ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ.
ಸೂಚನೆ: ಈ ಲೇಖನ ಜ್ಞಾನಪೀಠ_ಪ್ರಶಸ್ತಿ ವಿಲೀನಗೊಂಡಿದೆ. (ಚರ್ಚೆ) |
ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಛ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ರಚಿಸಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಈ ಪ್ರಶಸ್ತಿಯನ್ನು ಮೇ ೨೨ ೧೯೬೧ ರಲ್ಲಿ ಸ್ಥಾಪಿಸಲಾಯಿತು. ಈ ಪ್ರಶಸ್ತಿಯನ್ನು ಪ್ರಪ್ರಥಮವಾಗಿ ೧೯೬೫ ರಲ್ಲಿ ಮಲೆಯಾಳಂ ಲೇಖಕ ಜಿ. ಶಂಕರ ಕುರುಪರಿಗೆ ಪ್ರದಾನ ಮಾಡಲಾಯಿತು. ವಿಜೇತರಿಗೆ ಪ್ರಶಸ್ತಿ ಫಲಕ, ೧೧ ಲಕ್ಷ ರೂಪಾಯಿ ನಗದು ಹಾಗು ವಾಗ್ದೇವಿಯ ಕಂಚಿನ ವಿಗ್ರಹವನ್ನು ನೀಡಿ ಗೌರವಿಸಲಾಗುವುದು.
ಜ್ಞಾನಪೀಠ ಪ್ರಶಸ್ತಿ | ||
ಪ್ರಶಸ್ತಿಯ ವಿವರ | ||
---|---|---|
ವರ್ಗ | ಸಾಹಿತ್ಯ (ವೈಯುಕ್ತಿಕ) | |
ಪ್ರಾರಂಭವಾದದ್ದು | 1961 | |
ಮೊದಲ ಪ್ರಶಸ್ತಿ | 1965 | |
ಕಡೆಯ ಪ್ರಶಸ್ತಿ | 2018 | |
ಒಟ್ಟು ಪ್ರಶಸ್ತಿಗಳು | 59 | |
ಪ್ರಶಸ್ತಿ ನೀಡುವವರು | ಭಾರತೀಯ ಜ್ಞಾನಪೀಠ | |
ವಿವರ | ಭಾರತದ ಸಾಹಿತ್ಯ ಪುರಸ್ಕಾರ | |
ಮೊದಲ ಪ್ರಶಸ್ತಿ ಪುರಸ್ಕೃತರು | ಜಿ. ಶಂಕರ ಕುರುಪ್ | |
ಕೊನೆಯ ಪ್ರಶಸ್ತಿ ಪುರಸ್ಕೃತರು | ಅಮಿತಾವ್ ಘೋಷ್ |
ಈ ಪ್ರಶಸ್ತಿಯನ್ನು ಭಾರತ ಸರಕಾರ ನೀಡುತ್ತದೆ ಎಂಬ ತಪ್ಪು ಕಲ್ಪನೆಯೂ ವ್ಯಾಪಕವಾಗಿದೆ. ವಾಸ್ತವದಲ್ಲಿ ಈ ಪ್ರಶಸ್ತಿಯನ್ನು ನೀಡುವವರು ಜ್ಞಾನ ಪೀಠ ಟ್ರಸ್ಟ್. ಟೈಮ್ಸ್ ಆಫ್ ಇಂಡಿಯಾದ ಒಡೆತನವನ್ನು ಹೊಂದಿರುವ ಜೈನ್ ಕುಟುಂಬ ಜ್ಞಾನಪೀಠ ಟ್ರಸ್ಟ್ ನ ಸ್ಥಾಪಕರು. ಈಗಲೂ ಅದರ ಸದಸ್ಯರಲ್ಲಿ ಹೆಚ್ಚಿನವರು ಈ ಕುಟುಂಬಕ್ಕೆ ಸೇರಿದ್ದಾರೆ. ೧೯೮೨ ರಿಂದ, ಈ ಪ್ರಶಸ್ತಿಯನ್ನು ಭಾರತೀಯ ಸಾಹಿತ್ಯಕ್ಕೆ ಸಮಗ್ರ ಕೊಡುಗೆಯನ್ನು ನೀಡಿದ ಲೇಖಕರಿಗೆ ಸಂದಾಯವಾಗುತ್ತಿದೆ. ಈವರೆಗೆ ಕನ್ನಡ ಸಾಹಿತಿಗಳು ಎಂಟು ಪ್ರಶಸ್ತಿಗಳನ್ನು ಪಡೆದು ಕನ್ನಡವನ್ನು ೧ನೇ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಹಿಂದಿ ಇದುವರೆಗು ೮ ಪ್ರಶಸ್ತಿಗಳನ್ನು ಪಡೆದು ಎರಡನೇ ಸ್ಥಾನದಲ್ಲಿದೆ.
This article uses material from the Wikipedia ಕನ್ನಡ article ಭಾರತೀಯ ಜ್ಞಾನಪೀಠ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.