ದಿ. ಜೂನ್ 2, 2014, 11.10AM IST (ವಿಜಯ ಕರ್ನಾಟಕ) ಆಂಧ್ರ ಪ್ರದೇಶ ರಾಜ್ಯವು ಎರಡು ಭಾಗವಾಗಿ ಒಡೆದು, ಎರಡು ರಾಜ್ಯವಾಯಿತು. ಅವು ತೆಲಂಗಾಣ ಮತ್ತು ಸೀಮಾಂಧ್ರ (ಆಂಧ್ರ).
ದೇಶದ 29ನೇ ರಾಜ್ಯವಾಗಿ ತೆಲಂಗಾಣ ಉದಯವಾಗಿದ್ದು, ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಕಲ್ವಕುಂಟ್ಲ ಚಂದ್ರಶೇಖರ ರಾವ್ ಅಧಿಕಾರ ಸ್ವೀಕರಿಸಿದರು 294 ಸದಸ್ಯರುಳ್ಳ ಆಂಧ್ರ ವಿಧಾನಸಭೆಯಲ್ಲಿ ತೆಲಂಗಾಣದ 119 ಶಾಸಕರಿದ್ದಾರೆ. ಆಂಧ್ರದ 42 ಲೋಕಸಭಾ ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳು ತೆಲಂಗಾಣ ವ್ಯಾಪ್ತಿಯಲ್ಲಿವೆ . ಉಳಿದ ೨೫ ಸ್ಥಾನಗಳು ಹೊಸ ಆಂಧ್ರ ಪ್ರದೇಶದಲ್ಲಿವೆ.
ಸೀಮಾಂಧ್ರಕ್ಕೆ ಹೊಸ ರಾಜಧಾನಿ
2 Dec, 2016
ದಿ. ಜೂನ್ 2, 2014, ಆಂಧ್ರ ಪ್ರದೇಶ ರಾಜ್ಯವು ಎರಡು ಭಾಗವಾಗಿ ಒಡೆದು, ಎರಡು ರಾಜ್ಯವಾಯಿತು. ಅವು ತೆಲಂಗಾಣ ಮತ್ತು ಸೀಮಾಂಧ್ರ (ಆಂಧ್ರ).
ಮೂಲ ಆಂಧ್ರ ಪ್ರದೇಶ ಇಬ್ಭಾಗವಾಗಿ ತೆಲಂಗಾಣ ಆಂಧ್ರ ಎಂದುಎರಡು ರಾಜ್ಯಗಳಾದಾಗ ಹೈದರಾಭಾದು ತೆಲಂಗಾಣಕ್ಕೆ ರಾಜಧಾನಿಯಾಯಿತು. ಹೊಸ ಆಂಧ್ರವು ಅಮರಾವತಿ ಅಂಬ ಹೊಸನಗರವನ್ನು ಕಟ್ಟಿ ಆಂಧ್ರಪ್ರದೇಶದ ಸಂಪೂರ್ಣ ಆಡಳಿತ ನೂತನ ರಾಜಧಾನಿ ಅಮರಾವತಿಗೆ 1-12-2016 ಗುರುವಾರ ಸ್ಥಳಾಂತರವಾಗುವ ಮೂಲಕ ಹೊಸ ಅಧ್ಯಾಯ ಆರಂಭಿಸಿತು.
ಅಮರಾವತಿಗೆ ಸಮೀಪದ ವೆಲಗಪುಡಿಯಲ್ಲಿನ ತಾತ್ಕಾಲಿಕ ಸಚಿವಾಲಯದಲ್ಲಿನ ಕಚೇರಿಯಿಂದಲೇ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕಾರ್ಯನಿರ್ವಹಿಸಲು ಆರಂಭಿಸಿದರು. ಸಚಿವ ಸಂಪುಟದ ಸಭೆಯೂ ಸಹ ಪ್ರಥಮಬಾರಿ ಇಲ್ಲಿ ನಡೆಯಿತು.
This article uses material from the Wikipedia ಕನ್ನಡ article ಸೀಮಾಂಧ್ರ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses. ®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.