ರಂ.
ಶ್ರೀ. ಮುಗಳಿ - ಕನ್ನಡದ ಖ್ಯಾತ ವಿದ್ವಾಂಸ ಮತ್ತು ಸಾಹಿತಿ. ಕವಿ, ಕಾದಂಬರಿಕಾರ, ಕಥಾಗಾರ, ನಾಟಕಕಾರ, ಪ್ರಬಂಧಕಾರ ಹಾಗೂ ವಿಮರ್ಶಕ. ಹೀಗೆ ಇವರು ಹಲವಾರು ಸಾಹಿತ್ಯ ಪ್ರಕಾರಗಳಲ್ಲಿ ಬರೆದಿದ್ದಾರೆ. ಇವರ "ಕನ್ನಡ ಸಾಹಿತ್ಯ ಚರಿತ್ರೆ" ಸಾಹಿತ್ಯಲೋಕದ ಮೈಲುಗಲ್ಲು.
ರಂ.ಶ್ರೀ. ಮುಗಳಿಯವರು ೧೯೦೬ ಜುಲೈ ೧೫ ರಂದು ರೋಣ ತಾಲೂಕಿನ ಹೊಳೆಆಲೂರಿನಲ್ಲಿ ಜನಿಸಿದರು. ೧೯೩೩ರಲ್ಲಿ ಸಾಂಗಲಿಯ ವಿಲಿಂಗ್ಡನ್ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕೆಲಸಕ್ಕೆ ಸೇರಿಕೊಂಡು ೧೯೬೧ರಲ್ಲಿ ಅದೇ ಕಾಲೇಜಿನ ಪ್ರಾಂಶುಪಾಲರಾಗಿ ೧೯೬೬ರಲ್ಲಿ ನಿವೃತ್ತರಾದರು. ೧೯೬೭ರಿಂದ ೧೯೭೦ರವರೆಗೆ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿದ್ದರು. ರಸಿಕ ರಂಗ ಇದು ಮುಗಳಿಯವರ ಕಾವ್ಯನಾಮ.
This article uses material from the Wikipedia ಕನ್ನಡ article ರಂ.ಶ್ರೀ.ಮುಗಳಿ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.