ಆಂಡಯ್ಯ

ಆಂಡಯ್ಯ (ಕ್ರಿ.ಶ.

೧೨೨೫) :- ಕ‌ನ್ನಡ ಭಾಷೆಯ ಮೊಟ್ಟ ಮೊದಲನೆಯ ಅಚ್ಚಗನ್ನಡ ಕಾವ್ಯ. ಅಚ್ಚ ಕನ್ನಡದ ಕವಿ ಆಂಡಯ್ಯನ ಕನ್ನಡ ಭಾಷೆಯ ಅಭಿಮಾನ ಲೋಕೋತ್ತರವಾದುದು. ಸಂಸ್ಕೃತದ ಒಂದೂ ಪದವನ್ನು ಬೆರಸದೆ, ಅಚ್ಚ ಕನ್ನಡದಲ್ಲಿ ಕಾವ್ಯ ರಚನೆಯನ್ನು ಮಾಡಿದ ಹೆಗ್ಗಳಿಕೆ ಆಂಡಯ್ಯನದು. ಈ ಕಾವ್ಯದ ಹೆಸರು ಕಬ್ಬಿಗರ ಕಾವಂ - ಕವಿಗಳ ರಕ್ಷಕ ಎಂದು ತನ್ನ ಕೃತಿಗೆ ನಾಮಕರಣ ಮಾಡಿದನು.ಇದು ರಮ್ಯವಾಗಿರುವುದರಿಂದ ಇದಕ್ಕೆ ಸೊಬಗಿನ ಸುಗ್ಗಿ ಎಂಬ ಹೆಸರು ಬಂದಿದೆ.ಸಂಸ್ಕೃತ ತಿಳಿದವರು ಇದನ್ನು ಮದನ ವಿಜಯ ಎಂದು ಕರೆಯುತ್ತಾರೆ.

ಕವಿಯ ಜೀವನ

ಕನ್ನಡ ಭಾಷೆಯ ಅಭಿಮಾನ, ತವರು ನೆಲ, ತಾಯಿನುಡಿಯ ಬಗ್ಗೆ ಕವಿಗೆ ಒಲವು ಅಪಾರ. ಈತನ ನೆಲೆ ಬನವಾಸಿಯ ಪ್ರಾಂತ್ಯ. ರಾಜಾಶ್ರಯ ಕದಂಬ ದೊರೆ ಕಾಮದೇವ. ಆಂಡಯ್ಯ ತನ್ನ ಮೂಲ ಕೃತಿಗೆ ಕಾವನ ಗೆಲ್ಲಂ ಎಂದು ನಾಮಕರಣ ಮಾಡಿದ್ದಾನೆ. ಇದರ ಇನ್ನೊಂದು ಹೆಸರಾದ ಕಬ್ಬಿಗರ ಕಾವಂ ಎಂಬುದು ಸಂಸ್ಕೃತದ ಸಹಾಯವಿಲ್ಲದೆ ಅಚ್ಚ ಕನ್ನಡದಲ್ಲಿ ಬರೆದು ಕವಿಗಳನ್ನು ಕಾಪಾಡಿದವನು ಎಂಬ ಅರ್ಥ. ಕಾರಣಾಂತರಗಳಿಂದ ತಲೆಮಾರುಗಳಿಂದ ಸಂಪ್ರದಾಯವಾಗಿ ಬಹು ಜನಪ್ರಿಯವಾಗಿ ನೆಲೆ ನಿಂತ ಹೆಸರು ಎಂದು ವಿದ್ವಾಂಸರು ಈಚೆಗೆ ನಿರ್ಣಯಿಸಿದ್ದಾರೆ.

ಕಬ್ಬಿಗರ ಕಾವಂ -ಕಥಾಸಾರ

  • ಇದರ ಮೂಲ ನಾಮ ಕಾವನ ಗೆಲ್ಲ ಎಂದೂ, ಸೊಬಗಿನ ಸುಗ್ಗಿ ಎಂಬ ಪರ್ಯಾಯ ಹೆಸರಿರುವದಾಗಿಯೂ ಕೆಲವು ಸಂಶೋಧಕರು ಅಭಿಪ್ರಾಯ ಪಡುತ್ತಾರೆ. ಇದು ಚಂಪೂಕಾವ್ಯ. ಇದರಲ್ಲಿ ನಡು ನಡುವೆ ಬರುವ ಸಣ್ಣ ಸಣ್ಣ ಗದ್ಯ ಖಂಡಗಳ ಜೊತೆಗೆ ವೃತ್ತಗಳೂ ಕಂದಗಳೂ ಕೂಡಿ ಒಟ್ಟು 272 ಪದ್ಯಗಳಿವೆ.
  • ಈ ಕೃತಿಯ ಕಥಾಸಾರ ಸ್ಥೂಲವಾಗಿ ಹೀಗಿದೆ: "ಪೂವಿನ ಪೊಳಲಿನ ನನೆವಿಲ್ಲನೆಂಬ ದೊರೆ ಕನಸಿನಲ್ಲಿ ಕಂಡ ಅಪ್ಸರೆಯನ್ನೇ ಎಚ್ಚತ್ತು ವನವಿಹಾರದಲ್ಲಿ ಕಂಡಾಗ ಆಕೆ ಹೇಳಿದ ಕಥೆಯಿಂದ ತನ್ನ ನಿಜಸ್ಥಿತಿಯನ್ನು ಅರಿಯುತ್ತಾನೆ. ಆಕೆ ಹೇಳಿದ ಆ ಕಥೆ ಹೀಗಿದೆ: ಕಂಪಿನಪೊಳಲಿನ ಕರ್ವುವಿಲ್ಲನಿಗೆ ತನ್ನ ಪರಿವಾರದ ಚಂದ್ರನನ್ನು ಶಿವ ಕರೆದೊಯ್ದನೆಂಬ ಸುದ್ದಿ ಬರುತ್ತದೆ. ಚಂದ್ರನ ಬಿಡುಗಡೆಗಾಗಿ ಕರ್ವುವಿಲ್ಲ ಕಳುಹಿಸಿದ ತಂಗಾಳಿಯ ದೌತ್ಯ ವಿಫಲವಾಗುತ್ತದೆ.
  • ಕರ್ವುವಿಲ್ಲ ಸೇನಾಸಹಿತವಾಗಿ ಶಿವನ ಮೇಲೆ ಏರಿ ಹೋಗುವಾಗ ದಾರಿಯಲ್ಲಿ ಕಂಡ ಸವಣನೊಬ್ಬನಿಗೆ ಕೈಮುಗಿದು ಸಾಗುತ್ತಾನೆ. ಕರ್ವುವಿಲ್ಲನ ಸೇನೆ ವೀರಭದ್ರನ ನಾಯಕತ್ವದಲ್ಲಿ ಹೋರಿದ ಶಿವಸೇನೆಯನ್ನು ಸೋಲಿಸುತ್ತದೆ. ಕಡೆಗೆ ಶಿವನಿಗೂ ಕರ್ವುವಿಲ್ಲನಿಗೂ ಯುದ್ಧವಾಗಿ ಕರ್ವುವಿಲ್ಲನ ಅಂಬಿನಿಂದ ಶಿವನು ಅರೆವೆಣ್ಣೆನಾಗುತ್ತಾನೆ.
  • ಶಿವನ ಶಾಪದಿಂದ ಕರ್ವುವಿಲ್ಲನಿಗೆ ಪತ್ನಿಯ ಅಗಲಿಕೆಯುಂಟಾಗಿ ತನ್ನರಿವೇ ತನಗೆ ಮರೆತುಹೋಗುವಂಥ ಸ್ಥಿತಿ ಬರುತ್ತದೆ". ಈ ಕಥೆ ಹೇಳಿದ ಅಪ್ಸರೆ ನನೆವಿಲ್ಲನೇ ಕರ್ವುವಿಲ್ಲನೆಂಬುದನ್ನೂ ತಿಳಿಸಿ ಶಾಪವಿಮೋಚನೆಯಾದುದನ್ನು ನಿರೂಪಿಸಿ ಮತ್ತೆ ಮಾಯವಾಗುತ್ತಾಳೆ. ನನೆವಿಲ್ಲನಾಗಿದ್ದ ಕರ್ವುವಿಲ್ಲ ತನ್ನಸತಿ ಇಚ್ಚೆಗಾರ್ತಿಯನ್ನು ಕೂಡಿ ಸುಖದಿಂದಿರುತ್ತಾನೆ.

ಕಬ್ಬಿಗರ ಕಾವಂ ಭಾಷೆಯ ವೈಶಿಷ್ಟ್ಯ

೧. ಸೊಗವಿಪ ಸಕ್ಕದಂ ಬೆರಸಿದಲ್ಲದೆ ಕನ್ನಡದಲ್ಲಿ ಕಬ್ಬಮಂ|
ಬಗೆಗೊಳೆ ಪೇಳಿಲಾರರಿನಿತುಂ ಸಲೆ ಮುನ್ನಿನ ಪೆಂಪನಾಳ್ದ ಕ||
ಬ್ಬಿಗರದು ಮಾತನಾಡಿದವೊಲಂದವನಾಳ್ದಿರೆ ಪೇಳ್ವ್ ಬಲ್ಪು ನೆ||
ಟ್ಟಗೆ ದೊರೆಕೊಂಡುದಿಂತಿವನೊಳಲ್ಲದೆ ಕೇಳ್ ದೊರೆಕೊಳ್ಳದಾರೊಳಂ ||

೨. ಎಂದು ತಮತಮಗೆ ಬಲ್ಲವ
ರೆಂದೊಡೆನಾನವರ ಬಯಕೆಯ ಸಲಿಸುವೆನಿ|
ನ್ನೆಂದ ಅಚ್ಚಗನ್ನಡಂ ಬಿಗಿ
ವೊಂದಿರೆ ಕಬ್ಬಿಗರ ಕಾವಂ
ನೊಲವಿಂದೊರೆದೆ||
ಎಂದು ಹೇಳಿ ಆಂಡಯ್ಯ ತನ್ನ ಕಾವ್ಯಕ್ಕೆ ಪ್ರೇರಣೆ ಹೇಗೆ ಬಂದಿತೆಂಬುದನ್ನು ತಿಳಿಸಿದ್ದಾನೆ. ದೇಸೆ ಪೊದಳ್ದಿರೆ, ಕೊಂಕು ತೀವೆ ತಾನು ಕಾವ್ಯವನ್ನು ಬರೆವುದಾಗಿ ಹೇಳಿದ್ದಾನೆ.

೩.ಪಲವುಂನಾಲೆಗೆಯುಳ್ಳವಂಬಗೆವೊಂಡೆಂದುಬಣ್ಣಿಸಲ್ಕಾರನಾ. -
ನೆಲನಂ ಮತ್ತಿನ ಮಾನಿಸರ್ ಪೊಗಳಲ್ ಏನಂ ಬಲ್ಲೆರೆಂಬೊಂದುಬ|.
ಕನ್ನಡಮೆನಿಪ್ಪನಾಡು ಚಲ್ವಾಯ್ತು ಮೆ
ಲ್ಲೆಲರಿಂಪೂತಕೊಳಂಗಳಿಂ ಕಾಲೂರ್ಗಳಿಂ ಕೆಯ್ಗಳಿಂ ||
 

  • ಹೀಗೆಂಬುದಾಗಿ ಪ್ರಾರಂಭಮಾಡಿ ಕವಿ ತನ್ನ ನಾಡುನುಡಿಗಳನ್ನು ವಿಪುಲವಾಗಿ ಬಣ್ಣಿಸಿದ್ದಾನೆ. ಆಂಡಯ್ಯನ ತವರುನೆಲದ ತವರುನುಡಿಯ ಕವಡರಿಯದ ಮಮತೆ ಕಾವ್ಯದ ಉದ್ದಕ್ಕೂ ಕಂಡುಬಂದು ಸಹೃದಯರ ಮನಸ್ಸನ್ನು ಸೂರೆಗೊಳ್ಳುತ್ತದೆ.ಕನ್ನಡ ಸಾಹಿತ್ಯದಲ್ಲಿ ಕಬ್ಬಿಗರ ಕಾವಂ ಒಂದು ವಿಶಿಷ್ಟ ಕೃತಿ. ಸಂಸ್ಕೃತದ ಸಹಾಯವನ್ನು ಪಡೆಯದೆ ಕೇವಲ ತದ್ಭವ ಪದಗಳನ್ನೂ ದೇಸೀ ನುಡಿಗಳನ್ನು ಬಳಸಿಕೊಂಡು ಈ ಕೃತಿಯನ್ನು ಕಟ್ಟಲಾಗಿದೆ.
  • ಇಲ್ಲಿ ಬರುವ ಶಿವ-ಮನ್ಮಥರ ಕಥೆಯ ಎಳೆ ನಮ್ಮ ಪುರಾಣಗಳಲ್ಲಿ ದೊರೆಯುವಂಥದೇ. ಆದರೆ ಕವಿ ಮಾಡಿಕೊಂಡ ಮಾರ್ಪಾಟು ಬೇರ್ಪಾಟುಗಳಿಂದ ಒಂದು ರೀತಿಯ ನವ್ಯತೆ ಇದಕ್ಕೆ ಒದಗಿದೆ. ಈ ಕೃತಿಯನ್ನು ಸೂಕ್ಷ್ಮವಾಗಿ ನೋಡಿದವರಿಗೆ ಕಾಮದೇವ ಎಂಬ ಹೆಸರಿನ ಒಬ್ಬ ಕದಂಬ ದೊರೆಯನ್ನು ಪುರಾಣಕಥೆಯ ಕಾಮದೇವನೊಡನೆ ಏಕೀಭವಿಸಿ ಸಮಕಾಲೀನ ಚರಿತ್ರೆಯ ಘಟನೆಗಳನ್ನು ಸೂಚಿಸಿರುವುದು ತಿಳಿಯುತ್ತದೆ.
  • ಸ್ಮರತತ್ವ, ಶಿವತತ್ವ, ಜಿನತತ್ವಗಳು ಒಂದಕ್ಕಿಂತ ಒಂದು ಮಿಗಿಲು ಎಂಬ ಒಂದು ದರ್ಶನ ಧ್ವನಿ ಈ ಕಾವ್ಯದಲ್ಲಿ ಇದೆ ಎಂದು ಹೇಳುತ್ತಾರೆ. ವಸ್ತು ಪಾತ್ರ ರಸ ಇವುಗಳ ಆವಿಷ್ಕಾರದಲ್ಲಿ ಒಂದು ವಿನೂತನವಾದ ಚಿತ್ರಶಕ್ತಿ ಕಾಣಬರುತ್ತದೆ. ಕನ್ನಡ ನಾಡುನುಡಿಗಳ ಸಂಬಂಧದ ಪ್ರೀತ್ಯಾದರಗಳ ರಮ್ಯ ಪ್ರಕಾಶದಿಂದ ಈ ಕೃತಿ ದೀಪ್ತವಾಗಿದೆ. ಈ ಎಲ್ಲ ಗುಣಗಳಿಂದಾಗಿ ಕಬ್ಬಿಗರ ಕಾವಂ ಎಂಬುದು ಕನ್ನಡ ಸಾಹಿತ್ಯದಲ್ಲೇ ವಿಶಿಷ್ಟಕೃತಿಯಾಗಿದೆ.

ಹೆಚ್ಚಿನ ಮಾಹಿತಿಗೆ - ನೋಡಿ


ಉಲ್ಲೇಖ

Tags:

ಆಂಡಯ್ಯ ಕವಿಯ ಜೀವನಆಂಡಯ್ಯ ಕಬ್ಬಿಗರ ಕಾವಂ -ಕಥಾಸಾರಆಂಡಯ್ಯ ಕಬ್ಬಿಗರ ಕಾವಂ ಭಾಷೆಯ ವೈಶಿಷ್ಟ್ಯಆಂಡಯ್ಯ ಹೆಚ್ಚಿನ ಮಾಹಿತಿಗೆ - ನೋಡಿಆಂಡಯ್ಯ ಉಲ್ಲೇಖಆಂಡಯ್ಯಅಚ್ಚ ಕನ್ನಡಕನ್ನಡಸಂಸ್ಕೃತ

🔥 Trending searches on Wiki ಕನ್ನಡ:

ಕನ್ನಡದಲ್ಲಿ ಕಾದಂಬರಿ ಸಾಹಿತ್ಯಹೊಂಗೆ ಮರಜೋಡು ನುಡಿಗಟ್ಟುಹರ್ಡೇಕರ ಮಂಜಪ್ಪಅಕ್ಷಾಂಶ ಮತ್ತು ರೇಖಾಂಶಸೀತೆಕರ್ನಾಟಕದ ಶಾಸನಗಳುಭಾರತದ ಗಡಿಗಳು ಮತ್ತು ನರೆ ರಾಜ್ಯಗಳುಲೋಕ ಸಭೆ ಚುನಾವಣಾ ಕ್ಷೇತ್ರಗಳ ಪಟ್ಟಿಕನ್ನಡದಲ್ಲಿ ಸಣ್ಣ ಕಥೆಗಳುಶಿವಗೂಗಲ್ಕಲ್ಪನಾಭಾರತದ ರಾಷ್ಟ್ರೀಯ ಉದ್ಯಾನಗಳುಐಸಿಐಸಿಐ ಬ್ಯಾಂಕ್ಆಧುನಿಕ ಕನ್ನಡ ಕಾವ್ಯದ ಬೆಳವಣಿಗೆಭಾರತದ ನದಿಗಳುಅಜಯ್ ರಾವ್‌ತೆಲುಗುಉಡಮಾರುಕಟ್ಟೆಗರ್ಭಧಾರಣೆಪಟ್ಟದಕಲ್ಲುಯೋನಿರಗಳೆಹಲ್ಮಿಡಿ ಶಾಸನಮ್ಯಾಕ್ಸ್ ವೆಬರ್ಕೃಷಿಮದುವೆಕರ್ನಾಟಕದ ಹೋಬಳಿಗಳುಇಸ್ಲಾಂ ಧರ್ಮಅಟಲ್ ಬಿಹಾರಿ ವಾಜಪೇಯಿವಾಲ್ಮೀಕಿಸಿ ಎನ್ ಮಂಜುನಾಥ್ವಿವಾಹಮಾರಾಟ ಪ್ರಕ್ರಿಯೆಕೊರೋನಾವೈರಸ್ಕಬ್ಬುಭಾರತ ಬಿಟ್ಟು ತೊಲಗಿ ಚಳುವಳಿಸಂಸ್ಕೃತಆಂಧ್ರ ಪ್ರದೇಶಜ್ಯೋತಿ ಪ್ರಕಾಶ್ ನಿರಾಲಾಬೆಂಗಳೂರುಪತ್ರಮಾನವ ಹಕ್ಕುಗಳುಬಂಗಾರದ ಮನುಷ್ಯ (ಚಲನಚಿತ್ರ)ಭಾರತೀಯ ಜನತಾ ಪಕ್ಷಜಾನಪದವಿಜಯ ಕರ್ನಾಟಕಅಳಿಲುಭಾರತದಲ್ಲಿ ಬ್ರಿಟಿಷ್ ಆಳ್ವಿಕೆಎಚ್.ಎಸ್.ಶಿವಪ್ರಕಾಶ್ದಕ್ಷಿಣ ಕನ್ನಡ (ಲೋಕ ಸಭೆ ಚುನಾವಣಾ ಕ್ಷೇತ್ರ)ಗಳಗನಾಥಯಣ್ ಸಂಧಿಅಸಹಕಾರ ಚಳುವಳಿಝೊಮ್ಯಾಟೊಒಲಂಪಿಕ್ ಕ್ರೀಡಾಕೂಟಭಾಗ್ಯಲಕ್ಷ್ಮೀ (ಕನ್ನಡ ಧಾರಾವಾಹಿ)ಅವರ್ಗೀಯ ವ್ಯಂಜನಗುರು (ಗ್ರಹ)ಮೇಲುಮುಸುಕುಲಡಾಖ್ಹೆಳವನಕಟ್ಟೆ ಗಿರಿಯಮ್ಮಕಿತ್ತೂರು ಚೆನ್ನಮ್ಮರಾಯಲ್ ಚಾಲೆಂಜರ್ಸ್ ಬೆಂಗಳೂರುಸ್ವರಾಜ್ಯನವರತ್ನಗಳುಸಂಖ್ಯೆಶಿಶುನಾಳ ಶರೀಫರುಸುಮಲತಾಕನ್ನಡಪ್ರಭ🡆 More