’ಕವಿಚಕ್ರವರ್ತಿ’, ’ಕವಿರತ್ನ’ ಮುಂತಾದ ಬಿರುದುಗಳನ್ನು ಪಡೆದಿದ್ದ ಕವಿ 'ರನ್ನ'ನು ಕನ್ನಡ ಸಾಹಿತ್ಯ ಮಹಾಮಕುಟದಲ್ಲಿನ ಮೂರು ಅನರ್ಘ್ಯ ರತ್ನಗಳಲ್ಲಿ ಒಬ್ಬ.
ಈ ಲೇಖನವನ್ನು ಪರಿಷ್ಕರಣೆಗೆ ಹಾಕಲಾಗಿದೆ. ಲೇಖನವನ್ನು ವಿಕಿ ಲೇಖನಗಳಂತೆ ಶುದ್ಧೀಕರಿಸಿದ ನಂತರ ಈ ಸಂದೇಶವನ್ನು ತೆಗೆದುಹಾಕಿ. ಈ ಲೇಖನವನ್ನು ಈ ಕಾರಣಗಳಿಂದಾಗಿ ನಕಲು ಸಂಪಾದನೆಗೆ ಒಳಪಡಿಸಬೇಕಿದೆ {{{ವ್ಯಾಕರಣ, ಶೈಲಿ, ಒಗ್ಗಟ್ಟು, ಸಂಯೋಜನೆ ಧ್ವನಿ ಅಥವಾ ಕಾಗುಣಿತ}}}. |
ಹತ್ತನೇ ಶತಮಾನದಲ್ಲಿ ಜೀವಿಸಿದ್ದ ಈ ಜೈನಕವಿಯು ’ಅಜಿತನಾಥ ಪುರಾಣ’, ’ಸಾಹಸಭೀಮ ವಿಜಯಂ/ಗದಾಯುದ್ಧ’ ಮುಂತಾದ ೫ ಕೃತಿಗಳನ್ನು ರಚಿಸಿದ್ದಾನೆ.
ಎನಿಸಿದ ಸತ್ಯಾಶ್ರಯದೇ
ವನೆ ಪೃಥ್ವೀವಲ್ಲಭಂ ಕಥಾನಾಯಕನಾ
ಗನಿಲಜನೊಳ್ ಪೋಲಿಸಿ ಪೇ
ೞ್ದನೀ ಗದಾಯುದ್ಧಮಂ ಮಹಾಕವಿ ರನ್ನಂ ||೧.೩೧||
ಕೃತಿ ನೆಗೞ್ದ ಗದಾಯುದ್ಧಂ
ಕೃತಿಗೀಶಂ ಚಕ್ರವರ್ತಿ ಸಾಹಸಭೀಮಂ
ಕೃತಿಯಂ ವಿರಚಿಸಿದನಲಂ
ಕೃತಿಯಂ ಕವಿರತ್ನನೆಂದೊಡೇವಣ್ಣಿಪುದೋ ||೧.೩೨||
ಮೊದಲೊಳ್ ಬದ್ಧವಿರೋಧದಿಂ ನೆಗೞ್ದ ಕುಂತೀಪುತ್ರರೊಳ್ ಭೀಮನಂ
ಕದ ಗಾಂಧಾರಿಯ ಪುತ್ರರೊಳ್ ಮೊದಲಿಗಂ ದುರ್ಯೋಧನಂ ಧರ್ಮಯು
ದ್ಧದೊಳಂತಾತನನಿಕ್ಕಿ ಕೊಂದನದಱಿಂ ಭೀಮಂ ಜಯೋದ್ಧಾಮನೆಂ
ಬುದನೆಂಬಂತಿದು ವಸ್ತುಯುದ್ಧಮೆನಿಸಲ್ ಪೇೞ್ದಂ ಗದಾಯುದ್ಧಮಂ ||೧.೩೩||
This article uses material from the Wikipedia ಕನ್ನಡ article ಮಹಾಕವಿ ರನ್ನನ ಗದಾಯುದ್ಧ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.