ಗೌರೀಶ ಕಾಯ್ಕಿಣಿಯವರ ಪ್ರಾಥಮಿಕ ಶಿಕ್ಷಣ ಗೋಕರ್ಣದಲ್ಲಿಯೇ ನಡೆಯಿತು. ಮೆಟ್ರಿಕ್ಯುಲೇಶನ್ ಪರಿಕ್ಷೆಯನ್ನು ಕುಮಟಾದ ಗಿಬ್ಬ ಹಾಯ್ಸ್ಕೂಲಿನಿಂದ ಉತ್ತೀರ್ಣರಾಗಿ , ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಕಲಾವಿಭಾಗದಲ್ಲಿ ಪ್ರಥಮ ವರ್ಷವನ್ನು ಅಭ್ಯಸಿಸಿದರು. ಆಬಳಿಕ ಎಸ್.ಟಿ.ಸಿ. ಪರೀಕ್ಷೆಯಲ್ಲಿ, ಆ ಕಾಲದ ಮುಂಬಯಿ ಪ್ರಾಂತಕ್ಕೆ ಸರ್ವಪ್ರಥಮರಾಗಿ ತೇರ್ಗಡೆಯಾದರು. ಗೌರೀಶ ಕಾಯ್ಕಿಣಿಯವರು ಹಿಂದಿಯಲ್ಲಿ ವಿಶಾರದರೂ ಆಗಿದ್ದಾರೆ. ವಿಜ್ಞಾನದ ಮತ್ತು ವಿಜ್ಞಾನಿಗಳ ಬಗ್ಗೆ ಅಪಾರ ಗೌರವವಿದ್ದ ಇವರು ಮುಂದಿನ ತತ್ವಜ್ಞಾನವೆಂದರೆ ವಿಜ್ಞಾನ ಎಂದು ಹೇಳುತ್ತಿದ್ದರು. ಪರಮ ನಾಸ್ತಿಕರಾದ ಇವರು ವಿಜ್ಞಾನಕ್ಕೆ ನಿಲುಕದ್ದನ್ನೆಲ್ಲ ಖಂಡ - ತುಂಡವಾಗಿ ನಿರಾಕರಿಸುತ್ತಿದ್ದರು.
ವೃತ್ತಿ
ಗೌರೀಶ ಕಾಯ್ಕಿಣಿಯವರು ೧೯೩೭ರಲ್ಲಿ ಮಾಧ್ಯಮಿಕ ಶಾಲಾ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿ ೧೯೭೬ರಲ್ಲಿ ನಿವೃತ್ತರಾದರು. ಇದೇ ಕಾರಣದಿಂದ, 'ಗೌರೀಶ್ ಮಾಸ್ತರರು' ಎಂದೇ ಕರೆಯಲ್ಪಡುತ್ತಿದ್ದರು.
ಕೌಟಂಬಿಕ ಜೀವನ
ಗೌರೀಶ ಕಾಯ್ಕಿಣಿಯವರ ವಿವಾಹ ೧೯೫೩ರಲ್ಲಿ ಶಾಂತಾ ಅವರ ಜೊತೆಗೆ ನೆರವೇರಿತು. ಇವರದು ಅಂತರ್ಜಾತೀಯ ವಿವಾಹ. ೧೯೫೪ರಲ್ಲಿ ಇವರ ಮಗ, ಈಗ ಪ್ರಸಿದ್ಧ ಸಾಹಿತಿಯಾಗಿರುವ ಜಯಂತ ಜನಿಸಿದರು.
ಸಾಹಿತ್ಯ
ಗೌರೀಶ ಕಾಯ್ಕಿಣಿಯವರ ಲೇಖನ ವ್ಯವಸಾಯ ೧೯೩೦ರಿಂದಲೇ ಪ್ರಾರಂಭವಾಯಿತು. ಕನ್ನಡ ಹಾಗು ಮರಾಠಿ ಭಕ್ತಿಗೀತೆಗಳ ಸಂಕಲನವಾದ "ಶಾಂಡಿಲ್ಯ ಪ್ರೇಮಸುಧಾ" ಇವರ ಮೊದಲ ಕವನಸಂಕಲನ.
ಗೌರೀಶ ಕಾಯ್ಕಿಣಿಯವರು, ೯೦ರ ವಯಸ್ಸಿನಲ್ಲಿ, ೧೪ ನವೆಂಬರ ೨೦೦೨ರಂದು ಗೋಕರ್ಣದಲ್ಲಿ ನಿಧನರಾದರು.
ಉಲ್ಲೇಖಗಳು
This article uses material from the Wikipedia ಕನ್ನಡ article ಗೌರೀಶ ಕಾಯ್ಕಿಣಿ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses. ®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.