ವೀರಪ್ಪ ಮೊಯ್ಲಿ ಕರ್ನಾಟಕ ರಾಜ್ಯದ ೧೩ ನೇ ಮುಖ್ಯಮಂತ್ರಿ ಯಾಗಿ ಸೇವೆ ಸಲ್ಲಿಸಿದ್ದಾರೆ.
ವೀರಪ್ಪ ಮೊಯಿಲಿಯವರು ೧೯೪೦ ಜನೆವರಿ ೧೨ರಂದು ಜನಿಸಿದರು. ಇವರ ತಾಯಿ ಪೂವಮ್ಮ ; ತಂದೆ ತಮ್ಮಯ್ಯ ಮೊಯಿಲಿ.
ವೀರಪ್ಪ ಮೊಯ್ಲಿ | |
---|---|
ವಾಣಿಜ್ಯ ವ್ಯವಹಾರ ಸಚಿವ (ಭಾರತ) | |
ಹಾಲಿ | |
ಅಧಿಕಾರ ಸ್ವೀಕಾರ ಜುಲೈ ೧೩, ೨೦೧೧ | |
ಪ್ರಧಾನ ಮಂತ್ರಿ | ಮನಮೋಹನ್ ಸಿಂಗ್ |
ಕಾನೂನು ಮತ್ತು ನ್ಯಾಯ ಮಂತ್ರಿ | |
ಅಧಿಕಾರ ಅವಧಿ 28 ಮೇ 2009 – ಜುಲೈ 12, 2011 | |
ಪ್ರಧಾನ ಮಂತ್ರಿ | ಮನಮೋಹನ್ ಸಿಂಗ್ |
ಪೂರ್ವಾಧಿಕಾರಿ | ಹಂಸರಾಜ್ ಭಾರದ್ವಾಜ್ |
ಉತ್ತರಾಧಿಕಾರಿ | ಸಲ್ಮಾನ್ ಖುರ್ಷಿದ್ |
ಅಧಿಕಾರ ಅವಧಿ 19 ನವೆಂಬರ್ 1992 – 11 ಡಿಸೆಂಬರ್ 1994 | |
ರಾಜ್ಯಪಾಲ | ಖುರ್ಶೆದ್ ಆಲಂ ಖಾನ್ |
ಪೂರ್ವಾಧಿಕಾರಿ | ಎಸ್. ಬಂಗಾರಪ್ಪ |
ಉತ್ತರಾಧಿಕಾರಿ | ದೇವೇಗೌಡ |
ವೈಯಕ್ತಿಕ ಮಾಹಿತಿ | |
ಜನನ | ಮೂಡಬಿದಿರೆ, ಬ್ರಿಟಿಷ್ ಇಂಡಿಯಾ | ೧೨ ಜನವರಿ ೧೯೪೦
ರಾಜಕೀಯ ಪಕ್ಷ | ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ |
ಸಂಗಾತಿ(ಗಳು) | ಮಾಲತಿ ಮೊಯಿಲಿ |
ಮಕ್ಕಳು | 4 |
ಅಭ್ಯಸಿಸಿದ ವಿದ್ಯಾಪೀಠ | ಯೂನಿವರ್ಸಿಟಿ ಕಾಲೇಜು, ಮಂಗಳೂರು ಬೆಂಗಳೂರು ವಿಶ್ವವಿದ್ಯಾಲಯ |
ಜಾಲತಾಣ | Official Website |
ಮೊಯಿಲಿಯವರು ತಮ್ಮ ಪ್ರಾಥಮಿಕ ಹಾಗು ಮಾಧ್ಯಮಿಕ ಶಿಕ್ಷಣಗಳನ್ನು ಮೂಡಬಿದಿರಿಯಲ್ಲಿ ಪೂರೈಸಿ, ಮಂಗಳೂರಿನ ಸರಕಾರಿ ಕಾಲೇಜಿನಲ್ಲಿ ಅಧ್ಯಯನ ಪೂರೈಸಿ, ಪದವಿ ಪಡೆದರು. ಕರ್ನಾಟಕ ಸರಕಾರದ ಮೀನುಗಾರಿಕೆ ಇಲಾಖೆಯಲ್ಲಿ, ತನ್ನಂತರ ಭಾರತೀಯ ಜೀವವಿಮಾ ನಿಗಮದಲ್ಲಿ ಸೇವೆ ಸಲ್ಲಿಸುತ್ತಿದ್ದಂತೆಯೆ , ಬೆಂಗಳೂರಿನ ಸರಕಾರಿ ಕಾನೂನು ಕಾಲೇಜಿನಿಂದ ಬಿ.ಎಲ್.ಪದವಿ ಪಡೆದರು.
ಕಾರ್ಕಳ ಹಾಗು ಮಂಗಳೂರುಗಳಲ್ಲಿ ವೃತ್ತಿಯನ್ನಾರಂಭಿಸಿದ ಮೊಯಿಲಿಯವರು , ಬೆಂಗಳೂರಿನಲ್ಲಿ ಉಚ್ಚ ನ್ಯಾಯಾಲಯದಲ್ಲಿ ನ್ಯಾಯವಾದಿ ವೃತ್ತಿಯನ್ನು ಮುಂದುವರಿಸಿದರು.
೧೯೬೮ರಲ್ಲಿ ಮೊಯಿಲಿಯವರು ಕಾಂಗ್ರೆಸ್ ಪಕ್ಷದ ಸದಸ್ಯರಾದರು. ೧೯೬೯ರಲ್ಲಿ ಕಿಸಾನ ಸಭಾ ಸ್ಥಾಪಿಸಿದರು.
೧೯೭೨ರಿಂದ ೧೯೯೯ರವರೆಗೆ ಮೊಯಿಲಿಯವರು ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿದ್ದರು.ಮಂಗಳೂರು ಲೋಕಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಸೋಲು ಅನುಭವಿಸಿ ಕೊನೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಆರಿಸಿ ಬಂದರು.
೧೯೭೪ರಿಂದ ೧೯೭೭ರವರೆಗೆ ಮೊಯಿಲಿಯವರು ಸಣ್ಣ ಕೈಗಾರಿಕೆ ಖಾತೆಯ ಮಂತ್ರಿಯಾಗಿದ್ದರು.
೧೯೮೦ರಿಂದ ೧೯೮೨ರವರೆಗೆ ಹಣಕಾಸು ಮತ್ತು ಯೋಜನಾ ಖಾತೆಯ ಮಂತ್ರಿಯಾಗಿದ್ದರು.
೧೯೮೩ರಿಂದ ೧೯೮೫ರವರೆಗೆ ವಿರೋಧ ಪಕ್ಷದ ನಾಯಕರಾಗಿದ್ದರು.
ಸಿ ಭೈರೇಗೌಡರನ್ನು ೨ ಲಕ್ಷ ರೂಪಾಯಿ ನೀಡಿ, ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಮೊಯಿಲಿ ಆಮಿಷ ಒಡ್ಡಿದರು ಎಂಬ ಹಗರಣ ೧೯೮೩ರಲ್ಲಿ ದೊಡ್ಡ ಸುದ್ದಿಯಾಯಿತು. ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಸಿ. ಎಂ. ಸ್ಟೀಫನ್ ರಾಮಕೃಷ್ಣ ಹೆಗಡೆ ಸರ್ಕಾರವನ್ನು ಉರುಳಿಸುವುದಾಗಿ ಘೋಷಿಸಿದ್ದ ವೇಳೆ, ಈ ಹಗರಣ ಬಂದುದು, ಮೊಯಿಲಿಯವರ ರಾಜಕೀಯ ಬದುಕಿಗೆ ಆಘಾತ ನೀಡಿತ್ತು. ನ್ಯಾ. ಆರ್. ಜಿ. ದೇಸಾಯಿ ನೇತೃತ್ವದ ವಿಚಾರಣಾ ಆಯೋಗ ಮೊಯಿಲಿಯವರು ನಿರ್ದೋಷಿ ಎಂದು ವರದಿ ಸಲ್ಲಿಸಿತು.
೧೯೮೯ರಿಂದ ೧೯೯೨ರ ವರೆಗೆ ವಿವಿಧ ಇಲಾಖೆಗಳ ಸಚಿವರಾಗಿದ್ದ ಮೊಯಿಲಿ,
೧೯೯೨ರಿಂದ ೧೯೯೪ರವರೆಗೆ ಕರ್ನಾಟಕದ ೧೩ನೆಯ ಮುಖ್ಯ ಮಂತ್ರಿಗಳಾಗಿ ಸೇವೆ ಸಲ್ಲಿಸಿದರು.
ವೀರಪ್ಪ ಮೊಯಿಲಿಯವರು ಸಾಹಿತಿಗಳೂ ಆಗಿದ್ದಾರೆ. ಅವರ ಹೆಂಡತಿ ಮಾಲತಿ ಮೊಯಿಲಿ ಸಹ ಲೇಖಕಿಯಾಗಿದ್ದಾರೆ. ಮೊಯಿಲಿಯವರ ಕೃತಿಗಳು ಇಂತಿವೆ:
This article uses material from the Wikipedia ಕನ್ನಡ article ವೀರಪ್ಪ ಮೊಯ್ಲಿ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.