ಶ್ರೀಮತಿ ರಾಮಕ್ಕ ಮುಗ್ಗೇರ್ತಿ ತುಳುನಾಡಿನ ಪಾಡ್ದನ ಕವಿ ಹಾಗು ಗಾಯಕಿ.
ಇವರು ತುಳು ಪಾಡ್ದನಗಳನ್ನು ಸಂಗ್ರಹಿಸುವುದಲ್ಲದೆ, ರಚನಾ ಕಾರ್ಯದಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿರುವರು. ಮೂವತ್ತಕ್ಕೂ ಹೆಚ್ಚು ಸುದೀರ್ಘ ಪಾಡ್ದನ ಕಾವ್ಯಗಳನ್ನು ಹದಿನೈದಕ್ಕೂ ಹೆಚ್ಚು ' ಕಬಿತ ' ಗಳನ್ನೂ ಮಾನಸಿಕ ಪಠ್ಯ ರೂಪದಲ್ಲಿ ತಮ್ಮಲ್ಲಿ ದಾಖಲಿಸಿಕೊಂಡಿರುವರು.
ರಾಮಕ್ಕ ಮುಗ್ಗೇರ್ತಿ ಇವರು ಮಂಗಳೂರು ತಾಲೂಕಿನ ವಾಮಂಜೂರಿನಲ್ಲಿ ಜನಿಸಿದರು. ತಂದೆ ಕೂಕ್ರ ಮುಗ್ಗೇರ ಹಾಗು ತಾಯಿ ದುಗ್ಗಮ್ಮ. ತಮ್ಮ ೧೭ನೇ ವಯಸ್ಸಿನಲ್ಲಿ ಕಟೀಲಿನ ಸಮೀಪದ ಗಿಡಿಗೆರೆಯ ಕಾಪೀರ ಮುಗ್ಗೇರ ಇವರನ್ನು ಮದುವೆಯಾದರು. ಮುಂದೆ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಪಾಡ್ದನ ಕಟ್ಟುವ, ಅದನ್ನು ನಾಟಿಗದ್ದೆಗಳಲ್ಲಿ ಹಾಡುವ ಕೆಲಸ ಅವರಿಂದ ನಡೆಯಿತು. ಇವರಿಗೆ ತುಳು ಕವಿತೆ, ಪಾಡ್ದನ ಮತ್ತು ಸಂಧಿಗಳು ತಮ್ಮ ಅಜ್ಜಿಯಿಂದ ಬಳುವಳಿಯಾಗಿ ಬಂದಿದೆ.
ಅಕ್ಷರಾಭ್ಯಾಸದ ಹೊರತಾಗಿಯೂ ಓ ಬೆಲೆ, ನಲ್ಲೊರಿ ಮಾಮ, ಮಂಜೊಟ್ಟಿ ಗೋಣ, ಗೋವಿಂದ ಬದನೆ, ಕನಡ,ಮಾಲ್ಂಡ್ ಮರ, ಕುಮಾರ, ಸಿರಿ, ಬಂಟರು, ಅಬ್ಬಗ-ದಾರಗೆ ಸೇರಿದಂತೆ ಹಲವಾರು ದೈವಿಕ ಆಚರಣೆ ಹಾಗು ಶ್ರಮಿಕ ಸಂಸ್ಕ್ರತಿಯ ಸಂಧಿ- ಪಾಡ್ದನಗಳು ಇವರಿಗೆ ಕಂಠಪಾಠ. ಇವರು ದೀರ್ಘವಾಗಿ ಹಾಡಿರುವ ' ಸಿರಿ ಪಾಡ್ದನ ' ವು ಎ.ವಿ.ನಾವಡರ ಸಂಪಾದಕತ್ವದಲ್ಲಿ ' ರಾಮಕ್ಕ ಮುಗ್ಗೇರ್ತಿ ಕಟ್ಟಿದ ಸಿರಿಪಾಡ್ದನ ' ಎಂದು ಗ್ರಂಥರೂಪದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪ್ರಕಟವಾಗಿದೆ.
This article uses material from the Wikipedia ಕನ್ನಡ article ಗಿಡಿಗೆರೆ ರಾಮಕ್ಕ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.