ಪ್ರತಾಪ್ ಸಿಂಹ ಕನ್ನಡದ ಜನಪ್ರಿಯ ಅಂಕಣಕಾರರು ಹಾಗೂ ಪತ್ರಿಕೋದ್ಯಮಿ.
ಸಕಲೇಶಪುರದಲ್ಲಿ ಜನಿಸಿರುವ ಇವರು ತಮ್ಮ ಪದವಿ ಪುರ್ವ ಶಿಕ್ಷಣವನ್ನು ಚಿಕ್ಕಮಗಳೂರುನಲ್ಲಿ ಮುಗಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವ ಎಸ್ ಡಿ ಎಮ್ ಕಾಲೇಜಿನಿಂದ ಮನಃಶಾಸ್ತ್ರ ಹಾಗೂ ಪತ್ರಿಕೋದ್ಯಮದಲ್ಲಿ ಪದವಿಯನ್ನು ಪಡೆದಿದ್ದಾರೆ. ಎಂಸಿಜೆ ಮಂಗಳೂರಿನಿಂದ ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ ಹಾಗೂ ಎಮ್ ಐ ಸಿ ಇ ಮಂಗಳೂರಿಂದ ಕಂಪ್ಯೂಟರ್ ಅಪ್ಲಿಕೇಷನ್ ಡಿಪ್ಲೋಮಾ ಮಾಡಿದ್ದರೆ. ವಿಜಯಕರ್ನಾಟಕ ಪತ್ರಿಕೆಯಲ್ಲಿ ಬರೆಯುತ್ತಿದ್ದ ಬೆತ್ತಲೆ ಜಗತ್ತು ಅಂಕಣದಿಂದ ಜನಪ್ರಿಯರಾದ ಇವರು ಅನಂತರ ಕನ್ನಡಪ್ರಭ ಪತ್ರಿಕೆಯಲ್ಲಿ ಸುದ್ದಿ ಸಂಪಾದಕರಾಗಿ ಕಾರ್ಯ ನಿರ್ವಹಿಸಿದರು ಮತ್ತು 'ಬೆತ್ತಲೆ ಪ್ರಪಂಚ' ಅಂಕಣ ಬರೆಯುತ್ತಿದ್ದರು. ಕರ್ನಾಟಕ ರಾಜ್ಯಸಕಾ೯ರ ನೀಡುವ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿದ್ದಾ ರೆ. ೨೦೧೪ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ಆಯ್ಕೆಯಾದರು.
ಪ್ರತಾಪ್ ಸಿಂಹ | |
---|---|
Born | |
Occupation(s) | ಪತ್ರಕರ್ತ, ಲೇಖಕ, ಲೋಕಸಭಾ ಸಂಸದ |
Spouse | ಡಾ.ಅರ್ಪಿತಾ |
Children | ವಿಪಂಚಿ |
Parent(s) | ಬಿ.ಇ. ಗೋಪಾಲ ಗೌಡ, ಪುಷ್ಪ |
Website | http://pratapsimha.com/ |
This article uses material from the Wikipedia ಕನ್ನಡ article ಪ್ರತಾಪ್ ಸಿಂಹ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.