ಆಲೂಗಡ್ಡೆ

ಆಲೂಗಡ್ಡೆಯು ಸೊಲ್ಯಾನೇಸೀ ಕುಟುಂಬದ ಬಹುವಾರ್ಷಿಕ ಸಲೇನಮ್ ಟ್ಯೂಬರೋಸಮ್‌ನ ಒಂದು ಪಿಷ್ಟವುಳ್ಳ, ಗೆಡ್ಡೆ ಬೆಳೆ.

ಆಲೂಗಡ್ಡೆ
ಆಲೂಗಡ್ಡೆ
ಆಲೂಗಡ್ಡೆ
Scientific classification
ಸಾಮ್ರಾಜ್ಯ:
plantae
(ಶ್ರೇಣಿಯಿಲ್ಲದ್ದು):
Asterids
ಗಣ:
ಸೋಲನೇಲ್ಸ್
ಕುಟುಂಬ:
ಸೊಲನೆಸಿಯೆ
ಕುಲ:
ಸೋಲನಮ್
ಪ್ರಜಾತಿ:
S. tuberosum
Binomial name
ಸೊಲನಮ್ ಟುಬೆರೋಸಮ್
L.

ಆಲೂಗಡ್ಡೆ ಶಬ್ದ ಆ ಸಸ್ಯವನ್ನೂ ನಿರ್ದೇಶಿಸಬಹುದು. ಆಂಡೀಸ್‌ನ ಪ್ರದೇಶದಲ್ಲಿ, ಕೆಲವು ಇತರ ನಿಕಟವಾಗಿ ಸಂಬಂಧಿತ ಸಾಗುವಳಿ ಮಾಡಲಾದ ಆಲೂಗಡ್ಡೆ ಜಾತಿಗಳಿವೆ. ಆಲೂಗಡ್ಡೆಗಳು, ಅಕ್ಕಿ, ಗೋಧಿ, ಮತ್ತು ಮೆಕ್ಕೆ ಜೋಳದ ನಂತರ, ವಿಶ್ವದ ನಾಲ್ಕನೇ ಅತಿ ದೊಡ್ಡ ಆಹಾರ ಬೆಳೆಯಾಗಿವೆ.

ಸಸ್ಯಮೂಲ-ಪರಿಚಯ

ಬಡವರಿಗೂ, ಬಳಲ್ಲಿದರಿಗೂ ಆಲೂಗಡ್ಡೆ ರುಚಿ ಅಂಟಿಕೊಂಡಿದೆ.ಆದ್ದರಿಂದ ಬಿ.ಜಿ.ಎಲ್.ಸ್ವಾಮಿಯವರು ಇದಕ್ಕೆ 'ಕಲ್ಪಕಂದ' ಎಂದು ಹೆಸರಿಸಿದ್ದಾರೆ. ಈ ಕಲ್ಪಕಂದವು ವಿದೇಶೀಯರ ದೈನಂದಿನ ಆಹಾರಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಕರ್ನಾಟಕದ ಹಲವು ಪ್ರದೇಶಗಲ್ಲಿ ಬಟಾಟೆ ಎಂದು ಕರೆಯಲ್ಪಡುವ ಈ ಹೆಸರು ಮೂಲದ ಪೊಟಾಟೋದಿಂದಲೇ ಬಂದದ್ದು. ನಾವು ಅಕ್ಕಿಯನ್ನೂ, ಉತ್ತರ ಭಾರತೀಯರು ಗೋಧಿಯನ್ನು ಬಳಸುವಂತೆ, ಬೇಯಿಸಿದ, ಬಾಡಿಸಿದ, ಹುರಿದ ಆಲೂ ಪಾಶ್ಚಾತ್ಯರಿಗೆ ಅನ್ನದಂತೆ.

ಔಷಧೀಯ ಗುಣಗಳು

ನಾವು ಸಾಮಾನ್ಯವಾಗಿ ಆಲೂಗಡ್ಡೆಯನ್ನು ಆರೋಗ್ಯಕರ ಆಹಾರವೆಂದು ಪರಿಗಣಿಸುವುದಿಲ್ಲ, ಆದರೆ ಫೈಬರ್, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ಸೇರಿದಂತೆ ಹಣ್ಣುಗಳು ಮತ್ತು ತರಕಾರಿಗಳಿಂದ ನೀವು ಪಡೆಯುವ ಅದೇ ಪೋಷಕಾಂಶಗಳಲ್ಲಿ ಆಲೂಗಡ್ಡೆ ನಿಜವಾಗಿಯೂ ಸಮೃದ್ಧವಾಗಿವೆ. ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸಲು ಮತ್ತು ಕ್ಯಾನ್ಸರ್-ಉಂಟುಮಾಡುವ ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

  • ಈ ಪೋಷಕಾಂಶಗಳಲ್ಲದೆ ಅವಶ್ಯಕ ಅಮೈನೋ ಆಮ್ಲಗಳು ಕೂಡ ಇರುವುದರಿಂದ ರುಚಿ ಹಿತರಕವಾಗಿದ್ದು ಎಲ್ಲಾ ತಿಂಡಿತಿನಿಸುಗಳಲ್ಲಿ ಬಳಸಬಹುದಾದ, ಸುಲಭವಾಗಿ ದೊರೆಯುವ, ಪ್ರಪಂಚದಾದ್ಯಂತ ಬಳಕೆಯಲ್ಲಿರುವ ಗೆಡ್ಡೆ ತರಕಾರಿ.
  • ಆಲೂಗಡ್ಡೆಯನ್ನು ೩ ಭಾಗಗಳಾಗಿ ವಿಂಗಡಿಸಬಹುದು.
  • ಮೊದಲನೆಯದು,ಮೇಲ್ಭಾಗದ ಸಿಪ್ಪೆ,ಎರಡನೆಯದು,ಸಿಪ್ಪೆಯ ಮೇಲ್ಬಾಗದಲ್ಲಿರುವ ತೆಳುವಾದ ಪೊರೆ,ಮೂರನೆಯದು, ಒಳ ಪಿಷ್ಟ ಭಾಗ.
  • ಮೊದಲನೆಯ ಭಾಗದಲ್ಲಿ ಖನಿಜಾಂಶಾ ಮತ್ತು ಜೀವಸತ್ವಗಳಿರುತ್ತವೆ.
  • ಎರಡನೆಯ ಪದರದಲ್ಲಿ ಸಸಾರಜನಕ ಮತ್ತು ವರ್ಣದ್ರವ್ಯ ಇರುತ್ತವೆ.
  • ಈ ವರ್ಣದ್ರವ್ಯ ನಾವು ಆಲೂಗಡ್ಡೆಯನ್ನು ಕತ್ತರಿಸಿದಾಗ ಗಾಳಿಯ ಸಂಪರ್ಕಕ್ಕೆ ಬಂದು ಆಲೂಗಡ್ಡೆಯ ಬಣ್ಣವನ್ನು ಬದಲಾಯಿಸುತ್ತದೆ.
  • ಮೂರನೇಯ ಭಾಗವು ಪಿಷ್ಟ ಮತ್ತು ನೀರಿನಿಂದ ಕೂಡಿರುತ್ತದೆ.
  • ಆದುದರಿಂದಲೇ ಆಲೂಗಡ್ಡೆಯ ಸಿಪ್ಪೆಯನ್ನು ತೆಗೆಯುದರಿಂದ ಅಥವಾ ತೊಳೆಯುದರಿಂದ ಪೋಷಕಾಂಶಗಳು ನಷ್ಟವಾಗಿ ಕೇವಲ ಪಿಷ್ಟ ಪದಾರ್ಥ ಮಾತ್ರ ಉಳಿಯುತ್ತದೆ.

ತಿಂಡಿಗಳು

  • ಆಲೂ ಪಾಯಸ:ಬೇಯಿಸಿದ ಆಲೂಗಡ್ಡೆಯನ್ನು ರುಬ್ಬಿ ಹಾಲಿಗೆ ಸೇರಿಸಿ ಕುದಿಸಿ, ರುಚಿಗೆ ತಕ್ಕಷ್ಟು ಸಕ್ಕರೆ ಸೇರಿಸಬೇಕು.ಹುರಿದ ಗೋಡಂಬಿ ಮತ್ತು ದ್ರಾಕ್ಷಿ ಸೇರಿಸಬಹುದು. ಹೆಚ್ಚಿನ ರುಚಿ ಬೇಕಾದರೆ ಹಾಲಿನೊಂದಿಗೆಖೋವಾ ಸೇರಿಸಿದರೆ ವಿಶೇಷ ರುಚಿ ಬರುತ್ತದೆ.
  • ಆಲೂ ಹಲ್ವ:ಆಲೂಗಡ್ಡೆಯನ್ನು ಶುಚಿಮಾಡಿ ಬೇಯಿಸಿ ಚೆನ್ನಾಗಿ ಮಸೆದು ಸಕ್ಕರೆ ಬೆರೆಸಿ ಬಾಣಲೆಯಲ್ಲಿ ಹಾಕಿ ಒಲೆಯ ಮೇಲಿಟ್ಟು ಮಗಚುತ್ತಾ ತುಪ್ಪ ಸೇರಿಸಿದರೆ ಒಳ್ಳೆಯ ವಾಸನೆ ಬಂದು ಪಾತ್ರೆ ಬಿಡುವಾಗ ತುಪ್ಪ ಸವರಿದ ತಟ್ಟೆಗೆ ಹರಡಿ ಇಡಬೇಕು.ಆರಿದ ಮೇಲೆ ಬೇಕಾದ ಆಕಾರಕ್ಕೆ ಕತ್ತರಿಸಿ ಉಪಯೋಗಿಸಬವುದು.

ತಳಿಗಳು

ಆಲೂಗಡ್ಡೆ 
ಆಲೂಗಡ್ಡೆ

ಆಲೂಗಡ್ಡೆ  ಆಲೂಗಡ್ಡೆ  ಆಲೂಗಡ್ಡೆ  ಇದು ಬಹುಬೇಗ ೯೦ ದಿನಗಳಲ್ಲಿ ಇಳುವರಿಗೆ ಬರುವ ಮತ್ತು ವಿವಿಧ ಹವಾಗುಣಗಳಿಗೆ ಹೊಂದಿಕೊಂಡು ಬೇಳೆಯುವ ಭಾರತದ ಉತ್ತಮ ತಳಿ.ಚಪ್ಪಟೆಯದ ಗೆಡ್ಡೆಗಳು ವಿಶಾಲವಾದ, ನಯವಾದ ಮೇಲ್ಮೈ ಹೊಂದಿರುತ್ತವೆ.

ಬೀಜ ಮತ್ತು ಬಿತ್ತನೆ

ಈ ಬೆಳೆಯನ್ನು ಗೆಡ್ಡೆಗಳ ಮುಖಾಂತರ ಸಸ್ಯಾಭಿವ್ರದ್ಧಿ ಮಾಡಲಾಗುವುದು. ಈ ಉದೇಶಕ್ಕೆ ಇಡೀ ಗೆಡ್ಡೆ ಅಥವಾ ಗೆಡ್ಡೆಯ ಚೂರುಗಳನ್ನು ಬೀಜವಾಗಿ ಬಳಸುತ್ತಾರೆ. ಆಲೂಗಡ್ಡೆಗೆ ಮಾರಕವಾದ ರೋಗಗಳು ಗೆಡ್ಡೆಗಳ ಮುಖಾಂತರ ಹರಡುವುದರಿಂದ ರೋಗರಹಿತ ಗೆಡ್ಡೆಗಳನ್ನು ಮಾತ್ರ ಬಳಸಬೇಕು.

ನೀರಾವರಿ ಮತ್ತು ಅಂತರಬೇಸಾಯ

ನಾಟಿಮಾಡಿದ ಕೂಡಲೆ ತೆಳು ನೀರಾವರಿ ಒದಗಿಸಬೇಕು.ನಂತರದ ನೀರಾವರಿಗಳನ್ನು ಮಣ್ಣು ಮತ್ತು ಹವಾಗುಣಗಳಿಗನುಗುಣವಾಗಿ ೫-೭ ದಿನಗಳ ಅಂತರದಲ್ಲಿ ಕೊಡಬೇಕು ಮತ್ತು ಕಳೆ ಬರದಂತೆ ಎಚ್ಚರ ವಹಿಸಬೇಕು.

ಉಲ್ಲೇಖ

Tags:

ಆಲೂಗಡ್ಡೆ ಸಸ್ಯಮೂಲ-ಪರಿಚಯಆಲೂಗಡ್ಡೆ ಔಷಧೀಯ ಗುಣಗಳುಆಲೂಗಡ್ಡೆ ತಿಂಡಿಗಳುಆಲೂಗಡ್ಡೆ ತಳಿಗಳುಆಲೂಗಡ್ಡೆ ಬೀಜ ಮತ್ತು ಬಿತ್ತನೆಆಲೂಗಡ್ಡೆ ನೀರಾವರಿ ಮತ್ತು ಅಂತರಬೇಸಾಯಆಲೂಗಡ್ಡೆ ಉಲ್ಲೇಖಆಲೂಗಡ್ಡೆಅಕ್ಕಿಗೆಡ್ಡೆಗೋಧಿಪಿಷ್ಟಬೆಳೆಮೆಕ್ಕೆ ಜೋಳ

🔥 Trending searches on Wiki ಕನ್ನಡ:

ನೂಲುಬಾಲ ಗಂಗಾಧರ ತಿಲಕಉದಯವಾಣಿಭೂತಾರಾಧನೆದರ್ಶನ್ ತೂಗುದೀಪ್ಛಾಯಾಗ್ರಹಣಆಂಧ್ರ ಪ್ರದೇಶಸಿಂಧನೂರುಭೂತಕೋಲಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಆರ್ಥಿಕ ಬೆಳೆವಣಿಗೆಮಹಾಕವಿ ರನ್ನನ ಗದಾಯುದ್ಧಜನಪದ ಕಲೆಗಳುಕ್ರಿಕೆಟ್ಕರ್ನಾಟಕ ಸಶಸ್ತ್ರ ಬಂಡಾಯಉತ್ತರ ಕನ್ನಡನಾಟಕದಯಾನಂದ ಸರಸ್ವತಿಫಿರೋಝ್ ಗಾಂಧಿಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ)ಒಡೆಯರ್ಭೂಮಿ ದಿನಅಮೃತಬಳ್ಳಿದುಗ್ಧರಸ ಗ್ರಂಥಿ (Lymph Node)ಅಶ್ವತ್ಥಮರಕೆ. ಎಸ್. ನಿಸಾರ್ ಅಹಮದ್ಯೂಟ್ಯೂಬ್‌ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಚಾಮರಾಜನಗರ೧೬೦೮ಅರಿಸ್ಟಾಟಲ್‌ಬಿ. ಎಂ. ಶ್ರೀಕಂಠಯ್ಯಭಾರತದ ರಾಷ್ಟ್ರಗೀತೆವಿನಾಯಕ ಕೃಷ್ಣ ಗೋಕಾಕಪೂರ್ಣಚಂದ್ರ ತೇಜಸ್ವಿದ್ವಿರುಕ್ತಿನಾಲ್ವಡಿ ಕೃಷ್ಣರಾಜ ಒಡೆಯರುವೃದ್ಧಿ ಸಂಧಿಪಾಲಕ್ಗಳಗನಾಥಸತೀಶ್ ನಂಬಿಯಾರ್ಕುವೆಂಪುಸಾಮ್ರಾಟ್ ಅಶೋಕಪು. ತಿ. ನರಸಿಂಹಾಚಾರ್ಬಾಲಕೃಷ್ಣಸಂಸ್ಕಾರಸಂಯುಕ್ತ ಕರ್ನಾಟಕಗ್ರಹಕನ್ನಡ ರಂಗಭೂಮಿಸ್ವರಾಜ್ಯಸಮುಚ್ಚಯ ಪದಗಳುಅಕ್ಕಮಹಾದೇವಿಜ್ಯೋತಿಷ ಶಾಸ್ತ್ರಲೋಕಸಭೆಭಾರತೀಯ ಮೂಲಭೂತ ಹಕ್ಕುಗಳುಕುಟುಂಬಸಮಾಸಯೇಸು ಕ್ರಿಸ್ತಹಳೇಬೀಡುವಾಟ್ಸ್ ಆಪ್ ಮೆಸ್ಸೆಂಜರ್ಕೈವಾರ ತಾತಯ್ಯ ಯೋಗಿನಾರೇಯಣರುಮಾರುಕಟ್ಟೆಅಸಹಕಾರ ಚಳುವಳಿಲಕ್ಷ್ಮೀಶಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳುಅವರ್ಗೀಯ ವ್ಯಂಜನಭಾರತೀಯ ಭಾಷೆಗಳುಭಾರತದ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳುಸಂವತ್ಸರಗಳುಡಿ.ಎಲ್.ನರಸಿಂಹಾಚಾರ್ಕರ್ನಾಟಕ ಹೈ ಕೋರ್ಟ್ಶ್ರೀ ರಾಘವೇಂದ್ರ ಸ್ವಾಮಿಗಳುಸಿ.ಎಮ್.ಪೂಣಚ್ಚವಿಜಯಪುರಪೌರತ್ವಬಾಗಲಕೋಟೆ🡆 More