ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು.
ವಿಳಾಸ: | ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು - ೫೬೦೦೧೮ |
---|---|
ಫೋನ್: | +೯೧ ೦೮೦ ೨೬೬೧೨೯೯೧ (+91 080 26612991) |
ಅಧ್ಯಕ್ಷರು : | ಡಾ. ಮಹೇಶ್ ಜೋಷಿ |
ಮುಂದೆ ೧೯೩೫ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ. ಕನ್ನಡ ಸಾಹಿತ್ಯವನ್ನು ನಾಡಿನ ಮೂಲೆ ಮೂಲೆಗಳಲ್ಲಿ ಹಬ್ಬಿಸಲು ಈ ಹಿಂದೆ ಸಾಧ್ಯವಾಗಿಸಿದೆ. ಈ ಸಂಸ್ಥೆಯ ಈಗಿನ ಅಧ್ಯಕ್ಷರಾಗಿ ಡಾ. ಮಹೇಶ್ ಜೋಷಿ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.
೧೯೧೫ ರಿಂದ ೧೯೪೦ ರವರೆಗೆ ಕಸಾಪ ಅಧ್ಯಕ್ಷರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗುತ್ತಿತ್ತು. ಬಳಿಕ ಚುನಾವಣಾ ಪದ್ಧತಿ ಜಾರಿಗೆ ಬಂದಿತು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೃಪತುಂಗ ಸಾಹಿತ್ಯ ಪ್ರಶಸ್ತಿ ಇಂದು ಬಹಳ ಜನರಿಗೆ ನೃಪತುಂಗ ಪ್ರಶಸ್ತಿ ದೊರೆತಿದೆ
(projectಶತಮಾನದ ಹೊಸ್ತಿಲಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಒಂದಿಷ್ಟು ಹಣಕಾಸು ಕ್ರೋಢಿಕರಿಸಬೇಕು. ಆ ಮೂಲಕ ಕನ್ನಡ ತಾಯಿಯ ಸೇವೆಯನ್ನು ವ್ಯಾಪಕಗೊಳಿಸಬೇಕೆಂಬ ನಿಟ್ಟಿನಲ್ಲಿ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಡಾ. ನಲ್ಲೂರು ಪ್ರಸಾದ್ ಆರ್.ಕೆ. ಅವರು 'ಕನ್ನಡ ನಿಧಿ' ಎಂಬ ವಿನೂತನ ಯೋಜನೆಯನ್ನು ಪ್ರಾರಂಭಿಸಿದರು. ಈ ನಿಧಿಗೆ ಹತ್ತು ರೂಪಾಯಿಯಿಂದ ಗರಿಷ್ಠ ಎಷ್ಟು ಬೇಕೆಂದರೂ ಉದಾರವಾಗಿ ದೇಣಿಗೆ ನೀಡಬಹುದು).ಈ ದೇಣಿಗೆ ತೆರಿಗೆ ವಿನಾಯಿತಿಯನ್ನೂ ಪಡೆದಿದೆ.ಈ ಹಣವನ್ನು ಬ್ಯಾಂಕಿನ ಖಾತೆಗೆ ಜಮಾ ಮಾಡಿ ಮೂಲಧನವನ್ನು ಯಾವುದೇ ಸಂದರ್ಭದಲ್ಲಿ ಬಳಸದಂತೆ ಹಾಗೂ ಆ ಹಣದಿಂದ ಬಡ್ಡಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳನ್ನು ಅದರಲ್ಲೂ ಜಿಲ್ಲಾ,ತಾಲೂಕು ಮತ್ತು ಹೋಬಳಿ ಮಟ್ಟದವರೆಗೂ ವಿಸ್ತರಿಸಲಾಗುತ್ತಿದೆ.ಕನ್ನಡ ನಿಧಿ ಯೋಜನೆ ಆರಂಭಗೊಂಡ ತಕ್ಷಣವೇ ಎಲ್ಲ ಕನ್ನಡಿಗರೂ ತಮ್ಮ ಉದಾರ ಹಸ್ತವನ್ನು ಚಾಚಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಶ್ರೀ ಟಿ.ಎ.ನಾರಾಯಣಗೌಡ ಕನ್ನಡ ನಿಧಿಗೆ ೫೦,೦೦೦ ರೂ.ನೀಡುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದ್ದಾರೆ.ಅದೇ ರೀತಿ ಮಾಜಿ ಶಾಸಕಿ ಹಾಗೂ ಪ್ರಸಿದ್ಧ ವಕೀಲರಾದ ಶ್ರೀಮತಿ ಪ್ರಮೀಳಾ ನೇಸರ್ಗಿ ೧,೦೦,೦೦೧ ರೂ.ನೀಡುವ ಮೂಲಕ ಕನ್ನಡ ಕೈಂಕರ್ಯದಲ್ಲಿ ತಾವೂ ತೊಡಗಿಸಿಕೊಂಡಿದ್ದಾರೆ. ಅನೇಕ ಕನ್ನಡಿಗರು ಹಾಗೂ ಸಂಘ ಸಂಸ್ಥೆಗಳು ನಿಧಿಗೆ ತಮ್ಮ ಕಾಣಿಕೆ ನೀಡುತ್ತಿದ್ದಾರೆ.
ಕನ್ನಡ ನಿಧಿಗೆ ದೇಣಿಗೆ ನೀಡುವ ಆಸಕ್ತಿಯುಳ್ಳವರು ಬೆಂಗಳೂರಿನ ಸಿಂಡಿಕೇಟ್ ಬ್ಯಾಂಕ್ ಚಾಮರಾಜಪೇಟೆ ಶಾಖೆಯ ಖಾತೆ ಸಂಖ್ಯೆ ೨೦೧/೫೬೬೭೭ ಇಲ್ಲಿಗೆ ನೇರವಾಗಿ ಹಣವನ್ನು ಜಮಾ ಮಾಡಿ ಚಲನ್ ಪ್ರತಿಯನ್ನು ಪರಿಷತ್ತಿಗೆ ಕಳುಹಿಸಿದರೆ ಅಂತಹ ಉದಾರಿಗಳಿಗೆ (೧೦೦೦ ರೂ.ಗಿಂತ ಮೇಲ್ಪಟ್ಟ)'ಕನ್ನಡ ಮಾನಧನರು'ಎಂಬ ಅಭಿನಂದನಾ ಪತ್ರವನ್ನು ಪರಿಷತ್ತು ನೀಡಿ ಗೌರವಿಸಲಿದೆ.ಈ ನಿಧಿಗೆ ನೀಡುವ ಹಣಕ್ಕೆ ೮೦ ಜಿ ಅಡಿಯಲ್ಲಿ ಆದಾಯ ತೆರಿಗೆ ವಿನಾಯಿತಿ ಇರುತ್ತದೆ.
(Project ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳಿಗೆ ಸಂಬಂಧಿಸಿದಂತೆ ಪ್ರಶಸ್ತಿ ನೀಡಲು ಹಾಗೂ ಕಾರ್ಯಕ್ರಮಗಳನ್ನು ನಡೆಸಲು ಮತ್ತು ಸ್ಪರ್ಧೆಗಳನ್ನು ಏರ್ಪಡಿಸಲು ಅನೇಕ ಸಾಹಿತ್ಯಾಭಿಮಾನಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿನಿಧಿಗಳನ್ನು ಸ್ಥಾಪಿಸಿದ್ದಾರೆ).ಈ ಮೂಲನಿಧಿಯನ್ನು ಶಾಶ್ವತ ಠೇವಣಿಯಾಗಿಟ್ಟು ಅದರಿಂದ ಬರುವ ಬಡ್ಡಿ ಹಣದಲ್ಲಿ ಪ್ರತಿವರ್ಷ ಕಾರ್ಯಕ್ರಮಗಳನ್ನು ದಾನಿಗಳ ಅಪೇಕ್ಷೆಯಂತೆ ನಡೆಸಿಕೊಂಡು ಬರಲಾಗುತ್ತಿದೆ.ಈಗ ಇಂತಹ ೮೫೦ ದತ್ತಿನಿಧಿಗಳಿವೆ. ಉಪನ್ಯಾಸ, ಸಾಹಿತ್ಯಕ ಸ್ಪರ್ಧೆ, ಗ್ರಂಥಭಂಡಾರಕ್ಕೆ ಪುಸ್ತಕ ಖರೀದಿ, ಪುಸ್ತಕ ಪ್ರಕಟಣೆ, ಬಹುಮಾನ, ಪ್ರಶಸ್ತಿ ನೀಡಿಕೆ ಇತ್ಯಾದಿ ಆಶಯಗಳನ್ನು ತಿಳಿಸಿದ ದತ್ತಿನಿಧಿಗಳಿವೆ.(project ಚಾವುಂಡರಾಯ ಪ್ರಶಸ್ತಿ, ಬಿ. ಸರೋಜಾದೇವಿ ಪ್ರಶಸ್ತಿ, ಹಾ.ಮಾ.ನಾ ಪ್ರಶಸ್ತಿ, ಭಾರತೀಸುತ ಪ್ರಶಸ್ತಿ ಇತ್ಯಾದಿ ಸಾಹಿತ್ಯಕ ಪ್ರಶಸ್ತಿಗಳನ್ನು ಪ್ರತಿವರ್ಷ ಆಯ್ದ ಹಿರಿಯ ನೆರವಾಗುತ್ತದೆ)
ಕನ್ನಡ ಸಾಹಿತ್ಯ ಪರಿಷತ್ತಿನ ಅಧಿಕೃತ ಜಾಲತಾಣ: [೧]
This article uses material from the Wikipedia ಕನ್ನಡ article ಕನ್ನಡ ಸಾಹಿತ್ಯ ಪರಿಷತ್ತು, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.