ಭಾರತೀಯ ರಿಸರ್ವ್ ಬ್ಯಾಂಕ್ (ಆಂಗ್ಲ: Reserve Bank of India) ಭಾರತದ ಕೇಂದ್ರೀಯ ಬ್ಯಾಂಕ್.
ಇದನ್ನು ಏಪ್ರಿಲ್ ೧ ೧೯೩೫ ರಂದು ಸ್ಥಾಪಿಸಲಾಯಿತು.
ಪ್ರಧಾನ ಕಚೇರಿ | ಮುಂಬೈ, ಮಹಾರಾಷ್ಟ್ರ, ಭಾರತ |
---|---|
ಅಕ್ಷಾಂಶ ರೇಖಾಂಶ | 18°55′58″N 72°50′13″E / 18.932679°N 72.836933°E |
ಸ್ಥಾಪಿಸಲಾಯಿತು | 1 ಏಪ್ರಿಲ್ 1935 |
ಮಾಲೀಕತ್ವ | ೧೦೦% ಸರಕಾರಿ ಮಾಲಿಕತ್ವ |
ಗವರ್ನರ್ | ಶಕ್ತಿಕಾಂತ್ ದಾಸ್ |
ಕೇಂದ್ರ ಬ್ಯಾಂಕ್ | ಭಾರತ |
ಚಲಾವಣೆಯ ನಾಣ್ಯ | ಭಾರತದ ರೂಪಾಯಿ (₹) |
ಮೀಸಲು | ₹೩೬,೧೨,೬೪೧ (ಯುಎಸ್$೮೦,೨೦೦.೬೩) |
ಬ್ಯಾಂಕ್ ದರ | ೪.೦೦% |
Interest on reserves | ೩.೩೫% (ಮಾರುಕಟ್ಟೆ ನಿರ್ಧರಿಸಲಾಗಿದೆ) |
ಜಾಲತಾಣ | rbi |
ರಿಸರ್ವ ಬ್ಯಾಂಕಿನ ಕೇಂದ್ರ ಕಛೇರಿಯನ್ನು ಮೊದಲಿಗೆ ಕೊಲ್ಕತ್ತದಲ್ಲಿ ಪ್ರಾರಂಭಿಸಿದರಾದರೂ ನಂತರ ೧೯೩೭ರಲ್ಲಿ ಮುಂಬಯಿಗೆ ಬದಲಾಯಿಸಲಾಯಿತು. ೧೯೪೯ರಿಂದ ಭಾರತ ಸರ್ಕಾರವು ಇದರ ಒಡೆತನವನ್ನು ಹೊಂದಿದೆ. ಶಕ್ತಿ ಕಾಂತ್ ದಾಸ್ ಬ್ಯಾಂಕ್ನ ಹಾಲಿ ಗವರ್ನರ್ ಆಗಿ ಕಾರ್ಯನಿರ್ವಹಿಸುತ್ತಿದಾರೆ. ಇದು ೨೨ ಪ್ರಾದೇಶಿಕ ಶಾಖೆಗಳನ್ನು ಹೊಂದಿದೆ. ರಿಜರ್ವ್ ಬ್ಯಾಂಕು ದೇಶದ ಅತ್ಯುನ್ನತ ಬ್ಯಾಂಕ್ ಆಗಿದೆ.
ಮೊದಲ ವಿಶ್ವಯುದ್ಧದ ನಂತರದ ಆರ್ಥಿಕ ತೊಂದರೆಗಳಿಗೆ ಸ್ಪಂದಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವನ್ನು 1 ಏಪ್ರಿಲ್ 1935 ರಂದು ಸ್ಥಾಪಿಸಲಾಯಿತು. ಈ ವಿಧಾನಸೂಚಿಗಳನ್ನು ಆರ್ಬಿಐ ಕಾಯ್ದೆ 1934 ಎಂದು ಅಂಗೀಕರಿಸಿದ ಕೇಂದ್ರ ವಿಧಾನಸಭೆಯು ಮಂಡಿಸಿದ ಮಾರ್ಗಸೂಚಿಗಳ ಆಧಾರದ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ಅನ್ನು ಪರಿಕಲ್ಪನೆ ಮಾಡಲಾಯಿತು. ಡಾ. ಬಿ. ಆರ್. ಅಂಬೇಡ್ಕರ್ ಅವರು "ರೂಪಾಯಿ ಸಮಸ್ಯೆ - ಅದರ ಮೂಲ ಮತ್ತು ಅದರ ಪರಿಹಾರ" ಎಂಬ ಶೀರ್ಷಿಕೆಯ ಪುಸ್ತಕದಲ್ಲಿ ಪ್ರಸ್ತುತಪಡಿಸಿದ ಮಾರ್ಗಸೂಚಿಗಳು, ಕಾರ್ಯ ಶೈಲಿ ಮತ್ತು ದೃಷ್ಟಿಕೋನಗಳ ಪ್ರಕಾರ ಆರ್ಬಿಐ ಅನ್ನು ಪರಿಕಲ್ಪನೆ ಮಾಡಲಾಗಿದೆ ಮತ್ತು ಹಿಲ್ಟನ್ ಯಂಗ್ ಆಯೋಗಕ್ಕೆ ಪ್ರಸ್ತುತಪಡಿಸಲಾಯಿತು. ಹಿಲ್ಟನ್-ಯಂಗ್ ಕಮಿಷನ್ ಎಂದೂ ಕರೆಯಲ್ಪಡುವ 1926 ರ ರಾಯಲ್ ಕಮಿಷನ್ ಆನ್ ಇಂಡಿಯನ್ ಕರೆನ್ಸಿ ಅಂಡ್ ಫೈನಾನ್ಸ್ನ ಶಿಫಾರಸುಗಳ ಆಧಾರದ ಮೇಲೆ ಬ್ಯಾಂಕ್ ಅನ್ನು ಸ್ಥಾಪಿಸಲಾಯಿತು. ಆರ್ಬಿಐನ ಮುದ್ರೆಯ ಮೂಲ ಆಯ್ಕೆ ಈಸ್ಟ್ ಇಂಡಿಯಾ ಕಂಪನಿ ಡಬಲ್ ಮೊಹೂರ್, ಲಯನ್ ಮತ್ತು ಪಾಮ್ ಟ್ರೀನ ರೇಖಾಚಿತ್ರದೊಂದಿಗೆ. ಆದಾಗ್ಯೂ, ಸಿಂಹವನ್ನು ಭಾರತದ ರಾಷ್ಟ್ರೀಯ ಪ್ರಾಣಿಯಾದ ಹುಲಿಯೊಂದಿಗೆ ಬದಲಾಯಿಸಲು ನಿರ್ಧರಿಸಲಾಯಿತು. ಆರ್ಬಿಐನ ಮುನ್ನುಡಿ ಬ್ಯಾಂಕ್ ನೋಟುಗಳ ಸಮಸ್ಯೆಯನ್ನು ನಿಯಂತ್ರಿಸಲು, ಭಾರತದಲ್ಲಿ ವಿತ್ತೀಯ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಮೀಸಲುಗಳನ್ನು ಇಟ್ಟುಕೊಳ್ಳಲು ಮತ್ತು ಸಾಮಾನ್ಯವಾಗಿ ದೇಶದ ಹಿತದೃಷ್ಟಿಯಿಂದ ಕರೆನ್ಸಿ ಮತ್ತು ಸಾಲ ವ್ಯವಸ್ಥೆಯನ್ನು ನಿರ್ವಹಿಸಲು ಅದರ ಮೂಲ ಕಾರ್ಯಗಳನ್ನು ವಿವರಿಸುತ್ತದೆ. ರಿಜರ್ವ್ ಬ್ಯಾಂಕನ್ನು ೧೯೩೪ರ ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ ಯನ್ವಯ ಒಂದು ಖಾಸಗಿ ಷೇರುದಾರರ ಬ್ಯಾಂಕ್ ಆಗಿ ೧೯೩೫ ರ ಏಪ್ರಿಲ್ ೧ ರಂದು ಸ್ಥಾಪಿಸಲಾಯಿತು. ಸ್ವಾತಂತ್ಯ ನಂತರ ಸರ್ಕಾರಿ ಸ್ವಾಮ್ಯದ ಕೇಂದ್ರ ಬ್ಯಾಂಕ್ ಒಂದರ ಅವಶ್ಯಕತೆ ಬಿತ್ತಾದ್ದರಿಂದ ಸರ್ಕಾರ ರಿಜರ್ವ್ ಬ್ಯಾಂಕನ್ನು 1949 ರ ಜನವರಿ 1 ರಂದು ರಾಷ್ಟ್ರೀಕರಿಸಿ ಕೇಂದ್ರ ಬ್ಯಾಂಕನ್ನಾಗಿ ಪರಿವರ್ತಿಸಿತು. ಈ ಬ್ಯಾಂಕು ದೇಶದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಗ್ರಸ್ಥಾನ ಪಡೆದಿದ್ದು ಎಲ್ಲಾ ಬ್ಯಾಂಕ್ ಗಳು ಮತ್ತು ಹಣಕಾಸಿನ ಸಂಸ್ಥೆಗಳ ನೇರ ನಿಯಂತ್ರಣ ಸಾಧಿಸುತ್ತಿದೆ. ಇದು ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದೆ.
ರಿಜರ್ವ್ ಬ್ಯಾಂಕು ರೂ. ೫ ಕೋಟಿ ಪಾವತಿಯಾದ ಬಂಡಾವಾಳ ಹೊಂದಿದೆ. ಈ ಬಂಡವಾಳವನ್ನು ಪೂರ್ತಿ ಪಾವತಿಯಾದ ರೂ. ೧೦೦ ರ ಮುಖಬೆಲೆಯ ೫ ಲಕ್ಷ ಷೇರುಗಳನ್ನಾಗಿ ವಿಭಜಿಸಲಾಗಿದೆ. ಎಲ್ಲಾ ಷೇರುಗಳನ್ನು ಕೇಂದ್ರ ಸರ್ಕಾರವೇ ಹೊಂದಿದೆ.
ಭಾರತದ ರಿಜರ್ವ್ ಬ್ಯಾಂಕು ದೇಶದ ಕೇಂದ್ರ ಬ್ಯಾಂಕ್ ಆಗಿರುವುದರಿಂದ ಅದು ಇತರ ದೇಶಗಳ ಕೇಂದ್ರ ಬ್ಯಾಂಕುಗಳು ನಿರ್ವಹಿಸುವ ಪ್ರಾಥಮಿಕ ಮತ್ತು ಸಾಂಪ್ರದಾಯ ಕಾರ್ಯಗಳನ್ನು ನಿರ್ವಹಿಸುತ್ತದೆ. ಈ ಸಾಮಾನ್ಯ ಕಾರ್ಯಗಳ ಜೊತೆಗೆ ಅದು ಕೆಲವು ಅಭಿವೃದ್ಧಿ ಪ್ರಧಾನ ಕಾರ್ಯಗಳಲ್ಲೂ ಪಾಲ್ಗೊಳ್ಳುತ್ತದೆ. ಆದ್ದರಿಂದ ರಿಜರ್ವ್ ಬ್ಯಾಂಕ್ ನ ಕಾರ್ಯಗಳನ್ನು ಒಟ್ಟಾರೆಯಾಗಿ
ರಿಜರ್ವ್ ಬ್ಯಾಂಕ್ ನಿರ್ವಹಿಸುತ್ತಿರುವ ಸಾಂಪ್ರದಾಯಿಕ ಕಾರ್ಯಗಳು ಈ ಕೆಳಗಿನಂತಿವೆ.
ರಿಜರ್ವ್ ಬ್ಯಾಂಕ್ ದೇಶದಲ್ಲಿ ನೋಟುಗಳನ್ನು ಮುದ್ರಿಸಿ ಚಲಾವಣೆಗೆ ತರುವ ಪರಮಾಧಿಕಾರ ಹೊಂದಿದೆ. ಒಂದು ರೂಪಾಯಿಯನ್ನು ಹೊರತುಪಡಿಸಿ ಎರಡರಿಂದ ಎರಡು ಸಾವಿರದ ಮುಖಬೆಲೆಯ ನೋಟುಗಳನ್ನು ಮುದ್ರಿಸಿ ಚಲಾವಣೆಗೆ ತರುತ್ತದೆ. ನಾಣ್ಯಗಳು ಮತ್ತು ಒಂದು ರೂಪಾಯಿ ನೋಟನ್ನು ಕೇಂದ್ರದ ಹಣಕಾಸು ಸಚಿವಾಲಯ ಮುದ್ರಿಸುತ್ತದೆ.
ರಿಸರ್ವ್ ಬ್ಯಾಂಕು ಸರ್ಕಾರದ ಬ್ಯಾಂಕ್ ಆಗಿ, ಪ್ರತಿನಿಧಿಯಾಗಿ ಮತ್ತು ಸಲಹೆಗಾರನಾಗಿ ಕೆಲಸ ಮಾಡುತ್ತಿದೆ. ಸರ್ಕಾರದ ಸಲಹೆಗಾರನಾಗಿ ರಿಜರ್ವ್ ಬ್ಯಾಂಕು ಎಲ್ಲಾ ಹಣಕಾಸಿನ ವಿಚಾರಗಳ ಮೇಲೆ ಸರ್ಕಾರಕ್ಕೆ ಸಲಹೆ ನೀಡುತ್ತದೆ.
ರಿಸರ್ವ್ ಬ್ಯಾಂಕು ಬ್ಯಾಂಕುಗಳ ಬ್ಯಾಂಕ್ ಆಗಿ ಕೆಲಸ ಮಾಡುತ್ತಿದೆ. ೧೯೪೯ ರ ಬ್ಯಾಂಕಿಂಗ್ ರೆಗ್ಯುಲೇಷನ್ ಕಾಯ್ದೆಯ ಪ್ರಕಾರ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕೇಂದ್ರ ಬ್ಯಾಂಕ್ ನೊಡನೆ ತಮ್ನ್ಮ ಠೇವಣಿಗಳ ಒಂದಂಶವನ್ನು ಕಾಯ್ದಿರಿಸಿದ ಹಣವಾಗಿ ಇಟ್ಟಿರಬೇಕು.
ಪ್ರಮಾಣಾತ್ಮಕ ಮತ್ತು ಗುಣಾತ್ಮಕ ನಿಯಂತ್ರಣಗಳನ್ನು ರಿಜರ್ವ್ ಬ್ಯಾಂಕು ಸಾಲ ಮನ್ನಾ ಮಾಡಲು ಉಪಯೋಗಿಸುತ್ತದೆ.
ರಿಜರ್ವ್ ಬ್ಯಾಂಕು ಭಾರತದ ಹಣದ ಮಾರುಕಟ್ಟೆಯ ನೇತಾರನಾಗಿದೆ. ಅದು ಹಣದ ಮಾರುಕಟ್ಟೆಯ ವಿವಿಧ ಅಂಗಾಂಗಗಳಾದ ಬ್ಯಾಂಕ್ ಗಳು ಮತ್ತು ಹಣಕಾಸಿನ ಸಂಸ್ಥೆಗಳನ್ನುನಿಯಂತ್ರಿಸುವ ಪೂರ್ಣ ಅಧಿಕಾರ ಹೊಂದಿದೆ.
ರಿಜರ್ವ್ ಬ್ಯಾಂಕ್ ಅಂತರರಾಷ್ಟ್ರೀಯ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕ ಹೊಂದಿರುತ್ತದೆ.
ರಿಜರ್ವ್ ಬ್ಯಾಂಕು ವಾಣಿಜ್ಯ ಬ್ಯಾಂಕ್ ಗಳಿಗೆ ಕಟ್ಟ ಕಡೆಯ ಸಾಲದಾತನಾಗಿ ಕಾರ್ಯನಿರ್ವಹಿಸುತ್ತದೆ.
ರಿಜರ್ವ್ ಬ್ಯಾಂಕು ವಾಣಿಜ್ಯ ಬ್ಯಾಂಕ್ ಗಳಿಗೆ ತಿರುವೆ ಮನೆಯಾಗಿ ಕಾರ್ಯನಿರ್ವಹಿಸುತ್ತದೆ.
ಅಭಿವೃದ್ಧಿ ಕಾರ್ಯಗಳು ಕೆಳಗಿನಂತಿವೆ
ರಿಸರ್ವ್ ಬ್ಯಾಂಕು ಕೃಷಿ ಕ್ಷೇತ್ರಕ್ಕೆ ಹಣಕಾಸನ್ನು ಒದಗಿಸುವುದಕ್ಕಾಗಿ ಒಂದು ಬೇರೆಯೇ ಆದ ಕೃಷಿ ವಿಭಾಗವನ್ನು ಹೊಂದಿದೆ. ನಬಾರ್ಡ್ ಬ್ಯಾಂಕು, ಗ್ರಾಮೀಣಾಭಿವೃದ್ಧಿ ಬ್ಯಾಂಕು ಮತ್ತು ರಾಜ್ಯ ಸರ್ಕಾರಿ ಬ್ಯಾಂಕುಗಳ ಮೂಲಕ ಪರೋಕ್ಷವಾಗಿ ಹಣಕಾಸು ಪೂರೈಸುತ್ತಿದೆ.
ರಿಜರ್ವ್ ಬ್ಯಾಂಕು ಕೈಗಾರಿಕಾ ಅಭಿವೃದ್ಧಿಯಲ್ಲೂ ಸಹ ವಿಶೇಷ ಆಸಕ್ತಿ ವಹಿಸಿದೆ. ಕೈಗಾರಿಕಾ ಹಣಕಾಸು ಸಂಸ್ಥೆಗಳಾದ ಇಂಡಸ್ಟ್ರಿಯಲ್ ಫೈನಾನ್ಸ್ ಕಾರ್ಪೊರೇಷನ್, ಸ್ಟೇಟ್ ಫೈನಾನ್ಸ್ ಕಾರ್ಪೊರೇಷನ್, ಇಂಡಸ್ಟ್ರಿಯಲ್ ಬ್ಯಾಂಕ್ ಆಫ್ ಇಂಡಿಯಾ ಮುಂತಾದವು.
ಇತರ ಕಾರ್ಯಗಳು ಈ ಕೆಳಗಿನಂತಿವೆ
ರಿಜರ್ವ್ ಬ್ಯಾಂಕು ಆರ್ಥಿಕ ವ್ಯವಸ್ಥೆಯ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅಂಕಿ ಅಂಶಗಳನ್ನು ಸಂಗ್ರಹಿಸಿ ನಿಯತಕಾಲಿಕೆಗಳನ್ನು ಪ್ರಕಟಿಸುತ್ತಿದೆ.
ಬ್ಯಾಂಕಿಂಗ್ ಸಂಸ್ಥೆಗಳ ನೌಕರರಿಗೆ ತರಬೇತಿ ನೀಡುತ್ತದೆ. ರಿಜರ್ವ್ ಬ್ಯಾಂಕು ದೇಶದ ಕೇಂದ್ರದ ಬ್ಯಾಂಕಾಗಿ ಸಾಲ ನೀಡಿಕೆ, ಕೃಷಿ, ಕೈಗಾರಿಕಾ ಮುಂತಾದ ಕ್ಷೇತ್ರಗಳ ಸಮಸ್ಯೆಗಳ ಅಧ್ಯಯನ ನಡೆಸಿ ಈ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮಗಳನ್ನು ಸೂಚಿಸುತ್ತದೆ. ಹೀಗೆ ರಿಜರ್ವ್ ಬ್ಯಾಂಕು ದೇಶದ ಕೇಂದ್ರ ಬ್ಯಾಂಕಾಗಿ ಹಣಕಾಸು ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಹತ್ವದ ಸ್ಥಾನ ಪಡೆದಿದೆ. ಪ್ರಸ್ತುತ ಹಣಕಾಸಿನ ಸಚಿವರಾಗಿ ನಿರ್ಮಲಾ ಸೀತಾರಾಮನ್ ಕಾರ್ಯನಿರ್ವಹಿಸುತ್ತಿದ್ದಾರೆ.
ಕೇಂದ್ರ ಬ್ಯಾಂಕು ಅನುಸರಿಸುವ ನೀತಿಗೆ "ಕೇಂದ್ರ ಬ್ಯಾಂಕಿನ ನೀತಿ" ಹಣಕಾಸಿನ ನೀತಿ ಎಂದು ಕರೆಯುತ್ತಾರೆ. ಇನ್ನೂ ವಿವರವಾಗಿ ಅರ್ಥೈಸಬೇಕೆಂದರೆ ಚಲಾವಣೆಯಲ್ಲಿ ಇರುವ ಹಣದ ನಿಯಂತ್ರಣ ಮತ್ತು ಹಣಕ್ಕೆ ಸಂಬಂಧಿಸಿದ ವ್ಯವಸ್ಥೆಯ ನಿರ್ವಹಣೆಗೆ ಕೇಂದ್ರ ಬ್ಯಾಂಕ್ ರೂಪಿಸಿ ಜಾರಿಗೆ ತರುವ ನೀತಿಗೆ "ಹಣಕಾಸಿನ ನೀತಿ" ಎಂದು ಹೆಸರು. ಹಣಕಾಸಿನ ನೀತಿಯು ಕೇಂದ್ರ ಬ್ಯಾಂಕ್ ಮುದ್ರಿಸಿ ಚಲಾವಣೆಗೆ ತರುವ ಹಣದ ಗಾತ್ರ, ವಾಣಿಜ್ಯ ಬ್ಯಾಂಕುಗಳ ಸಾಲದ ನಿರ್ಮಾಣದ ಹಾಗೂ ಬಡ್ಡಿ ದರದ ಅಂಶಗಳಿಗೆ ಸಂಬಂಧಿಸಿರುತ್ತದೆ.
ಹಣಕಾಸಿನ ನೀತಿಯು ಕಾಲಕಾಲಕ್ಕೆ ಬದಲಾಗುತ್ತಾ ಹೋಗುತ್ತದೆ. ಬೇರೆ ಬೇರೆ ಕಾಲದಲ್ಲಿ ಬೇರೆ ಬೇರೆ ರಾಷ್ಟ್ರಗಳಲ್ಲಿ ಕೇಂದ್ರ ಬ್ಯಾಂಕಿನ ಹಣಕಾಸಿನ ನೀತಿಯ ಉದ್ದೇಶವು ಬೇರೆ ಬೇರೆಯಾಗಿರುವುದು ಕಂಡುಬರುತ್ತದೆ. ಈ ಉದ್ದೇಶವು ದೇಶದಲ್ಲಿನ ಆರ್ಥಿಕ ಪರಿಸ್ಥಿತಿಗಳನ್ನವಲಂಭಿಸಿರುತ್ತದೆ. ಹಣಕಾಸಿನ ನೀತಿಯನ್ನು ರೂಪಿಸುವಾಗ ಕೇಂದ್ರ ಬ್ಯಾಂಕು ಹೊಂದಿದ ಪ್ರಮುಖ ಉದ್ದೇಶಗಳನ್ನು ಐದು ಪ್ರಕಾರಗಳಾಗಿ ವಿಂಗಡಿಸಲಾಗಿದೆ. ಅವುಗಳೆಂದರೆ
ಇದು "ಆರ್ಥಿಕ ಬೆಳವಣಿಗೆ ಸಾಕಷ್ಟು ಹಣಕಾಸು ಪೂರೈಸುವ ಮತ್ತು ಅದೇ ವೇಳೆಯಲ್ಲಿ ನ್ಯಾಯಯುತ ಬೆಲೆ ಸ್ಥಿರತೆಯನ್ನು ಸಾಧಿಸುವ ಒಂದು ನೀತಿಯಾಗಿದೆ."
ಆರ್.ಬಿ.ಐ ಕಾಯಿದೆ [೧೯೩೪] ಮತ್ತು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ ೧೯೪೯ ರ ಪ್ರಕಾರ ಸಾಲ ಪ್ರಮಾಣದ ನಿಯಂತ್ರಣ ಮತ್ತು ಬೆಲೆ ನಿಯಂತ್ರಣಕ್ಕಾಗಿ ಸೂಕ್ತ ನಿಯಂತ್ರಣ ಕ್ರಮಗಳನ್ನು ಅನುಸರಿಸಲು ಭಾರತೀಯ ರಿಜರ್ವ್ ಬ್ಯಾಂಕ್ ಗೆ ಅಧಿಕಾರ ನೀಡಲಾಗಿದೆ. ಸಾಲದ ನಿಯಂತ್ರಿತ ವಿಸ್ತರಣೆ ಉದ್ದೇಶದ ಸಾಧನವಾಗಿ ಆರ್.ಬಿ.ಐ ಪರಿಮಾಣಾತ್ಮಕ ಮತ್ತು ಗುಣಾತ್ಮಕ ಸಾಲ ನಿಯಂತ್ರಣ ವಿಧಾನಗಳನ್ನು ಅನುಸರಿಸುತ್ತಿದೆ.
ರಿಜರ್ವ್ ಬ್ಯಾಂಕು ಬ್ಯಾಂಕು ಬಡ್ಡಿದರ, ತೆರೆದ ಮಾರುಕಟ್ಟೆ ಕಾರ್ಯಾಚರಣೆ, ನಗದು ಮೀಸಲು ಅನುಪಾತ, ಶಾಸನಬದ್ಧ ದ್ರವ್ಯತೆ ಅನುಪಾತ ಮುಂತಾದ ಪರಿಮಾಣಾತ್ಮಕ ವಿಧಾನಗಳನ್ನು ಬಳಸಿಕೊಳ್ಳುತ್ತಿದೆ.
ಭಾರತೀಯ ರಿಜರ್ವ್ ಬ್ಯಾಂಕು ಕಾಯ್ದೆಯು ಬ್ಯಾಂಕುದರವನ್ನು ಈ ಕಾಯಿದೆಯಡಿ ಕೊಳ್ಳಲು ಅರ್ಹವಿರುವ ವಿನಿಮಯ ಹುಂಡಿಗಳು ಅಥವಾ ಇತರ ವಾಣಿಜ್ಯ ಕಾಗದಗಳನ್ನು ಅದು (ಆರ್.ಬಿ.ಐ) ಕೊಳ್ಳಲು ಅಥವಾ ವಟಾಯಿಸಲು ತಯಾರಿರುವ ಒಂದು ನಿರ್ಧಿಷ್ಟ ದರ ಎಂದು ವ್ಯಾಖ್ಯಾನಿಸಿದೆ. ೨೦೧೧ ರ ಮಾರ್ಚ್ ೧೭ ರ ವೇಳೆಗೆ ಬ್ಯಾಂಕ್ ದರವನ್ನು ಶೇ ೬.೭೫ ರಲ್ಲಿ ಉಳಿಸಲಾಯಿತು.
ಆರ್.ಬಿ.ಐ ವ್ಯಾಖ್ಯಾನಿಸಿರುವ ಪ್ರಕಾರ ತೆರೆದ ಮಾರುಕಟ್ಟೆ ಕಾರ್ಯಾಚರಣೆ ಎಂದರೆ "ವಿದೇಶಿ ವಿನಿಮಯ, ಚಿನ್ನ, ಸರ್ಕಾರಿ ಭದ್ರತೆಗಳು ಮತ್ತು ಕಂಪನಿಗಳ ಷೇರುಗಳು ಸೇರಿದಂತೆ ವೈವಿಧ್ಯಮಯ ಆಸ್ತಿಗಳನ್ನು ಕೇಂದ್ರ ಬ್ಯಾಂಕು ಮಾರಾಟಮಾಡುವ ಮತ್ತು ಕೊಳ್ಳುವ ವ್ಯಾಪಕ ಕ್ರಿಯೆಯಾಗಿದೆ.
ಸಾಲ ನಿಯಂತ್ರಣ ಮಾಡಲು ರಿಜರ್ವ್ ಬ್ಯಾಂಕು ಚಲ ಮೀಸಲು ಅಗತ್ಯಗಳ ವಿಧಾನವನ್ನು ಅನುಸರಿಸುತ್ತದೆ. ಕಾನೂನಿನ ಪ್ರಕಾರ ಪ್ರತಿಯೊಂದು ಬ್ಯಾಂಕು ತನ್ನ ಒಟ್ಟು ಠೇವಣಿಗಳ ಕೆಲವೊಂದು ಭಾಗಗಳನ್ನು ಮೀಸಲು ನಿಧಿ ರೂಪದಲ್ಲಿ ತನ್ನಲ್ಲಿ ಮತ್ತು ಸ್ವಲ್ಪ ಭಾಗವನ್ನು ರಿಜರ್ವ್ ಬ್ಯಾಂಕ್ ನಲ್ಲಿ ಇಡಬೇಕಾಗುತ್ತದೆ. ಈ ಮೀಸಲು ಅಗತ್ಯಗಳಲ್ಲಿ ಎರಡು ವಿಧಾನಗಳಿವೆ.
ಮತ್ತು
ನಗದು ಮೀಸಲು ಅನುಪಾತ ಎಂದರೆ ವಾಣಿಜ್ಯ ಬ್ಯಾಂಕು ತನ್ನ ಒಟ್ಟು ಠೇವಣಿಗಳ ಒಂದು ಭಾಗವನ್ನು ರಿಜರ್ವ್ ಬ್ಯಾಂಕಿನೊಂದಿಗೆ ನಗದು ಮೀಸಲು ರೂಪದಲ್ಲಿ ಇಡುವುದಾಗಿದೆ. ೨೦೧೦ ರ ಏಪ್ರಿಲ್ ೨೦ ವೇಳೆಗೆ ನಗದು ಮೀಸಲು ಅನುಪಾತವನ್ನು ಶೇಕಡ ೬ ರಲ್ಲಿ ಆರ್.ಬಿ.ಐ ನಿರ್ಧರಿಸಿದೆ.
ವಾಣಿಜ್ಯ ಬ್ಯಾಂಕುಗಳು ತಮ್ಮ ಒಟ್ಟು ಠೇವಣಿಗಳ ಒಂದು ಭಾಗವನ್ನು ತಮ್ಮಲ್ಲಿಯೇ ನಗದು ಮೀಸಲು ರೂಪದಲ್ಲಿ ಇಟ್ಟು ಕೊಳ್ಳುವುದನ್ನು ಶಾಸನಬದ್ಧ ದ್ರವ್ಯತಾ ಅನುಪಾತ ಎನ್ನಲಾಗುತ್ತದೆ.
ಆಯ್ದ ಆಥವಾ ಗುಣಾತ್ಮಕ ಸಾಲ ನಿಯಂತ್ರಣಗಳು ಸಾಮಾನ್ಯ ಅಥವಾ ಪರಿಮಾಣಾತ್ಮಕ ಸಾಲ ನಿಯಂತ್ರಣಗಳಿಗೆ ಪೂರಕ ನೀತಿಯಲ್ಲಿ ಉಪಯುಕ್ತವಾಗಿರುತ್ತವೆ ಎಂದು ಭಾವಿಸಲಾಗಿದೆ. ಈ ನಿಯಂತ್ರಣಗಳನ್ನು ರಿಜರ್ವ್ ಬ್ಯಾಂಕು ಮೊಟ್ಟ ಮೊದಲಬಾರಿಗೆ ೧೯೫೬ ರಲ್ಲಿ ಪರಿಚಯಿಸಿತು.
ಭಾರತೀಯ ರಿಸರ್ವ್ ಬ್ಯಾಂಕಿನ (ಆರ್ಬಿಐ) ಸ್ವಾಯತ್ತತೆಯನ್ನು ಕೇಂದ್ರ ಸರ್ಕಾರ ಹಾಳು ಮಾಡುತ್ತಿದೆ ಎಂದು ದೂರಿ ಆರ್ಬಿಐ ನೌಕರರು ಗವರ್ನರ್ ಉರ್ಜಿತ್ ಪಟೇಲ್ ಅವರಿಗೆ ಪತ್ರ ಬರೆದಿದ್ದಾರೆ.
This article uses material from the Wikipedia ಕನ್ನಡ article ಭಾರತೀಯ ರಿಸರ್ವ್ ಬ್ಯಾಂಕ್, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.