ರಹಮತ್ ತರೀಕೆರೆ (ಆಗಸ್ಟ್ ೨೬, ೧೯೫೯) ಕರ್ನಾಟಕದ ಲೇಖಕ, ಚಿಂತಕ ಹಾಗೂ ವಿಮರ್ಶಕ.
ರಹಮತ್ ತರೀಕೆರೆ | |
---|---|
ಜನನ | ಆಗಸ್ಟ್ ೨೬, ೧೯೫೯ ತರೀಕೆರೆ ತಾಲೂಕಿನ ಸಮತಳ |
ವೃತ್ತಿ | ಪ್ರಾಧ್ಯಾಪಕರು, ಸಾಹಿತಿ |
ವಿಷಯ | ಕನ್ನಡ ಸಾಹಿತ್ಯ |
“ಇದೊಂದು ಬಿಕ್ಕಟ್ಟಿನ ಕಾಲ. ನನ್ನ ತಲೆಮಾರಿನ ಅನೇಕರ ನಡೆ ನುಡಿಗಳ ನಡುವೆ ಕಾಣಿಸಿಕೊಳ್ಳುವ ಕಷ್ಟ ಕೂಡ. ನಮ್ಮ ನಾಡಿನ ಚರಿತ್ರೆಯಲ್ಲಿ ಯಾವೊತ್ತೂ ಇಷ್ಟೊಂದು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿರಲಿಲ್ಲ. ಜಗತ್ತಿನ ದೊಡ್ಡ ಮಿಲಿಟರಿ ಶಕ್ತಿಗಳು, ಕೋಮುವಾದ, ಪ್ರಭುತ್ವಗಳು ಹುಟ್ಟಿಸುವ ಕ್ರೌರ್ಯ, ಅದಕ್ಕೆ ಎದುರಾಗಿ ಹುಟ್ಟಿಕೊಂಡ ಜನರ ಪ್ರತಿರೋಧಗಳು, ಮಧ್ಯಮವರ್ಗದ ಅವಕಾಶವಾದೀ ವರ್ತನೆ, ಜನರಿಗಾಗಿ ಕೆಲಸ ಮಾಡುವ ಚಳವಳಿಗಾರರ ದಮನ - ಇವೆಲ್ಲವೂ ನಮ್ಮ ಓದು ಮತ್ತು ಬರಹಗಳ ಮೇಲೆ ಹೇಗೋ ಆವರಿಸಿಕೊಂಡಿವೆ. ಇವನ್ನು ಮರೆತು ಬರೆಯುವಂತಿಲ್ಲ. ಮರೆಯದೆ ಬರೆದರೆ, ಬರೆದ ಬರೆಹ ಆತ್ಮವಿಶ್ವಾಸ ಕೂಡುವುದಕ್ಕೆ ಬದಲಾಗಿ ಪ್ರಶ್ನೆಯಾಗಿ ಎದುರು ನಿಂತು ಕಾಡುತ್ತದೆ. ಇದನ್ನೇ ಕತ್ತಿಯಂಚಿನ ದಾರಿಯಲ್ಲಿ ನಡೆಯುವ ಕಷ್ಟ ಎಂದು ನಾನು ಭಾವಿಸಿದ್ದೇನೆ. ಕತ್ತಿಯ ಅಲಗಿನ ಮೇಲೆ ನಡೆದರೆ ಕಾಲು ಕತ್ತರಿಸಿ ಹೋಗುತ್ತದೆ. ಅದನ್ನು ಬಾಗಿ ಎತ್ತಿಕೊಂಡರೆ ಕೈಯ ಆಯುಧವಾಗುತ್ತದೆ. ಅದನ್ನು ಸ್ವವಿಮರ್ಶೆಯನ್ನಾಗಿ ಮಾಡಿ ಚುಚ್ಚಿಕೊಂಡರೆ ನಮ್ಮ ಒಡಲಲ್ಲಿ ಮುರಿದು ನೋವುಂಟು ಮಾಡುತ್ತದೆ.....”
ಹೀಗೆ ಸಾಗುತ್ತದೆ ಅವರ ವಿಚಾರ ಲಹರಿ.
This article uses material from the Wikipedia ಕನ್ನಡ article ರಹಮತ್ ತರೀಕೆರೆ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.