ಶಿವಮೊಗ್ಗ ಕರ್ನಾಟಕದ ಲೋಕ ಸಭೆ ಚುನಾವಣಾ ಕ್ಷೇತ್ರಗಳಲ್ಲಿ ಒಂದು.
೨೦೦೫ರಲ್ಲಿ ಈ ಕ್ಷೇತ್ರದಲ್ಲಿ ೧,೨೮೬,೧೮೧ ಮತದಾರರಿದ್ದರು.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕಾಗೋಡಿನ ಕೆ.ಜಿ.ಒಡೆಯರ್ ಶಿವಮೊಗ್ಗದ ಮೊದಲ ಸಂಸತ್ ಸದಸ್ಯರಾಗಿದ್ದರು. ಅವರು ಒಮ್ಮೆ ಗಾಂಧೀಜಿಯವರನ್ನು ಭೇಟಯಾದ ಮೇಲೆ ತಮ್ಮ ಸೂಟ್ ಬೂಟ್ ಬಿಟ್ಟು ಖಾದಿಧಾರಿಯಅಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದರು ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಐದು ಬಾರಿ ಸೆರೆವಾಸ ಅನುಭವಿಸಿದ್ದರು. ಒಟ್ಟು ೫ ವರ್ಷ ಸೆರೆವಾಸ ಅನುಭವಿಸಿದ್ದರರು; ೫ ತಿಂಗಳ ಕಠಿಣ ಶಿಕ್ಷೆಯನ್ನೂ ಅನುಭವಿಸಿದ್ದರು. ಸಾಗರದಲ್ಲಿ ಮುಖ್ಯ ಬಸ್ ನಿಲ್ದಾಣದ ಹತ್ತಿರ ಅವರ ಮನೆ ಇತ್ತು/ಇದೆ . ಅವರು ನೆಹರೂ ಅವರ ನಿಕಟವರ್ತಿಗಳಾಗಿದ್ದು , ನೆಹರೂ ಅವರನ್ನು ಜೋಗಕ್ಕೂ ಕರೆತಂದಿದ್ದರು.ಕಾಗೋಡು ಸತ್ಯಾಗ್ರಹದ ನಂತರ 'ಗೇಣೀದಾರರಿಗೇ ಜಮೀನು' ಕಾನೂನು ಬರುವುದಕ್ಕೆ ಮೊದಲೇ,ರೈತರ ಸತ್ಯಾಗ್ರಹಕ್ಕೆ ಓಗೊಟ್ಟು. ತಮ್ಮ ೮೦೦ ಎಕರೆ ಜಮೀನನ್ನು ರೈತರ ಹೆಸರಿಗೆ ಮಾಡಿಕೊಟ್ಟರು.
ಶಿವಮೊಗ್ಗ ಜಿಲ್ಲಾ ಕ್ಷೇತ್ರ | ಪುರುಷ | ಮಹಿಳೆ | ಇತರೆ | ಮತದಾರರು |
---|---|---|---|---|
ಶಿವಮೊಗ್ಗ- ಗ್ರಾಮ | 99312 | 97417 | 09 | 196758 |
ಭದ್ರಾವತಿ | 104023 | 106749 | 07 | 210779 |
ಶಿವಮೊಗ್ಗ- ನಗರ | 116368 | 116486 | 17 | 232871 |
ತೀರ್ಥಹಳ್ಳಿ | 87502 | 87620 | 04 | 175216 |
ಶಿಕಾರಿಪುರ | 89940 | 87099 | 14 | 177053 |
ಸೊರಬ | 90506 | 87013 | 10 | 177529 |
ಸಾಗರ | 92607 | 93150 | 06 | 185763 |
ಬೈಂದೂರು | 97669 | 107635 | 15 | 205319 |
ಒಟ್ಟು | 778037 | 783169 | 82 | 1561288 |
This article uses material from the Wikipedia ಕನ್ನಡ article ಶಿವಮೊಗ್ಗ (ಲೋಕ ಸಭೆ ಚುನಾವಣಾ ಕ್ಷೇತ್ರ), which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.