ಶರಣಪ್ಪ ಕಂಚ್ಯಾಣಿ

ವಿಜಯಪುರ ಜಿಲ್ಲೆಯು ಮಕ್ಕಳ ಸಾಹಿತ್ಯದ ತೊಟ್ಟಿಲು.

ಸಿಸು ಸಂಗಮೇಶ, ಶಂಗು ಬಿರಾದಾರ, ಈಶ್ವರ ಚಂದ್ರ ಚಿಂತಾಮಣಿ, ಹ.ಮ.ಪೂಜಾರ, ಜಂಬುನಾಥ ಕಂಚ್ಯಾಣಿ, ಹ.ಮ.ಅಂಬಿಗೇರ್, ಬಾ.ಇ.ಕುಮಟೆ ಮುಂತಾದ ಹಲವಾರು ಕವಿಗಳು ಮಕ್ಕಳ ಸಾಹಿತ್ಯದ ಬಗ್ಗೆ ಅಗಾಧವಾದ ಕೆಲಸವನ್ನು ಮಾಡಿದ್ದಾರೆ. ಹೀಗೆ ಸಾಹಿತ್ಯ ಕೃಷಿ ಮಾಡಿದವರಲ್ಲಿ ಪ್ರಮುಖರಲ್ಲೊಬ್ಬರಾದ ಹಿರಿಯ ಕವಿ ಶರಣಪ್ಪ ಕಂಚ್ಯಾಣಿಯವರು.

ಜನನ

ಕಂಚ್ಯಾಣಿ ಶರಣಪ್ಪನವರು ಹುಟ್ಟಿದ್ದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಸರೂರ ಎಂಬಲ್ಲಿ. ತಂದೆ ಶಿವ ಸಂಗಪ್ಪ, ತಾಯಿ ರುದ್ರಮ್ಮ. ಹುಟ್ಟಿದ್ದು ಕಡುಬಡತನದ ಕುಟುಂಬದಲ್ಲಿ.

ಶಿಕ್ಷಣ

ನಾಲ್ಕಾರು ಊರು ಸುತ್ತಾಡಿ ಓದಿದ್ದು ಏಳನೇ ತರಗತಿಯವರೆಗೆ. ಇತರರ ಹಂಗಿಗೆ ಬೀಳದ ಸ್ವಾಭಿಮಾನಿ. ಶಾಲಾ ಶಿಕ್ಷಕರ ತರಬೇತು ಪಡೆದು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇರಿದ ನಂತರ ಎಂ.ಎ. ಪದವಿ ಪಡೆದ ಛಲಗಾರರು. ೩೯ ವರ್ಷಗಳ ದೀರ್ಘ ಕಾಲದ ಬೋಧನೆಯಲ್ಲಿ ನಿರತರಾಗಿದ್ದು ೧೯೮೮ ರಲ್ಲಿ ನಿವೃತ್ತಿ.

ಸಾಹಿತ್ಯ

ಮಕ್ಕಳ ಮನೋಧರ್ಮವನ್ನರಿತು, ಅವರ ಮನೋವಿಕಾಸಕ್ಕೆ ತಕ್ಕಂತಹ ರಮ್ಯವಾದ ಪದಗಳನ್ನು ರಚಿಸಿ, ಹಾಡುತ್ತ, ಕುಣಿಯುತ್ತ, ಕಲಿಯುವಂತಾಗುವಂತಹ ಗೀತೆಗಳನ್ನು ರಚಿಸತೊಡಗಿದರು. ಹಳ್ಳಿಗಾಡಿನ ಮಕ್ಕಳಿಗೆ ಪಠ್ಯ ಪುಸ್ತಕಗಳ ವಿನ: ಬೇರೆ ರೀತಿಯ ಪುಸ್ತಕಗಳು ದೊರೆಯುತ್ತಿಲ್ಲವೆಂಬ ಅಂಶವನ್ನು ಮನಗಂಡು ತಾವು ಬರೆದ ಪದ್ಯಗಳನ್ನು ಪ್ರಕಟಿಸಲು ತಮ್ಮದೇ ಆದ ‘ಗ್ರಾಮೀಣ ಪ್ರತಿಭಾ ಪ್ರಕಾಶನ’ ದ ಮೂಲಕ ಹಲವಾರು ಪುಸ್ತಕಗಳನ್ನು ಪ್ರಕಟಿಸಿದರು. ಇವರು ಪ್ರಕಟಿಸಿದ ಮೊದಲ ಮಕ್ಕಳ ಕವಿತಾ ಪುಸ್ತಕ ‘ಅಜ್ಜನ ಹಾಡು’. ನಂತರ ಹಲವಾರು ಮಕ್ಕಳ ಕೃತಿಗಳನ್ನು ಹೊರತಂದರು.

ಜಾಗೃತ ಭಾರತ, ಮಕ್ಕಳ ಮನೆ, ಹುಟ್ಟು ಹಬ್ಬ, ತಮ್ಮನ ಶಾಲೆ, ತೋಟದ ಆಟ, ಚೆಲುವಿನ ಚಿಟ್ಟೆ, ಪುಟ್ಟಿಯ ತೋಟ, ಬೆದರು ಬೆಚ್ಚ ಮುಂತಾದವುಗಳ ಜೊತೆಗೆ ‘ಗುಡು ಗುಡು ಗುಂಡ’ ಎಂಬ ಶಿಶು ಪ್ರಾಸದ ಪುಸ್ತಕವನ್ನು ರಚಿಸಿದ್ದಾರೆ. ಗಿಲ್ ಗಿಲ್ ಗಿಡ್ಡ, ಅಪ್ಪನ ಕಥೆಗಳು, ಅಪ್ಪನ ಮತ್ತಷ್ಟು ಕಥೆಗಳು, ಚತುರ ಚಿಣ್ಣರು ಮುಂತಾದ ಕಥಾ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಇವಲ್ಲದೆ ಇವರ ಇತರ ಕೃತಿಗಳೆಂದರೆ ಕನ್ನಡ ಕಣ ಕೀರ್ತಿ (ಗದ್ಯ ಚರಿತ್ರೆ), ಬಸವ ಪ್ರದೀಪ (ಖಂಡ ಕಾವ್ಯ) ಮತ್ತು ಸಮಗ್ರ ಕವಿತೆಗಳ ಸಂಗ್ರಹ. ಆಯ್ದ ನೂರೊಂದು ಕವಿತೆಗಳು. ಕನ್ನಡ ಕವಿಕೀರ್ತಿ, ಬಸವ ಪ್ರದೀಪ, ಅಜ್ಜನ ಹಾಡು ಎಂಬ ಮಕ್ಕಳ ಕವಿತೆಗಳು, ಮಕ್ಕಳ ಮನೆ, ಹುಟ್ಟು ಹಬ್ಬ, ತಮ್ಮನ ಶಾಲೆ, ತೋಟದ ಆಟ, ಗುಡು ಗುಡು ಗುಂಡ, ಆಯ್ದ ನೂರೊಂದು ಕವಿತೆಗಳು, ಚಲುವಿನ ಚಿಟ್ಟೆ, ತೊಟ್ಟಿಲು ಗುಬ್ಬಿ, ರಾಜಯೋಗಿ ಬೀಳೂರ ಅಜ್ಜನವರು, ಗಿಲ್ಗಿಲ್ ಗಿಡ್ಡ, ಪುಟ್ಟಿಯ ತೋಟ, ತಿಪ್ಪನ ಕಥೆಗಳು, ತಿಪ್ಪನ ಮತ್ತಷ್ಟು ಕಥೆಗಳು, ಬೆದರು ಬೆಚ್ಚ, ಚತುರ ಚಿಣ್ಣರು, ಹಾಡುವ ಹಕ್ಕಿ, ಬೆಕ್ಕಿನ ಕೊರಳಿಗೆ ಗಂಟೆ, ಅಜ್ಜನ ಅಂದದ ಕಥೆಗಳು ಮುಂತಾದ ಪುಸ್ತಕಗಳನ್ನು ರಚಿಸಿ ಪ್ರಕಟಿಸಿದ್ದಾರೆ.

ಪ್ರಶಸ್ತಿಗಳು

ಮಕ್ಕಳ ಸಾಹಿತಿ ಕಂಚ್ಯಾಣಿಯವರನ್ನು ಹುಡುಕಿಕೊಂಡು ಬಂದ ಪ್ರಶಸ್ತಿಗಳು ಹಲವಾರು. ‘ಜಾಗೃತ ಭಾರತ’ ಪುಸ್ತಕಕ್ಕೆ ಕರ್ನಾಟಕ ಸಾಹಿತ್ಯ ಅಕಾಡಮಿ ಪುಸ್ತಕ ಬಹುಮಾನ (೧೯೮೮), ‘ಅಜ್ಜನ ಹಾಡು’ ಪುಸ್ತಕಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ವಸುದೇವ ಭೂಪಾಳಂ ಪ್ರಶಸ್ತಿ, ಧಾರವಾಡದ ಮಕ್ಕಳ ಮನೆ ಮಕ್ಕಳ ಸಾಹಿತ್ಯ ಪ್ರಶಸ್ತಿ (೧೯೮೯), ರಾಷ್ಟ್ರೀಯ ಬಾಲ ಸಾಹಿತ್ಯ ಪುರಸ್ಕಾರ (೧೯೯೦-೯೧), ‘ಗಿಲ್ ಗಿಲ್ ಗಿಡ್ಡ’ ಪುಸ್ತಕಕ್ಕೆ ಅತ್ತಿಮಬ್ಬೆ ಪ್ರತಿಷ್ಠಾನದ ರನ್ನ ಸಾಹಿತ್ಯ ಪ್ರಶಸ್ತಿ ಮುಂತಾದವುಗಳಲ್ಲದೆ ಹುಬ್ಬಳ್ಳಿಯ ಮೂರು ಸಾವಿರ ಮಠ ಸಾಹಿತ್ಯ ಪುರಸ್ಕಾರ, ಭಾಲ್ಕಿ ಸಂಸ್ಥಾನ ಮಠದ ಮಕ್ಕಳ ಸಾಹಿತ್ಯ ಪುರಸ್ಕಾರ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಶಿವಮೊಗ್ಗ ಕರ್ನಾಟಕ ಸಂಘದ ಮಕ್ಕಳ ಸಾಹಿತ್ಯ ಪ್ರಶಸ್ತಿ, ಬೆಳಗಾವಿ ನಾಗನೂರ ರುದ್ರಾಕ್ಷಿ ಮಠದ ಹರ್ಡೇಕರ್‌ಮಂಜಪ್ಪ ಮಕ್ಕಳ ಸಾಹಿತ್ಯ ಪ್ರಶಸ್ತಿಗಳ ಜೊತೆಗೆ ಬಾಗಲಕೋಟೆಯಲ್ಲಿ ನಡೆದ ಬಿಜಾಪುರ ಜಿಲ್ಲಾ ೫ನೆಯ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಬಿಜಾಪುರ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ ಮುಂತಾದ ಗೌರವಗಳಿಗೆ ಪಾತ್ರರಾಗಿದ್ದಾರೆ. ಕಂಚ್ಯಾಣಿ ಶರಣಪ್ಪ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ 2018ರ ಸಾಲಿನ ಬಾಲ ಸಾಹಿತ್ಯ ಪುರಸ್ಕಾರ ನೀಡಲಾಗಿದೆ.

ಉಲ್ಲೇಖಗಳು

ಮಕ್ಕಳ ಸಾಹಿತ್ಯ

Tags:

ಶರಣಪ್ಪ ಕಂಚ್ಯಾಣಿ ಜನನಶರಣಪ್ಪ ಕಂಚ್ಯಾಣಿ ಶಿಕ್ಷಣಶರಣಪ್ಪ ಕಂಚ್ಯಾಣಿ ಸಾಹಿತ್ಯಶರಣಪ್ಪ ಕಂಚ್ಯಾಣಿ ಪ್ರಶಸ್ತಿಗಳುಶರಣಪ್ಪ ಕಂಚ್ಯಾಣಿ ಉಲ್ಲೇಖಗಳುಶರಣಪ್ಪ ಕಂಚ್ಯಾಣಿವಿಜಯಪುರ

🔥 Trending searches on Wiki ಕನ್ನಡ:

ವೇದಭಾರತದಲ್ಲಿನ ಜಾತಿ ಪದ್ದತಿಬ್ರಿಟಿಷ್ ಈಸ್ಟ್ ಇಂಡಿಯ ಕಂಪನಿಜಯಮಾಲಾಕಪ್ಪೆ ಅರಭಟ್ಟಸುಮಲತಾಕರ್ನಾಟಕದ ಏಕೀಕರಣಬಿಳಿಗಿರಿರಂಗನ ಬೆಟ್ಟಚಾಮರಾಜನಗರಕರ್ನಾಟಕ ಸಂಗೀತಭಾರತದ ಸಂವಿಧಾನದ ೩೭೦ನೇ ವಿಧಿಕರ್ನಾಟಕ ವಿಶ್ವವಿದ್ಯಾಲಯಹಲ್ಮಿಡಿ ಶಾಸನದುರ್ಗಸಿಂಹಧರ್ಮಸ್ಥಳಬಾಗಿಲುಇಮ್ಮಡಿ ಪುಲಿಕೇಶಿಪಾಟೀಲ ಪುಟ್ಟಪ್ಪಕರ್ಣಾಟ ಭಾರತ ಕಥಾಮಂಜರಿಬಾದಾಮಿ ಗುಹಾಲಯಗಳುಚುನಾವಣೆಏಡ್ಸ್ ರೋಗಒಲಂಪಿಕ್ ಕ್ರೀಡಾಕೂಟಆತ್ಮಚರಿತ್ರೆಭಾರತದ ರಾಷ್ಟ್ರಗೀತೆಭಾರತದಲ್ಲಿನ ಚುನಾವಣೆಗಳುಭಾರತದಲ್ಲಿ ಪಂಚಾಯತ್ ರಾಜ್ವಚನ ಸಾಹಿತ್ಯಶ್ರೀ ರಾಘವೇಂದ್ರ ಸ್ವಾಮಿಗಳುಹೆಳವನಕಟ್ಟೆ ಗಿರಿಯಮ್ಮಶಿವರಾಜ್‍ಕುಮಾರ್ (ನಟ)ರಮ್ಯಾಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಸಾಮ್ರಾಟ್ ಅಶೋಕಭಾರತದ ೨೦೨೪ರ ಸಾರ್ವತ್ರಿಕ ಚುನಾವಣೆಗಳುಅವಿಭಾಜ್ಯ ಸಂಖ್ಯೆಗುಣ ಸಂಧಿಒಂದನೆಯ ಮಹಾಯುದ್ಧಇಸ್ಲಾಂ ಧರ್ಮಪುಟ್ಟರಾಜ ಗವಾಯಿಅಮೃತಧಾರೆ (ಕನ್ನಡ ಧಾರಾವಾಹಿ)ಗಂಗ (ರಾಜಮನೆತನ)ರಾಣಿ ಅಬ್ಬಕ್ಕಮೊಘಲ್ ಸಾಮ್ರಾಜ್ಯನಾಗಚಂದ್ರಮಧುಮೇಹಕಾಲಾಯ ತಸ್ಮೈ ನಮಃ (ಚಲನಚಿತ್ರ)ರಾಷ್ಟ್ರೀಯ ಸೇವಾ ಯೋಜನೆದ್ರಾವಿಡ ಭಾಷೆಗಳುವರ್ಗೀಯ ವ್ಯಂಜನಕನ್ನಡಪ್ರಭಕಲಬುರಗಿಆರ್ಯರುವ್ಯವಸಾಯಅಗಸ್ತ್ಯಕರ್ನಾಟಕ ಯುದ್ಧಗಳುಚಂದ್ರಯಾನ-೩ಬಂಡಾಯ ಸಾಹಿತ್ಯಗೋಲ ಗುಮ್ಮಟಸುವರ್ಣ ನ್ಯೂಸ್ಸಿ. ಆರ್. ಚಂದ್ರಶೇಖರ್ಮಂಡ್ಯನೀತಿ ಆಯೋಗದೇವನೂರು ಮಹಾದೇವಪಂಚಾಂಗಬಿ. ಎಂ. ಶ್ರೀಕಂಠಯ್ಯನೀನಾದೆ ನಾ (ಕನ್ನಡ ಧಾರಾವಾಹಿ)ಕರ್ಣಬೀಚಿಕಲ್ಪನಾರತ್ನತ್ರಯರುಭಾಷಾ ವಿಜ್ಞಾನಅವಲೋಕನಮಾರುತಿ ಸುಜುಕಿಜನ್ನಆದಿ ಕರ್ನಾಟಕಎಂ. ಕೆ. ಇಂದಿರಸುಂದರ ಕಾಂಡ🡆 More