ಹರಿಹರ ದಾವಣಗೆರೆ ಜಿಲ್ಲೆ ಒಂದು ತಾಲ್ಲೂಕು ಕೇಂದ್ರ.
ಕರ್ನಾಟಕ ರಾಜ್ಯದ ಮಧ್ಯದಲ್ಲಿದೆ. ಈ ಕಾರಣದಿಂದಾಗಿ ಇದನ್ನು ರಾಜ್ಯದ ರಾಜಧಾನಿಯನ್ನಾಗಿ ಮಾಡುವ ವಿಚಾರವಿತ್ತಂತೆ.ಇದು ಉತ್ತರ ಕರ್ನಾಟಕ ದಕ್ಷಿಣ ಕರ್ನಾಟಕದ ಹೆಬ್ಬಾಗಿಲಾಗಿದೆ. ತುಂಗಭದ್ರಾ ನದಿಯ ದಡದಲ್ಲಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಿಂದ ಸರಿಯಾಗಿ ಸುಮಾರು ೨೭೫ ಕಿ.ಮಿ.ದೂರದಲ್ಲಿದೆ.ಹುಬ್ಬಳ್ಳಿಯಿಂದ ಸರಿಯಾಗಿ ಸುಮಾರು ೧೩೦ ಕಿ.ಮಿ.ದೂರದಲ್ಲಿದೆ ಇದು ರಾಷ್ಟ್ರೀಯ ಹೆದ್ದಾರಿ ೪ (ಪೂನಾ-ಬೆಂಗಳೂರು ಮಾರ್ಗದಲ್ಲಿದೆ.)
ಹರಿಹರ | |
---|---|
ಪಟ್ಟಣ | |
Coordinates: 14°30′25″N 75°48′00″E / 14.507°N 75.8°E |
'ಹರಿಹರವನ್ನು ದೇವಸ್ಥಾನಗಳ ಊರೆಂದು ಕರೆಯಬಹುದು.ಇದನ್ನು ದಕ್ಷಿಣ ಕಾಶಿ ಎನ್ನುವರು. ಕೆಲವು ಪ್ರಮುಖ ಕೈಗಾರಿಕಾ ಸಂಸ್ಥೆಗಳಿಂದಾಗಿ ಈ ಊರು ಸಾಕಷ್ಟು ಜನರಿಗೆ ಜೀವನಾಧಾರವಾಗಿದೆ. ಇಲ್ಲಿನ ಪ್ರಮುಖ ಕೈಗಾರಿಕಾ ಸಂಸ್ಥೆಗಳಲ್ಲಿ ಉಲ್ಲೇಖನೀಯವಾದವುಗಳೆಂದರೆ, 'ಮೈಸೂರ್ ಕಿರ್ಲೋಸ್ಕರ್ ಲಿಮಿಟೆಡ್ (ಮೆಷಿನ್ ಟೂಲ್) ಕಾರ್ಖಾನೆ,' (ಈಗ ಮುಚ್ಚಲಾಗಿದೆ) ಹಾಗು 'ಹರಿಹರ್ ಪಾಲಿಫೈಬರ್ಸ್ (ಗ್ರಾಸಿಂ ಇಂಡಸ್ಟ್ರೀಸ್ ಲಿಮಿಟೆಡ್').
ಇಲ್ಲಿಯ ಪ್ರಮುಖ ಪ್ರವಾಸಿ ಆಕರ್ಷಣೆ ಎಂದರೆ, ಹೊಯ್ಸಳರ ಕಾಲದ ಹರಿಹರೇಶ್ವರ ದೇವಸ್ಥಾನ. ಹರಿಹರೇಶ್ವರ ಸ್ವಾಮಿಯು ಇರುವುದರಿಂದ ಊರಿಗೆ ಹರಿಹರ ಎಂದು ಹೆಸರು ಬಂದಿತು. ಇಸವಿ ೧೨೨೪ರಲ್ಲಿ ಹೊಯ್ಸಳ ದೊರೆ ೨ನೇ ವೀರ ನರಸಿಂಹನ ದಂಡನಾಯಕನಾಗಿದ್ದ ಪೊಲ್ವಾಳನು ಈ ದೇವಾಲಯವನ್ನು ನಿರ್ಮಿಸಿದನೆಂದು ಶಾಸನಗಳು ಹೇಳುತ್ತವೆ. ಗರ್ಭಗುಡಿ, ಅಂತರಾಳ, ನವರಂಗ ಮತ್ತು ವಿಶಾಲವಾದ ಮುಖಮಂಟಪಗಳನ್ನು ಈ ದೇವಾಲಯ ಹೊಂದಿದೆ. ಇಲ್ಲಿ ಮುಖಮಂಟಪವೇ ಸುಖನಾಸಿ. ಮುಖಮಂಟಪದಲ್ಲಿ ೬೦ ಕಲಾತ್ಮಕ ಕಂಬಗಳ ರಚನೆಯಿದೆ. ಇವು ಹೊಯ್ಸಳ ಶೈಲಿಯ ಪ್ರತಿಬಿಂಬ ನೇರವಾಗಿಯೂ ತಲೆಕೆಳಗಾಗಿಯೂ ಕಾಣಿಸುವ ಕಂಬಗಳು. ದೇವಾಲಯದ ಮುಂದೆ ಎರಡೂ ಪಾರ್ಶ್ವಗಳಲ್ಲಿ ಅತ್ಯಾಕರ್ಷಕವಾದ ದೀಪಸ್ತಂಭಗಳಿವೆ. ಈ ಎರಡೂ ದೀಪಸ್ತಂಭಗಳ ಬುಡದಲ್ಲಿ ಸಣ್ಣ ನಂದಿ ಮೂರ್ತಿಯನ್ನು ಕೆತ್ತಲಾಗಿದೆ.
ಹರಿಹರೇಶ್ವರ ಮೂರ್ತಿಯು ಶಿವನ ದೇಹದ ಅರ್ಧಭಾಗ ಮತ್ತು ವಿಷ್ಣುವಿನ ದೇಹದ ಅರ್ಧಭಾಗದಿಂದ ಕೂಡಿದ್ದು, ಎರಡೂ ಸೇರಿ ಹರಿಹರೇಶ್ವರನಾಗಿದೆ. ಇದೇ ಕಾರಣದಿಂದ ದೇವಾಲಯದಲ್ಲೆಲ್ಲೂ ನಂದಿ ಕಾಣಸಿಗುವುದಿಲ್ಲ. ಆದರೆ ಹರಿಹರೇಶ್ವರ ದೇವಾಲಯದ ಬಲಕ್ಕೆ ಗರ್ಭಗುಡಿಗೆ ಸಮಾನಾಂತರವಾಗಿ ಸಣ್ಣದಾದ ಶಿವ ದೇವಾಲಯವೊಂದಿದೆ. ನಂದಿ ಈ ಸಣ್ಣ ದೇವಾಲಯದ ಹೊರಗಡೆ ಆಸೀನನಾಗಿದ್ದಾನೆ. ಅಲ್ಲೇ ಮುಂದೆ ರಾಮೇಶ್ವರನ ಗುಡಿಯೊಂದಿದೆ. ಕಪ್ಪು ಬಣ್ಣದ ಹರಿಹರೇಶ್ವರನ ಮೂರ್ತಿಯು ೭ ಅಡಿಯಷ್ಟು ಎತ್ತರವಿದ್ದು ಆಕರ್ಷಕವಾಗಿದೆ.ಹರಿಹರ ತುಂಗಭದ್ರ ನದಿಯ ದಂಡೆಯಲ್ಲಿದ್ದು ಹರಿಹರ ಎರಡು ಹಿಂದೂ ದೇವತೆಗಳ ಸಂಯೋಜನೆಯಿಂದ ತನ್ನ ಹೆಸರನ್ನು ಪಡೆದುಕೊಂಡಿದೆ. ಹರಿ ಎಂದರೆ ವಿಷ್ಣು ಮತ್ತು ಹರ ಅಂದರೆ ಶಿವ. ಹೊಯ್ಸಳರ ಕಾಲದಲ್ಲಿ ಹರಿಹರೇಶ್ವರ ದೇವಸ್ಥಾನ 12 ನೇ ಶತಮಾನದಲ್ಲಿ ನಿರ್ಮಿಸಲ್ಪಟ್ಟ ಪ್ರಸಿದ್ಧ ದೇವಾಲಯವಾಗಿದೆ. ಹರಿಹರವನ್ನು"ದಕ್ಷಿಣ ಕಾಶಿ"ಎಂದೂ ಕರೆಯುವರು...
ಇಲ್ಲಿನ ಸ್ಥಳ ಪುರಾಣ ಒಂದರ ಪ್ರಕಾರ ಗುಹಾಸುರನೆಂಬ ರಾಕ್ಷಸನ ವಧೆಗಾಗಿ ಹರಿ(ವಿಷ್ಣು) ಮತ್ತು ಹರ(ಶಿವ)ರು ಜೊತೆಗೂಡಿ ಹರಿಹರ ಸ್ವಾಮಿಯ ಅವತಾರ ತಳೆದರೆಂಬ ಪ್ರತೀತಿ ಇದೆ. ಹರಿಹರೇಶ್ವರ ದೇವಾಲಯದ ಬಲ ಭಾಗದಲ್ಲಿ 'ಓಂಕಾರ ಮಠ'ವಿದ್ದು 'ಸ್ವಾಮಿ ಶ್ರೀ ಶಿವಾನಂದ ತೀರ್ಥ' ರಿಂದ ಸ್ಥಾಪಿಸಲಾಗಿದೆ. ಹರಿಹರೇಶ್ವರ ದೇವಾಲಯದ ಪಕ್ಕದಲ್ಲಿ ಒಂದು ಉದ್ಭವ ಗಣಪತಿಯಿದೆ.ಇದು ದಿನೇ ದಿನೇ ಅದು ಬೆಳೆಯುತ್ತಿದೆ.
ಹತ್ತಿರದ ದೇವಾಲಯಗಳು :
ಮಕ್ಕಳ ಸಾಹಿತ್ಯ ಮತ್ತು ಸಾಂಸ್ಖ್ರುತಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಠೆ " ಮಕ್ಕಳ ಲೋಕ"
ಅಂತರಾಷ್ಟ್ರೀಯ ಯೋಗ ಪಟು ಕೆ. ಜೈಮುನಿ ಇವರು ತಮ್ಮ ಯೋಗ ಸಾಧನೆಯನ್ನು ಮಾಡುತ್ತಿದ್ದಾರೆ
This article uses material from the Wikipedia ಕನ್ನಡ article ಹರಿಹರ (ಊರು), which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.