ಶ್ರೀನಿವಾಸ ವೈದ್ಯ ಕನ್ನಡ ಭಾಷೆಯ ಖ್ಯಾತ ಸಾಹಿತಿಗಳು.
ಇವರು ಏಪ್ರಿಲ್ ೪,೧೯೩೬ರಂದು,ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಜನಿಸಿದರು. ತಂದೆ ಶ್ರೀ ಬಿ.ಜಿ. ವೈದ್ಯ ಮತ್ತು ತಾಯಿ ಶ್ರೀಮತಿ ಸುಂದರಾಬಾಯಿ ಬಂಡೇರಾವ ವೈದ್ಯ.
೧೯೪೨ರಿಂದ ೧೯೪೬ರವರೆಗೆ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಧಾರವಾಡದ ಮುನಸಿಪಲ್ ೨ನೇ ನಂಬರ ಶಾಲೆಯಲ್ಲಿ ಮಾಡಿದ ಶ್ರೀನಿವಾಸ ವೈದ್ಯರು, ತಮ್ಮ ಮಾಧ್ಯಮಿಕ ಮತ್ತು ಕಾಲೇಜು ವಿದ್ಯಾಭ್ಯಾಸವನ್ನು ಧಾರವಾಡದ ಕರ್ನಾಟಕ ಹೈಸ್ಕೂಲು ಮತ್ತು ಕರ್ನಾಟಕ ಕಾಲೇಜುಗಳಲ್ಲಿ (ಪದವಿ ಶಿಕ್ಷಣದಲ್ಲಿ ಅರ್ಥಶಾಸ್ತ್ರ ಮತ್ತು ಇತಿಹಾಸ ಪ್ರಧಾನ ವಿಷಯಗಳು) ಪೂರೈಸಿದ್ದಾರೆ. ೧೯೫೯ರಲ್ಲಿ ತಮ್ಮ ಸ್ನಾತಕೋತ್ತರ ಪದವಿಯನ್ನು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪಡೆದುಕೊಂಡು, ಅದೇ ವರ್ಷ ಮುಂಬಯಿನ ಕೆನರಾ ಬ್ಯಾಂಕಿನಲ್ಲಿ ಉದ್ಯೋಗಕ್ಕೆ ಸೇರಿದರು. ಜೂನ್ ೨, ೧೯೭೧ರಂದು, ಬಿ.ಎ ಪದವಿಧರೆ ಸುಹಾಸಿನಿಯವರ ಕೈಹಿಡಿದು ನಡೆಸಿದ ಬಾಳನೌಕೆಯಲ್ಲಿ ಇವರ ಏಕಮಾತ್ರ ಸುಪುತ್ರ ಶ್ರೀ ವಿನಾಯಕರ ಜನನ. ಮುಂದೆ ಮುಂಬಯಿ, ಬೆಳಗಾವಿ, ಧಾರವಾಡ, ಗೋವಾ, ಚನ್ನೈ ಬೆಂಗಳೂರುಗಳಲ್ಲಿ ಇವರದು ಅಖಂಡ ಸೇವೆ. ೧೯೯೬ರಲ್ಲಿ ನಿವೃತ್ತಿ ಹೊಂದಿದ ಶ್ರೀನಿವಾಸ ವೈದ್ಯರು ಬೆಂಗಳೂರಿನಲ್ಲಿ ನೆಲೆಯೂರಿದ್ದಾರೆ.
ಶ್ರೀನಿವಾಸ ವೈದ್ಯರು ಕನ್ನಡದ ಅಪರಂಜಿ ಹಾಸ್ಯ ಪತ್ರಿಕೆಯ ಬರಹಗಾರರು. ನಿವೃತ್ತಿಯ ನಂತರ ಬೆಂಗಳೂರಿನಲ್ಲಿ ನೆಲೆಸಿದ ಇವರು , ಅಲ್ಲಿ ಸಂವಾದ ಎನ್ನುವ ಸಾಂಸ್ಕೃತಿಕ ಸಂಘಟನೆಯನ್ನು ಸ್ಥಾಪಿಸಿ ನಡೆಯಿಸಿಕೊಂಡು ಬಂದಿದ್ದಾರೆ.ಕನ್ನಡ ನಾಡಿನ ಖ್ಯಾತ ಬರಹಗಾರರಿಂದ ಭಾಷಣ, ಸಂವಾದ, ವಾಚನ ಮತ್ತು ಇತರ ಕಾರ್ಯಕ್ರಮಗಳು ಇಲ್ಲಿ ನಡೆಯುತ್ತವೆ.
ಇವರ ಕೆಲವು ಕೃತಿಗಳು ಇಂತಿವೆ:
This article uses material from the Wikipedia ಕನ್ನಡ article ಶ್ರೀನಿವಾಸ ವೈದ್ಯ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.