ಬಸವನ ಬಾಗೇವಾಡಿ ಒಂದು ನಗರ, ಪುಣ್ಯಕ್ಷೇತ್ರ ಹಾಗೂ ತಾಲ್ಲೂಕು ಕೇಂದ್ರ .ಇದು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯಲ್ಲಿದೆ.
ಬಸವನ ಬಾಗೇವಾಡಿ ಪಟ್ಟಣವು ವಿಜಯಪುರ - ಮುದ್ದೇಬಿಹಾಳ ರಾಜ್ಯ ಹೆದ್ದಾರಿಯಲ್ಲಿದೆ. ಜಿಲ್ಲಾ ಕೇಂದ್ರ ವಿಜಯಪುರದಿಂದ ಸುಮಾರು 43 ಕಿ.ಮಿ. ದೂರ ಇದೆ.
ಬಸವನಬಾಗೇವಾಡಿ ತಾಲ್ಲೂಕು ಬಸವನ ಬಾಗೇವಾಡಿ | |
---|---|
village | |
Population (2012) | |
• Total | ೩೫,೦೦೦ |
Website | http://www.basavanabagewaditown.mrc.gov.in/ |
ಬಸವನ ಬಾಗೇವಾಡಿಯಲ್ಲಿ ಒಳ್ಳೆಯ ಶಿಕ್ಷಣ ಕೇಂದ್ರ, ವ್ಯಾಪಾರ ಕೇಂದ್ರ, ಹಣಕಾಸು ಕೇಂದ್ರ, ಸಾರಿಗೆ ಕೇಂದ್ರ, ನೆಮ್ಮದಿ ಕೇಂದ್ರ, ಉಪ ತಹಶಿಲ್ದಾರರ ಕಚೇರಿ, ಬಿ.ಎಸ್.ಎನ್.ಎಲ್ ಕಚೇರಿ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣ, ಅಂಚೆ ಕಚೇರಿ, ಬ್ಯಾಂಕಗಳು ಹಾಗೂ ಇತರೆ ಕಚೇರಿಗಳಿವೆ.
ಬಸವನ ಬಾಗೇವಾಡಿ ವಿಜಯಪುರ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಬಸವನ ಬಾಗೇವಾಡಿ ಗ್ರಾಮವು ವಿಜಯಪುರ ಜಿಲ್ಲೆಯ ಪ್ರಸಿದ್ಧ ಹಾಗೂ ಪ್ರಾಚೀನ ಸ್ಥಳ. ವಿಜಯಪುರ ಜಿಲ್ಲಾ ಕೇಂದ್ರದಿಂದ 43 ಕಿಲೋ ಮೀಟರ್ ದೂರದಲ್ಲಿರುವ ಈ ನಾಡು ಪವಿತ್ರ ಪುಣ್ಯಕ್ಷೇತ್ರವಾಗಲು ಕಾರಣವೇ ಭಕ್ತಿ ಭಂಡಾರಿ ಬಸವಣ್ಣನವರು. ಬಸವೇಶ್ವರು ಹುಟ್ಟಿದ ಈ ಪುಣ್ಯಭೂಮಿ ಇತಿಹಾಸಪ್ರಸಿದ್ಧ ನಾಡಾಗಿ ವಿಶ್ವದ ಗಮನ ಸೆಳೆದಿದೆ.
ಸಾಂಸ್ಕೃತಿಕವಾಗಿ, ಸಾಹಿತ್ಯಿಕವಾಗಿ ಶ್ರೀಮಂತವಾಗಿರುವ ಈ ಪುಣ್ಯಭೂಮಿ ನೋಡಲೇಬೇಕಾದ ಸ್ಥಳ. ಪ್ರತಿ ನಿತ್ಯ ಇಲ್ಲಿಗೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ಬಸವಣ್ಣನವರು ಹುಟ್ಟಿದ ಪುಣ್ಯಭೂಮಿಯ ದರ್ಶನದಿಂದ ಪುನೀತರಾಗುತ್ತಾರೆ.
ಐತಿಹ್ಯ: 800 ವರ್ಷಗಳ ಹಿಂದೆ ಇಲ್ಲಿ ವಾಸಿಸುತ್ತಿದ್ದ (ವಾದಿರಾಜ) ಮಾದರಸ ಹಾಗೂ ಮಾದಲಾಂಬಿಕೆ ಎಂಬ ದಂಪತಿ ನಂದೀಶ್ವರನ ಭಕ್ತರಾಗಿದ್ದರು. ಅವರು ಕೈಗೊಂಡ ನಂದಿವ್ರತದ ಫಲವಾಗಿ ದೈವಕೃಪೆಯಿಂದ ಶಿವನೇ ತನ್ನ ವಾಹನ ನಂದಿಯನ್ನು ಇವರ ಪುತ್ರರಾಗಿ ಹುಟ್ಟುವಂತೆ ಅನುಗ್ರಹಿಸಿದನಂತೆ. ಹೀಗೆ ದೈವಾನುಗ್ರದಿಂದ ಜನಿಸಿದ ಆ ಕಂದನೇ 12ನೆಯ ಶತಮಾನವನ್ನು ಭರತಖಂಡದ ಧಾರ್ಮಿಕ ಪರಂಪರೆಯಲ್ಲಿ ಒಂದು ಚಿರಸ್ಮರಣೀಯ ಘಟ್ಟವನ್ನಾಗಿಸಿದ ಮಹಾವ್ಯಕ್ತಿ ಜಗಜ್ಯೋತಿ ಬಸವೇಶ್ವರರು.
ಬ್ರಾಹ್ಮಣ ಕುಲದಲ್ಲಿ ಹುಟ್ಟಿದ ಬಸವಣ್ಣನವರು, ತಮ್ಮ ಉಪನಯನದ ಬಳಿಕ, ಮೇಲು -ಕೀಳೆಂಬ ಸಾಮಾಜಿಕ ವ್ಯವಸ್ಥೆಯನ್ನು ಪ್ರತಿಭಟಿಸಲು ಯಜ್ಞೋಪವೀತವನ್ನು ಕಿತ್ತು ಹಾಕಿ, ಸಂಗಮಕ್ಕೆ ಹೋದರೆಂದು ಹೇಳಲಾಗಿದೆ.
ಆಗ ಕಳಚೂರ್ಯ ಬಿಜ್ಜಳನ ಬಳಿ ದಂಡಾಧಿಶನಾಗಿದ್ದ ಇವರ ಸೋದರಮಾವ ಬಲದೇವ ತನ್ನ ಒಬ್ಬಳೇ ಮಗಳು ಗಂಗಾಂಬಿಕೆಯನ್ನು ಕೊಟ್ಟು ಮದುವೆ ಮಾಡಿದರು.ನಂತರ ಬಸವೇಶ್ವರರು ಬಿಜ್ಜಖನ ಇನ್ನೊಬ್ಬ ದಂಡನಾಯಕ ಸಿದ್ಧರಸನ ಮಗಳು ನೀಲಾಂಬಿಕೆಯನ್ನು ವರಿಸಿದರು.
ಬಿಜ್ಜಳನ ಭಂಡಾರದ ಮಂತ್ರಿಯಾಗಿ, ಹಲವು ಕ್ರಾಂತಿಕಾರಿ ಕ್ರಮಕೈಗೊಂಡ ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಕಲ್ಪನೆ ಜೀವನಾದರ್ಶವಾಗಿದೆ.
ವಚನಕಾರರಾಗಿ ಕನ್ನಡ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಬಸವಣ್ಣನವರ ಜನ್ಮಭೂಮಿ ಇಂದು ಪ್ರಸಿದ್ಧ ಯಾತ್ರಾಸ್ಥಳವಾಗಿದೆ. ಬಸವನಬಾಗೇವಾಡಿ ಎಂದೇ ಖ್ಯಾತವಾಗಿದೆ.
ಸುಮಾರು 800 ವರ್ಷಗಳ ಹಿಂದೆ ಇಲ್ಲಿ ವಾಸಿಸುತ್ತಿದ್ದ (ವಾದಿರಾಜ) ಮಾದರಸ ಹಾಗೂ ಮಾದಲಾಂಬಿಕೆ ಎಂಬ ದಂಪತಿ ನಂದೀಶ್ವರನ ಭಕ್ತರಾಗಿದ್ದರು. ಅವರು ಕೈಗೊಂಡ ನಂದಿವ್ರತದ ಫಲವಾಗಿ ದೈವಾನುಗ್ರದಿಂದ ಜನಿಸಿದ ಆ ಕಂದನೇ 12ನೆಯ ಶತಮಾನವನ್ನು ಭರತಖಂಡದ ಧಾರ್ಮಿಕ ಪರಂಪರೆಯಲ್ಲಿ ಒಂದು ಚಿರಸ್ಮರಣೀಯ ಘಟ್ಟವನ್ನಾಗಿಸಿದ ಮಹಾವ್ಯಕ್ತಿ ಜಗಜ್ಯೋತಿ ಬಸವೇಶ್ವರರು.
ಬಸವನ ಬಾಗೇವಾಡಿಯು ವಿಜಯಪುರ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಬಸವನ ಬಾಗೇವಾಡಿಯು ವಿಜಯಪುರ ಜಿಲ್ಲೆಯ ಪ್ರಸಿದ್ಧ ಹಾಗೂ ಪ್ರಾಚೀನ ಸ್ಥಳ. ಪವಿತ್ರ ಪುಣ್ಯಕ್ಷೇತ್ರವಾಗಲು ಕಾರಣವೇ ಭಕ್ತಿ ಭಂಡಾರಿ ಬಸವಣ್ಣನವರು. ಬಸವೇಶ್ವರರು ಹುಟ್ಟಿದ ಈ ಪುಣ್ಯಭೂಮಿ ಇತಿಹಾಸಪ್ರಸಿದ್ಧ ನಾಡಾಗಿ ವಿಶ್ವದ ಗಮನ ಸೆಳೆದಿದೆ.
ವಚನಕಾರರಾಗಿ ಕನ್ನಡ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಬಸವಣ್ಣನವರ ಜನ್ಮಭೂಮಿ ಇಂದು ಪ್ರಸಿದ್ಧ ಯಾತ್ರಾಸ್ಥಳವಾಗಿದೆ. ಬಾಗೇವಾಡಿಯಿಂದ ಬಸವನಬಾಗೇವಾಡಿ ಎಂದೇ ಖ್ಯಾತವಾಗಿದೆ. ಇಲ್ಲಿ ಪುರಾತನ ಕಾಲದ ಬಸವೇಶ್ವರ ದೇವಸ್ಥಾನ ನೋಡುಗರ ಮನ ಸೆಳೆಯುತ್ತದೆ.
ಸಾಂಸ್ಕೃತಿಕವಾಗಿ, ಸಾಹಿತ್ಯಿಕವಾಗಿ ಶ್ರೀಮಂತವಾಗಿರುವ ಈ ಪುಣ್ಯಭೂಮಿ ಲಿಂಗಾಯತರು ನೋಡಲೇಬೇಕಾದ ಸ್ಥಳ. ಪ್ರತಿ ನಿತ್ಯ ಇಲ್ಲಿಗೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ಬಸವಣ್ಣನವರು ಹುಟ್ಟಿದ ಪುಣ್ಯಭೂಮಿಯ ದರ್ಶನದಿಂದ ಪುನೀತರಾಗುತ್ತಾರೆ.
ಬಸವನ ಬಾಗೇವಾಡಿ ಪುರಸಭೆ Archived 2016-01-10 ವೇಬ್ಯಾಕ್ ಮೆಷಿನ್ ನಲ್ಲಿ.
ಬಸವನ ಬಾಗೇವಾಡಿ ಪುರಸಭೆಯು 1973 ರಲ್ಲಿ ಸ್ಥಾಪನೆಯಾಯಿತು. 2011 ರ ಜನಗಣತಿಯ ಪ್ರಕಾರ ಬಸವನ ಬಾಗೇವಾಡಿ ಪುರಸಭೆ ವ್ಯಾಪ್ತಿಯಲ್ಲಿ 35000 ಜನಸಂಖ್ಯೆಯನ್ನು ಹೊಂದಿರುತ್ತದೆ. ಬಸವನ ಬಾಗೇವಾಡಿ ಪುರಸಭೆ ವ್ಯಾಪ್ತಿಯಲ್ಲಿ 23 ವಾರ್ಡ್ ಗಳಿದ್ದು 23 ಚುನಾಯಿತ ಸದಸ್ಯರು ಹಾಗೂ 5 ನಾಮನಿರ್ದೇಶಿತ ಸದಸ್ಯರಿರುತ್ತಾರೆ. ಬಸವನ ಬಾಗೇವಾಡಿ ಪುರಸಭೆಯ ವ್ಯಾಪ್ತಿಯು ಒಟ್ಟು 10 ಚದುರ ಕೀಲೋಮೀಟರ್ ಗಳಿರುತ್ತದೆ. ಶ್ರೀ ಬಸವೇಶ್ವರ ಜನ್ಮಸ್ಥಳಕ್ಕೆ ಬಸವ ಸ್ಮಾರಕ ಎಂದು ಪ್ರಸಿದ್ದಿ ಪಡೆದಿದೆ. ಪುರಸಭೆ ವ್ಯಾಪ್ತಿಯಲ್ಲಿದ್ದು ಈ ಸ್ಥಳವು ಕೂಡಲ ಸಂಗಮ ಅಭಿವೃದ್ದಿ ಪ್ರಾಧಿಕಾರ ಇಲಾಖೆಗೆ ಒಳಪಡುತ್ತದೆ. ಬಸವನ ಬಾಗೇವಾಡಿ ಪ್ರಸಿದ್ದವಾದ ಪುರಾತನ ಕಾಲದ ಬಸವೇಶ್ವರ ದೇವಸ್ಥಾನ ಈ ದೇವಾಲಯಕ್ಕೆ ಜನರು ದೇಶ ವಿದೇಶದಿಂದ ಬರುತ್ತಾರೆ ಹಾಗೂ ವರ್ಷಕೊಮ್ಮೆ ನಡೆಯುವ ಜಾತ್ರೆ ಸಮಯದಲ್ಲಿ ಈ ದೇವರನ್ನು ನೋಡಲು ಜನಸಾಗರವೇ ಹರಿದು ಬರುತ್ತದೆ.
ಇಲ್ಲಿ ಕೃಷ್ಣಾನದಿಗೆ ಅಡ್ಡಲಾಗಿ ನಿರ್ಮಿಸಿರುವ ಆಲಮಟ್ಟಿ ಯೋಜನೆ ಏಷ್ಯಾ ಖಂಡದಲ್ಲಿಯೇ ಅತಿದೊಡ್ಡದು.
ಕರ್ನಾಟಕದ ಉತ್ತರದ ಗಡಿಯಲ್ಲಿರುವ ಬಸವನ ಬಾಗೇವಾಡಿ ತಾಲ್ಲೂಕವು ಉತ್ತರಕ್ಕೆ ವಿಜಯಪುರ ತಾಲ್ಲೂಕು, ಪಶ್ಚಿಮಕ್ಕೆ ವಿಜಯಪುರ ತಾಲ್ಲೂಕು ದಕ್ಷಿಣಕ್ಕೆ ಬೀಳಗಿತಾಲ್ಲೂಕು ಮತ್ತು ಪೂರ್ವಕ್ಕೆ ಮುದ್ದೇಬಿಹಾಳ ತಾಲ್ಲೂಕು ಇದೆ. ಈ ತಾಲ್ಲೂಕದ ವಿಸ್ತೀರ್ಣ ೨೨೨೫ ಚ.ಕಿಮೀ ಮತ್ತು ವಾರ್ಷಿಕ ಮಳೆ ೫೯.೫ ಸೆ.ಮೀ. ಇದೆ. ಬಸವನ ಬಾಗೇವಾಡಿತಾಲ್ಲೂಕವು 143 ಹಳ್ಳಿಗಳು, 32 ಗ್ರಾಮ ಪಂಚಾಯತಗಳು ಹಾಗೂ 4 ಹೊಬಳ್ಳಿಗಳನ್ನೊಳಗೊಂಡಿದೆ.
ಕರ್ನಾಟಕ ಸರ್ಕಾರವು ಫೆಬ್ರುವರಿ 8,2013 ರಂದು ವಾರ್ಷಿಕ ಮುಂಗಡ ಪತ್ರದ ಪ್ರಕಾರ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ನಿಡಗುಂದಿ ಮತ್ತು ಕೊಲ್ಹಾರ ನಗರಗಳನ್ನು ಹೊಸ ತಾಲ್ಲೂಕನ್ನಾಗಿ ರಚಿಸಿದೆ.
ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮಿಶ್ರಿತ ವಿಶಿಷ್ಠವಾದ ಕನ್ನಡ ವಿಜಯಪುರ ಕನ್ನಡವೆಂದೇ ಗುರುತಿಸಲ್ಪಡುತ್ತದೆ. ಒಕ್ಕಲುತನ ಮುಖ್ಯ ಉದ್ಯೋಗ. ಜೊತೆಗೆ ಕೆಲವೊಂದು ಗ್ರಾಮಗಳಲ್ಲಿ (ಚಡಚಣ, ತಾಂಬಾ, ವಂದಾಲ ಮುಂ.)ನೇಕಾರಿಕೆ ಇದೆ. ಪ್ರಮುಖ ಬೆಳೆಗಳು: ಜೋಳ, ಸಜ್ಜೆ, ಶೇಂಗಾ, ಚಿಕ್ಕು, ಸೂರ್ಯಕಾಂತಿ, ಉಳ್ಳಾಗಡ್ಡಿ (ಈರುಳ್ಳಿ). ದ್ರಾಕ್ಷಿ, ದಾಳಿಂಬೆ, ನಿಂಬೆ ಹಣ್ಣುಗಳು ಪರರಾಜ್ಯ ಹಾಗೂ ಪರದೇಶಗಳಿಗೆ ರಫ್ತು ಆಗುತ್ತವೆ.
ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ, ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ವಿಜಯಪುರ ದ ಜೋಳದ ರೊಟ್ಟಿ , ಸೇಂಗಾ ಚಟ್ನಿ, ಎಣ್ಣೆ ಬದನೆಕಾಯಿ ಪಲ್ಯ, ಕೆನೆಮೊಸರುಗಳು ಕರ್ನಾಟಕದ ಮೂಲೆ ಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
ಶ್ರೀ ಬಸವೇಶ್ವರ ದೇವಸ್ಥಾನ, ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಪಾಂಡುರಂಗ - ವಿಠ್ಠಲ ದೇವಸ್ಥಾನ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.
ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ಪ್ರತಿವರ್ಷ ಶ್ರೀ ಬಸವೇಶ್ವರ ಜಾತ್ರೆ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಕೃಷಿ ಬಸವನ ಬಾಗೇವಾಡಿ ತಾಲ್ಲೂಕಿನ ಮುಖ್ಯ ವೃತ್ತಿ. ಕೃಷಿಗೆ ನೀರಿನ ಸರಬರಾಜು ಆಲಮಟ್ಟಿಯಲ್ಲಿನ ಕೃಷ್ಣಾ ಅಣೆಕಟ್ಟಿನಿಂದ ಆಗುತ್ತದೆ. ಇಲ್ಲಿ ಬೆಳೆಯಲ್ಪಡುವ ಮುಖ್ಯ ಬೆಳೆಗಳು ಜೋಳ, ನೆಲಗಡಲೆ (ಶೆಂಗಾ), ಸೂರ್ಯಕಾಂತಿ ಮತ್ತು ಕಬ್ಬು.
ತೋಟಗಾರಿಕೆ ಆಧಾರಿತ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ,ಉಳ್ಳಾಗಡ್ಡಿ, ಅರಿಷಿಣ, ಬಾಳೆ, ಇತ್ಯಾದಿ ಬೆಳೆಯುತ್ತಾರೆ.
ಬಸವನ ಬಾಗೇವಾಡಿ ತಾಲ್ಲೂಕಿನ ಪ್ರತಿಶತ 30 ಭಾಗ ಭೂಮಿ ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ.ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ. ಮಹಿಳೆ ಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ. ಜಿಲ್ಲೆಯಲ್ಲಿ ಲಂಬಾಣಿ ಜನಾಂಗವು ವಿಶೇಷವಾಗಿದೆ.
ಲಾವಣಿ ಪದಗಳು, ಡೊಳ್ಳು ಕುಣಿತ, ಗೀಗೀ ಪದಗಳು, ಹಂತಿ ಪದಗಳು ಮತ್ತು ಮೊಹರಮ್ ಹೆಜ್ಜೆ ಕುಣಿತ ಮುಂತಾದವುಗಳು ಈ ನಾಡಿನ ಕಲೆಯಾಗಿದೆ.
ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ. ಇದರಿಂದಾಗಿ ಆರ್ಥಿಕವಾಗಿ ಹಿಂದುಳಿದಿದೆ.
ಬಸವನ ಬಾಗೇವಾಡಿ ನಗರವು ಪ್ರಮುಖ ವ್ಯಾಪಾರ ಮತ್ತು ವಾಣಿಜ್ಯ ಕೇಂದ್ರವಾಗಿದೆ.
ಫಲವತ್ತಾದ ಭೂಮಿ ಇದುವುದರಿಂದ ಸುಮಾರು 70% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಜಿಲ್ಲೆಯ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ತಯಾರಿಕೆ, ಕುರಿ ಮತ್ತು ಆಡು ಸಾಕಾಣಿಕೆ ಉಪ ಕಸುಬುಗಳಾಗಿವೆ.
ಬಸವನ ಬಾಗೇವಾಡಿ ತಾಲ್ಲೂಕಿನ ಕೆರೆಗಳು
ರೋಣಿಹಾಳ, ಮಣ್ಣೂರ, ಮನಗೂಳಿ, ಹೂವಿನ ಹಿಪ್ಪರಗಿ, ಅರಳಿಚಂಡಿ, ಮುತ್ತಗಿ, ಕುಪಕಡ್ಡಿ, ಅಗಸಬಾಳ, ಕೂಡಗಿ, ನಾಗವಾಡ, ಮಸೂತಿ, ಕಿರಿಶ್ಯಾಳ, ಸುಳಖೋಡ, ಮುಕಾರ್ತಿಹಾಳ, ಆಸಂಗಿ, ಗರಸಂಗಿ.
ಬಸವನ ಬಾಗೇವಾಡಿ ತಾಲ್ಲೂಕಿನ ಜಿನುಗು ಕೆರೆಗಳು
ಆಕಳವಾಡಿ, ಮಲಘಾಣ, ತಳೇವಾಡ, ಉಕ್ಕಲಿ, ಉಕ್ಕಲಿ ಇಂಗು ಕೆರೆ, ಬೆಳ್ಳುಬ್ಬಿ, ವಡವಡಗಿ, ಮಸೂತಿ, ತಳೇವಾಡ ಇಂಗು ಕೆರೆ, ಕೊಡಗಾನೂರ, ಮುಳವಾಡ, ಇಂಗಳೇಶ್ವರ.
ಬಾಗೇವಾಡಿ ತಾಲ್ಲೂಕಿನ ಕೃಷಿ ಮಾರುಕಟ್ಟೆಗಳು
ಕೆ.ಎಮ್.ಎಫ್.(ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ)ನ ಸಹಾಯದೊಂದಿಗೆ ವಿಜಯಪುರ ನಗರದ ಹೊರವಲಯದ ಭೂತನಾಳ ಗ್ರಾಮದಲ್ಲಿ ವಿಜಯಪುರ ಮತ್ತು ಬಾಗಲಕೋಟ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವನ್ನು ಸ್ಥಾಪಿಸಲಾಗಿದೆ. ವಿಜಯಪುರ ಮತ್ತು ಬಾಗಲಕೋಟ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಭೂತನಾಳ, ವಿಜಯಪುರ. ಇದನ್ನು ವಿಜಯಪುರ ಡೈರಿಯಂತಲು ಕರೆಯುತ್ತಾರೆ. ಡೈರಿಯು ಜಿಲ್ಲೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಡೈರಿ ಸಹಕಾರಿ ಸಂಘಗಳನ್ನು ಹೊಂದಿದೆ.
ಬಸವನ ಬಾಗೇವಾಡಿ ತಾಲ್ಲೂಕಿನ ಹಾಲು ಉತ್ಪಾದಕ ಸಹಕಾರಿ ಸಂಘಗಳು
ಅರಳದಿನ್ನಿ, ಬಸವನ ಬಾಗೇವಾಡಿ, ಗೊಳಸಂಗಿ, ಹಣಮಾಪುರ, ಹೆಬ್ಬಾಳ, ಹುಣಶ್ಯಾಳ ಪಿ.ಬಿ., ಹೂವಿನ ಹಿಪ್ಪರಗಿ, ಕಲಗುರ್ಕಿ, ಕಣಕಾಲ, ಕನ್ನಾಳ, ಕವಲಗಿ, ಕೊಲ್ಹಾರ, ಮನಗೂಳಿ, ಮಸೂತಿ, ಮುಳವಾಡ, ಮುತ್ತಗಿ, ನಿಡಗುಂದಿ, ನಾಗರದಿಣ್ಣಿ, ನಂದಿಹಾಳ, ಸಾಸಲಗಿ, ಉಕ್ಕಲಿ, ಯರನಾಳ.
ಆಹಾರ ಬೆಳೆಗಳು
ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಅಕ್ಕಿ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
ವಾಣಿಜ್ಯ ಬೆಳೆಗಳು
ದ್ರಾಕ್ಷಿ, ದಾಳಿಂಬೆ, ಚಿಕ್ಕು , ನಿಂಬೆ,ಮಾವು, ಬಾಳೆ,ಬಾರಿಹಣ್ಣು , ಕಬ್ಬು , ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
ತರಕಾರಿ ಬೆಳೆಗಳು
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರಿಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.
ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ.
ಸಾಕ್ಷರತೆಯು 2011 ವರ್ಷದ ಪ್ರಕಾರ 67%. ಅದರಲ್ಲಿ 77% ಪುರುಷರು ಹಾಗೂ 56% ಮಹಿಳೆಯರು ಸಾಕ್ಷರತೆ ಹೊಂದಿದೆ.
ಪ್ರಮುಖ ಶಿಕ್ಷಣ ಸಂಸ್ಥೆಗಳು
ಬಸವನ ಬಾಗೇವಾಡಿ ನಗರವು ವಿಜಯಪುರ ಜಿಲ್ಲೆಯ ವಿಧಾನ ಸಭಾ ಕ್ಷೇತ್ರವಾಗಿದೆ.
ಬಸವನ ಬಾಗೇವಾಡಿ ನಗರದಲ್ಲಿ ಸರಕಾರಿ ತಾಲ್ಲೂಕು ಆಸ್ಪತ್ರೆಯಿದೆ.
ಬಸವನ ಬಾಗೇವಾಡಿ ತಾಲ್ಲೂಕಿನ ವಿದ್ಯುತ್ ಪರಿವರ್ತನಾ ಕೇಂದ್ರಗಳು
ಖಜಾನೆ ಕಚೇರಿಗಳು
ಬಸವನ ಬಾಗೇವಾಡಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು(ಬ್ಯಾಂಕಗಳು)
ಅರೇಶಂಕರ, ಬಸವನ ಬಾಗೇವಾಡಿ, ಬಳೂತಿ, ಬೇನಾಳ, ಬೊಮ್ಮನಹಳ್ಳಿ, ಬ್ಯಾಕೋಡ, ಚಿಮ್ಮಲಗಿ, ಡೋಣೂರ, ಗೊಳಸಂಗಿ, ಗೋನಾಳ, ಗುಡದಿನ್ನಿ, ಗುಳಬಾಳ, ಹಳೆರೊಳ್ಳಿ, ಹಂಗರಗಿ, ಹತ್ತರಕಿಹಾಳ, ಹೆಬ್ಬಾಳ, ಹುಣಶ್ಯಾಳ ಪಿ.ಬಿ., ಹೂವಿನ ಹಿಪ್ಪರಗಿ, ಇಂಗಳೇಶ್ವರ, ಇವಣಗಿ, ಕಲಗುರ್ಕಿ, ಕಣಕಾಲ, ಕೊಲ್ಹಾರ, ಕುಪಕಡ್ಡಿ, ಕುದರಿ ಸಾಲವಾಡಗಿ, ಮಲಘಾಣ, ಮನಗೂಳಿ, ಮಣ್ಣೂರ, ಮಸಬಿನಾಳ, ಮಸೂತಿ, ಮಟ್ಟಿಹಾಳ, ಮುಳವಾಡ, ಮುತ್ತಗಿ, ನಿಡಗುಂದಿ, ರಬಿನಾಳ, ರೋಣಿಹಾಳ, ಸಾಸನೂರ, ಸಾತಿಹಾಳ, ಸೋಲವಾಡಗಿ, ಸೋಮನಾಳ, ಟಕ್ಕಳಕಿ, ತಳೇವಾಡ, ತೆಲಗಿ, ಉಕ್ಕಲಿ, ವಡವಡಗಿ, ಯಾಳವಾರ.
ಅಬ್ಬಿಹಾಳ, ಅಗಸಬಾಳ, ಆಕಳವಾಡಿ, ಆಲಮಟ್ಟಿ, ಅಂಬಳನೂರ, ಅಂಗಡಗೇರಿ, ಅರಳದಿನ್ನಿ, ಅರಳಿಚಂಡಿ, ಅರಷಣಗಿ, ಅರೇಶಂಕರ, ಆಸಂಗಿ ಬಿ.ಕೆ., ಆಸಂಗಿ ಕೆ.ಡಿ., ಬಳೂತಿ, ಬಳ್ಳೂರ, ಬೀರಲದಿನ್ನಿ, ಬಿಂಗಪ್ಪನಹಳ್ಳಿ, ಬೇನಾಳ, ಭೈರವಾಡಗಿ, ಬಿದನಾಳ, ಬಿಸನಾಳ, ಬಿಸಲಕೊಪ್ಪ, ಬೊಮ್ಮನಹಳ್ಳಿ, ಬೂದಿಹಾಳ, ಬುದ್ನಿ, ಬ್ಯಾಕೋಡ, ಬ್ಯಾಲ್ಯಾಳ, ಚಬನೂರ, ಚೀರಲದಿನ್ನಿ, ಚಿಮ್ಮಲಗಿ, ದೇಗಿನಾಳ, ದೇವಲಾಪುರ, ದಿಂಡವಾರ, ಡೋಣೂರ, ಗಣಿ, ಗರಸಂಗಿ ಬಿ.ಕೆ., ಗರಸಂಗಿ ಕೆ.ಡಿ., ಗೊಳಸಂಗಿ, ಗೋನಾಳ, ಗುಡದಿನ್ನಿ, ಗುಳಬಾಳ, ಹಳೆರೊಳ್ಳಿ, ಹಳಿಹಾಳ, ಹಳ್ಳದ ಗೆಣ್ಣೂರ, ಹಣಮಾಪುರ, ಹಂಚಿನಾಳ, ಹಂಗರಗಿ, ಹತ್ತರಕಿಹಾಳ, ಹೆಬ್ಬಾಳ, ಹುಲಬೆಂಚಿ, ಹುಣಶ್ಯಾಳ ಪಿ.ಬಿ., ಹುಣಶ್ಯಾಳ ಪಿ.ಸಿ., ಹೂವಿನ ಹಿಪ್ಪರಗಿ, ಇಂಗಳೇಶ್ವರ, ಇಟಗಿ, ಇವಣಗಿ, ಜಾಯವಾಡಗಿ, ಜೀರಲಭಾವಿ, ಕಡಕೋಳ, ಕಲಗುರ್ಕಿ, ಕಾಮನಕೇರಿ, ಕಣಕಾಲ, ಕನ್ನಾಳ, ಕರಬಂಟನಾಳ, ಕವಲಗಿ, ಕಿರಿಶ್ಯಾಳ, ಕೊಡಗಾನೂರ, ಕೊಲ್ಹಾರ, ಕೃಷ್ಣಾಪುರ, ಕುಪಕಡ್ಡಿ, ಕುದರಿ ಸಾಲವಾಡಗಿ, ಕೂಡಗಿ, ಕುರುಬರದಿನ್ನಿ, ಮಜರೆಕೊಪ್ಪ, ಮಲಘಾಣ, ಮನಗೂಳಿ, ಮಣಗೂರ, ಮಣ್ಣೂರ, ಮಾರಡಗಿ, ಮರಿಮಟ್ಟಿ, ಮಾರ್ಕಬ್ಬಿನಹಳ್ಳಿ, ಮಸಬಿನಾಳ, ಮಸೂತಿ, ಮಟ್ಟಿಹಾಳ, ಮುದ್ದಾಪುರ, ಮುಕಾರ್ತಿಹಾಳ, ಮುಳವಾಡ, ಮುಳ್ಳಾಳ, ಮುತ್ತಗಿ, ಮುತ್ತಲದಿನ್ನಿ, ನಾಗರದಿನ್ನಿ, ನಾಗರಾಳ ಡೋಣ, ನಾಗರಾಳ ಹುಲಿ, ನಾಗವಾಡ, ನಾಗೂರ, ನಂದಿಹಾಳ ಪಿ.ಹೆಚ್., ನಂದಿಹಾಳ ಪಿ.ಯು., ನರಸಲಗಿ, ನೇಗಿನಾಳ, ನಿಡಗುಂದಿ, ರಬಿನಾಳ, ರಾಜನಾಳ, ರಾಮನಹಟ್ಟಿ, ರೋಣಿಹಾಳ, ಸಂಕನಾಳ, ಸಾಸನೂರ, ಸಾತಿಹಾಳ, ಶೀಕಳವಾಡಿ, ಸಿದ್ದನಾಥ, ಸಿಂದಗೇರಿ,ಸೋಲವಾಡಗಿ, ಸೋಮನಾಳ, ಸುಳಖೋಡ, ತಡಲಗಿ, ಟಕ್ಕಳಕಿ, ತಳೇವಾಡ, ತೆಲಗಿ, ಉಕ್ಕಲಿ, ಉಣ್ಣಿಭಾವಿ, ಉಪ್ಪಲದಿನ್ನಿ, ಉತ್ನಾಳ, ವಡವಡಗಿ, ವಂದಾಲ, ಯಾಳವಾರ, ಯಂಬತ್ನಾಳ, ಯರನಾಳ.
ಆಲಮಟ್ಟಿ , ಅರಷಣಗಿ, ಬೀರಲದಿನ್ನಿ, ಬ್ಯಾಕೋಡ, ಚಿಮ್ಮಲಗಿ, ದಿಂಡವಾರ, ಡೋಣುರ, ಗೊಳಸಂಗಿ, ಹೂವಿನ ಹಿಪ್ಪರಗಿ, ಹಣಮಾಪುರ, ಹೆಬ್ಬಾಳ, ಹುಣಶ್ಯಾಳ ಪಿ.ಬಿ., ಇಂಗಳೇಶ್ವರ, ಇಟಗಿ, ಕುದರಿ ಸಾಲವಾಡಗಿ, ಕಣಕಾಲ, ಕೋಲ್ಹಾರ, ಕೂಡಗಿ, ಮಲಘಾಣ, ಮನಗೂಳಿ, ಮಣ್ಣೂರ, ಮಾರ್ಕಬ್ಬಿನಹಳ್ಳಿ, ಮಸಬಿನಾಳ, ಮಸೂತಿ, ಮುಳವಾಡ, ಮುತ್ತಗಿ, ನರಸಲಗಿ, ನಿಡಗುಂದಿ, ರೋಣಿಹಾಳ, ಸಾಸನೂರ, ಸಾತಿಹಾಳ, ತಳೇವಾಡ, ತೆಲಗಿ, ಉಕ್ಕಲಿ, ವಡವಡಗಿ, ವಂದಾಲ, ಯಾಳವಾರ, ಯರನಾಳ.
ಬಸವನ ಬಾಗೇವಾಡಿ ತಾಲ್ಲೂಕಿನ ನಾಡ ಕಚೇರಿಗಳು
ಬಸವನ ಬಾಗೇವಾಡಿ ತಾಲ್ಲೂಕಿನ ಕಂದಾಯ ಕಚೇರಿಗಳು
ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಒಟ್ಟು 28 ತಾಲ್ಲೂಕು ಪಂಚಾಯತ ಚುನಾವಣಾ ಕ್ಷೇತ್ರಗಳಿವೆ.
ಬಸವನ ಬಾಗೇವಾಡಿ ತಾಲ್ಲೂಕು ಪಂಚಾಯತ ಚುನಾವಣಾ ಕ್ಷೇತ್ರಗಳು
ಬಸವನ ಬಾಗೇವಾಡಿ ತಾಲ್ಲೂಕಿನ ಜಿಲ್ಲಾ ಪಂಚಾಯತ ಚುನಾವಣಾ ಕ್ಷೇತ್ರಗಳು
|
ಬಸವನ ಬಾಗೇವಾಡಿ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳು
ಕೂಡಗಿ, ಮನಗೂಳಿ, ನಿಡಗುಂದಿ, ಕುದರಿ ಸಾಲವಾಡಗಿ, ತೆಲಗಿ, ರೋಣಿಹಾಳ, ಉಕ್ಕಲಿ, ವಡವಡಗಿ, ಗೊಳಸಂಗಿ, ಕೊಲ್ಹಾರ, ಮುಳವಾಡ, ಯಾಳವಾರ, ಸಾಸನೂರ, ಹೂವಿನ ಹಿಪ್ಪರಗಿ.
ಪಶು ಚಿಕಿತ್ಸಾಲಯಗಳು
ನಿಡಗುಂದಿ, ಮನಗೂಳಿ, ಹೂವಿನ ಹಿಪ್ಪರಗಿ, ಕೂಡಗಿ, ವಂದಾಲ, ಕೊಲ್ಹಾರ, ನರಸಲಗಿ, ಗೊಳಸಂಗಿ, ಸಾಸನೂರ, ಉಕ್ಕಲಿ, ತೆಲಗಿ, ಮುಳವಾಡ, ಮಸಬಿನಾಳ, ಮುತ್ತಗಿ.
ಪ್ರಾಥಮಿಕ ಪಶು ಚಿಕಿತ್ಸಾಲಯಗಳು
ಬಸವನ ಬಾಗೇವಾಡಿ, ಹೆಬ್ಬಾಳ, ಹೂವಿನ ಹಿಪ್ಪರಗಿ, ಕುದರಿ ಸಾಲವಾಡಗಿ, ತೆಲಗಿ, ವಡವಡಗಿ, ಜಾಯವಾಡಗಿ, ನರಸಲಗಿ, ನಿಡಗುಂದಿ, ಸಿದ್ದನಾಥ.
ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿರುವ ದೂರವಾಣಿ ವಿನಿಮಯ ಕೇಂದ್ರಗಳು
ಆಲಮಟ್ಟಿ, ಬಸವನ ಬಾಗೇವಾಡಿ, ಡೋಣೂರ, ಹೂವಿನ ಹಿಪ್ಪರಗಿ, ಹಣಮಾಪುರ, ಹಂಗರಗಿ, ಇಂಗಳೇಶ್ವರ, ಕೋಲ್ಹಾರ, ಕುದರಿ ಸಾಲವಾಡಗಿ, ಮನಗೂಳಿ, ಮಸಬಿನಾಳ, ಮಸೂತಿ, ಮುಳವಾಡ, ಮುತ್ತಗಿ, ನರಸಲಗಿ, ರಬಿನಾಳ, ಸಾಸನೂರ, ತೆಲಗಿ, ಉಕ್ಕಲಿ, ವಡವಡಗಿ, ವಂದಾಲ, ಯಾಳವಾರ
ರಾಷ್ಟ್ರೀಯ ಹೆದ್ದಾರಿ - 13 => ಸೋಲಾಪುರ - ವಿಜಯಪುರ - ಇಲಕಲ್ಲ - ಹೊಸಪೇಟೆ - ಚಿತ್ರದುರ್ಗ - ಶಿವಮೊಗ್ಗ - ಮಂಗಳೂರ.
ರಾಜ್ಯ ಹೆದ್ದಾರಿ - 41 => ಶಿರಾಡೋಣ - ಚಡಚಣ - ಝಳಕಿ - ಇಂಡಿ - ದೇವರ ಹಿಪ್ಪರಗಿ - ಹೂವಿನ ಹಿಪ್ಪರಗಿ - ಮುದ್ದೇಬಿಹಾಳ - ನಾರಾಯಣಪುರ - ಲಿಂಗಸಗೂರ.
ರಾಜ್ಯ ಹೆದ್ದಾರಿ - 61 => ಮನಗೊಳಿ - ಬಸವನ ಬಾಗೇವಾಡಿ - ತಾಳಿಕೋಟೆ - ಹುಣಸಗಿ - ದೇವಾಪುರ - ದೇವದುರ್ಗ - ಶಿರವಾರ.
ರಾಜ್ಯ ಹೆದ್ದಾರಿ - 124 => ಅಫಜಲಪುರ - ಆಲಮೇಲ - ಸಿಂದಗಿ - ತಾಳಿಕೋಟ - ಮಿಣಜಗಿ - ಢವಳಗಿ - ರೂಡಗಿ - ಬಸವನ ಬಾಗೇವಾಡಿ - ಕೊಲ್ಹಾರ - ಬೀಳಗಿ.
ಈ ತಾಲೂಕಿನಲ್ಲಿ ಕೆಲವು ಪ್ರಸಿದ್ಧ ಸ್ಥಳಗಳೂ ಇವೆ.
This article uses material from the Wikipedia ಕನ್ನಡ article ಬಸವನಬಾಗೇವಾಡಿ ತಾಲ್ಲೂಕು, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.