ಎಸ್.ಎಲ್. ಭೈರಪ್ಪ: ಭಾರತೀಯ ಕಾದಂಬರಿಕಾರ

ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು.

ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ಎಸ್.ಎಲ್. ಭೈರಪ್ಪ
ಎಸ್.ಎಲ್. ಭೈರಪ್ಪ: ಜೀವನ, ಕೃತಿಗಳು, ಪ್ರಶಸ್ತಿಗೌರವಗಳು
ಶ್ರೀ ಎಸ್.ಎಲ್. ಭೈರಪ್ಪ
ಜನನ೨೬-೦೭-೧೯೩೪
ಸಂತೇಶಿವರ, ಹಾಸನ ಜಿಲ್ಲೆ, ಕರ್ನಾಟಕ, ಭಾರತ
ವೃತ್ತಿಲೇಖಕ,ವಿಮರ್ಶಕ,ಅಧ್ಯಾಪಕ
ರಾಷ್ಟ್ರೀಯತೆಭಾರತೀಯ
ಪ್ರಕಾರ/ಶೈಲಿಕಥೆ, ಕಾದಂಬರಿ, ಇತಿಹಾಸ


slbhyrappa.in/kn/

ಜೀವನ

  • ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ೨೬-೦೭-೧೯೩೪ ರಂದು ಹುಟ್ಟಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ಕಿತ್ತು ತಿನ್ನುವ ಬಡತನ, ಬೇಜವಾಬ್ದಾರಿ ತಂದೆ, ಪ್ಲೇಗ್ ಮಾರಿಯಿಂದ ತತ್ತರಗೊಂಡ ಪರಿಸರದಲ್ಲೂ ಅವರ ಸಣ್ಣ ವಯಸ್ಸಿನಲ್ಲೇ ಅವರ ತಾಯಿಯ ಧೀಮಂತಿಕೆಯನ್ನು ಮೈಗೂಡಿಸಿ ಕೊಂಡರು. ಶಾಲಾ ದಾಖಲೆಗಳ ಪ್ರಕಾರ ಅವರ ಜನ್ಮದಿನ ೨೦-೦೮-೧೯೩೧ ಎಂದು ಅವರು ತಮ್ಮ ಆತ್ಮಕಥೆ ಭಿತ್ತಿಯಲ್ಲಿ ಹೇಳಿಕೊಂಡಿದ್ದಾರೆ. (ಪುತ ೫೦ ಮೊದಲ ಮುದ್ರಣ).
  • ಅವರ ೫ನೇ ವಯಸ್ಸಿನಲ್ಲಿ ಅವರ ತಾಯಿ ಬಡತನ - ಪ್ಲೇಗ್ ಗಳಿಗೆ ಜೀವವನ್ನು ತೆತ್ತಾಗ ಬದುಕಿನ ವಿಶ್ವ ವಿಶಾಲತೆಯ ರಂಗದಲ್ಲಿ ಸಾಹಸಮಯವಾದ ಬದುಕನ್ನು ತಾವೇ ನಿರ್ಮಿಸಿ ಕೊಳ್ಳ ತೊಡಗಿ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿದರು. ಗಾಂಧೀಜಿಯವರ ಮೌಲ್ಯಗಳಿಗೆ ಬೆಲೆ ಕೊಟ್ಟು ಸ್ವಾತಂತ್ರ ಚಳುವಳಿಗೆ ತೊಡಗಿಸಿಕೊಂಡಾಗ ಅವರಿಗೆ ಕೇವಲ ೧೩ ವರ್ಷ!
  • ಪ್ರೌಢ ಶಿಕ್ಷಣ ಹಾಗೂ ಕಾಲೇಜು ಓದು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ "ಸತ್ಯ ಮತ್ತು ಸೌಂದರ್ಯ", ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದರು.
  • ಹುಬ್ಬಳ್ಳಿ, ಗುಜರಾತಿನ ಸರದಾರ್ ಪಟೇಲ್ ವಿಶ್ವ ವಿದ್ಯಾಲಯ, ದೆಹಲಿಗಳಲ್ಲಿ ತಮ್ಮ ಉಪನ್ಯಾಸಕ ವೃತ್ತಿ ಕೈಗೊಂಡ ಭೈರಪ್ಪನವರು, ಶಾಸ್ತ್ರಿಯ ಶಿಸ್ತಿನ ಓದಿನ ನಡುವೆ ಮಹತ್ವದ ಕಾದಂಬರಿಗಳನ್ನು ರಚಿಸಿದ್ದಾರೆ. ೧೯೬೧ ರಲ್ಲಿ `ಧರ್ಮಶ್ರೀ' ಕಾದಂಬರಿ ಪ್ರಕಟಿಸಿ ಇದುವರೆವಿಗೆ ನಾಲ್ಕು ದಶಕಗಳಲ್ಲಿ ೨೧ ಕಾದಂಬರಿಗಳನ್ನು ಬರೆದಿದ್ದಾರೆ.
  • ಆಯಾ ಕಾಲದಲ್ಲಿ ಬಂದ ಅವರ ಕಾದಂಬರಿಗಳೆಲ್ಲಾ ಚರ್ಚೆಗೆ ಒಳಗಾಗಿವೆ. ಇಂಗ್ಲಿಷ್ ಭಾಷೆಯೂ ಸೇರಿದಂತೆ ಭಾರತೀಯ ಹಲವು ಭಾಷೆಗಳಿಗೆ ಭೈರಪ್ಪನವರ ಕಾದಂಬರಿಗಳು ಅನುವಾದ ಗೊಂಡಿವೆ. ಗೃಹಭಂಗ ,ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು ಹಿಂದಿ, ಮರಾಠಿಯಲ್ಲಿ ಜನಪ್ರಿಯವಾಗಿವೆ.
  • ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ ಕಾದಂಬರಿಗಳು ಚಲನಚಿತ್ರವಾಗಿ ಪ್ರಶಸ್ತಿ ಗಳಿಸಿವೆ. ವಂಶವೃಕ್ಷಕ್ಕೆ ೧೯೬೬ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೭೫ ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ.
  • `ಪರ್ವ' ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲೇ ಭಾರೀ ಚರ್ಚೆಗೆ ಒಳಗಾದದ್ದು. ಮಹಾಭಾರತ ಕಾಲದ ಭಾರತೀಯ ಸಮಾಜದ ರೀತಿ ನೀತಿಗಳನ್ನೂ, ಆ ಕಾಲದ ಜೀವನ ಮೌಲ್ಯಗಳನ್ನು, ಮೃತ್ಯುವಿನ ರಹಸ್ಯಾತ್ಮಕತೆಯನ್ನು ಕಾದಂಬರಿಯಲ್ಲಿ ಅರ್ಥಪೂರ್ಣವಾಗಿ ಬಿಂಬಿಸಲಾಗಿದೆ. ಲೈಂಗಿಕತೆ ಮತ್ತು ಸಾವುಗಳ ನೆಲೆಯಲ್ಲಿ ದ್ರೌಪದಿ, ಕುಂತಿ, ಮಾದ್ರಿ, ಗಾಂಧಾರಿ ಪಾತ್ರಗಳನ್ನು ವಿಶಿಷ್ಟವಾಗಿ ಮೂಡಿಸಿದ್ದಾರೆ.
  • ಕಾದಂಬರಿಗಳಲ್ಲದೆ ಸಾಹಿತ್ಯ ಮೀಮಾಂಸೆಗೆ ಸಂಬಂಧಿಸಿದ `ಸಾಹಿತ್ಯ ಮತ್ತು ಪ್ರತೀಕ', `ಕಥೆ ಮತ್ತು ಕಥಾವಸ್ತು', `ನಾನೇಕೆ ಬರೆಯುತ್ತೇನೆ' ಎಂಬ ಕೃತಿಗಳನ್ನೂ ಭೈರಪ್ಪ ರಚಿಸಿದ್ದಾರೆ. ಪ್ರಸ್ತುತ ಮೈಸೂರಿನ ಕುವೆಂಪು ನಗರದಲ್ಲಿ ವಾಸವಾಗಿದ್ದಾರೆ. ೧೯೯೯ರಲ್ಲಿ ಕನಕಪುರಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಭೈರಪ್ಪ ಆಯ್ಕೆಯಾಗಿದ್ದರು.

(ಹೆಚ್ಚಿನ ಓದು : ಭೈರಪ್ಪನವರ ಬಾಲ್ಯ ಕಾಲದ ಹೃದಯಸ್ಪರ್ಶಿ ಚಿತ್ರಣಕ್ಕಾಗಿ ಬೆಳಗೆರೆ ಕೃಷ್ಣಶಾಸ್ತ್ರಿಗಳ "ಮರೆಯಲಾದೀತೇ" ವ್ಯಕ್ತಿ ಚಿತ್ರ ಸಂಗ್ರಹದಲ್ಲಿ ಭೈರಪ್ಪನವರ ಬಗೆಗಿನ ಅಧ್ಯಾಯವನ್ನು ಓದಿ. ಭೈರಪ್ಪನವರ ಜೀವನದ ಹೆಚ್ಚಿನ ಮಾಹಿತಿಗಾಗಿ ಅವರ ಆತ್ಮಚರಿತ್ರೆ ಭಿತ್ತಿಯನ್ನೂ ಓದಬಹುದಾಗಿದೆ.)

ಕೃತಿಗಳು

ಕಾದಂಬರಿಗಳು

  1. ಭೀಮಕಾಯ
  2. ಬೆಳಕು ಮೂಡಿತು
  3. ಧರ್ಮಶ್ರೀ - (೧೯೬೧)
  4. ದೂರ ಸರಿದರು- (೧೯೬೨)
  5. ಮತದಾನ - (೧೯೬೫)
  6. ವಂಶವೃಕ್ಷ- (೧೯೬೫)
  7. ಜಲಪಾತ (ಕಾದಂಬರಿ)- (೧೯೬೭)
  8. ನಾಯಿ ನೆರಳು- (೧೯೬೮)
  9. ತಬ್ಬಲಿಯು ನೀನಾದೆ ಮಗನೆ-(೧೯೬೮)
  10. ಗೃಹಭಂಗ-(೧೯೭೦)
  11. ನಿರಾಕರಣ-(೧೯೭೧)
  12. ಗ್ರಹಣ-(೧೯೭೨)
  13. ದಾಟು -(೧೯೭೩)
  14. ಅನ್ವೇಷಣ-(೧೯೭೬)
  15. ಪರ್ವ-(೧೯೭೯)
  16. ನೆಲೆ -(೧೯೮೩)
  17. ಸಾಕ್ಷಿ -(೧೯೮೬)
  18. ಅಂಚು-(೧೯೯೦)
  19. ತಂತು -(೧೯೯೩)
  20. ಸಾರ್ಥ-(೧೯೯೮)
  21. ಮಂದ್ರ-(೨೦೦೧)
  22. ಆವರಣ-(೨೦೦೭)
  23. ಕವಲು - (೨೦೧೦)
  24. ಯಾನ - (೨೦೧೪)
  25. ಉತ್ತರಕಾಂಡ-(೨೦೧೭)

ಆತ್ಮ ಚರಿತ್ರೆ

ತತ್ತ್ವಶಾಸ್ತ್ರ

  1. ಸತ್ಯ ಮತ್ತು ಸೌಂದರ್ಯ (೧೯೬೬) - ಪಿ.ಎಚ್.ಡಿ ಪ್ರಬಂಧ
  2. ಸಾಹಿತ್ಯ ಮತ್ತು ಪ್ರತೀಕ (೧೯೬೭)
  3. ಕಥೆ ಮತ್ತು ಕಥಾವಸ್ತು (೧೯೬೯)
  4. ಸಂದರ್ಭ:ಸಂವಾದ (೨೦೧೧)

ಇತರೆ

  • ನಾನೇಕೆ ಬರೆಯುತ್ತೇನೆ? (೧೯೮೦)

ಇತರ ಭಾಷೆಗಳಿಗೆ ಅನುವಾದವಾಗಿರುವ ಕಾದಂಬರಿಗಳು

  1. ಧರ್ಮಶ್ರೀ - ಸಂಸ್ಕೃತ, ಮರಾಠಿ
  2. ವಂಶವೃಕ್ಷ - ತೆಲುಗು, ಮರಾಠಿ, ಹಿಂದಿ, ಉರ್ದು, ಇಂಗ್ಲೀಷ್
  3. ನಾಯಿ ನೆರಳು - ಗುಜರಾತಿ, ಹಿಂದಿ
  4. ತಬ್ಬಲಿಯು ನೀನಾದೆ ಮಗನೆ - ಹಿಂದಿ
  5. ಗೃಹಭಂಗ - ಭಾರತದ ಹದಿನಾಲ್ಕು ಭಾಷೆಗಳಿಗೆ ಅನುವಾದವಾಗಿದೆ
  6. ನಿರಾಕರಣ -ಹಿಂದಿ
  7. ದಾಟು - ಇಂಗ್ಲೀಷ್, ಭಾರತದ ಹದಿನಾಲ್ಕು ಭಾಷೆಗಳಿಗೆ ಅನುವಾದವಾಗಿದೆ
  8. ಅನ್ವೇಷಣ -ಹಿಂದಿ,ಮರಾಠಿ
  9. ಪರ್ವ -ಹಿಂದಿ, ಮರಾಠಿ, ಇಂಗ್ಲೀಷ್, ತೆಲುಗು, ಬೆಂಗಾಲಿ, ತಮಿಳು
  10. ನೆಲೆ -ಹಿಂದಿ
  11. ಸಾಕ್ಷಿ - ಹಿಂದಿ, ಇಂಗ್ಲೀಷ್
  12. ಅಂಚು -ಹಿಂದಿ, ಮರಾಠಿ
  13. ತಂತು -ಹಿಂದಿ, ಮರಾಠಿ
  14. ಸಾರ್ಥ -ಹಿಂದಿ, ಮರಾಠಿ, ಇಂಗ್ಲೀಷ್, ಸಂಸ್ಕೃತ
  15. ನಾನೇಕೆ ಬರೆಯುತ್ತೇನೆ -ಮರಾಠಿ
  16. ಸತ್ಯ ಮತ್ತು ಸೌಂದರ್ಯ -ಇಂಗ್ಲೀಷ್
  17. ಭಿತ್ತಿ -ಹಿಂದಿ, ಮರಾಠಿ

ಚಲನಚಿತ್ರವಾಗಿರುವ ಕಾದಂಬರಿಗಳು

  1. ವಂಶವೃಕ್ಷ - ೧೯೭೨
  2. ತಬ್ಬಲಿಯು ನೀನಾದೆ ಮಗನೆ - ೧೯೭೭
  3. ಮತದಾನ - ೨೦೦೧
  4. ನಾಯಿ ನೆರಳು - ೨೦೦೬

ಟಿ.ವಿ. ಧಾರಾವಾಹಿಯಾಗಿರುವ ಕಾದಂಬರಿಗಳು

  1. ಗೃಹಭಂಗ
  2. ದಾಟು (ಹಿಂದಿ)

ಪ್ರಶಸ್ತಿ/ಗೌರವಗಳು

ಚಿತ್ರಸಂಪುಟ

ಉಲ್ಲೇಖಗಳು

ಬಾಹ್ಯ ಸಂಪರ್ಕಗಳು

Tags:

ಎಸ್.ಎಲ್. ಭೈರಪ್ಪ ಜೀವನಎಸ್.ಎಲ್. ಭೈರಪ್ಪ ಕೃತಿಗಳುಎಸ್.ಎಲ್. ಭೈರಪ್ಪ ಪ್ರಶಸ್ತಿಗೌರವಗಳುಎಸ್.ಎಲ್. ಭೈರಪ್ಪ ಚಿತ್ರಸಂಪುಟಎಸ್.ಎಲ್. ಭೈರಪ್ಪ ಉಲ್ಲೇಖಗಳುಎಸ್.ಎಲ್. ಭೈರಪ್ಪ ಬಾಹ್ಯ ಸಂಪರ್ಕಗಳುಎಸ್.ಎಲ್. ಭೈರಪ್ಪಕನ್ನಡ ಸಾಹಿತ್ಯಪದ್ಮಭೂಷಣ

🔥 Trending searches on Wiki ಕನ್ನಡ:

ಭಾರತದ ಆರ್ಥಿಕ ವ್ಯವಸ್ಥೆಬೆಂಗಳೂರು ದಕ್ಷಿಣ (ಲೋಕ ಸಭೆ ಚುನಾವಣಾ ಕ್ಷೇತ್ರ)ಕನ್ನಡ ಬರಹಗಾರ್ತಿಯರುಅರಿಸ್ಟಾಟಲ್‌ಮಂಕುತಿಮ್ಮನ ಕಗ್ಗಆಯ್ಕಕ್ಕಿ ಮಾರಯ್ಯಅಗಸ್ಟ ಕಾಂಟ್ದೇವುಡು ನರಸಿಂಹಶಾಸ್ತ್ರಿಕನ್ನಡಸಿಂಗಪೂರಿನಲ್ಲಿ ರಾಜಾ ಕುಳ್ಳಭಾರತಶ್ವೇತ ಪತ್ರರಕ್ತದೊತ್ತಡಜಾನಪದಕರ್ನಾಟಕ ಯುದ್ಧಗಳುಕನ್ನಡದಲ್ಲಿ ಸಣ್ಣ ಕಥೆಗಳುರಜಪೂತಭೂತಾರಾಧನೆರಾಜಸ್ಥಾನ್ ರಾಯಲ್ಸ್ರಾಮಕ್ರೀಡೆಗಳುರಾಗಿಭಾರತೀಯ ಶಾಸ್ತ್ರೀಯ ಸಂಗೀತಭಾರತದ ವಿಶ್ವ ಪರಂಪರೆಯ ತಾಣಗಳುವಿಶ್ವಕರ್ಮಎಸ್.ಎಲ್. ಭೈರಪ್ಪಕೈಗಾರಿಕೆಗಳುಛತ್ರಪತಿ ಶಿವಾಜಿಪ್ರಚಂಡ ಕುಳ್ಳತಾಳಗುಂದ ಶಾಸನಪಂಚ ವಾರ್ಷಿಕ ಯೋಜನೆಗಳುಎಂ. ಕೆ. ಇಂದಿರಸಮಾಸದಾಸವಾಳವಸ್ತುಸಂಗ್ರಹಾಲಯಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಜವಾಹರ‌ಲಾಲ್ ನೆಹರುಎ.ಎನ್.ಮೂರ್ತಿರಾವ್ಸೂರ್ಯಯೋಗಬಾಬು ಜಗಜೀವನ ರಾಮ್ಗೋಕರ್ಣದಶಾವತಾರವಚನಕಾರರ ಅಂಕಿತ ನಾಮಗಳುಹೆಳವನಕಟ್ಟೆ ಗಿರಿಯಮ್ಮಚುನಾವಣೆವಾಟ್ಸ್ ಆಪ್ ಮೆಸ್ಸೆಂಜರ್ಸಂಯುಕ್ತ ರಾಷ್ಟ್ರ ಸಂಸ್ಥೆಬ್ಲಾಗ್ವಿರಾಟ್ ಕೊಹ್ಲಿಮಧ್ಯಕಾಲೀನ ಭಾರತಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಕಾರ್ಮಿಕರ ದಿನಾಚರಣೆಮೆಕ್ಕೆ ಜೋಳಮಂಡಲ ಹಾವುಶ್ರವಣಬೆಳಗೊಳಲೋಕಸಭೆಕರ್ನಾಟಕದ ವಿಶ್ವವಿದ್ಯಾಲಯಗಳುಭಾರತದ ಪಂಚಾಯತ್ ರಾಜ್ ವ್ಯವಸ್ಥೆಕೆಂಪು ಕೋಟೆಸೀತೆತಂತ್ರಜ್ಞಾನಜಾಗತಿಕ ತಾಪಮಾನ ಏರಿಕೆಯ ಪರಿಣಾಮಗಳುಮಾನವ ಹಕ್ಕುಗಳುಅಜಂತಾಯಾಣಅರ್ಥಶಾಸ್ತ್ರವಿಷ್ಣುಬಸವೇಶ್ವರಕನ್ನಡಪ್ರಭಮಳೆನೀರು ಕೊಯ್ಲುವ್ಯಾಪಾರಹಣರಾಷ್ಟ್ರಕವಿಯಶವಂತ ಚಿತ್ತಾಲಎಚ್ ಎಸ್ ಶಿವಪ್ರಕಾಶ್ಬಿ. ಎಂ. ಶ್ರೀಕಂಠಯ್ಯತೆಲುಗುಆಪ್ತಮಿತ್ರ🡆 More