ಶ್ರೀರಂಗಪಟ್ಟಣ, ಕರ್ನಾಟಕದ ಮಂಡ್ಯ ಜಿಲ್ಲೆಯ ಒಂದು ಪ್ರಮುಖ ಐತಿಹಾಸಿಕ, ಸಾಂಸ್ಕೃತಿಕ ಹಾಗು ಧಾರ್ಮಿಕ ಮಹತ್ವ ಹೊಂದಿರುವ ಪಟ್ಟಣವಾಗಿದೆ.
ಶ್ರೀರಂಗಪಟ್ಟಣ | |
ಶ್ರೀ ರಂಗನಾಥ ಸ್ವಾಮಿ ದೇವಾಲಯ | |
ರಾಜ್ಯ - ಜಿಲ್ಲೆ | ಕರ್ನಾಟಕ - ಮಂಡ್ಯ |
ನಿರ್ದೇಶಾಂಕಗಳು | |
ವಿಸ್ತಾರ | 13 km² |
ಸಮಯ ವಲಯ | IST (UTC+5:30) |
ಜನಸಂಖ್ಯೆ (2001) - ಸಾಂದ್ರತೆ | - 1,803.69/ಚದರ ಕಿ.ಮಿ. |
ಕೋಡ್ಗಳು - ಪಿನ್ ಕೋಡ್ - ಎಸ್.ಟಿ.ಡಿ. - ವಾಹನ | - 571 438 - ++08236 - KA-11 |
ಮೈಸೂರು ನಗರದಿಂದ ೧೩ ಕಿ.ಮೀ. , ಮಂಡ್ಯ ನಗರದಿಂದ ೨೫ ಕಿ ಮೀ ದೂರದಲ್ಲಿರುವ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆಯ ಗಡಿಯಲ್ಲಿದೆ. ಪಟ್ಟಣವು ಸುತ್ತಲೂ ಕಾವೇರಿ ನದಿಯಿಂದ ಆವೃತವಾಗಿದೆ. ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿಯು ಪೂರ್ವವಾಹಿನಿ ಹಾಗು ಪಶ್ಚಿಮವಾಹಿನಿಗಳಾಗಿ ಕವಲೊಡೆದು ಹರಿಯುತ್ತದೆ. ಇದರಿಂದಾಗಿ ಶ್ರೀರಂಗಪಟ್ಟನವು ಒಂದು ದ್ವೀಪದಂತಿದೆ.
ಶ್ರೀರಂಗನಾಥ ಸ್ವಾಮಿ ದೇವಾಲಯವು ಪಟ್ಟಣದ ಪ್ರಮುಖ ಆಕರ್ಷಣೆಗಳಲ್ಲಿ ಒಂದು. ಈ ದೇವಾಲಯವು ಗಂಗ ಅರಸರು ಕಾಲದ್ದೆಂದು ಪ್ರತೀತಿಯಿದೆ. ಇದನ್ನು ೧೨ ನೇ ಶತಮಾನದಲ್ಲಿ ಜೀರ್ಣೋದ್ಧಾರ ಮಾಡಲಾಯಿತು.
ಕಾವೇರಿ ನದಿ ಕವಲೊಡೆಯುವ ಸ್ಥಳಗಳಲ್ಲೆಲ್ಲ ಶ್ರೀರಂಗನಾಥ ಸ್ವಾಮಿಯ ದೇವಾಲಯಗಳಿರುವುದು ಒಂದು ವಿಶೇಷ. ಇವುಗಳೆಂದರೆ:
ಪಶ್ಚಿಮ ವಾಹಿನಿಯು ಹಿಂದುಗಳಿಗೆ ಅಂತಿಮ ಕರ್ಮಗಳನ್ನು ಮಾಡಲು ಒಂದು ಪುಣ್ಯ ಕ್ಷೇತ್ರ. ಇಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಮೃತರ ಅಸ್ಥಿಗಳನ್ನು ವಿಸರ್ಜಿಸಿದರೆ ಮೋಕ್ಷ ಲಭಿಸುವುದೆಂದು ನಂಬಿಕೆಯಿದೆ.
ಶ್ರೀರಂಗಪಟ್ಟಣ, ಕರ್ನಾಟಕದ ಮಂಡ್ಯ ಜಿಲ್ಲೆಯ ಒಂದು ಪ್ರಮುಖ ಐತಿಹಾಸಿಕ, ಸಾಂಸ್ಕೃತಿಕ ಹಾಗು ಧಾರ್ಮಿಕ ಮಹತ್ವ ಹೊಂದಿರುವ ಪಟ್ಟಣವಾಗಿದೆ.
ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಶ್ರೀರಂಗಪಟ್ಟಣ ಐತಿಹಾಸಿಕ ಮಹತ್ವವುಳ್ಳ ಊರಾಗಿದೆ. ಶ್ರೀರಂಗಪಟ್ಟಣ ಮೈಸೂರು ಸಾಮ್ರಾಜ್ಯದ ರಾಜಧಾನಿಯಾಗಿತ್ತು.ಅದು ಯದು ವಂಶದ ಯದುರಾಯರ ಕಾಲದಿಂದಲೂ ಟಿಪ್ಪು ಸುಲ್ತಾನ್ ನ ತನಕವೂ ಮುಂದುವರೆದಿತ್ತು.ನಂತರ ಅದು ಹತ್ತಿರದ ದವಳಗಿರಿಗೆ ಸ್ಥಳಾಂತರವಯಿತು.
ಶ್ರೀರಂಗಪಟ್ಟಣವು ತನ್ನ ಐತಿಹಾಸಿಕ ಪ್ರಾಮುಖ್ಯತೆಯಿಂದಾಗಿ ಪ್ರಸಿದ್ಧ ಪ್ರವಾಸಿ ಸ್ಥಳವಾಗಿದೆ. ಈ ಊರು ಇಲ್ಲಿ 9ನೇ ಶತಮಾನದಲ್ಲಿ ನಿರ್ಮಾಣವಾದ ರಂಗನಾಥಸ್ವಾಮಿ ದೇವಾಲಯದಿಂದಾಗಿ ಶ್ರೀರಂಗಪಟ್ಟಣ ಎಂಬ ಹೆಸರು ಪಡೆದಿದೆ. ಈ ದೇವಾಲಯವು ಹಲವಾರು ವರ್ಷಗಳಿಂದ ವಿವಿಧ ಬಗೆಯ ಸಿಂಗಾರಗಳನ್ನು ಕಾಣುತ್ತಾ ಬೆಳೆದಿದೆ. ಅದರ ಫಲವಾಗಿ ಈಗ ಈ ದೇವಾಲಯವು ಹೊಯ್ಸಳ ಮತ್ತು ವಿಜಯನಗರ ಶೈಲಿಯ ಸಂಯುಕ್ತ ವಾಸ್ತುಶಿಲ್ಪಕ್ಕೆ ಉದಾಹರಣೆಯಾಗಿ ನಿಂತಿದೆ.
ಈ ಊರು ಮೈಸೂರಿನ ರಾಜಧಾನಿಯಾದಾಗ ತನ್ನ ಪ್ರಾಮುಖ್ಯತೆಯನ್ನು ಗಳಿಸಿತು.ಇಲ್ಲಿನ ದೇವಾಲಯಗಳು,ದರಿಯಾ ಡೌಲಾತು ಆ ಕಾಲದಲ್ಲೇ ನಿರ್ಮಾಣಗೊಂಡವು.
ಶ್ರೀರಂಗಪಟ್ಟಣವು ಬೆರಗುಗೊಳಿಸುವ ಸುಂದರ ತಾಣಗಳನ್ನು ಹೊಂದಿದೆ. ಭಾರತದ ಎರಡನೆ ಅತಿದೊಡ್ಡ ಜಲಪಾತವೆಂದು ಪರಿಗಣಿಸಲ್ಪಟಿರುವ ಶಿವನಸಮುದ್ರ ಜಲಪಾತದಂತಹ ಪ್ರಸಿದ್ಧ ವಿಹಾರ ತಾಣಗಳು ಇಲ್ಲಿವೆ.
ಶ್ರೀರಂಗಪಟ್ಟಣದ ಸಂಗಮ - ಇಲ್ಲಿ ಉತ್ತರ ಕಾವೇರಿ, ದಕ್ಷಿಣ ಕಾವೇರಿ ಮತ್ತು ಲೋಕಪಾವನಿ ನದಿಗಳು ಕೂಡುವ ಸಂಗಮವಿದ್ದು ನೋಡಲು ಯೋಗ್ಯವಾದ ಸ್ಥಳವಾಗಿದೆ.
ಶ್ರೀರಂಗಪಟ್ಟಣವು ಬೆಂಗಳೂರಿನಿಂದ 127 ಕಿ.ಮೀ ಮತ್ತು ಮೈಸೂರಿನಿಂದ 13 ಕಿ.ಮೀ ದೂರದಲ್ಲಿ ನೆಲೆಸಿದೆ. ಈ ಊರು ತನ್ನದೆ ಆದ ರೈಲುನಿಲ್ದಾಣವನ್ನುಹೊಂದಿದೆ. ಮೈಸೂರು ಇಲ್ಲಿಗೆ ಸಮೀಪದ ವಿಮಾನನಿಲ್ದಾಣವಾಗಿದೆ. ರಸ್ತೆಯಮೂಲಕವು ಶ್ರೀರಂಗಪಟ್ಟಣಕ್ಕೆ ಸುಲಭವಾಗಿ ತಲುಪಬಹುದು. ಈ ದ್ವೀಪವು ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ನೆಲೆಸಿದೆ.
ಗುಂಬಜ್ ಕೃಷ್ಣ ರಾಜ ಸಾಗರ ಬಲಮುರಿ ಎಡಮುರಿ ಸಂಗಮ್ ಗೋಸಾಯ್ ಘಾಟ್ ಧ್ವನಿ ಬೆಳಕು ಕಾರ್ಯಕ್ರಮ ಸ್ನಾನ ಘಟ್ಟ ಚಾಮರಾಜೇಂದ್ರ ವಸ್ತು ಸಂಗ್ರಹಾಲಯ ಕಾವೇರಿನದಿ ಮಹದೇವಪುರ
ಬನ್ನಹಳ್ಳಿ ಶ್ರೀ ತಿರುಮಲ ದೇವರು
ಶ್ರೀರಂಗಪಟ್ಟಣ ತಾಲೂಕಿನ ಒಂದು ಪುಟ್ಟಗ್ರಾಮ ಬನ್ನಹಳ್ಳಿ. ತಾಲೂಕಿನ ಗಡಿ ಭಾಗದಲ್ಲಿರುವ ಇದು ಮಂಡ್ಯ ನಗರಕ್ಕೆ ಅತಿ ಸಮೀಪವಿದೆ. ಈ ಕಾರಣದಿಂದ ಬನ್ನಹಳ್ಳಿಯ ಹೆಚ್ಚಿನ ವ್ಯವಹಾರ ಮ೦ಡ್ಯದೊ೦ದಿಗೆ. ಈಗ ಒಂದು ರೀತಿಯಲ್ಲಿ ಈ ಹಳ್ಳಿ ನಿದ್ರಿಸುತ್ತಿದೆ ಎಂದು ಹೇಳಬೇಕು. ಕೆಲ ಶತಮಾನಗಳ ಹಿಂದಿನವರೆಗೆ ಇದು ಅತ್ಯಂತ ಚಟುವಟಿಕೆಯಿಂದ ಕೂಡಿದ ಸ್ಥಳವಾಗಿತ್ತು. ಇದರ ಇತಿಹಾಸವನ್ನು ಇದುವರೆಗೆ ಯಾರೂ ಬರೆಯದಿದ್ದರು ಐತಿಹಾಸಿಕ ಮಹತ್ವ ಪಡೆದ ಸ್ಥಳ ಇದಾಗಿದೆ.
ಬನ್ನಹಳ್ಳಿಯ ಕೇ೦ದ್ರಬಿಂದು ಶ್ರೀ ತಿರುಮಲ ದೇವಾಲಯ. ಗ್ರಾಮದ ಜನರಿಗೆ ಈ ದೇವರ ಬಗ್ಗೆ ಅಪಾರ ಶ್ರದ್ಧೆ, ಭಕ್ತಿ ಮತ್ತು ನ೦ಬಿಕೆ. ಈ ದೇವರ ಕಾರ್ಯಗಳಲ್ಲಿ ಗ್ರಾಮದ ಜನರೆಲ್ಲಾ ಒಂದಾಗಿ ಸೇರಿ ಯಶಸ್ವಿಗೊಳಿಸುವುದು ಅಪೂರ್ವ ಸನ್ನಿವೇಶವೆ ಸರಿ. ಈ ತೆರೆನಾದ ಧಾರ್ಮಿಕ ನಡಾವಳಿ ಇರುವ ಈ ಸಮಾಜಕ್ಕೆ ಅದರದೇ ಆದ ಇತಿಹಾಸ ಮತ್ತು ಪರಂಪರೆಯ ಇದೆ.
This article uses material from the Wikipedia ಕನ್ನಡ article ಶ್ರೀರಂಗಪಟ್ಟಣ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.