ಚಿಟ್ಟಾಣಿ ರಾಮಚಂದ್ರ ಹೆಗಡೆ (೧೯೩೩ ಜನವರಿ ೧ - ೨೦೧೭ ಅಕ್ಟೋಬರ್ ೦೩) ಯಕ್ಷಗಾನ ಕಲಾವಿದರಾಗಿದ್ದರು.
ಯಕ್ಷಗಾನಕ್ಕೆ ಅವರು ನೀಡಿದ ಕೊಡುಗೆಗೆ ಭಾರತ ಸರಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.
ಚಿಟ್ಟಾಣಿ ರಾಮಚಂದ್ರ ಹೆಗಡೆ | |
---|---|
ಚಿಟ್ಟಾಣಿ ರಾಮಚಂದ್ರ ಹೆಗಡೆ | |
Born | ಹೊನ್ನಾವರ ,ಉತ್ತರಕನ್ನಡ,ಕರ್ನಾಟಕ. | ೧ ಜನವರಿ ೧೯೩೩
Died | October 3, 2017 | (aged 84)
Nationality | ಭಾರತ |
Other names | ಚಿಟ್ಟಾಣಿ |
Occupation | ಯಕ್ಷಗಾನ ಕಲಾವಿದ |
Years active | 1965–2017 |
Known for | ಕೌರವ, ದುಷ್ಟಬುದ್ಧಿ, ಭಸ್ಮಾಸುರ ಪಾತ್ರಗಳು ಯಕ್ಷಗಾನದಲ್ಲಿ |
Title | ಪದ್ಮಶ್ರೀ ಪ್ರಶಸ್ತಿ ಪಡೆದ ಮೊದಲ ಕಲಾವಿದ |
Spouse | ಸುಶೀಲಾ ಹೆಗಡೆ |
Awards | ಪದ್ಮಶ್ರೀ (2012),ರಾಜ್ಯೋತ್ಸವ ಪ್ರಶಸ್ತಿ(1991), |
Honours | ಪದ್ಮಶ್ರೀ ಪ್ರಶಸ್ತಿ |
ಜನವರಿ ೧, ೧೯೩೩ರಲ್ಲಿ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಚಿಟ್ಟಾಣಿಯಲ್ಲಿ ಜನಿಸಿದ್ದ ಅವರು, ೨ನೇ ತರಗತಿಗೆ ಶಾಲೆ ಬಿಟ್ಟು, ೭ನೇ ವರ್ಷದಲ್ಲಿಯೇ ಯಕ್ಷಗಾನ ರಂಗ ಪ್ರವೇಶಿಸಿದ್ದರು. ಬಡಗುತಿಟ್ಟಿನ ಶೈಲಿಯ ಪಾತ್ರಗಳನ್ನು ಹೆಚ್ಚಾಗಿ ನಿರ್ವಹಿಸುತ್ತಿದ್ದರು. ೧೪ ವರ್ಷಕ್ಕೆ ಯಕ್ಷಗಾನದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡರು.
ಕೌರವ, ದುಷ್ಟಬುದ್ಧಿ, ಭಸ್ಮಾಸುರ ಸೇರಿದಂತೆ ವಿವಿಧ ಪ್ರಮುಖ ಪಾತ್ರಗಳಲ್ಲಿ, ಅದರಲ್ಲಿಯೂ ಖಳನಾಯಕನ ಪಾತ್ರದಲ್ಲಿ ನಟಿಸಿದ್ದಾರೆ. ವಿಶಿಷ್ಟ ನರ್ತನ, ಲಯಗಾರಿಕೆ, ಅಭಿನಯ ಕೌಶಲಗಳಿಂದ ಅವರು ಪರಿಚಿತರಾಗಿದ್ದರು. ಬಾಳೆಗದ್ದೆ ರಾಮಕೃಷ್ಣ ಭಟ್ಟರ ಶಿಷ್ಯರಾಗಿದ್ದ ಇವರು, ಭಟ್ಟರ ನಿರ್ದೇಶನದಲ್ಲಿ 'ಕೃಷ್ಣ ಪಾರಿಜಾತ' ಪ್ರಸಂಗಕ್ಕೆ ಅಗ್ನಿಪಾತ್ರ ಮಾಡಿದ ಬಳಿಕ ಯಕ್ಷಗಾನದಲ್ಲಿ ಪರಿಚಿತರಾಗಿದ್ದರು.
೮೪ನೆ ವಯಸ್ಸಿನಲ್ಲಿ ನಿಧನರಾದರು.
This article uses material from the Wikipedia ಕನ್ನಡ article ಚಿಟ್ಟಾಣಿ ರಾಮಚಂದ್ರ ಹೆಗಡೆ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.