ಆರ್. ವೆಂಕಟರಾಮನ್

ರಾಮಸ್ವಾಮಿ ವೆಂಕಟರಾಮನ್ (4 ಡಿಸೆಂಬರ್ 1910 – 27 ಜನವರಿ 2009)ವಕೀಲ, ಸ್ವಾತಂತ್ರ್ಯ ಹೋರಾಟಗಾರ, ಕೇಂದ್ರ ಸಚಿವರಾಗಿದ್ದರು.

ಇವರು ೧೯೮೭ರಿಂದ ೧೯೯೨ರವರೆಗೆ ಭಾರತದ ರಾಷ್ಟ್ರಪತಿಗಳಾಗಿದ್ದರು. ರಾಷ್ಟ್ರಪತಿಯಾಗಿ ಸೇವೆಯ ಅವಧಿ: ೨೫.೦೭.೧೯೮೭ ರಿಂದ ೨೪.೦೭.೧೯೯೨

ರಾಮಸ್ವಾಮಿ ವೆಂಕಟರಮನ್
ಆರ್. ವೆಂಕಟರಾಮನ್
ಆರ್ ವೆಂಕಟರಮನ್
ಜನ್ಮ ದಿನಾಂಕ: ೪ ಡಿಸೆಂಬರ್ ೧೯೧೦
ನಿಧನರಾದ ದಿನಾಂಕ:  
ಭಾರತದ ರಾಷ್ಟ್ರಪತಿಗಳು
ಅವಧಿಯ ಕ್ರಮಾಂಕ: ೮ನೆ ರಾಷ್ಟ್ರಪತಿ
ಅಧಿಕಾರ ವಹಿಸಿದ ದಿನಾಂಕ: ೨೫ ಜುಲೈ ೧೯೮೭
ಅಧಿಕಾರ ತ್ಯಜಿಸಿದ ದಿನಾಂಕ: ೨೫ ಜುಲೈ ೧೯೯೨
ಪುರ್ವಾಧಿಕಾರಿ: ಜೈಲ್ ಸಿ೦ಗ್
ಉತ್ತರಾಧಿಕಾರಿ: ಡಾ. ಶಂಕರ ದಯಾಳ ಶರ್ಮ
ಆರ್. ವೆಂಕಟರಾಮನ್
R Venkataraman

ಬಾಲ್ಯ ಮತ್ತು ಶಿಕ್ಷಣ

೧೯೧೦ರ ಡಿಸೆಂಬರ್ ೪ ರಂದು ತಮಿಳು ನಾಡಿನ ತಂಜಾವೂರ್ ಜಿಲ್ಲೆಯ ರಾಜಮಡಮ್ ಹಳ್ಳಿಯಲ್ಲಿ ವೆಂಕಟರಾಮನ್ ಅವರ ಜನನ. ತಂದೆ ರಾಮಸ್ವಾಮಿ ಅಯ್ಯರ್ ವಕೀಲರು. ಸುಸಂಸ್ಕೃತ ವ್ಯಕ್ತಿ ದೇಶ ಸೇವೆಯ ಮೊದಲ ಪಾಠಗಳು ಕುಟುಂಬದ ಹಿರಿಯರಿಂದಲೇ ವೆಂಕಟರಾಮನ್ ಅವರಿಗೆ ಲಭಿಸಿತ್ತು. ವಿಶ್ವವಿದ್ಯಾಲಯದವರೆಗಿನ ಶಿಕ್ಷಣವನ್ನು ತಮ್ಮ ಜಿಲ್ಲೆಯಲ್ಲಿ ಮುಗಿಸಿ, ಮದರಾಸ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಎಂ.ಎ.ಹಾಗೂ ಕಾನೂನಿನಲ್ಲಿ ಬಿ.ಎಲ್.ಪದವಿಗಳನ್ನು ಪಡೆದರು. ಬ್ರಿಟಿಷ್ ಸರ್ಕಾರದ ಗುಲಾಮನಾಗಲು ಇಷ್ಟವಿಲ್ಲದೆ, ೧೯೩೫ರಲ್ಲಿ ಮದರಾಸ್, ಉಚ್ಚನ್ಯಾಯಲಯದಲ್ಲಿ ವಕೀಲರಾದರು. ೧೯೩೮ರಲ್ಲಿ ಜಾನಕಿದೇವಿ ಅವರೊಂದಿಗೆ ವಿವಾಹವಾಯಿತು. ಮುಂದೆ, ೧೯೫೧ರಲ್ಲಿ ಭಾರತದ ಶ್ರೇಷ್ಠ ನ್ಯಾಯಲಯದಲ್ಲಿ ನ್ಯಾಯವಾದಿಯಾದರ. ವಕೀಲ ವೃತ್ತಿಯನ್ನು ಆರಂಭಿಸಿದ ದಿನಗಳಿಂದಲೂ ಅವರು ತೋರಿದ ಅಸಾಧಾರಣ ಪ್ರತಿಭೆ ಮತ್ತು ಜಾಣ್ಮೆಗಳು ರಾಜಾಜಿಯವರಿಂದಲೂ ಪ್ರಶಂಸೆ ಗಳಿಸಿದ್ದವು.

ವೃತ್ತಿ

ಕಾರ್ಮಿಕ ಸಂಘಟನೆಯ ವಕೀಲ, ಅದರ ಅಧ್ಯಕ್ಷ, ಕಾಂಗ್ರೆಸ್ ಸಂಸ್ಥೆಯ ಸಾಮಾನ್ಯ ಕೆಲಸಗಾರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ, ಸಂಯುಕ್ತ ರಾಷ್ಟ್ರ ಸಂಸ್ಥೆಯಲ್ಲಿ ಭಾರತದ ಪ್ರತಿನಿಧಿ, ಅದೇ ಸಂಸ್ಥೆಯ ಆಡಳಿತ ನ್ಯಾಯಮಂಡಳಿಯ (Administarative Tribunal) ಅಧ್ಯಕ್ಷ, ಸಂಸತ್ ಸದಸ್ಯ, ತಮಿಳು ನಾಡು ಹಾಗು ಕೇಂದ್ರ ಸಂಪುಟಗಳಲ್ಲಿ ಮಂತ್ರಿ, ಉಪರಾಷ್ಟ್ರಪತಿ, ರಾಷ್ಟ್ರಪತಿ-ಹೀಗೆ ವೈವಿಧ್ಯಪೂರ್ಣ ಸಾರ್ವಜನಿಕ ಸೇವೆಯ ಅನುಭವ ಅವರದು. ಸಮರ್ಥನ್ಯಾಯವಾದಿ, ಅರ್ಥಿಕರಂಗದ ಅಪಾರ ಜ್ಞಾನವುಳ್ಳವರು, ರಾಜಕೀಯ ಕ್ಷೇತ್ರದ “ಸೂಕ್ಷ್ಮಗಳನ್ನು ಅರಿತವರು. ಆಡಳಿತದಲ್ಲಿ ಸಿದ್ಧಹಸ್ತರು , ನಡೆನುಡಿಯಲ್ಲಿ ವಿನಯ, ಶುದ್ಧಚಾರಿತ್ರ್ಯ, ನ್ಯಾಯಪರತೆ ಇವುಗಳಿಂದ ಎಲ್ಲರ ಪ್ರೀತಿ, ವಿಶ್ವಾಸ, ಗೌರವ ಗಳಿಸಿಕೊಂಡವರು ವೆಂಕಟರಾಮನ್

೧೯೪೨ರ “ಭಾರತ ಬಿಟ್ಟು ತೊಲಗಿ” ಆಂದೋಳನದಲ್ಲಿ ಭಾಗವಹಿಸಿ ಎರಡು ವರ್ಷ ಸೆರೆಮನೆವಾಸ ಅನುಭವಿಸಿದರು. ವಕೀಲ ವೃತ್ತಿ ಆರಂಭಿಸಿದಾಗಿನಿಂದಲೂ ಕಾರ್ಮಿಕರಿಗೆ ಸಂಬಂಧಿಸಿದ ಕಾನೂನುಗಳಲ್ಲಿ ಅವರಿಗೆ ವಿಶೇಷ ಆಸಕ್ತಿ. ಸೆರೆಮನೆಯಿಂದ ಬಿಡುಗಡೆಯಾದ ಕೂಡಲೆ ಅವರು ಮಾಡಿದ ಮೊದಲ ಕೆಲಸ, ತಮಿಳು ನಾಡು ಕಾಂಗ್ರೆಸ್ಸಿನ ಕಾರ್ಮಿಕ ವಿಭಾಗದ ಸಂಘಟನೆ. ಕಾರ್ಮಿಕರ ಉಪಯೋಗಕ್ಕಾಗಿ Labour Law Journal ಎಂಬ ನಿಯತಕಾಲಿಕೆಯನ್ನು ಆರಂಭಿಸಿದರು. ಪ್ಲಾಂಟೇಷನ್, ಎಸ್ಟೇಟ್, ಬಂದರು, ರೈಲ್ವೆ, ಪತ್ರಿಕೋದ್ಯಮ- ಈ ಎಲ್ಲ ಕ್ಷೇತ್ರಗಳ ಕಾರ್ಮಿಕರನ್ನು ಸಂಘಟಿಸುವ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ೧೯೫೦ರಲ್ಲಿ ತಾತ್ಕಾಲಿಕ ಸಂಸತ್ತಿಗೆ ಆಯ್ಕೆಯಾದ ವೆಂಕಟರಾಮನ್ ಮುಂದೆ ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾದರು. ಆದರೆ ೧೯೫೭ರಲ್ಲಿ ಮಾತ್ರ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ತಮಿಳುನಾಡಿ ಸರ್ಕಾರದಲ್ಲಿ ಕೈಗಾರಿಕೆ,ಕಾರ್ಮಿಕ ಶಾಖೆ ಮತ್ತಿತರ ಪ್ರಮುಖ ಖಾತೆಗಳ ಮಂತ್ರಿಯಾಗಿ ದುಡಿದು, ತಮ್ಮ ರಾಜ್ಯವನ್ನು ಒಂದು ಪ್ರಮುಖ ಕೈಗಾರಿಕಾ ಕೇಂದ್ರವಾಗಿ ರೂಪಸಿದರು.

ಕೇಂದ್ರ ಯೋಜನಾ ಆಯೋಗದ ಸದಸ್ಯತ್ವ, ಸಾರ್ವಜನಿಕ ಲೆಕ್ಕಪತ್ರಗಳ ಪರಿಶೀಲನಾ ಸಮಿತಿಯ ಅಧ್ಯಕ್ಷತೆ(Public Accounts Committee), ಕೇಂದ್ರ ಸಂಪುಟದ ರಾಜಕೀಯ ಹಾಗೂ ಆರ್ಥಿಕ ವ್ಯವಹಾರಗಳ ಸಮಿತಿಗಳ ಸದಸ್ಯತ್ವ, International Monetary Fund (IMF),The International Bank of Rconstruction and Development (IBRD) ಮತ್ತು Asian Developmetn Bank (ADB)- ಇವುಗಳ ಗವರ್ನರ್ ಪದವಿ ಇತ್ಯಾದಿ ವೆಂಕಟರಾಮನ್ ನಿವಹಿಸಿದ ಕೆಲವು ಉನ್ನತ ಹುದ್ದೆಗಳು. ೧೯೮೦ರಲ್ಲಿ ಕೆಂದ್ರ ವಿತ್ತಮಂತ್ರಿಯಾಗಿ, ನಂತರ ರಕ್ಷಣಾ ಮಂತ್ರಿಯಾಗಿ ೧೯೮೪ರವರೆಗೆ ಸೇವೆ ಸಲ್ಲಿಸಿದ್ದಾರೆ. ಅಂತಾರಾಷ್ಟ್ರೀಯ ವ್ಯವಹಾರಗಳಲ್ಲಿ ವೆಂಕಟರಾಮನ್ ಅವರಿಗಿದ್ದ ಅಪಾರ ಜ್ಞಾನದಿಂದ ಲಾಭವನ್ನು ಪಡೆಯಲು, ಅಂದಿನ ಪ್ರಧಾನಿ ನೆಹರೂ ಅವರು, ಸಂಯುಕ್ತ ರಾಷ್ಟ್ರ ಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಲು ವೆಂಕಟರಾಮನ್ ಅವರನ್ನು ಆರಿಸಿದ್ದರು.೧೯೫೩ ರಿಂದ ೧೯೬೧ ರ ಅವಧಿಯಲ್ಲಿ ಅವರು ಹಾಗೆ ಏಳು ಬಾರಿ ಪ್ರತಿನಿಧಿಸಿದ್ದಾರೆ.ಅಂತಾರ್ರಾಷ್ಟ್ರೀಯ ಕಾರ್ಮಿಕ ಹಾಗೂ ಸಂಸದೀ.

ಉಲ್ಲೇಖಗಳು



Tags:

🔥 Trending searches on Wiki ಕನ್ನಡ:

ಭಾರತದ ಪ್ರಧಾನ ಮಂತ್ರಿಗಳ ಪಟ್ಟಿಸವದತ್ತಿಗಿಡಮೂಲಿಕೆಗಳ ಔಷಧಿಶ್ರೀ ಅಣ್ಣಮ್ಮ ದೇವಿ ದೇವಾಲಯ, ಬೆಂಗಳೂರುಅಶ್ವತ್ಥಾಮಫೇಸ್‌ಬುಕ್‌ಐಸಿಐಸಿಐ ಬ್ಯಾಂಕ್ಲಕ್ಷ್ಮೀಶಚಾಮರಸಹೊಯ್ಸಳ ವಾಸ್ತುಶಿಲ್ಪಕೊರೋನಾವೈರಸ್ಮಹಾಕವಿ ರನ್ನನ ಗದಾಯುದ್ಧಸ್ವಚ್ಛ ಭಾರತ ಅಭಿಯಾನಉದಯವಾಣಿಕ್ಯಾನ್ಸರ್ಮ್ಯಾಕ್ಸ್ ವೆಬರ್ಸಂತೋಷ್ ಆನಂದ್ ರಾಮ್ವಿಜಯನಗರಸಂಗೀತಭೀಷ್ಮಡೊಳ್ಳು ಕುಣಿತರಾಘವಾಂಕತ್ರಿವೇಣಿಶಬ್ದಮಣಿದರ್ಪಣಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಹೆಚ್.ಡಿ.ಕುಮಾರಸ್ವಾಮಿಬಂಗಾರದ ಮನುಷ್ಯ (ಚಲನಚಿತ್ರ)ಮತದಾನಮಧುಮೇಹಆಳಂದ (ಕರ್ನಾಟಕ)ಬಿ.ಎಸ್. ಯಡಿಯೂರಪ್ಪಬಾರ್ಲಿಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳುಕ್ರೀಡೆಗಳುಭಾವನಾ(ನಟಿ-ಭಾವನಾ ರಾಮಣ್ಣ)ಇಂಡಿಯನ್ ಪ್ರೀಮಿಯರ್ ಲೀಗ್ಜಾನ್ವಿ ಕಪೂರ್ತ್ರಿಪದಿಬಿ.ಜಯಶ್ರೀಮಾನವನ ನರವ್ಯೂಹವೆಂಕಟೇಶ್ವರ ದೇವಸ್ಥಾನಆದಿವಾಸಿಗಳುವಿಜಯನಗರ ಸಾಮ್ರಾಜ್ಯಕನ್ನಡ ಸಾಹಿತ್ಯ ಪರಿಷತ್ತುಹಾಗಲಕಾಯಿಪ್ರಾಥಮಿಕ ಶಿಕ್ಷಣಗರ್ಭಧಾರಣೆವಿನೋಬಾ ಭಾವೆಜ್ಯೋತಿ ಪ್ರಕಾಶ್ ನಿರಾಲಾಆರೋಗ್ಯವಿಜ್ಞಾನಕೇಶಿರಾಜಕನ್ನಡ ಗುಣಿತಾಕ್ಷರಗಳುಚಿ.ಉದಯಶಂಕರ್ಗ್ರಾಮ ಪಂಚಾಯತಿಸರ್ವಜ್ಞನುಡಿಗಟ್ಟುಭಾರತೀಯ ಧರ್ಮಗಳುಕರ್ನಾಟಕದ ಹಬ್ಬಗಳುಮಹೇಂದ್ರ ಸಿಂಗ್ ಧೋನಿಕೊಪ್ಪಳಗ್ರಹಇನ್ಸ್ಟಾಗ್ರಾಮ್ಕನ್ನಡ ಚಿತ್ರರಂಗಕರ್ನಾಟಕ ಸಶಸ್ತ್ರ ಬಂಡಾಯಜಿ.ಎಸ್.ಶಿವರುದ್ರಪ್ಪಪ್ರಜಾಪ್ರಭುತ್ವಷೇರು ಮಾರುಕಟ್ಟೆಕರ್ನಾಟಕ ವಿಧಾನ ಪರಿಷತ್ಕನ್ನಡ ಕಾಗುಣಿತಕನ್ನಡ ಸಾಹಿತ್ಯ ಸಮ್ಮೇಳನಪರಾಶರಭಾರತೀಯ ಭೂಸೇನೆಅಭಿಮನ್ಯುಭಾರತದ ಉಪ ರಾಷ್ಟ್ರಪತಿಗಳ ಪಟ್ಟಿಅಜಯ್ ರಾವ್‌ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳುತಲಕಾಡು🡆 More