ನೆಬ್ಬೂರು ನಾರಾಯಣ ಭಾಗವತರು {೧೪ ಡಿಸೆಂಬರ್ ೧೯೩೬ - ೧೧ ಮೇ ೨೦೧೯) ಯಕ್ಷಗಾನದ ಅಗ್ರಮಾನ್ಯ ಸಾಲಿನ ಭಾಗವತರು.
ಇವರು ಬಡಗುತಿಟ್ಟು ಶೈಲಿಯ ಯಕ್ಷಗಾನದಲ್ಲಿ ಭಾಗವತರಾಗಿದ್ದು ಅನೇಕ ದಶಕಗಳ ಕಾಲ ಸೇವೆ ಸಲ್ಲಿಸಿದವರು. ಹಾಡುಗಾರಿಕೆಯಲ್ಲಿ ತಮ್ಮದೇ ವಿಶಿಷ್ಟ ಶೈಲಿಯನ್ನು ರೂಪಿಸಿಕೊಂಡವರು. ಖ್ಯಾತ ಯಕ್ಷಗಾನ ಕಲಾವಿದ ಕೆರೆಮನೆ ಶಿವರಾಮ ಹೆಗಡೆಯವರ ಗರಡಿಯಲ್ಲಿ ಬೆಳೆದ ಇವರು ಪ್ರಸಿದ್ಧ ಇಡಗುಂಜಿ ಶ್ರೀಮಹಾಗಣಪತಿ ಯಕ್ಷಗಾನ ಮಂಡಳಿಯಲ್ಲಿ ಐದು ದಶಕಕ್ಕೂ ಹೆಚ್ಚು ಕಾಲ ಭಾಗವತರಾಗಿದ್ದವರು. ಯಕ್ಷಗಾನದಲ್ಲಿ 'ಶ್ರೀರಾಮ ನಿರ್ಯಾಣ', 'ಶ್ರೀಕೃಷ್ಣ ಸಂಧಾನ'ದ ಪದ್ಯಗಳು ಸೇರಿದಂತೆ ಅವರ ಕಂಠದಿಂದ ಹೊರಹೊಮ್ಮಿದ ಪದ್ಯಗಳು ನೆಬ್ಬೂರರ ಶೈಲಿಯೆಂದೇ ಪ್ರಸಿದ್ಧಿಯನ್ನು ಪಡೆದಿದ್ದವು. ಯಕ್ಷರಂಗದ ಮೇರು ಪ್ರತಿಭೆಗಳಾಗಿದ್ದ ಕೆರೆಮನೆ ಶಂಭು ಹೆಗಡೆ, ಚಿಟ್ಟಾಣಿ ರಾಮಚಂದ್ರ ಹೆಗಡೆ ಸೇರಿದಂತೆ ಸಾಕಷ್ಟು ಪ್ರತಿಭೆಗಳಿಗೆ ಇವರು ಜೊತೆಗಾರರಾಗಿದ್ದರು. ಸಾಹಿತ್ಯಶುದ್ಧಿ ಮತ್ತು ಮಧುರ ಧ್ವನಿಯು ಇವರ ಭಾಗವತಿಕೆಯ ಪ್ರಮುಖ ಅಂಶಗಳಾಗಿದ್ದವು.
ನೆಬ್ಬೂರು ನಾರಾಯಣ ಭಾಗವತ | |
---|---|
ನಾರಾಯಣ | |
Born | ಸಿರ್ಸಿ, ಉತ್ತರ ಕನ್ನಡ,ಕರ್ನಾಟಕ. | ೧೪ ಡಿಸೆಂಬರ್ ೧೯೩೬
Died | June 11, 2019 | (aged 82)
Nationality | ಭಾರತ |
Occupation | ಯಕ್ಷಗಾನ ಕಲಾವಿದ (ಭಾಗವತ) |
Years active | 1956–2019 |
Known for | ಯಕ್ಷಗಾನ ಹಿನ್ನೆಲೆ ಗಾಯನ |
Awards | ರಾಜ್ಯೋತ್ಸವ ಪ್ರಶಸ್ತಿ |
ಉತ್ತಕನ್ನಡ ಜಿಲ್ಲೆಯ ಸಿರ್ಸಿ ತಾಲೂಕಿನ ನೆಬ್ಬೂರಿನ ಕೃಷಿ ಕುಟುಂಬದ ದೇವರು ಹೆಗಡೆ ಹಾಗೂ ಗಣಪಿ ಅವರ ಎರಡನೇ ಪುತ್ರನಾಗಿ ೧೬ ಡಿಸೆಂಬರ್ ೧೯೩೬ಲ್ಲಿ ಜನಿಸಿದರು. ಬಡತನದಿಂದಾಗಿ ನಾಲ್ಕನೇ ತರಗತಿಗೆ ವಿದ್ಯಾಭ್ಯಾಸ ಸ್ಥಗಿತಗೊಳಿಸಿರು.
ನೆಬ್ಬೂರು ನಾರಾಯಣ ಭಾಗವತ ಅವರು ೧೧ಮೇ೨೦೧೯ ಶನಿವಾರ ಹೃದಯಾಘಾತದಿಂದ ಸಿರ್ಸಿ ಸಮೀಪದ ಹಣಗಾರು ಸ್ವನಿವಾಸದಲ್ಲಿ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.
This article uses material from the Wikipedia ಕನ್ನಡ article ನೆಬ್ಬೂರು ನಾರಾಯಣ ಭಾಗವತ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.