ಬಿಜಾಪುರ (ಕನ್ನಡ: ವಿಜಾಪುರ) ಕರ್ನಾಟಕ ರಾಜ್ಯದ ಒಂದು ಜಿಲ್ಲೆ ಮತ್ತು ನಗರ.
ಈ ಜಿಲ್ಲೆಯ ಜಿಲ್ಲಾಡಾಳಿತ ಮತ್ತು ಪ್ರಮುಖ ನಗರ ವಿಜಾಪುರ. ಬಿಜಾಪುರ ನಗರ ಬೆಂಗಳೂರಿನಿಂದ ಉತ್ತರಪಶ್ಚಿಮಕ್ಕೆ ೫೨೩ ಕಿಮೀ ದೂರದಲ್ಲಿದೆ.
ಬಿಜಾಪುರ | |
ರಾಜ್ಯ - ಜಿಲ್ಲೆ | [[ಕರ್ನಾಟಕ]] - ವಿಜಾಪುರ |
ನಿರ್ದೇಶಾಂಕಗಳು | |
ವಿಸ್ತಾರ - ಎತ್ತರ | ೧೦೫೪೦ km² - ೭೭೦ ಮೀ. |
ಸಮಯ ವಲಯ | IST (UTC+5:30) |
ಜನಸಂಖ್ಯೆ (೨೦೧೧) - ಸಾಂದ್ರತೆ | ೨೦0೭೭೫೫ - ೨೦೭/ಚದರ ಕಿ.ಮಿ. |
ಕೋಡ್ಗಳು - ಪಿನ್ ಕೋಡ್ - ಎಸ್.ಟಿ.ಡಿ. - ವಾಹನ | - ೫೮೬೧೦೧-೧೦೫ - +೯೧ (೦) ೮೩೫೨ - ಕೆಎ-೨೮ |
ಅಂತರ್ಜಾಲ ತಾಣ: www.bijapur.nic.in |
ವಿಜಾಪುರದ (ಇಂಗ್ಲೀಷ್:ಬಿಜಾಪುರ) ಪುರಾತನ ಹೆಸರು ವಿಜಯಪುರ ,ಬಿಜ್ಜನಹಳ್ಳಿ. ಈ ಜಿಲ್ಲೆಯು ಐತಿಹಾಸಿಕ ಸ್ಥಳಗಳಿಂದ ಕೂಡಿದೆ. ೧೦-೧೧ ನೆ ಶತಮಾನಗಳಲ್ಲಿ ಕಲ್ಯಾಣಿ ಚಾಲುಕ್ಯರಿಂದ ಸ್ಥಾಪಿತವಾಯಿತು. ೧೩ ನೆ ಶತಮಾನದ ಕೊನೆಯ ಹೊತ್ತಿಗೆ ದೆಹಲಿಯ ಖಿಲ್ಜಿ ಸುಲ್ತಾನರ ಪ್ರಭಾವಕ್ಕೆ ಒಳಗಾದ ಬಿಜಾಪುರ, ಕಿ. ಶ. ೧೩೪೭ ರಲ್ಲಿ ಬೀದರಿನ ಬಹಮನಿ ಸುಲ್ತಾನರ ಆಳ್ವಿಕೆಗೆ ಒಳಗಾಯಿತು.
ಕ್ರಿ. ಶ. ೧೫೧೮ ರಲ್ಲಿ ಬಹಮನಿ ಸುಲ್ತಾನೇಟ್ ಸಾಮ್ರಾಜ್ಯ ಒಡೆದು ಐದು ರಾಜ್ಯಗಳಾಗಿ ಹಂಚಿಹೋಯಿತು. ಆಗ ರೂಪುಗೊಂಡ ರಾಜ್ಯಗಳಲ್ಲಿ ವಿಜಾಪುರವೂ ಒಂದು. ಇದು ಆದಿಲ್ ಶಾಹಿ ಸುಲ್ತಾನರ ರಾಜ್ಯ. ಕ್ರಿ. ಶ. ೧೬೮೬ ರಲ್ಲಿ ಮುಘಲ್ ಸಾಮ್ರಾಜ್ಯದ ಔರಂಗಜೇಬ್ ಈ ಪ್ರದೇಶವನ್ನು ಗೆದ್ದ ನಂತರ ಆದಿಲ್ ಶಾಹಿ ಸುಲ್ತಾನರ ಆಳ್ವಿಕೆ ಕೊನೆಗೊಂಡಿತು. ಕ್ರಿ. ಶ. ೧೭೨೪ರಲ್ಲಿ ವಿಜಾಪುರ ಹೈದರಾಬಾದನ ನಿಜಾಮರ ಆಳ್ವಿಕೆಗೆ ಒಳಪಟ್ಟಿತು. ಕ್ರಿ. ಶ. ೧೭೬೦ ರಲ್ಲಿ ಮರಾಠರಿಂದ ನಿಜಾಮರು ಸೋಲಲ್ಪಟ್ಟಾಗ ವಿಜಾಪುರ ನಿಜಾಮರಿಂದ ಮರಾಠ ಪೇಶಾವರ ಅಳ್ವಿಕೆಗೆ ಒಳಪಟ್ಟಿತ್ತು. ನಂತರ ಕ್ರಿ. ಶ. ೧೮೧೮ ರ ೩ ನೆ ಆಂಗ್ಲೋ -ಮರಾಠ ಯುದ್ದದಲ್ಲಿ ಬ್ರಿಟಿಷರಿಂದ ಮರಾಠರು ಸೋಲಲ್ಪಟ್ಟಾಗ ವಿಜಾಪುರ ಮರಾಠರಿಂದ ಬ್ರಿಟಿಷರ ಅಳ್ವಿಕೆಗೆ ಒಳಪಟ್ಟಿತ್ತು. ನಂತರ ವಿಜಾಪುರನ್ನು ಬ್ರಿಟಿಷ ಈಸ್ಟ್ ಇಂಡಿಯಾ ಕಂಪನಿಗೆ ಹಸ್ತಾಂತರಿಸಲಾಯಿತು. ಬಳಿಕ ಸಾತಾರಾ ರಾಜರಿಗೆ ಓಪ್ಪಿಸಲಾಯಿತು.
ಕ್ರಿ. ಶ. ೧೮೪೮ ರಲ್ಲಿ ಸಾತಾರಾ ಮತ್ತು ವಿಜಾಪುರನ್ನು ಮುಂಬಯಿ ಪ್ರಾಂತ್ಯಕ್ಕೆ ಸೇರಿಸಲಾಯಿತು. ಬ್ರಿಟಿಷರಿಂದ ನಿರೂಪಿಸಲ್ಪಟ್ಟ ಕಲದಗಿ ಜಿಲ್ಲೆಗೆ ಈಗಿನ ವಿಜಾಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಸೇರಿಸಲ್ಪಟ್ಟವು. ಕ್ರಿ. ಶ. ೧೮೮೫ ರಲ್ಲಿ ವಿಜಾಪುರನ್ನು ಜಿಲ್ಲಾಡಳಿತ ಪ್ರದೇಶವಾಗಿ ಮಾಡಲಾಯಿತು ಮತ್ತು ವಿಜಾಪುರನ್ನು ಆಗಿನ ಮುಂಬಯಿ (ಬಾಂಬೆ) ರಾಜ್ಯಕ್ಕೆ ಸೇರಿಸಲಾಯಿತು. ತದನಂತರ ಕ್ರಿ.ಶ. ೧೯೫೬ ರಲ್ಲಿ ಆಗಿನ ಮೈಸೂರು ರಾಜ್ಯಕ್ಕೆ (ಈಗಿನ ಕರ್ನಾಟಕ ರಾಜ್ಯಕ್ಕೆ) ಸೇರಿಸಲಾಯಿತು. ವಿಜಾಪುರ ನಗರವು ಒಂದು ಕಾಲದಲ್ಲಿ ಜಗತ್ತಿನ ಎರಡನೇ ಅತಿ ದೊಡ್ಡ ನಗರವಾಗಿತ್ತು.
ವಿಜಾಪುರ ಜಿಲ್ಲೆಯ ವಿಸ್ತೀರ್ಣ ೧೦೫೪೧ ಚದರ ಕಿಲೋಮಿಟರಗಳು.ವಿಜಾಪುರ ಜಿಲ್ಲೆಯು; ಗುಲ್ಬರ್ಗಾ ಜಿಲ್ಲೆ (ಪೂರ್ವಕ್ಕೆ), ರಾಯಚೂರು ಜಿಲ್ಲೆ (ದಕ್ಷಿಣಕ್ಕೆ), ಬಾಗಲಕೋಟೆ ಜಿಲ್ಲೆ (ದಕ್ಷಿಣ-ಪಶ್ಚಿಮಕ್ಕೆ), ಬೆಳಗಾವಿ ಜಿಲ್ಲೆ (ಪಶ್ಚಿಮಕ್ಕೆ), ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ(ಉತ್ತರ-ಪಶ್ಚಿಮಕ್ಕೆ) ಮತ್ತು ಮಹಾರಾಷ್ಟ್ರದ ಸೊಲಾಪುರ ಜಿಲ್ಲೆಯಿಂದ (ಉತ್ತರಕ್ಕೆ) ಆವೃತಗೊಂಡಿದೆ.
ವಿಜಾಪುರ ಜಿಲ್ಲೆಯಲ್ಲಿ ಹರಿಯುವ ಎರಡು ಮುಖ್ಯ ನದಿಗಳೆಂದರೆ ಕೃಷ್ಣಾ ಮತ್ತು ಭೀಮಾ. ಬಿಜಾಪುರವನ್ನು ಪಂಚನದಿಗಳ ನಾಡು ಎಂದು ಕರೆಯಲಿಗುತ್ತದೆ ( ಬಿಜಾಪುರದಲ್ಲಿ ಹರಿಯುವ ಐದು ನದಿಗಳು ಭೀಮಾ, ಕೃಷ್ಣ, ಘಟಪ್ರಭಾ, ದೋಣಿ, ಮಲಪ್ರಭಾ ನದಿಗಳು.)ಇದನ್ನು ಕರ್ನಾಟಕದ ಪಂಜಾಬ್ವಿ ಎಂದು ಕರೆಯಲಾಗುತ್ತದೆ.ಜಾಪುರ ಪಟ್ಟಣವು ಬೆಂಗಳೂರಿನಿಂದ ೫೩೫ ಕಿಮೀ, ಪುಣೆಯಿಂದ ೩೫೦ ಕಿಮೀ, ಮುಂಬಯಿದಿಂದ ೫೦೦ ಕಿಮೀ,ಹೈದರಾಬಾದ್ದಿಂದ ೩೮೦ ಕಿಮೀ,ಗೋವದಿಂದ ೩೧೦ ಕಿಮೀ, ಗುಲ್ಬರ್ಗಾಾದಿಂದ ೧೬೫ ಕಿಮೀ, ಧಾರವಾಡದಿಂದ ೨೦೦ ಕಿಮೀ,ಹುಬ್ಬಳ್ಳಿಯಿಂದ ೧೯೦ ಕಿಮೀ ಮತ್ತು ಬೆಳಗಾವಿಯಿಂದ ೨೧೦ ಕಿಮೀ ದೂರದಲ್ಲಿದೆ.
ಈ ಜಿಲ್ಲೆಯು ಕರ್ನಾಟಕ ರಾಜ್ಯದ ೫.೪೯% ವಿಸ್ತೀರ್ಣವನ್ನು ಹೊಂದಿದೆ. ಈ ಜಿಲ್ಲೆಯು ಭೌಗೋಳಿಕದಲ್ಲಿ ೧೫*x ೫೦ ಮತ್ತು ೧೭*x ೨೮ ಉತ್ತರ ಅಕ್ಷಾಂಶ ಮತ್ತು ೭೪*x ೫೪ ಮತ್ತು ೭೬*x ೨೮ ಪಶ್ಚಿಮ ರೇಖಾಂಶದಲ್ಲಿ ಬರುತ್ತದೆ. ಈ ಜಿಲ್ಲೆಯ ಜಿಲ್ಲಾಡಾಳಿತ ಕೇಂದ್ರ ಮತ್ತು ಪ್ರಮುಖ ಪಟ್ಟಣ ವಿಜಾಪುರ.
--117.211.56.34 ೦೩:೩೧, ೬ ಜುಲೈ ೨೦೧೪ (UTC)ದಪ್ಪಗಿನ ಅಕ್ಷರsexybitch
==ಹವಾಮಾನ==
ొ==ಸಾಂಸ್ಕೃತಿಕ==
ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮಿಶ್ರಿತ ವಿಶಿಷ್ಠವಾದ ಕನ್ನಡ 'ವಿಜಾಪುರ ಕನ್ನಡ'ವೆಂದೇ ಗುರುತಿಸಲ್ಪಡುತ್ತದೆ. ಒಕ್ಕಲುತನ ಮುಖ್ಯ ಉದ್ಯೋಗ. ಜೊತೆಗೆ ಕೆಲವೊಂದು ಗ್ರಾಮಗಳಲ್ಲಿ (ಚಡಚಣ, ತಾಂಬಾ, ವಂದಾಲ ಮುಂ.)ನೇಕಾರಿಕೆ ಇದೆ. ಪ್ರಮುಖ ಬೆಳೆಗಳು: ಜೋಳ, ಸಜ್ಜೆ, ಶೇಂಗಾ,ಚಿಕ್ಕು, ಸೂರ್ಯಕಾಂತಿ, ಉಳ್ಳಾಗಡ್ಡಿ (ಈರುಳ್ಳಿ). ವಿಜಾಪುರದ ದ್ರಾಕ್ಷಿ, ದಾಳಿಂಬೆ, ನಿಂಬೆ ಹಣ್ಣುಗಳು ಪರರಾಜ್ಯಗಳಿಗೆ, ಪರದೇಶಗಳಿಗೆ ರಫ್ತು ಆಗುತ್ತವೆ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. 'ಜವಾರಿ' ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ವಿಜಾಪುರದ ಜೋಳದ ರೊಟ್ಟಿ,, ಸೇಂಗಾ ಚಟ್ನಿ,, ಎಣ್ಣಿ ಬದನೆಯಕಾಯಿ ಪಲ್ಯ,, ಕೆನೆಮೊಸರುಗಳು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
ವಿಜಾಪುರ ನಗರದ ಸಾಕ್ಷರತೆಯ ಪ್ರಮಾಣ ೬೭%.ಅದರಲ್ಲಿ ೭೭% ಪುರುಷರು ಹಾಗೂ ೫೬% ಮಹಿಳೆಯರು ಸಾಕ್ಷರತೆ ಹೊಂದಿದೆ. ಜಿಲ್ಲೆಯಲ್ಲಿ ಪುರುಷರು ೭ ಲಕ್ಷಕ್ಕೂ ಹೆಚ್ಚು ಪುರುಷರು ಮತ್ತು ೫ ಲಕ್ಷಕ್ಕೂ ಹೆಚ್ಚು ಮಹಿಳೆಯರು ಸಾಕ್ಷರರಾಗಿದ್ದಾರೆ.
ವಿಜಾಪುರ(ಬಿಜಾಪುರ) ಜಿಲ್ಲೆಯಲ್ಲಿ ಅನೇಕ ಚಾರಿತ್ರಿಕ ಆಕರ್ಷಣೆಗಳಿವೆ. ಮುಖ್ಯವಾಗಿ, ವಿಜಾಪುರ ಮುಸ್ಲಿಮ್ ಶೈಲಿಯ ವಾಸ್ತುಶಿಲ್ಪಕ್ಕೆ ಹೆಸರಾಗಿದೆ.
ಮುಸ್ಲಿಮ್ ಶೈಲಿಯ ವಾಸ್ತುಶಿಲ್ಪಗಳು
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ. ಇದು ವಿಶ್ವದ ಎರಡನೆ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್ (ಇಟಲಿಯ ರೋಮ್ ನಗರದ ಬೆಸಿಲಿಕಾ ಚರ್ಚ್ - ವಿಶ್ವದ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್). ಇದರ ವಿಶೇಷ ಆಕರ್ಷಣೆಯೆಂದರೆ ಇದರೊಳಗಿನ ಪ್ರಧಾನ ಕೊಠಡಿಯಲ್ಲಿ ಪ್ರತಿ ಶಬ್ದವೂ ಏಳು ಬಾರಿ ಪ್ರತಿಧ್ವನಿತವಾಗುತ್ತದೆ!ಹಾಗೆಯೆ ಇಲ್ಲಿರುವ "ಪಿಸುಗುಟ್ಟುವ ಶಾಲೆ"ಯಲ್ಲಿ ಅತಿ ಸಣ್ಣ ಶಬ್ದವೂ ೩೭ ಮಿ ದೂರದಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಇದರ ಹತ್ತಿರ ವಿಜಾಪುರ ಆದಿಲ್ ಶಾಹಿಗಳಿಗೆ ಸಂಭದಿಸಿದ ವಸ್ತು ಸಂಗ್ರಾಹಾಲಯವು ಇದೆ.
ಇದು ಇಬ್ರಾಹಿಮ್ ಆದಿಲ್ ಶಾ (ಆಳ್ವಿಕೆ: ೧೫೮೦-೧೬೨೭) ಮತ್ತು ಆತನ ರಾಣಿಯಾದ ತಾಜ್ ಸುಲ್ತಾನಳ ಗೋರಿ. ಇದನ್ನು ೧೬೨೭ ರಲ್ಲಿ ನಿರ್ಮಿಸಿದ್ದಾರೆ. ಒಂದೇ ಶಿಲೆಯಲ್ಲಿ ಕಟ್ಟಲ್ಪಟ್ಟ ರೋಜಾ ತನ್ನ ಉದ್ದಳತೆಯ ಸಮರೂಪತೆಗೆ ಹೆಸರಾಗಿದೆ. ಇದರ ಶಿಲ್ಪಿ ಮಲಿಕ್ ಸಂದಾಲ್ ಇರಾನ್ ದೇಶದವನಾಗಿದ್ದು, ಶಿಲ್ಪಿಯ ಗೋರಿಯೂ ಸಹ ಇಲ್ಲಿಯೇ ಇದೆ. ಇದರ ವಿನ್ಯಾಸ ಮುಂದೆ ಪ್ರಸಿದ್ಧ ತಾಜ್ ಮಹಲ್ ನ ವಿನ್ಯಾಸಕ್ಕೆ ಸ್ಫೂರ್ತಿಯಾಯಿತೆಂಬ ಹೇಳಿಕೆಯಿದೆ.
ಮಲಿಕ್-ಎ-ಮೈದಾನ್ ಫಿರಂಗಿ (ಮಲಿಕ್ ತೋಪ್)ನ್ನು ಮಹಮದ್ ಬಿನ್ ಹುಸ್ಸೇನ್ ರುಮಿವು ೧೬೩೨ ರಲ್ಲಿ ನಿರ್ಮಿಸಿದ್ದಾನೆ. ಜಗತ್ತಿನ ಅತಿ ದೊಡ್ಡದಾದ ಫಿರಂಗಿಗಳಲ್ಲಿ ಒಂದು. ಇದು ೧೪ (೪.೨ ಮೀಟರ) ಅಡಿ ಉದ್ದ , ೧.೫ ಮೀಟರ ವ್ಯಾಸ, ೫೫ ಟನ್ ತೂಕ ಹೊಂದಿದೆ. ಇದನ್ನು ೧೭ ನೇ ಶತಮಾನದಲ್ಲಿ ಅಮ್ಮದನಗರದಿಂದ ೧೦ ಆನೆಗಳು, ೪೦೦ ಎತ್ತುಗಳು ಮತ್ತು ನೂರಾರು ಮನುಷ್ಯರು ಎಳೆದು ತಂದಿದ್ದಾರೆ. ಈ ಫಿರಂಗಿಯನ್ನು ಯುದ್ದಕ್ಕಾಗಿ ಬಳಸಲಾಗುತ್ತಿತ್ತು.
ಜುಮ್ಮಾ ಮಸೀದಿಯನ್ನು ೧೫೭೬ರಲ್ಲಿ ನಿರ್ಮಿಸಿದ್ದಾರೆ. ಇದರ ವಿಸ್ತೀರ್ಣ ೧೦,೮೦೦ ಸ್ಕ್ವೇರ್ ಮೀಟರ್ ಇದ್ದು ಒಂದೆ ಬಾರಿಗೆ ೨೫೦೦ ಜನ ಪ್ರಾರ್ಥನೆ ಮಾಡಬಹುದಾಗಿದೆ. ಇಲ್ಲಿ ಮುಸ್ಲಿಂ ಧರ್ಮದ ಅನುಯಾಯಿಗಳು ಪ್ರಾರ್ಥನೆಗಾಗಿ ಉಪಯೋಗಿಸುತ್ತಿದ್ದರು.ಈ ಮಸೀದಿಯಲ್ಲಿ ಕುರಾನಿನ ಬಂಗಾರದ ಹೊತ್ತಿಗೆಯಿದೆ
ಬಾರಾ ಕಮಾನ್ನನ್ನು ಅಲಿ ರೋಜಾ ೧೬೭೨ ರಲ್ಲಿ ನಿರ್ಮಿಸಿದ್ದಾನೆ. ಇದನ್ನು ಹನ್ನೆರಡು ಉದ್ದ , ಹನ್ನೆರಡು ಅಗಲ ಮತ್ತು ಹನ್ನೆರಡು ಎತ್ತರದ ಅಂತಸ್ತಿನ ಕಮಾನುಗಳುಳ್ಳ ಸ್ಮಾರಕವಾಗಿ ನಿರ್ಮಿಸಲು ಯೋಜನೆ ಮಾಡಲಾಗಿತ್ತು. ಇದು ಹನ್ನೆರಡು ಕಮಾನುಗಳುಳ್ಳ ಅರ್ಧಕ್ಕೆ ನಿಲ್ಲಿಸಿದ ಸ್ಮಾರಕವಾಗಿದೆ.
ಅಸರ ಮಹಲ್ನ್ನು ೧೬೪೬ರಲ್ಲಿ ಮಹಮದ್ ಆದಿಲ್ ಶಾ ನಿರ್ಮಿಸಿದ್ದಾರೆ. ಇದನ್ನು ನ್ಯಾಯಾಲಯದ ಸಂಕೀರ್ಣವಾಗಿ ಉಪಯೋಗಿಸುತ್ತಿದ್ದರು. ಇದರ ಒಳಗೆ ಮಹಿಳೆಯರಿಗೆ ಪ್ರವೇಶವಿಲ್ಲ. ಸುತ್ತಲೂ ೩ ಸಣ್ಣ ಕೆರೆಗಳಿವೆ.
ಗಗನ್ ಮಹಲ್ನ್ನು ೧೫೬೦ ರಲ್ಲಿ ಅಲಿ ಆದಿಲ್ ಶಾ ನಿರ್ಮಿಸಿದ್ದಾರೆ. ಇದನ್ನು ಸ್ವರ್ಗದ ಅರಮನೆ ಅಥವಾ ದರ್ಬಾರ್ ಹಾಲ್ ಎಂದು ಕರೆಯುತ್ತಿದ್ದರು. ಒಂದು ದೊಡ್ಡದಾದ ಕಮಾನು ೨೦ ಮೀಟರ್ ಉದ್ದವಾಗಿದ್ದು , ೧೭ ಮೀಟರ್ ಎತ್ತರವಾದ ಮತ್ತು ಎರಡು ಚಿಕ್ಕದಾದ ಕಮಾನುಗಳನ್ನು ಮಾಡಿ ಸಂಗೀತ ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ಆಚರಿಸಲು ಉಪಯೋಗಿಸುತ್ತಿದ್ದರು.
ಸಂಗೀತ ಮಹಲ್ವು ಬಿಜಾಪೂರ ನಗರದ ಹೊರ ವಲಯದ ತೊರವಿ ಗ್ರಾಮದಲ್ಲಿದ್ದು ಇಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಆಚರಿಸುತ್ತಿದ್ದರು.
ಉಪ್ಪಲಿ ಬುರಜ್ನ್ನು ೧೫೮೪ ರಲ್ಲಿ ಹೈದರ ಖಾನ್ನು ನಿರ್ಮಿಸಿದ್ದಾನೆ. ಇದು ೨೪ ಮೀಟರ್ ಎತ್ತರವಾಗಿದ್ದು ಇದರ ಮೇಲೆ ೯ ಅಡಿ ಮತ್ತು ೮.೫ ಅಡಿ ಉದ್ದವಿರುವ ಎರಡು ಫಿರಂಗಿಗಳಿವೆ. ಇದಕ್ಕೆ ಹೈದರ ಬುರಜ್ ಎಂತಲೂ ಕರೆಯುತ್ತಾರೆ.
ಇವು ಎರಡು ಅವಳಿ ಗುಮ್ಮಟದ ಆಕಾರದಲ್ಲಿರುವ ಅಷ್ಟಭುಜಾಕೃತಿಯ ಸಮಾಧಿಗಳಾಗಿವೆ. ಇದನ್ನು ಸೇನಾಧಿಕಾರಿಯಾದ ಖಾನ್ ಮಹಮ್ಮದ್ ಮತ್ತು ಅವನ ಆಧ್ಯಾತ್ಮಿಕ ಸಲಹೆಗಾರನಾದ ಅಬ್ದುಲ್ ರಜಾಕ್ ಖಾದ್ರಿ ನಿನಪಿಗಾಗಿ ನಿರ್ಮಿಸಲಾಗಿದೆ.
ಈ ಮಹಲನ್ನು ೧೬೨೦ರಲ್ಲಿ ಮಹಮದ್ ಆದಿಲ್ ಶಾನು ಕಸಗೂಡಿಸುವರಿಗಾಗಿ ನಿರ್ಮಿಸಿದ್ದನು. ಈ ಮಹಲನ್ನು ಇಂಡೋ - ಸಾರ್ಸೆನಿಕ್ ಶೈಲಿಯಲ್ಲಿ ನಿರ್ಮಿಸಲಾಗಿದೆ.
ಇದು ಬಿಜಾಪುರದ ಐದು ಗೇಟುಗಳಲ್ಲಿ ಒಂದು. ತಾಜ್ ಬೌಡಿಯು ದೊಡ್ಡದಾದ ನೀರಿನ ಬಾವಿಯಿದ್ದು ಇದನ್ನು ತಾಜ್ ಸುಲ್ತಾನ್ಳ ನೆನಪಿಗಾಗಿ ೧೬೨೦ರಲ್ಲಿ ಇಬ್ರಾಹಿಮ್ ೨' ಕಟ್ಟಿಸಿದ್ದಾನೆ. ಬಾವಿಯ ನೀರನ್ನು ಕುಡಿಯಲು, ಸ್ನಾನಕ್ಕಾಗಿ , ಮೂರ್ತಿಗಳನ್ನು ಮುಳುಗಿಸಲು ಹಾಗೂ ಇನ್ನಿತರ ಕಾರ್ಯಗಳಿಗಾಗಿ ಉಪಯೋಗಿಸುತ್ತಿದ್ದರು.
ಇದು ೨೦ ಮಿಲಿಯನ್ ಲೀಟರ್ ನೀರು ಸಂಗ್ರಹಿಸಿ ರಾಜಧಾನಿಗೆ ಪೂರೈಸಲಾಗುತ್ತಿತ್ತು. ಇದನ್ನು ಅಲಿ ಆದಿಲ್ ಶಾಹಿಯು ತನ್ನ ಪತ್ನಿಯಾದ ಚಾಂದ ಬೇಬಿಯ ಸ್ಮರಣೆಗಾಗಿ ನಿರ್ಮಿಸಿದ್ದಾನೆ.
ಹೆಸರೆ ಹೇಳವಂತೆ ಏಳು ಅಂತಸ್ತುಗಳ್ಳುಳ್ಳ ಕಟ್ಟಡವಾಗಿದ್ದು ನೋಡಲು ಸುಂದರವಾಗಿದೆ.
ಜಲ ಮಂಜಿಲ್ನ್ನು ರಾಣಿಯರ ಸ್ನಾನದ ಗೃಹವಾಗಿ ಉಪಯೋಗಿಸುತ್ತಿದ್ದರು.
ಆನಂದ ಮಹಲ್ನ್ನು ಇಬ್ರಾಹಿಮ್ ಆದಿಲ್ ಷಾರವರು ಕಟ್ಟಿಸಿದ್ದಾರೆ.
ಹಿಂದೂ ಶೈಲಿಯ ದೇವಾಲಯಗಳು / ವಾಸ್ತುಶಿಲ್ಪಗಳು
ಸಮೀಪದ ಪ್ರವಾಸಿ ಸ್ಥಳಗಳು
ಬಿಜಾಪೂರ ನಗರದ ಜನಸಂಖ್ಯೆಯು ೩ ಲಕ್ಷಕ್ಕೂ ಅಧಿಕವಾಗಿದೆ.
ಬಿಜಾಪೂರ ನಗರದಲ್ಲಿ ಹಿಂದೂ, ಮುಸ್ಲಿಂ, ಕ್ರಿಸ್ಟಿಯನ್ ಹಾಗೂ ಜೈನ ಧರ್ಮದ ಜನರಿದ್ದಾರೆ.
ನಗರದಲ್ಲಿ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ, ಉರ್ದು ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ.
ನಗರದಲ್ಲಿ ಅನೇಕ ಹಣಕಾಸು ಸಂಸ್ಥೆಗಳು ಕಾರ್ಯಾನಿರ್ವಹಿಸುತ್ತವೆ. ಬಿಜಾಪುರ ನಗರದ ಬಸವನ ಬಾಗೇವಾಡಿ ರಸ್ತೆಯ ಇಬ್ರಾಹಿಮಪುರ ಗೇಟಿನ ಬಳಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಕಚೇರಿಯಿದೆ.
ನಗರದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ. ಇದರಿಂದಾಗಿ ಆರ್ಥಿಕವಾಗಿ ಹಿಂದುಳಿದಿದೆ.
ಬಿಜಾಪುರ ನಗರವು ಪ್ರಮುಖ ವ್ಯಾಪಾರ ಮತ್ತು ವಾಣಿಜ್ಯ ಕೇಂದ್ರವಾಗಿದೆ.
ಜಿಲ್ಲೆಯಲ್ಲಿ ಸರ್ಕಾರಿ ರಾಷ್ತ್ರೀಕೃತ, ಸಹಕಾರಿ, ಜಿಲ್ಲಾ ಕೇಂದ್ರೀಯ ಸಹಕಾರಿ ಬ್ಯಾಂಕುಗಳು ಕಾರ್ಯಾನಿರ್ವಹಿಸುತ್ತವೆ
ರಾಷ್ತ್ರೀಕೃತ ಬ್ಯಾಂಕುಗಳು
garden
ಖಾಸಗಿ ಬ್ಯಾಂಕುಗಳು
ಸಹಕಾರಿ ಬ್ಯಾಂಕುಗಳು
ಜಿಲ್ಲೆಯಲ್ಲಿ ಸುಮಾರು ೧೦೦ಕ್ಕೂ ಹೆಚ್ಚು ಅಂಚೆ ಕಚೇರಿಗಳಿವೆ. ಪ್ರಧಾನ ಅಂಚೆ ಕಚೇರಿಯು ಬಿಜಾಪೂರ ನಗರದ ಎಮ್.ಜಿ. ರಸ್ತೆಯಲ್ಲಿದೆ.
ಬಿಜಾಪೂರ ನಗರ ಭಾಗದ ಪಿನಕೋಡ್ ಸಂಕೇತಗಳು
ವಿಜಾಪುರ ನಗರದಲ್ಲಿರುವ ಎಸ್.ಪಿ. ಆಫೀಸ್ ಕೇಂದ್ರ ಕಚೇರಿಯೊಂದಿಗೆ ಜಿಲ್ಲೆಯ ಎಲ್ಲ ಪೋಲಿಸ್ ಠಾಣೆಗಳು ಕಾರ್ಯನಿರ್ವಹಿಸುತ್ತವೆ.
ವಿಜಾಪುರ ನಗರದಲ್ಲಿರುವ ಪೋಲಿಸ್ ಠಾಣೆಗಳು
ಬಿಜಾಪೂರ ನಗರದಲ್ಲಿ ಒಳ್ಳೆಯ ಸರಕಾರಿ ಹಾಗೂ ಖಾಸಗಿ ಆಸ್ಪ ತ್ರೆಗಳು ಕಾರ್ಯನಿರ್ವಹಿಸುತ್ತವೆ.
ವಿಜಾಪುರ ನಗರದ ಅಥಣಿ ರಸ್ತೆಯಲ್ಲಿ ಆಕಾಶವಾಣಿ ಕೇಂದ್ರವಿದೆ. ೧೦೧.೮ ಮೆಗಾ ಹರ್ಟ್ಸ್ ತರಂಗಾಂತರದಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತದೆ.
ವಿಜಾಪುರ ಪಟ್ಟಣವು ನಗರ ಹಾಗೂ ಗ್ರಾಮೀಣ ಸಾರಿಗೆ ಹೊಂದಿದೆ. ಪಟ್ಟಣದಲ್ಲಿ ೯ ಫೆಬ್ರುವರಿ ೨೦೧೩ ರಂದು ಅತ್ಯ್ಯಾಧುನಿಕ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಗರ ಸಾರಿಗೆ ವಾಹನಗಳು ಪ್ರಾರಭವಾಗಿ ನಗರದ ಜನತೆಗೆ ಪ್ರಯಾಣದ ಸೌಕರ್ಯವನ್ನು ಕಲ್ಪಿಸಲಾಗಿದೆ. ನಗರ ಸಾರಿಗೆ ವಾಹನಗಳಿಗೆ ವಿಜಯಪುರ ನಗರ ಸಾರಿಗೆ (ದಿ ಸಿಟಿ ಆಫ್ ವಿಕ್ಟರಿ) ಎಂದು ಹೆಸರಿಸಲಾಗಿದೆ.ಮತ್ತು ದಿನಕ್ಕೆ ರೂ.೨೦ ಯಂತೆ ದಿನದ ಪಾಸನ್ನು ಪಡೆದು ನಗರದ ತುಂಬೆಲ್ಲ ಹಾಗೂ ಪ್ರವಾಸಿ ಸ್ಥಳಗಳನ್ನು ನೋಡಬಹುದಾಗಿದೆ. ಸರಕಾರೇತರ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಾರಿಗೆ ವಾಹನಗಳುಜಿಲ್ಲೆಯಾದ್ಯಂತ ಸಂಚರಿಸುತ್ತವೆ. ವಿಜಾಪುರದಿಂದ ಮುಂಬಯಿ, ಪೂನಾ, ಬೆಂಗಳೂರು, ಹೈದರಾಬಾದುಗಳಿಗೆ ಐಷಾರಾಮಿ ಬಸ್ಸುಗಳು ಓಡಾಡುತ್ತವೆ. ಇತರೆ ನಿಗಮದ ಬಸ್ಸುಗಳು,ಅಂತರರಾಜ್ಯ (ಗೋವಾ ಮತ್ತು ಮಹಾರಾಷ್ಟ್ರ) ವಾಹನಗಳು ಕೂಡ ಸಂಚರಿಸುತ್ತವೆ.
ಬಿಜಾಪುರದಿಂದ ಹೊರಡುವ ರೈಲುಗಳು
ಬಿಜಾಪುರ ರೈಲು ವಿಭಾಗವು ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗದಲ್ಲಿ ಬರುತ್ತದೆ.
19405/19406 | ಬೆಂಗಳೂರು < - > ಅಮದಾಬಾದ್ ( ವ್ಹಾಯಾ ಹುಬ್ಬಳ್ಳಿ , ಬಿಜಾಪೂರ, ಸೊಲ್ಲಾಪುರ ) | (ವಾರಕ್ಕೆ ಒಂದು ಸಲ) |
16201/16202 | ಶಿರಡಿ < - > ಮೈಸೂರ ( ವ್ಹಾಯಾ ಬೆಂಗಳೂರು,ಬಳ್ಳಾರಿ, ಗದಗ, ಬಿಜಾಪೂರ, ಸೊಲ್ಲಾಪುರ ) | (ವಾರಕ್ಕೆ ಒಂದು ಸಲ) |
16535/16536 | ಬೆಂಗಳೂರು < - > ಸೊಲ್ಲಾಪುರ (ಗೊಳಗುಂಬಜ್ ಎಕ್ಸ ಪ್ರೆಸ್) ( ವ್ಹಾಯಾ ಹುಬ್ಬಳ್ಳಿ , ಗದಗ, ಬಿಜಾಪೂರ, ಸೊಲ್ಲಾಪುರ ) | (ಪ್ರತಿದಿನ) |
17307/17308 | ಬೆಂಗಳೂರು < - > ಬಾಗಲಕೋಟ (ಬಸವ ಎಕ್ಸ ಪ್ರೆಸ್) ( ವ್ಹಾಯಾ ಗುಂತಕಲ್, ಗುಲಬರ್ಗಾ, ಸೊಲ್ಲಾಪುರ, ಬಿಜಾಪೂರ) | (ಪ್ರತಿದಿನ) |
11423/11424 | ಸೊಲ್ಲಾಪುರ < - > ಹುಬ್ಬಳ್ಳಿ ಎಕ್ಸ ಪ್ರೆಸ್ | (ಪ್ರತಿದಿನ) |
01493/01494 | ಹುಬ್ಬಳ್ಳಿ < - > ಬಿಜಾಪೂರ ಇಂಟರಸಿಟಿ ಎಕ್ಸ ಪ್ರೆಸ್ | (ಪ್ರತಿದಿನ) |
57641/57642 | ಸೊಲ್ಲಾಪುರ < - > ಗದಗ ಪ್ಯಾಸೆಂಜರ | (ಪ್ರತಿದಿನ) |
56903/56904 | ಧಾರವಾಡ < - > ಸೊಲ್ಲಾಪುರ ಪ್ಯಾಸೆಂಜರ | (ಪ್ರತಿದಿನ) |
56905/56906 | ಸೊಲ್ಲಾಪುರ < - > ಹುಬ್ಬಳ್ಳಿ ಪ್ಯಾಸೆಂಜರ | (ಪ್ರತಿದಿನ) |
57685/57686 | ಸೊಲ್ಲಾಪುರ < - > ಬಿಜಾಪೂರ ಪ್ಯಾಸೆಂಜರ | (ಪ್ರತಿದಿನ) |
57133/57134 | ಬಿಜಾಪೂರ < - > ರಾಯಚೂರ ಪ್ಯಾಸೆಂಜರ ( ವ್ಹಾಯಾ ಸೊಲ್ಲಾಪುರ, ಗುಲಬರ್ಗಾ ) | (ಪ್ರತಿದಿನ) |
51029/51030 | ಮುಂಬಯಿ ಸಿ ಎಸ್ ಟಿ < - > ಬಿಜಾಪೂರ ಪಾಸ್ಟ ಪ್ಯಾಸೆಂಜರ ( ವ್ಹಾಯಾ ಸೊಲ್ಲಾಪುರ, ಪುಣೆ) | (ವಾರದಲ್ಲಿ ನಾಲ್ಕು ದಿನ) |
57129/57130 | ಬಿಜಾಪೂರ < - > ಬೊಳರಮ್ (ಹೈದರಾಬಾದ್) ಪ್ಯಾಸೆಂಜರ ( ವ್ಹಾಯಾ ಸೊಲ್ಲಾಪುರ, ಗುಲಬರ್ಗಾ , ವಾಡಿ) | (ಪ್ರತಿದಿನ) |
ವಿಮಾನ ನಿಲ್ದಾಣ
ವಿಜಾಪುರ ವಿಮಾನ ನಿಲ್ದಾಣವು ಪಟ್ಟಣದಿಂದ ೫ಕಿ.ಮೀ (ಮಧಬಾವಿ-ಭುರಣಾಪೂರ ಗ್ರಾಮದ ಹತ್ತಿರ) ಇದೆ.ಇದಕ್ಕಾಗಿ ರಾಜ್ಯ ಸರಕಾರವು ೭೨೫ ಎಕರೆ ಭೂಮಿಯನ್ನು ಖರೀದಿಸಿದೆ.
ಬಂದರು
ರಾಷ್ಟ್ರೀಯ ಹೆದ್ದಾರಿಗಳು
ನಗರದಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗುತ್ತವೆ. ಅವುಗಳೆಂದರೆ ರಾಷ್ಟ್ರೀಯ ಹೆದ್ದಾರಿ - ೧೩ ಮತ್ತು ರಾಷ್ಟ್ರೀಯ ಹೆದ್ದಾರಿ - ೨೧೮
ರಾಷ್ಟ್ರೀಯ ಹೆದ್ದಾರಿ - ೧೩ => ಸೋಲಾಪೂರ - ಬಿಜಾಪೂರ - ಇಲಕಲ್ಲ - ಹೊಸಪೇಟೆ - ಚಿತ್ರದುರ್ಗ - ಶಿವಮೊಗ್ಗ - ಮಂಗಳೂರ.
ರಾಷ್ಟ್ರೀಯ ಹೆದ್ದಾರಿ - ೨೧೮ => ಹುಬ್ಬಳ್ಳಿ - ನವಲಗುಂದ - ನರಗುಂದ - ಬಾಗಲಕೋಟ (ಗದ್ದನಕೇರಿ ಕ್ರಾಸ್) -ಬೀಳಗಿ(ಕ್ರಾಸ್) - ಬಿಜಾಪುರ - ಸಿಂದಗಿ - ಜೇವರ್ಗಿ - ಗುಲಬುರ್ಗಾ - ಹುಮನಾಬಾದ.
ರಾಜ್ಯ ಹೆದ್ದಾರಿಗಳು
ಜಿಲ್ಲೆಯಲ್ಲಿ ೫ ರಾಜ್ಯ ಹೆದ್ದಾರಿ ಇವೆ.ಅವು ಕೆಳಗಿನಂತಿವೆ,
ರಾಜ್ಯ ಹೆದ್ದಾರಿ - ೧೨ => ಬಿಜಾಪೂರ - ಅಥಣಿ - ಚಿಕ್ಕೋಡಿ - ಸಂಕೇಶ್ವರ
ರಾಜ್ಯ ಹೆದ್ದಾರಿ - ೬೫ => ಬಿಜಾಪೂರ - ಜಮಖಂಡಿ - ಮುಧೋಳ - ರಾಮದುರ್ಗ - ಸವದತ್ತಿ -ಧಾರವಾಡ
ಬಿಜಾಪೂರ ಜಿಲ್ಲೆಯಲ್ಲಿ ಸುಮಾರು ೨೦ಕ್ಕಿಂತ ಅಧಿಕ ಸೇತುವೆಗಳಿವೆ. ಸೇತುವೆಗಳನ್ನು ಮುಖ್ಯವಾಗಿ ಕೃಷ್ಣಾ , ಭೀಮಾ ಮತ್ತು ಡೋಣಿ ನದಿಗಳಿಗೆ ಮತ್ತು ಹಳ್ಳಗಳಿಗೆ ಅಡ್ಡಲಾಗಿ ಕಟ್ಟಲಾಗಿದೆ.
ಜಿಲ್ಲಾ ಕ್ರೀಡಾಂಗಣ : ಡಾ|| ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ,ವಿಜಾಪೂರ.
ಬಿಜಾಪೂರ ನಗರವು ಸೈಕ್ಲಿಸ್ಟಗಳ ಕಣಜ. ಪ್ರಮುಖವಾಗಿ ಪ್ರೇಮಲತಾ ಸುರೇಬಾನ, ಯಲಗುರೇಶ ಗಡ್ಡಿ , ಲಕ್ಕಪ್ಪ ಕುರಣಿ, ಗೀತಾಂಜಲಿ ಜ್ಯೋತೆಪ್ಪನ್ನವರ ಮತ್ತು ನೀಲಮ್ಮ ಮಲ್ಲಿಗವಾಡ ಮುಂತಾದವರು. ಇಲ್ಲಿನ ಅನೇಕ ಕ್ರೀಡಾಪಟುಗಳು ರಾಜ್ಯ , ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ್ದಾರೆ. ಬಿಜಾಪೂರ ಜಿಲ್ಲೆಯವರಾದ ಕಿರಣ ಕಟ್ಟಿಮನಿಯವರು ಕರ್ನಾಟಕ ಪ್ರೀಮಿಯರ್ ಲೀಗ್ನ ಬಿಜಾಪೂರ ಬುಲ್ಸ್ ಕ್ರಿಕೆಟ್ ತಂಡದ ಮಾಲೀಕರಾಗಿದ್ದಾರೆ.
ಬಿಜಾಪೂರ ನಗರದಲ್ಲಿ ೬ ಚಿತ್ರ ಮಂದಿರಗಳು ಇವೆ.
ಪ್ರಮುಖ ವಿದ್ಯಾಸಂಸ್ಥೆಗಳು
ವಿಶ್ವವಿದ್ಯಾಲಯಗಳು
ತಾಂತ್ರಿಕ ಮಹಾವಿದ್ಯಾಲಯಗಳು
ಪಾಲಿಟೆಕ್ನಿಕ್ ಮಹಾವಿದ್ಯಾಲಯಗಳು
ವೈದ್ಯಕೀಯ ಮಹಾವಿದ್ಯಾಲಯಗಳು
ಔಷಧ ಮಹಾವಿದ್ಯಾಲಯಗಳು
ಆರ್ಯುವೇದ ಮಹಾವಿದ್ಯಾಲಯಗಳು
ಹೋಮಿಯೋಪಥಿ ಮಹಾವಿದ್ಯಾಲಯಗಳು
ಯುನಾನಿ ಮಹಾವಿದ್ಯಾಲಯಗಳು
ದಂತ ವೈದ್ಯಕೀಯ ಮಹಾವಿದ್ಯಾಲಯಗಳು
ಶುಶ್ರೂಷಾ ಮಹಾವಿದ್ಯಾಲಯಗಳು
ವಾಣಿಜ್ಯ ಮಹಾವಿದ್ಯಾಲಯಗಳು
ಕೇಂದ್ರೀಯ ಪಠ್ಯ ಕ್ರಮದ ಮಹಾವಿದ್ಯಾಲಯಗಳು
ಕೃಷಿ ಮಹಾವಿದ್ಯಾಲಯ
ಕಾನೂನು ಮಹಾವಿದ್ಯಾಲಯಗಳು
ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನ
೧೯೨೩ರಲ್ಲಿ ೯ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನವು ಸಿದ್ದಾಂತಿ ಶಿವಶಂಕರ ಶಾಸ್ತ್ರಿಯವರ ಅಧ್ಯಕ್ಷತೆಯಲ್ಲಿ ಜರುಗಿತ್ತು.ನಂತರ ಇದೆ ವರ್ಷ ಅಖಿಲ ಭಾರತ ೭೯ನೇ ಕನ್ನಡ ಸಾಹಿತ್ಯ ಸಮ್ಮೇಳನ, ವಿಜಾಪೂರ Archived 2013-02-14 ವೇಬ್ಯಾಕ್ ಮೆಷಿನ್ ನಲ್ಲಿ. ವು ಕೊ.ಚನ್ನಬಸಪ್ಪರವರ ಅಧ್ಯಕ್ಷತೆಯಲ್ಲಿ ೯,೧೦,೧೧ ಫೆಬ್ರುವರಿ ೨೦೧೩ರಂದು ಜರುಗಿತು.
ಭಾಸ್ಕರಾಚಾರ್ಯರು ಬಿಜಾಪುರ ಜಿಲ್ಲೆಯ ಗಣಿತಜ್ಞರು.
ವಿಜಾಪುರ ಜಿಲ್ಲೆಯ ಅಧಿಕೃತ ಸರ್ಕಾರಿ ತಾಣ Archived 2019-05-14 ವೇಬ್ಯಾಕ್ ಮೆಷಿನ್ ನಲ್ಲಿ.
ವಿಜಾಪುರ ಜಿಲ್ಲೆಯ ಸಂಪೂರ್ಣ ಮಾಹಿತಿ[ಶಾಶ್ವತವಾಗಿ ಮಡಿದ ಕೊಂಡಿ]
ಬಿಜಾಪುರ ನಗರಸಭೆ, ವಿಜಾಪುರ Archived 2005-10-30 ವೇಬ್ಯಾಕ್ ಮೆಷಿನ್ ನಲ್ಲಿ.
ಬಿ ಎಲ್ ಡಿ ಇ ವಿಶ್ವವಿದ್ಯಾಲಯ, ವಿಜಾಪುರ
ಬಿ ಎಲ್ ಡಿ ಇ ಸಂಸ್ಥೆಯ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ವಿಜಾಪುರ Archived 2012-06-21 ವೇಬ್ಯಾಕ್ ಮೆಷಿನ್ ನಲ್ಲಿ.
ವಿಜಾಪುರ ಜಿಲ್ಲೆಯ ನಕಾಶೆ[ಶಾಶ್ವತವಾಗಿ ಮಡಿದ ಕೊಂಡಿ]
This article uses material from the Wikipedia ಕನ್ನಡ article ಬಿಜಾಪುರ ನಗರ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.