ಬೀದರ್: ಕರ್ನಾಟಕದ ಜಿಲ್ಲೆ

ಬೀದರ್ (ಕನ್ನಡ: ಬೀದರ, ಉರ್ದು: بیدار) ಒಂದು ಡೆಕ್ಕನ್ ಪ್ರಸ್ಥಭೂಮಿಯಲ್ಲಿರುವ, ಬೆಟ್ಟದ ತುದಿಯಲ್ಲಿರುವ ನಗರ.

ಇದು ಭಾರತದ ಕರ್ನಾಟಕ ರಾಜ್ಯದ ಪೂರ್ವಭಾಗದಲ್ಲಿದೆ. ಇದು ಬೀದರ್ ಜಿಲ್ಲೆಯ ಜಿಲ್ಲಾಕೇಂದ್ರ. ಬೀದರ್ ಜಿಲ್ಲೆ ಮಹಾರಾಷ್ಟ್ರ ಮತ್ತು ತೆಲಂಗಾಣದೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಇದು ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ ಮತ್ತು ಇದು ಬೀದರ್ ಮಹಾನಗರ ವಲಯಕ್ಕೆ ಸೇರುತ್ತದೆ. ಈ ನಗರವು ಅನೇಕ ವಾಸ್ತುಶಿಲ್ಪ, ಐತಿಹಾಸಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿರುವ ಅನೇಕ ಸ್ಥಳಗಳಿಗೆ ಹೆಸರುವಾಸಿಯಾಗಿದೆ.

ಬೀದರ್ ಜಿಲ್ಲೆ
ಬೀದರೂರು, ಬೀದರೆ.
ಜಿಲ್ಲೆ
ಬೀದರ್ ಕೋಟೆಯ ಪ್ರವೇಶದ್ವಾರ
ಬೀದರ್ ಕೋಟೆಯ ಪ್ರವೇಶದ್ವಾರ
Nickname(s): 
ಕರ್ನಾಟಕದ ಕಿರೀಟ
ಕರ್ನಾಟಕದಲ್ಲಿ ಬೀದರ್ ಇರುವ ಸ್ಥಳ
ಕರ್ನಾಟಕದಲ್ಲಿ ಬೀದರ್ ಇರುವ ಸ್ಥಳ
ದೇಶಬೀದರ್: ಉಗಮ, ಇತಿವೃತ್ತ, ಭೌಗೋಳಿಕ ವಿವರಗಳು ಭಾರತ
ರಾಜ್ಯಕರ್ನಾಟಕ
ವಿಭಾಗಬಯಲುಸೀಮೆ
ಪ್ರದೇಶಬೀದರ್
ಕೇಂದ್ರ ಕಛೇರಿಬೀದರ್
ಸರ್ಕಾರ
 • ಮಾದರಿಜಿಲ್ಲಾಧಿಕಾರಿ ಕಚೇರಿ
 • ಪಾಲಿಕೆಬೀದರ್ ಜಿಲ್ಲಾಧಿಕಾರಿ ಕಚೇರಿ
 • ಜಿಲ್ಲಾಧಿಕಾರಿಡಾ. ಪಿಸಿ ಜಾಫರ್, ಐ.ಎ.ಎಸ್
Area
 • Total೫,೪೪೮ km (೨,೧೦೩ sq mi)
 • ಕಾಡು೪೩೬ km (೧೬೮ sq mi)
Elevation
೯೧೪ m (೨,೯೯೯ ft)
Population
 (೨೦೧೧)
 • Total೧೭೦೨೦೪
 • ಶ್ರೇಣಿ೨೮೭
 • ಸಾಂದ್ರತೆ೩೧/km (೮೧/sq mi)
ಭಾಷೆ
 • ಅಧಿಕೃತಕನ್ನಡ
ಸಮಯ ವಲಯಯುಟಿಸಿ+೫:೩೦ (ಐ. ಎಸ್. ಟಿ)
ಪಿನ್
೫೭೫೪೦೧
ದೂರವಾಣಿ ಕೋಡ್೯೧೮೪೮೨
ವಾಹನ ನೋಂದಣಿಕೆ.ಎ. ೩೮
ಜಾಲತಾಣಬೀದರ್ ಮಿಂಬಲೆ ತಾಣ
ಬೀದರ್: ಉಗಮ, ಇತಿವೃತ್ತ, ಭೌಗೋಳಿಕ ವಿವರಗಳು
ಬೀದರ್ ಕೋಟೆ ವಿಹಂಗಮ ನೋಟ
ಬೀದರ್: ಉಗಮ, ಇತಿವೃತ್ತ, ಭೌಗೋಳಿಕ ವಿವರಗಳು
ಬಿದರಿ ಕಲೆ
ಬೀದರ್: ಉಗಮ, ಇತಿವೃತ್ತ, ಭೌಗೋಳಿಕ ವಿವರಗಳು
ಬೀದರ ಜಿಲ್ಲೆಯ ತಾಲೂಕು ಮತ್ತು ಹೋಬಳಿಗಳು

ಉಗಮ

ಬೀದರ್ ಎಂಬ ಹೆಸರು ಬಿದಿರುನಿಂದ ಬಂದಿದೆ ಎಂದು ನಂಬಲಾಗಿದೆ. ಹಿಂದೆ ಇದು ಇಲ್ಲಿ ಇದ್ದ ಬಿದಿರಿನ ಗೊಂಚಲುಗಳಿಗೆ ಪ್ರಖ್ಯಾತವಾಗಿತ್ತು, ಆದ್ದರಿಂದ ಇದನ್ನು ಬಿದಿರೂರು ಎಂದು ಕರೆಯಲಾಗುತಿತ್ತು ಮತ್ತು ಆಮೇಲೆ ಬಿದರೆ, ಬೀದರ್ ಎಂದು ಹೆಸರು ಬದಲಾಗಿದೆ. ಆದರೂ ಬಿದಿರು ಅಥಾವ ಬಿದಿರಿನ ಉತ್ಪನ್ನಗಳು, ಬೀದರ್ ನಗರದಲ್ಲಾಗಲಿ ಅದರ ಸುತ್ತಲಿನ ಪರಿಸರದಲ್ಲಾಗಲಿ ಇಲ್ಲ.

ದಂತಕಥೆಗಳ ಪ್ರಕಾರ ಬೀದರ್ ಗೆ ಪ್ರಾಚೀನ ಸಾಮ್ರಾಜ್ಯ ವಿದರ್ಭ ಜೊತೆ ಸಂಭಂದವಿದೆ ಎಂದು ಹೇಳುತ್ತಾರೆ. ವಿದರ್ಭ ಬಗ್ಗೆ ಪ್ರಾಚೀನ ಹಿಂದು ಗ್ರಂಥಗಳಾದ ಮಾಳವಿಕಾಗ್ನಿಮಿತ್ರ , ಮಹಾಭಾರತ, ಹರಿವಂಶ , ಭಾಗವತ ಮತ್ತು ಕೆಲವು ಇತರೆ ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ.ಈ ಎರಡು ನಗರಗಳ ಸಂಬಂಧವನ್ನು ಬೀದರ್ ಮತ್ತು ವಿದರ್ಭ ಹೆಸರಿನಲ್ಲಿ ಇರುವ ಹೋಲಿಕೆಗಳಿಂದ ಸ್ಪಷ್ಟವಾಗಿ ಕಾಣಬಹುದು. ಇದನ್ನು ಫರಿಶ್ತಾ ಬರಹದಲ್ಲಿ ಪ್ರಸ್ತಾಪಿಸಲಾಗಿದೆ.

ಇಲ್ಲಿನ ಸಾಂಪ್ರದಾಯಿಕ ಕಥೆಗಳು, ಇಲ್ಲಿ ವಿದುರ ವಾಸವಾಗಿದ್ದನೆಂದು ಹೇಳುತ್ತದೆ. ಅದ್ದರಿಂದ ಇದನ್ನು ಹಿಂದೆ ವಿದುರನಗರ ಎಂದು ಕರೆಯಲಾಗುತ್ತಿತ್ತು ಮತ್ತು ಇದು ನಳ ಮತ್ತು ದಮಯಂತಿ (ರಾಜ ಭೀಮನ ಮಗಳು ಮತ್ತು ವಿದರ್ಭದ ರಾಜ) ಭೇಟಿಯಾಗುವ ಸ್ಥಳವೂ ಆಗಿತ್ತು.

ಇತಿವೃತ್ತ

  • ಬೀದರ್ - ಕರ್ನಾಟಕ ರಾಜ್ಯದ ಉತ್ತರ ತುದಿಯಲ್ಲಿರುವ ಜಿಲ್ಲೆ. ಬೀದರ ನಗರವು ಈ ಜಿಲ್ಲೆಯ ಜಿಲ್ಲಾ ಕೇಂದ್ರವಾಗಿದೆ. ಭಾಲ್ಕಿ, ಹುಮನಾಬಾದ್, ಬೀದರ್, ಬಸವಕಲ್ಯಾಣ ಮತ್ತು ಔರಾದ ತಾಲೂಕುಗಳ ೬೨೨ ಹಳ್ಳಿಗಳು ಈ ಜಿಲ್ಲೆಯಲ್ಲಿವೆ. ಬೀದರ್ ಜಿಲ್ಲೆಯು ಸಾಂಸ್ಕೃತಿಕವಾಗಿ ಕರ್ನಾಟಕದ ಅತ್ಯಂತ ಪ್ರಮುಖ ಜಿಲ್ಲೆಗಳಲ್ಲೊಂದು. ಹಿಂದೆ ಬೀದರ್ ಜಿಲ್ಲೆಯು ಬಿಜಾಪುರದ ಬಹಮನಿ ಸುಲ್ತಾನರ ಆಳ್ವಿಕೆಯಲ್ಲಿತ್ತು.
  • ಬಹಮನಿ ಸುಲ್ತಾನರ ಆಳ್ವಿಕೆಯಲ್ಲಿ ಬೀದರ್, ಬಿಜಾಪುರ, ಗೋಲ್ಕೊಂಡ, ಗುಲ್ಬರ್ಗಾ ಮತ್ತು ಬಿರಾರ್ ಸಂಸ್ಥಾನಗಳೂ ಸೇರಿದ್ದವು ಎಂಬುದನ್ನು ಗಮನಿಸಬಹುದು. ಬೀದರ್ ಜಿಲ್ಲೆಯು ಬಸವಕಲ್ಯಾಣದಿಂದ ಉಗಮಿಸಿದ ಶರಣರ ಸಾಂಸ್ಕೃತಿಕ ಕ್ರಾಂತಿಯನ್ನೂ ಕಂಡಿದೆ. ಬಸವಕಲ್ಯಾಣದಲ್ಲಿ ಜನಿಸಿದ ಶೈವ ಸಂಸ್ಕೃತಿಯು ವಿಶ್ವಾದ್ಯಂತ ಪಸರಿಸಿ, ನಮ್ಮ ರಾಜ್ಯಕ್ಕೆ ಈಗಿರುವ ವಿಶೇಷ ಮಹತ್ವವನ್ನು ತಂದಿದೆ.
  • ಬೀದರ್ ನಗರದಲ್ಲಿರುವ ವಾಯುಪಡೆ ತರಬೇತಿ ಕೇಂದ್ರವು ಆಗಸದಲ್ಲಿ ತ್ರಿವರ್ಣ ಚಿಮ್ಮುತ್ತಾ ವಿವಿಧ ಕಸರತ್ತು ಪ್ರದರ್ಶಿಸುವ ಸೂರ್ಯಕಿರಣ ವೈಮಾನಿಕ ತಂಡದಿಂದ ಪ್ರಸಿದ್ಧವಾಗಿದೆ. ಪ್ರಸ್ತುತ ಇಲ್ಲಿ ಬ್ರಿಟನ್ನಿನ ಹಾಕ್ ವಿಮಾನಗಳ ಪ್ರಾಯೋಗಿಕ ತರಬೇತಿ ನಡೆದಿದೆ. ಜಿಲ್ಲೆಯ ಭಾಲ್ಕಿ ಪಟ್ಟಣವು ದಲಿತೋದ್ದಾರ ಹಾಗೂ ಕನ್ನಡಕ್ಕಾಗಿ ಅಪಾರ ಸೇವೆ ಸಲ್ಲಿಸಿದ ಶತಾಯುಷಿ ಡಾ.ಚೆನ್ನಬಸವ ಪಟ್ಟದ್ದೇವರಿಂದಾಗಿ ಪ್ರಖ್ಯಾತವಾಗಿದೆ.

ಭೌಗೋಳಿಕ ವಿವರಗಳು

  • ಬೀದರ್ ನಗರ ಸುಮಾರು 615 ಮೀಟರ್ (2017 ಅಡಿ) ಒಂದು ಸರಾಸರಿ ಉನ್ನತಿಯನ್ನು ಹೊಂದಿದೆ.ಬೀದರ್ ನಗರದ ಹಳೆಯ ಹೆಸರು ’ಮೊಹಮ್ಮದಾಬಾದ್’. ಬೀದರ್ ಜಿಲ್ಲೆಯಾದ್ಯಂತ ಸರಾಸರಿ ವರ್ಷ ಪೂರ್ತಿ ಇರುವ ತನ್ನ ಬಿಗಿಯಾದ ಹಾಗೂ ಬಲವಾದ ಹವಾಮಾನದಿಂದ ಪ್ರಾಯೋಗಿಕವಾಗಿಯೂ, ಆಕರ್ಷಕವಾಗಿಯೂ ಮನೋಹರ ನಗರವೆಂದು ಪ್ರಸಿದ್ಧಿಯಾಗಿದೆ.
  • ಏಪ್ರಿಲ್ ಮತ್ತು ಮೇ ಬೇಸಿಗೆ ತಿಂಗಳುಗಳಾದರೂ ಕೂಡ ಈ ಬಿಸಿ ಹವಾಮಾನದ ಅವಧಿಯಲ್ಲಿ, ಶಾಖ ಹೆಚ್ಚಾದಾಗ ಹಠಾತ್ತಾಗಿ ಸುರಿಯುವ ಅಬ್ಬರದ ವರ್ಷಧಾರೆಯಿಂದ ಬಿಸಿಯ ತಾಪ ಕಡಿಮೆಯಾಗಿ ಬಿಡುತ್ತದೆ. ಜೂನ್ ತಿಂಗಳ ಆರಭದಲ್ಲೇ ನೈಋತ್ಯ ಮುಂಗಾರು ತನ್ನ ಪೂರ್ಣ ಮನೋಹರತೆಯೊಂದಿಗೂ ಮತ್ತು ತಂಪಾದ ಹವೆಯೊಂದಿಗೂ ಹವಾಮಾನವನ್ನು ಜೊತೆ ಹೊಂದಿಸಿಕೊಂಡು ಜಿಲ್ಲೆಗೆ ತನ್ನ ಎಂದಿನ ಬಿಗಿಯಾದ ಆಹ್ಲಾದಕರವಾದ ಹವಾಮಾನದ ವೈಭವವನ್ನು ಮರಳಿ ಹೊಂದಿಸಿ ಬಿಡುತ್ತದೆ.
  • ಇಲ್ಲಿ ಶೀತ ಹವಾಮಾನ ಎಂದಿಗೂ ಅತಿ ತಂಪಾಗಿ ಇರುವುದಿಲ್ಲ ಮತ್ತು ಮಳೆಯೂ ಎಂದಿಗೂ ಅತಿಯಾಗಿರುವುದಿಲ್ಲ. ಆದರೆ ಅದರಲ್ಲಿರುವ ವಿಪರೀತ ಬದಲಾವಣೆಗಳ ಲಕ್ಷಣವೇ ಜಲಕ್ಷಾಮಕ್ಕೂ ಮತ್ತು ದೇಹಾಲಸ್ಯಕ್ಕೂ ಕಾರಣವಾಗಿದೆ. ಬೀದರ್ ಜಿಲ್ಲೆಯ ಒಂದು ಮುಖ್ಯವಾದ ಮೋಡಿ ಯ ಅಂಶವೆಂದರೆ, ಜಿಲ್ಲೆಯ ಪ್ರತಿಯೊಂದು ಹಳ್ಳಿಯಲ್ಲಿಯೂ ಬೆಚ್ಚಿ ಬೀಳಿಸುವಂತಹ ಇತಿಹಾಸದ ಸ್ಮಾರಕಗಳು, ದಂತಕಥೆಗಳು, ಸುಂದರವಾದ ರಾಜಕುಮಾರಿಯರ ಪ್ರೇಮ ಕಥೆಯಗಳು, ಮರೆತು ಹೋದ ದೀರ್ಘ ಕದನಗಳ ವಿವರಗಳು, ಹಗೆತನದ ಕಥೆಗಳು ಮತ್ತು ಮಿಲಿಟರಿ ಸಾಹಸ ಗಳು ತುಂಬಿರುವುದು. ಮಧ್ಯಯುಗದ ಹಿಂದೂ ಧರ್ಮದ ಅಡಿಪಾಯವನ್ನು ಮತ್ತು ಅಸ್ತಿತ್ವವನ್ನು ನಡುಗಿಸಿದ ಸಾಮಾಜಿಕ ಸುಧಾರಣಾ ಚಳುವಳಿಗಳಿಗಳು ಕೂಡ ಬೀದರ್ ಜಿಲ್ಲೆಯ ಮುಖ್ಯ ಆಕರ್ಷಣೆಗಳಲ್ಲೊಂದು.
  • ಬೀದರ್ ಜಿಲ್ಲೆಯ ಇಂದಿನ ಒಳಹರವಿನ ಒಟ್ಟು ಭೂಮಿಯು 5448 ಚದರ ಕಿಲೋಮೀಟರ್ ನಷ್ಟು ವಿಸ್ತಾರದಲ್ಲಿ 17 O 35 !! ಮತ್ತು 18 o 25 !! ಉತ್ತರ ಅಕ್ಷಾಂಶದಲ್ಲಿ ಮತ್ತು 760 42 !! ಮತ್ತು 770 39! ಪೂರ್ವ ರೇಖಾಂಶದಲ್ಲಿ, ಆಂಧ್ರಪ್ರದೇಶದ ನಿಜಾಮಾಬಾದ್ ಮತ್ತು ಮೇಡಕ್ ಜಿಲ್ಲೆಗಳೊಂದಿಗೂ ಪಶ್ಚಿಮಕ್ಕೆ ಮಹಾರಾಷ್ಟ್ರದ ನಾಂದೇಡ್ ಮತ್ತು ಉಸ್ಮಾನಾಬಾದ್ ಜಿಲ್ಲೆಗಳೊಂದಿಗೂ ಹೊಂದಿಕೊಂಡಿದೆ. ದಕ್ಷಿಣದಲ್ಲಿ ಕರ್ನಾಟಕದ ಗುಲ್ಬರ್ಗಾ ಜಿಲ್ಲೆಯು ನೆಲೆಗೊಂಡಿದೆ.
  • ಡೆಕ್ಕನ್ ಇತಿಹಾಸದಲ್ಲಿ ಹಿಂದಿನ ಸುಪ್ರಸಿಧ್ಧ ಸ್ಥಾನವನ್ನು ಬೀದರ್ ಹೊಂದಿತ್ತು. ಆದರೆ ಪ್ರಸ್ತುತದಲ್ಲಿ ಇದು ಶತಮಾನಗಳ ನಿರ್ಲಕ್ಷ್ಯದ ಮತ್ತು ನಾಶವಾದ ಚಿತ್ರಣವನ್ನು ಒದಗಿಸುತ್ತದೆ. ಭೌಗೋಳಿಕವಾಗಿ ಬೀದರ್ ಜಿಲ್ಲೆಯು ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ೧೭.೯° ಉತ್ತರ ಮತ್ತು ೭೭.೫೫° ಪೂರ್ವದಲ್ಲಿದೆ. ಇದು ದಖನ್ ಪ್ರಸ್ಥಭೂಮಿಯ ಒಂದು ಭಾಗ. ಹೆಚ್ಚು ಬೆಟ್ಟಗುಡ್ಡಗಳಿಲ್ಲದೆ ವಿಶಾಲ ಮಟ್ಟಸಪ್ರದೇಶಗಳಿಂದ ಕೂಡಿದೆ. ಸಮುದ್ರಮಟ್ಟದಿಂದ ೬೧೪ ಮೀಟರು ಎತ್ತರದಲ್ಲಿರುವ ಈ ಜಿಲ್ಲೆಯ ಹವೆ ಹಿತಕರವಾಗಿದೆ.
  • ಜಿಲ್ಲೆಯ ವಾರ್ಷಿಕ ಸರಾಸರಿ ಮಳೆ ೯೦೭.೫ ಮಿಮೀ. ಔರಾದ ಹಾಗೂ ಭಾಲ್ಕಿಗಳು ಕಪ್ಪು ಮಣ್ಣಿನ ನೆಲ ಹೊಂದಿವೆ. ಈ ಜಿಲ್ಲೆಯ ಯಾವುದೇ ಭಾಗದಲ್ಲೂ ಖನಿಜ ನಿಕ್ಷೇಪಗಳಿಲ್ಲ. ಮಾಂಜರಾ ನದಿಯು ಈ ಜಿಲ್ಲೆಯ ಪ್ರಮುಖ ನದಿ. ಗೋದಾವರಿ ನದಿಯ ಉಪನದಿಯಾಗಿರುವ ಈ ನದಿ ೯೭ ಕಿಲೋಮೀಟರು ಉದ್ದವಿದ್ದು ಜಿಲ್ಲೆಯ ಮಧ್ಯದಲ್ಲಿ ಪೂರ್ವಾಭಿಮುಖವಾಗಿ ಹರಿದು ಆಂಧ್ರದ ಗಡಿಯನ್ನು ಪ್ರವೇಶಿಸುತ್ತದೆ.
  • ಕಾರಂಜಾ ನದಿಯು ಮತ್ತೊಂದು ಪ್ರಮುಖ ನದಿ. ಇದು ತೆಲಂಗಾಣಾದ ಕೊಹಿರ್ ಪ್ರದೇಶದಲ್ಲಿ ಹುಟ್ಟಿ ಬೀದರ್ ತಾಲುಕಿನಲ್ಲಿ ಹರಿದು, ಭಾಲ್ಕಿಯಲ್ಲಿ ಇದು ಮಾಂಜರಾ ನದಿಯನ್ನು ಸೇರುತ್ತದೆ. ಬಸವಕಲ್ಯಾಣ ತಾಲೂಕಿನಲ್ಲಿ ಹುಟ್ಟುವ ಮುಲ್ಲಾಮಾರಿ ನದಿಯು ಗುಲ್ಬರ್ಗಾವನ್ನು ಪ್ರವೇಶಿಸುತ್ತದೆ. ಚುಳಕಿ, ಗಂಡೋರಿ, ನಗರವಾಲಾ, ಹುಡಗಿ ಹಾಗೂ ಹಳ್ಳಿಖೇಡ ನಾಲಾ ಇವುಗಳು ಸಣ್ಣ ಹೊಳೆಗಳು.

ಚರಿತ್ರೆ

  • ಚಾರಿತ್ರಿಕವಾಗಿ, ಬೀದರ್ ಜಿಲ್ಲೆ ಪ್ರಾಮುಖ್ಯತೆಗೆ ಬಂದದ್ದು ಬಸವಣ್ಣನವರ ಕಾಲದಲ್ಲಿ ಮತ್ತು ಬಹಮನಿ ಸುಲ್ತಾನರ ಕಾಲದಲ್ಲಿ. ಈ ಜಿಲ್ಲೆಯ ಕೆಲಭಾಗಗಳಲ್ಲಿ ನವಶಿಲಾಯುಗದ ಕಾಲದ ಅವಶೇಷಗಳು ಸಿಕ್ಕಿವೆ. ರಾಷ್ಟ್ರಕೂಟರು, ದೇವಗಿರಿಯ ಯಾದವರು, ಕಾಕತೀಯರು ಈ ಪ್ರದೇಶವನ್ನಾಳಿದ್ದಾರೆ. ಜಿಲ್ಲೆಯ ಬಸವಕಲ್ಯಾಣವು ಚಾಲುಕ್ಯರ ರಾಜಧಾನಿಯಾಗಿತ್ತು.
  • ಕ್ರಿಸ್ತಶಕ ೧೪೨೪ರಲ್ಲಿ ಬೀದರ್ ಪಟ್ಟಣವು ಬಿಜಾಪುರದ ಬಹಮನಿ ಸುಲ್ತಾನರ ರಾಜಧಾನಿಯಾಗಿ ಬರೀದ್ ಶಾಹಿ ಕಾಲದವರೆಗೆ ಮುಂದುವರಿಯಿತು. ಕ್ರಿಸ್ತಶಕ ೧೬೧೯ರಲ್ಲಿ ಈ ಪ್ರದೇಶ ಅದಿಲ್ ಶಾಹಿಗಳ ವಶವಾಯಿತು. ೧೬೫೬ರಲ್ಲಿ ಔರಂಗಜೇಬನು ಇದನ್ನು ಮೊಘಲ್ ಸಾಮ್ರಾಜ್ಯದ ತೆಕ್ಕೆಗೆ ತೆಗೆದುಕೊಂಡ. ೧೭೨೪ರಲ್ಲಿ ಇದು ನಿಜಾಮರ ವಶಕ್ಕೆ ಬಂತು. ೧೯೪೮ರಲ್ಲಿ ನಿಜಾಮನು ಹೊಸ ಭಾರತದ ಒಕ್ಕೂಟಕ್ಕೆ ಸೇರಿದನು. ೧೯೫೬ರಲ್ಲಿ ರಾಜ್ಯ ಪುನರ್ವಿಂಗಡನೆಯಾದಾಗ ಈಗಿರುವ ತಾಲೂಕುಗಳು ಕರ್ನಾಟಕದಲ್ಲಿ ವಿಲೀನಗೊಂಡವು.

ಧರ್ಮ

  • ಬೀದರ ಜಿಲ್ಲೆಯಲ್ಲಿ ಹಿಂದೂ, ಕ್ರೈಸ್ತ, ಮುಸಲ್ಮಾನ, ಜೈನ್ ಮತ್ತು ಸಿಖ್ ಎಂಬ ಐದು ಪ್ರಮುಖ ಧರ್ಮಗಳಿವೆ. ಬೀದರಿನ ಪೂರ್ವದಿಕ್ಕಿನಲ್ಲಿರುವ ದುಲ್ಹನ್ ದರ್ವಾಜದ ಮೂಲಕ ಕೋಟೆಯಿಂದ ಹೊರಬಂದು ಕೆಳಗಿಳಿಯುತ್ತಿದ್ದಂತೆ ಅಗ್ರಹಾರ ಎಂಬ ಹಳ್ಳಿ ಸಿಗುತ್ತದೆ. ಅಲ್ಲಿಂದ ಸ್ವಲ್ಪ ಮುಂದೆ ಸಾಗಿದರೆ ಎಡಬದಿ ದಿಬ್ಬದ ಮೇಲೆ ಒಂದು ಅಷ್ಟಕೋನಾಕೃತಿಯ ಚೌಖಂಡಿ ಎಂಬ ಮುಸ್ಲಿಂ ಕಟ್ಟಡವೊಂದು ಕಾಣುತ್ತದೆ.
  • ಚೌಖಂಡಿ ಎಂದರೆ ನಾಲ್ಕು ಅಂತಸ್ತುಗಳ ಕಟ್ಟಡ. ಆದರೆ ವಾಸ್ತವವಾಗಿ ಇಲ್ಲಿರುವುದು ಎರಡು ಅಂತಸ್ತುಗಳ ಕಟ್ಟಡ. ಈ ಕಟ್ಟಡದಲ್ಲಿ ಬಹಮನಿ ಸುಲ್ತಾನ ಅಹಮದ್ ಶಹಾನ ಆಹ್ವಾನದ ಮೇರೆಗೆ ಇರಾನಿನಿಂದ ಬಂದ ಇಸ್ಲಾಮೀ ಸಂತ ಹಜರತ್ ಖಲೀಲುಲ್ಲಾ ಮತ್ತವರ ಕುಟುಂಬ ವರ್ಗದವರನ್ನ ಸಮಾಧಿಗಳಿವೆ. ದಿಬ್ಬದಿಂದ ಇಳಿದುಬಂದು ಅದೇ ರಸ್ತೆಯಲ್ಲಿ ಅಂದರೆ ಅಷ್ಟೂರು ದಾರಿಯಲ್ಲಿ ಒಂದು ಕಿಲೋಮೀಟರು ಮುಂದೆ ಹೋದರೆ ನಾಲ್ಕೈದು ದರ್ಗಾಗಳ ಸಮೂಹ ಇದೆ.
  • ಇಲ್ಲಿರುವ ಒಂದು ದರ್ಗಾದಲ್ಲಿ ವಜ್ರಗಳಿಂದ ಅಲಂಕರಿಸಲ್ಪಟ್ಟ ಚಿತ್ರಗಳು ಇರುವ ಗೋರಿಯನ್ನು ನೋಡಬಹುದಾಗಿದೆ. ಬೀದರ್ ಪಟ್ಟಣಕ್ಕೆ ಉತ್ತರಭಾಗದಲ್ಲಿರುವ ಮಂಗಳಪೇಟೆಯು ಒಂದು ಕ್ರೈಸ್ತ ಕ್ಷೇತ್ರವಾಗಿದ್ದು ಪ್ರತಿವರ್ಷ ಮೇ ತಿಂಗಳಲ್ಲಿ ಇಲ್ಲಿ ದೊಡ್ಡ ಜಾತ್ರೆ ನೆರೆಯುತ್ತದೆ. ಅದೇರೀತಿ ಭಾಲ್ಕಿಯಲ್ಲಿ ಪ್ರತಿವರ್ಷ ಬಾಲಯೇಸುಜಾತ್ರೆ ನಡೆಯುವುದುಂಟು. ಬೀದರ ಜಿಲ್ಲೆಯ ಔರಾದ, ಸಂತಪುರ, ಹಲಬರ್ಗಾ, ಜಲಸಂಗ್ವಿ, ತಾಳಮರಗಿ, ಹುಲಸೂರ, ಕವಡಿಯಾಳ, ಹುಮನಾಬಾದ ಮುಂತಾದೆಡೆಗಳಲ್ಲೂ ಚರ್ಚುಗಳನ್ನು ಕಾಣಬಹುದು.
  • ನರಸಿಂಹ ಜರನಿ ಕ್ಷೇತ್ರದಲ್ಲಿ ಇರುವ ಗವಿಯಲ್ಲಿ ನಡುಮಟ್ಟದ ನೀರಿನಲ್ಲಿ ಮೂವತ್ತು ಮೀಟರ್ ನಡೆದು ಬಂದರೆ, ನರಸಿಂಹನ ದರ್ಶನ ಪಡೆಯಬಹುದು. ಬೀದರದಿಂದ ಕೆಳಕ್ಕೆ ಕಣಿವೆಯಲ್ಲಿರುವ ಝರಿಯೊಂದು ಹರಿಯುತ್ತಿದ್ದು ನಾನಕ್ ಝರಾ ಎಂಬ ಹೆಸರಿನಲ್ಲಿ ಅದು ಸಿಕ್ಕರಿಗೆ ಪವಿತ್ರ ತೀರ್ಥವೆನಿಸಿದೆ. ಇದು ಸಿಖ್ಖರ ಧರ್ಮಗುರುಗಳಾದ ಗುರುನಾನಕರು ತಮ್ಮ ಆಗಮನದಿಂದ ಪವಿತ್ರಗೊಳಿಸಿದ ಪುಣ್ಯಸ್ಥಳ.
  • ಶ್ರೀ ಮೈಲಾರ್ ಮಲ್ಲಣ್ಣ ದೇವಸ್ಥಾನ : ಬೀದರ್-ಉದ್ಗಿರ್ ರಸ್ತೆಯಲ್ಲಿ ಸುಮಾರು ೧೫ ಕಿ ಮಿ ಬೀದರ್ ನಿಂದ ಶ್ರೀ ಕ್ಷೇತ್ರ ಮೈಲಾರ್ ಅಥವಾ ಖಾನಪುರ್ ಎಂಬ ಚಿಕ್ಕ ಹಳ್ಳಿಯಲ್ಲಿ ಶ್ರೀ ಮೈಲಾರ್ ಮಲ್ಲಣ್ಣ ದೇವಸ್ಥಾನ ಇದೆ. ಈ ದೇವಸ್ಥಾನ ಇಡಿ ಉತ್ತರ ಕರ್ನಾಟಕದಲ್ಲಿ ಪ್ರಸಿದ್ದ ದೇವಸ್ಥಾನ, ಪ್ರತಿ ವರ್ಷ ಲಕ್ಷ ಲಕ್ಷ ಭಕ್ತಾದಿಗಳು ಬಂದು ಮಲ್ಲಣ್ಣ (ಶಿವನ ಉಗ್ರ ರೂಪ) ದರ್ಶನ ಪಡೆಯುತ್ತಾರೆ.
  • ಬೀದರ್ ಜಿಲ್ಲೆಯ ಇನ್ನೊಂದು ಪ್ರಮುಖ ಪಟ್ಟಣ ಹುಮ್ನಾಬಾದ್ ಇಲ್ಲಿರುವ ಮಾಣಿಕಪ್ರಭುಗಳ ಮಠ ಮತ್ತು ೧೭೨೫ರಲ್ಲಿ ನಿರ್ಮಿಸಲಾಗಿರುವ ವೀರಭದ್ರ ದೇವಸ್ಥಾನ ಮತ್ತು ಜಾತ್ರೆಗಳು ಪ್ರಮುಖವಾದುವು. ಬೀದರ್ ಜಿಲ್ಲೆಯ ಬಸವ ಕಲ್ಯಾಣ ಶರಣರ ತಪೋಭೂಮಿಯೆಂದೇ ಪ್ರಸಿದ್ಧವಾಗಿದೆ. ಬಸವಕಲ್ಯಾಣದಲ್ಲಿ ಅರಿವಿನ ಮನೆ, ಅನುಭವ ಮಂಟಪ, ಅಕ್ಕನಾಗಮ್ಮನ ಗವಿ, ಪರುಷಕಟ್ಟೆ, ಮಹಾಮನೆ, ತ್ರಿಪುರಾಂತಕ ಕೆರೆ ಮೊದಲಾಗಿ ಹಲವಾರು ಶರಣರ ಸ್ಥಳಗಳನ್ನು ಮತ್ತು ಸುಸ್ಥಿತಿಯಲ್ಲಿರುವ ಬಸವಕಲ್ಯಾಣ ಕೋಟೆಯನ್ನು ನೋಡಬಹುದಾಗಿದೆ. ಭಾಲ್ಕಿಯಲ್ಲಿ ಹಿರೇಮಠ ಸಂಸ್ಥಾನದ ಮಠ ಇದೆ.

ಕಲೆ ಮತ್ತು ಸಾಹಿತ್ಯ

ಬಿದರಿಕಲೆ ಪ್ರಪಂಚದಾದ್ಯಂತ ಖ್ಯಾತವಾಗಿರುವ ಬೀದರ್ ಕುಸುರಿ ಕಲೆ. ಈ ಕಲೆಯು ಪರ್ಶಿಯಾ ದೇಶದಿಂದ ಬಹಮನಿ ಸುಲ್ತಾನರ ಕಾಲದಲ್ಲಿ ಇಲ್ಲಿಗೆ ಬಂದು ತದನಂತರ ಹೊಸ ರೂಪವನ್ನು ಪಡೆದುಕೊಂಡಿದೆ. ಕುಶಲ ಕೆಲಸಗಾರರು ತಾಮ್ರ ಮತ್ತು ಸತುವಿನ ಧಾತುಗಳನ್ನು ಮಿಶ್ರಮಾಡಿ ಹೂಜಿ ಮುಂತಾದ ವಸ್ತುಗಳನ್ನು ತಯಾರಿಸಿ ಅವುಗಳ ಮೇಲೆ ಸಣ್ಣದಾಗಿ ಕೊರೆದು ಅದರಲ್ಲಿ ಬೆಳ್ಳಿಯ ತಂತಿಯನ್ನು ಕೂರಿಸಿ ಹೊಳಪು ಕೊಡುತ್ತಾರೆ. ಈ ಬಿದರಿ ಕಲೆಗೆ ವಿದೇಶಗಳಲ್ಲೂ ಬಲು ಬೇಡಿಕೆಯಿದೆ.

ಉಲ್ಲೇಖಗಳು

Tags:

ಬೀದರ್ ಉಗಮಬೀದರ್ ಇತಿವೃತ್ತಬೀದರ್ ಭೌಗೋಳಿಕ ವಿವರಗಳುಬೀದರ್ ಚರಿತ್ರೆಬೀದರ್ ಧರ್ಮಬೀದರ್ ಕಲೆ ಮತ್ತು ಸಾಹಿತ್ಯಬೀದರ್ ಉಲ್ಲೇಖಗಳುಬೀದರ್ಉರ್ದುಕರ್ನಾಟಕತೆಲಂಗಾಣಭಾರತಮಹಾರಾಷ್ಟ್ರ

🔥 Trending searches on Wiki ಕನ್ನಡ:

ಬಿಸಿನೀರಿನ ಚಿಲುಮೆಜಾತ್ಯತೀತತೆಸಾಲುಮರದ ತಿಮ್ಮಕ್ಕನವಿಲಗೋಣುಕನ್ನಡ ಸಂಧಿಕಾಳಿದಾಸಕರ್ನಾಟಕ ಜನಪದ ನೃತ್ಯರಾಜಧಾನಿಗಳ ಪಟ್ಟಿಅನುನಾಸಿಕ ಸಂಧಿವಿಷ್ಣುವರ್ಧನ್ (ನಟ)ಕರ್ನಾಟಕದ ಸಂಸ್ಕೃತಿಕರ್ಣಾಟ ಭಾರತ ಕಥಾಮಂಜರಿಸವರ್ಣದೀರ್ಘ ಸಂಧಿಸಾಕ್ರಟೀಸ್ಕೆ. ಎಸ್. ನಿಸಾರ್ ಅಹಮದ್ನಗರೀಕರಣಹುಣಸೂರುನುಡಿಗಟ್ಟುಹಲ್ಮಿಡಿ ಶಾಸನಝಾನ್ಸಿ ರಾಣಿ ಲಕ್ಷ್ಮೀಬಾಯಿಭಾರತದ ಪಂಚಾಯತ್ ರಾಜ್ ವ್ಯವಸ್ಥೆಜಾಗತೀಕರಣಮೈಸೂರುಮಾನವ ಸಂಪನ್ಮೂಲ ನಿರ್ವಹಣೆರಾವಣಭಾಷಾ ವಿಜ್ಞಾನಜೈನ ಧರ್ಮತ. ರಾ. ಸುಬ್ಬರಾಯಹಿಂದೂಗೋವಿಂದ ಪೈಸಾಮಾಜಿಕ ಸಮಸ್ಯೆಗಳುಆರೋಗ್ಯನ್ಯೂಟನ್‍ನ ಚಲನೆಯ ನಿಯಮಗಳುಕಾಮಸೂತ್ರಸಂಶೋಧನೆಜ್ಞಾನಪೀಠ ಪ್ರಶಸ್ತಿಎಡ್ವಿನ್ ಮೊಂಟಾಗುದಾಸ ಸಾಹಿತ್ಯಸತ್ಯ (ಕನ್ನಡ ಧಾರಾವಾಹಿ)ಕರ್ನಾಟಕದ ಮಹಾನಗರಪಾಲಿಕೆಗಳುವಡ್ಡಾರಾಧನೆಕುವೆಂಪುವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಸ್ಕೌಟ್ಸ್ ಮತ್ತು ಗೈಡ್ಸ್ಹಿಂದೂ ಕೋಡ್ ಬಿಲ್ಲೋಕಸಭೆಹಾವೇರಿಬೆಂಗಳೂರು ಗ್ರಾಮಾಂತರ (ಲೋಕ ಸಭೆ ಚುನಾವಣಾ ಕ್ಷೇತ್ರ)ಆಹಾರಮೂಲಧಾತುಗಳ ಪಟ್ಟಿಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ಬೂಜಕನ್ನಡ ವ್ಯಾಕರಣಮಾಧ್ಯಮದೇಶಗಳ ವಿಸ್ತೀರ್ಣ ಪಟ್ಟಿಫೇಸ್‌ಬುಕ್‌ವೇದವ್ಯಾಸಗರ್ಭಧಾರಣೆಭೌಗೋಳಿಕ ಲಕ್ಷಣಗಳುಇನ್ಸ್ಟಾಗ್ರಾಮ್ಕನ್ನಡ ಜಾನಪದಮಳೆಭಾರತದಲ್ಲಿನ ಚುನಾವಣೆಗಳುಜೀವನಭಗತ್ ಸಿಂಗ್ತಾಳೀಕೋಟೆಯ ಯುದ್ಧಕಾಟೇರಐಹೊಳೆಸಾಮಾಜಿಕ ಸಂಶೋಧನೆ ಅದರ ವಿಧಾನಗಳು ಮತ್ತು ತಂತ್ರಗಳುಚಿಕ್ಕಮಗಳೂರುರಕ್ತದೊತ್ತಡವ್ಯಂಜನವಿಜಯ ಕರ್ನಾಟಕಕಾರ್ಲ್ ಮಾರ್ಕ್ಸ್ಗೋತ್ರ ಮತ್ತು ಪ್ರವರಜೋಗಿ (ಚಲನಚಿತ್ರ)🡆 More