ಭಾಷಾಜ್ಞಾನ ಕಡ್ಡಾಯವಾಯಿತು. ಎಲ್ಲಕ್ಕಿಂತ ಹೆಚ್ಚಾಗಿ ಸಂಸ್ಕೃತಕ್ಕೆ ಸೋದರಿ ಭಾಷೆಯಾದ ಪರ್ಷಿಯನ್ ಭಾಷಾ ಪದಸಂಪತ್ತು ಮತ್ತು ನುಡಿಗಟ್ಟು ಪ್ರಾಕೃತಕ್ಕೆ ಚೆನ್ನಾಗಿ ಒಗ್ಗಿಕೊಂಡಿತು. ದೆಹಲಿ ಮತ್ತು ಲಖನೌದ ಬಹುಪಾಲು ಕವಿಗಳು ದ್ವಿಭಾಷಾ ಕವಿಗಳಾಗಿದ್ದರು. ಅವರು ಪರ್ಷಿಯನ್ ಮತ್ತು ಉರ್ದುವಿನಲ್ಲಿ ಕಾವ್ಯವನ್ನು ರಚಿಸಿದರು. 1700 ರಿಂದ ಸುಮಾರು ನೂರು ವರ್ಷಗಳ ಕಾಲ ದೆಹಲಿ ಸಾಹಿತ್ಯಕ ಚಟುವಟಿಕೆಗಳ ಕೇಂದ್ರವಾಗಿತ್ತು. ಮುಂದಿನ ಸತತ ರಾಜಕೀಯ ಅನಾಯಕತ್ವದಿಂದಾಗಿ ವಿದ್ವಾಂಸರು ಮತ್ತು ಕವಿಗಳು ದೆಹಲಿ ಆಡಳಿತದಿಂದ ಸ್ವತಂತ್ರಗೊಂಡ ಲಖನೌಗೆ ವಲಸೆ ಹೋದರು. ಅಲ್ಲಿ ಉರ್ದು ವ್ಯಾಕರಣ, ಭಾಷೆ ಮತ್ತು ನುಡಿಗಟ್ಟಿನ ಚೌಕಟ್ಟು ಸಿದ್ಧವಾಯಿತು. ಕಾವ್ಯರಚನಾ ಸ್ವಾತಂತ್ರ್ಯ ನಿಗದಿಗೊಂಡಿತು. ಛಂದಸ್ಸು, ಅಲಂಕಾರ, ಉಪಮೆ, ರೂಪಗಳು ಸಿದ್ಧವಾದುವು. ಒಟ್ಟಿನಲ್ಲಿ ಉರ್ದುಭಾಷೆ 19ನೆಯ ಶತಮಾನದಲ್ಲಿ ಲಖನೌದಲ್ಲಿ ವ್ಯವಸ್ಥೆಗೊಂಡು ನಿಯಂತ್ರಣಗೊಂಡಿತು. ಮೊಘಲ್ ರಾಜನಾದ ಬಹಾದುರ್ ಷಾಹನ ಆಳ್ವಿಕೆಯ ಕೊನೆಗೆ (19ನೆಯ ಶತಮಾನದ ಮಧ್ಯ) ದೆಹಲಿಯಲ್ಲಿ ಸಾಹಿತ್ಯಕ ಚಟುವಟಿಕೆ ಪುನರಾರಂಭವಾಯಿತು. ಅಲ್ಲಿಂದ ಮುಂದೆ ದೆಹಲಿ, ಲಖನೌಗಳೆರಡೂ ಉರ್ದುಭಾಷೆ ಮತ್ತು ಸಾಹಿತ್ಯದ ಪ್ರಮುಖ ಕೇಂದ್ರಗಳಾದುವು. ಇದರೊಡನೆ ಪಾಟ್ನಾ,ಮುರ್ಶಿದಾಬಾದ್, ಟೊಂಕ್,ಭೋಪಾಲ್, ಮಂಗ್ರೋಲ್, ರಾಮಪುರ, ಹೈದರಾಬಾದು ಆಸ್ಥಾನಗಳು ಕವಿ, ವಿದ್ವಾಂಸ ಬರಹಗಾರರನ್ನು ಆಕರ್ಷಿಸಿದವು. ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ (1857) ಫಲವಾಗಿ ಸಾಹಿತಿಗಳು ದೆಹಲಿಯಿಂದ ನಿರ್ಗಮಿಸಿ ದೇಶದ ಬೇರೆ ಬೇರೆ ಸ್ಥಳಗಳಲ್ಲಿ ನೆಲೆಸಿದರು. ಇದರಿಂದ ಉರ್ದು ಭಾಷೆ ಮತ್ತು ಸಾಹಿತ್ಯ ದೇಶದಲ್ಲೆಲ್ಲ ಹರಡಿತು.

ಹೆಚ್ಚಿನ ಮಾಹಿತಿಗೆ ಇದನ್ನು ನೋಡಿ

ಬ್ರಿಟಿಷ್ ಆಳ್ವಿಕೆಯಲ್ಲಿ

ಬ್ರಿಟಿಷ್ ಆಳ್ವಿಕೆಯ ಆರಂಭದಿಂದ ಉರ್ದು ಹೊಸ ತಿರುವನ್ನು ಪಡೆದು ಅವರ ಭಾಷೆ ಮತ್ತು ನಾಗರೀಕತೆಯ ಪ್ರಭಾವದಿಂದ ಆಧುನಿಕತೆಯ ಕಡೆಗೆ ಸಾಗಿತು. ಅದುವರೆಗೂ ಉರ್ದು ಕಾವ್ಯಭಾಷೆಯಾಗಿತ್ತು. ಪ್ರಧಾನ ಬರೆದ ಉರ್ದು ಗದ್ಯವೆಲ್ಲವೂ ಸಾಂಪ್ರದಾಯಕವಾಗಿದ್ದುವು. ಈಸ್ಟ್ ಇಂಡಿಯಾ ಕಂಪೆನಿಯ ಬ್ರಿಟಿಷ್ ಅಧಿಕಾರಿಗಳಿಗೆ ದೇಶೀ ಭಾಷೆಗಳನ್ನು ಕಲಿಸಲು ಆರಂಭವಾದ (1800) ಪೋರ್ಟ್ ವಿಲಿಯಂ ಕಾಲೇಜಿನಲ್ಲಿ ಉರ್ದು ಗದ್ಯ ಅಭಿವೃದ್ಧಿಗೊಂಡಿತು. ಹತ್ತೊಂಬತ್ತನೆಯ ಶತಮಾನದ ಉತ್ತರಾರ್ಧದಲ್ಲಿ ಅಲಿಘರ್ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದ ಸರ್ ಸೈಯದ್ ಅಹಮದ್‍ಖಾನ್ ತನ್ನ ಅಮೂಲ್ಯ ಕಾಣಿಕೆಗಳಿಂದ ಉರ್ದು ಗದ್ಯದ ಭಾಷೆಯನ್ನು ಸರಳಗೊಳಿಸಿ ಸಾಂಪ್ರದಾಯಕತೆಯನ್ನು ಹೋಗಲಾಡಿಸಿ ಶಾಸ್ತ್ರೀಯಗೊಳಿಸಿದ. ಇಂಗ್ಲಿಷ್ ಕೃತಿಗಳ ಅನುವಾದ ಉರ್ದುಭಾಷೆ ಮತ್ತು ಸಾಹಿತ್ಯದ ಅವಕಾಶವನ್ನು ಹೆಚ್ಚಿಸಿದುದಲ್ಲದೆ ಶಾಸ್ತ್ರೀಯ ಪರಿಭಾಷೆ ಮತ್ತು ಪದಕೋಶವನ್ನು ಶ್ರೀಮಂತಗೊಳಿಸಿತು. ದೆಹಲಿಯಲ್ಲಿ ಬ್ರಿಟಿಷ್ ಸರ್ಕಾರದ ಆಡಳಿತ ಭಾಷೆಯಾಗಿದ್ದ ಪರ್ಷಿಯನ್ನಿನ ಸ್ಥಾನವನ್ನು ಉರ್ದು ಆಕ್ರಮಿಸಿ ಇಂಗ್ಲಿಷ್ ಆ ಸ್ಥಾನವನ್ನು ಪಡೆಯುವವರೆಗೂ ವಿರಾಜಿಸಿತು.

ವರ್ಣಮಾಲೆ

ಉರ್ದೂ 
[Lashkari Zaban] ನಾಸ್ತಾಲಿಕ್ ಲಿಪಿಯಲ್ಲಿ ಲಷ್ಕರಿ ಜಬನ್ (ತಂಡ ಭಾಷೆ) ಶೀರ್ಷಿಕೆ.

ಉರ್ದು ವರ್ಣಮಾಲೆಯಲ್ಲಿ 35 ಅಕ್ಷರಗಳಿವೆ. ಅರಬ್ಬೀಯಲ್ಲಿ 28 ಅಕ್ಷರಗಳಾದರೆ ಪರ್ಷಿಯನ್‍ನಲ್ಲಿ 32. ಹಿಂದ್ ಅಥವಾ ಇಂಡಿಯ (ಭಾರತ) ಎಂಬುದರ ಮೂಲ ಅರ್ಥದಲ್ಲಿ ಈ ಆಡು ಭಾಷೆಯನ್ನು ಹಿಂದಿಯೆಂದು ಕರೆದರು. ದೆಹಲಿಯ ಮೊಟ್ಟ ಮೊದಲ ಬರಹಗಾರ ಅಮೀರ್ ಖುಸ್ರೋ (ಮರಣ 1322) ಇದನ್ನು ಹಿಂದವೀ ಎಂದು ಕರೆದ. ಇದು ಕಾವ್ಯ ರಚನೆಗೆ ಬಳಕೆಯಾದಾಗ ರೀಖ್ತ ಎಂದಾಯಿತು: ಆರಂಭಿಕ ಕಾವ್ಯಕ್ಕೂ ಇದೇ ಹೆಸರಾಯಿತು. (1950). ಇದರ ಅರ್ಥಪತನಗೊಂಡು, ಅಚ್ಚಿಗೆ ಹುಯ್ದು, ಮತ್ತು ಸುರಿದ-ಎಂದು; ಅಂದರೆ ಮೂಲ ಭಾಷೆಯಿಂದ ಭಿನ್ನವಾದುದರಿಂದ ಇದು ಅಪಭ್ರಂಶ. ಭಿನ್ನ ಭಾಷೆಗಳ ಪದಗಳನ್ನು ಎರವಲಾಗಿ ಪಡೆದು ಹೊಂದಿಕೊಂಡು ಬೆಸುಗೆಯಾಗಿ ಎರಕಗೊಂಡ ಭಾಷೆ. ಪರ್ಷಿಯನ್ ಮತ್ತು ಅರಬ್ಬೀ ಭಾಷೆಗಳಿಂದ ಬಂದ ಪ್ರಾಕೃತ ರೂಪಗಳು ಈ ಭಾಷೆಗೆ ಸುರಿಯಲ್ಪಟ್ಟುದರಿಂದ ಸುರಿದ ಭಾಷೆ ಎನಿಸಿತು. ರಾಜಸೇನೆಯ ಭಾಷೆ ಅರ್ಥ ಬರುವ ಜಬಾನೆ ಉರ್ದು-ಎ-ಮುಅಲ್ಲಾ ಎಂಬ ಹೆಸರನ್ನು ಕೊಟ್ಟವು ಷಹಜಹಾನ್ ಚಕ್ರವರ್ತಿ. ಕ್ರಮೇಣ ಜಬಾನ್ ಮತ್ತು ಮುಅಲ್ಲ ಪದಗಳನ್ನು ಕಳೆದುಕೊಂಡು ಉರ್ದು ಪದ ಬಳಕೆಗೆ ಬಂತು. ಉರ್ದು ತುರ್ಕಿ ಪದ ಇದಕ್ಕೆ ಪ್ರತಿಯಾಗಿ ಇಂಗ್ಲಿಷಿನಲ್ಲಿ ಅಲೆದಾಡುವ ಜನಗಳ ಗುಂಪು (ಹೋರ್ಡ್) ಎಂಬುದುಂಟು. ದಖನಿ ಮತ್ತು ಹಿಂದಿ ಭಾಷೆ ದಕ್ಷಿಣದಲ್ಲಿ ಬೆಳೆದಂತೆ ಉತ್ತರದಲ್ಲಿ ಇದನ್ನು ಜಬಾನೆ ಹಿಂದೂಸ್ತಾನ್ (ಭಾರತದ ಭಾಷೆ) ಮತ್ತು ಉರ್ದು ಎಂದು ಕರೆದರು.

ಉರ್ದೂ 
"ಜ಼ುಬಾನ್'ಎ ಉರ್ದೂ'ಎ ಮು'ಅಲ್ಲೀ [Zuban-i Urdū-yi Muʿallá]" (ಗೌರವಾನ್ವಿತರ ಭಾಷೆ) ಎಂದು ನಸ್ತಲೀಖ್ ಲಿಪಿಯಲ್ಲಿ ಬರೆದಿರುವುದು.

ಉರ್ದು ಸಾಕಷ್ಟು ಪ್ರಾಚೀನ ಭಾಷೆಯಾದರೂ ಈಗಲೂ ಜೀವಂತವಾಗಿರುವ ಭಾಷೆ. ರಚನೆ, ವ್ಯಾಕರಣ ಮತ್ತು ಅನ್ವಯಗಳ ದೃಷ್ಟಿಯಿಂದ ಉರ್ದುವಿಗೂ ಹಿಂದಿಗೂ ಹೆಚ್ಚಿನ ವ್ಯತ್ಯಾಸ ಕಾಣದು. ಅವಕ್ಕೆ ಬಹುಪಾಲು ಪದ ಭಂಡಾರವೂ ಅವಕ್ಕೆ ಒಂದೇ ಆಗಿದೆ. ಆದರೆ ಲಿಪಿ ಎರಡಕ್ಕೂ ಬೇರೆ ಬೇರೆ. ಉರ್ದುವಿನಲ್ಲಿ ಅರಭ್ಬೀ ಮತ್ತು ಪರ್ಷಿಯನ್ ಪದಗಳು ಹೆಚ್ಚು. ಹಿಂದಿಯಲ್ಲಾದರೋ ಸಂಸ್ಕೃತ ಪದಗಳು ಹೆಚ್ಚು. ಈಗ ಜಮ್ಮು ಮತ್ತು ಕಾಶ್ಮೀರ ಪ್ರದೇಶಗಳಲ್ಲಿ ಉರ್ದು ಪ್ರಾಂತ್ಯ ಭಾಷೆಗಳಲ್ಲೊಂದಾಗಿದೆ. ಪಂಜಾಬು, ಉತ್ತರ ಪ್ರದೇಶ, ಬಿಹಾರ ಮೊದಲಾದ ಉತ್ತರಭಾರತದ ಕೆಲವು ಭಾಗಗಳಲ್ಲಿ ಇದರ ವ್ಯಾಪ್ತಿ ಹೆಚ್ಚು, ಉರ್ದು ಮಾತನಾಡುವವರ ಸಂಖ್ಯೆ ಭಾರತದಲ್ಲಿ ಸು.೫.೨ ಕೋಟಿಯಾದರೆ ಪ್ರಪಂಚದಲ್ಲಿ ೬ ರಿಂದ ೭ ಕೋಟಿ (೨೦೦೧).ಪಾಕಿಸ್ತಾನದ ರಾಷ್ಟ್ರಭಾಷೆ. ಇಲ್ಲಿ ಇದನ್ನು ಮಾತನಾಡುವವರ ಸಂಖ್ಯೆ ಸುಮಾರು ೧ ಕೋಟಿ.

ಉಲ್ಲೇಖಗಳು

ಬಾಹ್ಯ ಸಂಪರ್ಕಗಳು

ಉರ್ದೂ 
ವಿಕಿಸೋರ್ಸ್ ನಲ್ಲಿ ಲಭ್ಯವಿರುವ ಲೇಖನದ ವಿಷಯವನ್ನು ಇಲ್ಲಿ ಅಳವಡಿಸಲಾಗಿದೆ:

Tags:

ಉರ್ದೂ ಉಗಮಉರ್ದೂ ಆರಂಭಿಕ ಬೆಳವಣಿಗೆಉರ್ದೂ ಪ್ರಸರಣಉರ್ದೂ ಸಾಹಿತ್ಯಉರ್ದೂ ಬ್ರಿಟಿಷ್ ಆಳ್ವಿಕೆಯಲ್ಲಿಉರ್ದೂ ವರ್ಣಮಾಲೆಉರ್ದೂ ಉಲ್ಲೇಖಗಳುಉರ್ದೂ ಬಾಹ್ಯ ಸಂಪರ್ಕಗಳುಉರ್ದೂಅರಬ್ಬೀ ಭಾಷೆದೆಹಲಿಮೊಘಲ್ ಸಾಮ್ರಾಜ್ಯಹಿಂದಿ

🔥 Trending searches on Wiki ಕನ್ನಡ:

ಚಾಮುಂಡರಾಯಹಣಕಾಸುಮೂಲಧಾತುಗಳ ಪಟ್ಟಿವಿಜಯ ಕರ್ನಾಟಕರಾಜಕೀಯ ವಿಜ್ಞಾನಬೆಂಗಳೂರು ದಕ್ಷಿಣ (ಲೋಕ ಸಭೆ ಚುನಾವಣಾ ಕ್ಷೇತ್ರ)ಅರವಿಂದ ಮಾಲಗತ್ತಿಜೋಡು ನುಡಿಗಟ್ಟುನಿರಂಜನಸಿ.ಎಮ್.ಪೂಣಚ್ಚಕೃಷ್ಣರಾಜಸಾಗರಹೆಳವನಕಟ್ಟೆ ಗಿರಿಯಮ್ಮಪ್ರಬಂಧಕೊರೋನಾವೈರಸ್ಕರ್ನಾಟಕದ ಜಾನಪದ ಕಲೆಗಳುಅರವಿಂದ ಘೋಷ್ಶಿವರಾಜ್‍ಕುಮಾರ್ (ನಟ)ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳುಡೊಳ್ಳು ಕುಣಿತಕನ್ನಡ ಛಂದಸ್ಸುಮುಕ್ತಾಯಕ್ಕಹುರುಳಿಹಸ್ತ ಮೈಥುನಉಡರಾಷ್ಟ್ರೀಯ ಉತ್ಪನ್ನಜೀವನಭಾರತೀಯ ಜ್ಞಾನಪೀಠಐಸಿಐಸಿಐ ಬ್ಯಾಂಕ್ರೈತಭಾರತದಲ್ಲಿನ ಶಿಕ್ಷಣಔಡಲಪೂರ್ಣಚಂದ್ರ ತೇಜಸ್ವಿಐಹೊಳೆನೀರಿನ ಸಂರಕ್ಷಣೆಕನ್ನಡ ಗುಣಿತಾಕ್ಷರಗಳುಭಾರತದ ಸಂವಿಧಾನದ ೩೭೦ನೇ ವಿಧಿಸಿ ಎನ್ ಮಂಜುನಾಥ್ಯೂಟ್ಯೂಬ್‌ಗುಪ್ತ ಸಾಮ್ರಾಜ್ಯಭಾರತದ ರಾಷ್ಟ್ರಪತಿಗಳ ಪಟ್ಟಿಭಾರತೀಯ ಸಂವಿಧಾನದ ತಿದ್ದುಪಡಿಕರ್ನಾಟಕ ಲೋಕಸೇವಾ ಆಯೋಗಭಾರತದ ತ್ರಿವರ್ಣ ಧ್ವಜಕೊಡಗುಅರಿಸ್ಟಾಟಲ್‌ಸ್ವದೇಶಿ ಚಳುವಳಿಮುಖ್ಯ ಪುಟಗುರುರಾಜ ಕರಜಗಿರಾಮಾಚಾರಿ (ಕನ್ನಡ ಧಾರಾವಾಹಿ)ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣಸಾಮಾಜಿಕ ತಾಣಲಸಿಕೆರಾಹುಲ್ ಗಾಂಧಿದಯಾನಂದ ಸರಸ್ವತಿಅಂಬಿಗರ ಚೌಡಯ್ಯವಾಲಿಬಾಲ್ಛಂದಸ್ಸುಗಿಡಮೂಲಿಕೆಗಳ ಔಷಧಿಶಿವಕಾಲೆರಾಕನ್ನಡ ಕಾವ್ಯಜಾತ್ಯತೀತತೆಎ.ಕೆ.ರಾಮಾನುಜನ್ರೈತವಾರಿ ಪದ್ಧತಿಭಾರತದ ಮುಖ್ಯ ನ್ಯಾಯಾಧೀಶರುಶಿವಮೊಗ್ಗಭಾಗ್ಯಲಕ್ಷ್ಮೀ (ಕನ್ನಡ ಧಾರಾವಾಹಿ)ಕಾಳಿದಾಸಸಂಶೋಧನೆಹೆಸರುಬಹಮನಿ ಸುಲ್ತಾನರುಸಚಿನ್ ತೆಂಡೂಲ್ಕರ್ಉತ್ತರ ಕನ್ನಡಹನುಮಂತಸೂರ್ಯವಂಶ (ಚಲನಚಿತ್ರ)ಭಾವನಾ(ನಟಿ-ಭಾವನಾ ರಾಮಣ್ಣ)🡆 More