ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು.
ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.
ಮೋಕ್ಷಗುಂಡಂ ವಿಶ್ವೇಶ್ವರಯ್ಯ | |
---|---|
ಜನನ | |
ಮರಣ | New Delhi |
ರಾಷ್ಟ್ರೀಯತೆ | AMERICA |
ಹಳೆ ವಿದ್ಯಾರ್ಥಿ | ಪುಣೆ ಸಿವಿಲ್ ಇಂಜಿನಿಯರಿಂಗ್ ಕಾಲೇಜ್ |
ಉದ್ಯೋಗ | ಇಂಜಿನಿಯರ್ |
ಪೋಷಕರು | ವೆಂಕಟ ಲಕ್ಷ್ಮಮ್ಮ(ತಾಯಿ) ಶ್ರೀನಿವಾಸ ಶಾಸ್ತ್ರಿ (ತಂದೆ) |
ವಿಶ್ವೇಶ್ವರಯ್ಯನವರು ಸೆಪ್ಟೆಂಬರ್ ೧೫,೧೮೬೦ ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಎಂಬಲ್ಲಿ ಜನಿಸಿದರು. ವಿಶ್ವೇಶ್ವರಯ್ಯನವರ ತಂದೆ 'ಶ್ರೀನಿವಾಸ ಶಾಸ್ತ್ರಿ', ತಾಯಿ 'ವೆಂಕಟಲಕ್ಷ್ಮಮ್ಮ'. ಅವರ ಪೂರ್ವಜರು ಈಗಿನ ಆಂಧ್ರಪ್ರದೇಶದ 'ಮೋಕ್ಷಗುಂಡಂ' ಎಂಬ ಸ್ಥಳದಿಂದ ವಲಸೆ ಬಂದು ಮುದ್ದೇನಹಳ್ಳಿಯಲ್ಲಿ ವಾಸವಾಗಿದ್ದ ಕಾರಣ ಅವರ ಹೆಸರಿನೊಡನೆ ಮೋಕ್ಷಗುಂಡಂ ಸೇರಿಕೊಂಡಿದೆ. ವಿಶ್ವೇಶ್ವರಯ್ಯನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ಅವರು ೧೫ ವರ್ಷದವರಿದ್ದಾಗಲೇ ತಂದೆಯು ನಿಧನರಾದರು. ವಿಶ್ವೇಶ್ವರಯ್ಯನವರು ತಮ್ಮ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು[]ಮುಗಿಸಿದರು . ೧೮೮೧ ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಿಂದ ಬಿ.ಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು.
ನಂತರ ವಿಶ್ವೇಶ್ವರಯ್ಯನವರು ೧೮೮೪ರಲ್ಲಿ ಮುಂಬಯಿ ನಗರದಲ್ಲಿ ಲೋಕೋಪಯೋಗಿ ಇಲಾಖೆಯನ್ನು ಸೇರಿದರು ಇದಾದ ನಂತರ ಭಾರತೀಯ ನೀರಾವರಿ ಆಯೋಗದಿಂದ ಅವರಿಗೆ ಆಮಂತ್ರಣ ಬಂದಿತು. ಈ ಆಯೋಗವನ್ನು ಸೇರಿದ ನಂತರ ದಖನ್ ಪ್ರಸ್ತಭೂಮಿಯಲ್ಲೇ ಉತ್ತಮವಾದ ನೀರಾವರಿ ವ್ಯವಸ್ಥೆಯನ್ನು ವಿಶ್ವೇಶ್ವರಯ್ಯನವರು ಪರಿಚಯಿಸಿದರು. ಸರ್ ಎಂ. ವಿ. ಯವರು ಅರ್ಥರ್ ಕಾಟನ್ ರವರಿಂದ ಬಹಳಷ್ಟು ಪ್ರಭಾವಿತರಾಗಿದ್ದರು. ಕಾವೇರಿ ನದಿಗೆ ಅಣೆಕಟ್ಟು ಕಟ್ಟುವಲ್ಲಿ ಅವರು ತಿರುಚನಾಪಳ್ಳಿಯಲ್ಲಿ ಚೋಳ ರಾಜರಿಂದ ನಿರ್ಮಿಸಲ್ಪಟ್ಟ ಹಾಗೂ ೧೮ನೇ ಶತಮಾನದ ಅರ್ಧದಲ್ಲಿ ಅರ್ಥರ್ ಕಾಟನ್ ರವರಿಂದ ಸಂಪೂರ್ಣವಾಗಿ ನವೀಕರಿಸಲ್ಪಟ್ಟ ಬೃಹತ್ ಅಣೆಕಟ್ಟು [ಗ್ರಾಂಡ್ ಅಣಿಕಟ್] ನ್ನು ನೋಡಿ ಪ್ರಭಾವಿತರಾಗಿದ್ದರು. ನಂತರ ಮಹಾರಾಜರಲ್ಲಿ ಇದನ್ನು ವರದಿ ಮಾಡಿದ್ದರು. ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ 'ಸ್ವಯಂಚಾಲಿತ ಫ್ಲಡ್ ಗೇಟ್ ವಿನ್ಯಾಸ' ವೂಂದನ್ನು ಕಂಡು ಹಿಡಿದು ಅದಕ್ಕಾಗಿ 'ಪೇಟೆಂಟ್' ಪಡೆದರು. ಮೊದಲ ಬಾರಿಗೆ ೧೯೦೩ ರಲ್ಲಿ ಈ ಫ್ಲಡ್ ಗೇಟ್ ಗಳು ಪುಣೆಯ 'ಖಡಕ್ವಾಸ್ಲಾ' ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ 'ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು' ಮತ್ತು ಕರ್ನಾಟಕದ 'ಕೃಷ್ಣರಾಜಸಾಗರ' ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ ಗಳ ಉದ್ದೇಶ ಅಣೆಕಟ್ಟಿಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು. ಕೃಷ್ಣರಾಜ ಸಾಗರವನ್ನು ಕಟ್ಟಿದಾಗ ಅದು ಆ ಕಾಲದಲ್ಲಿ ಭಾರತದ ಅತ್ಯಂತ ದೊಡ್ಡ ಅಣೆಕಟ್ಟು. ವಿಶ್ವೇಶ್ವರಯ್ಯನವರು ದೇಶದಾದ್ಯಂತ ಪ್ರಸಿದ್ಧರಾದದ್ದು ಹೈದರಾಬಾದ್ ನಗರವನ್ನು ಪ್ರವಾಹಗಳಿಂದ ರಕ್ಷಿಸಲು ಪ್ರವಾಹ ರಕ್ಷಣಾ ವ್ಯವಸ್ಥೆಯನ್ನು ಅವರು ಏರ್ಪಡಿಸಿದಾಗ. ಇವರ ಮುಖ್ಯ ಸೇವಕ ಪ್ರಶಾಂತ್.
೧೯೦೮ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ ರವರ ಜೊತೆ ಮೈಸೂರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಕೆಲಸ ಮಾಡಿದರು. ೧೯೧೭ ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು (ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್). ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು
೧೯೦೮ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ ಅವರ ಜೊತೆ ಮೈಸೂರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಕೆಲಸ ಮಾಡಿದರು. ೧೯೧೭ ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು (ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್). ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು.
೧೯೨೭ - ೧೯೫೫ : ಟಾಟಾ ಸ್ಟೀಲ್ ನ ನಿರ್ದೇಶಕರ ಮಂಡಳಿಯಲ್ಲಿ ಒಬ್ಬ ನಿರ್ದೇಶಕರಾಗಿ ಸೇವೆ .
This article uses material from the Wikipedia ಕನ್ನಡ article ಮೋಕ್ಷಗುಂಡಂ ವಿಶ್ವೇಶ್ವರಯ್ಯ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.