ನಿಗಮ–ಮಂಡಳಿಗಳಿಗೆ ಅಧ್ಯಕ್ಷರ ನೇಮಕ
- 2 Nov, 2016
- ರಾಜ್ಯದ 91 ನಿಗಮ-ಮಂಡಳಿಗಳಿಗೆ ಅಧ್ಯಕರನ್ನು ನೇಮಕ ಮಾಡಲಾಗಿದೆ. ಪಟ್ಟಿಯಲ್ಲಿ 21 ಶಾಸಕರು ಸ್ಥಾನ ಪಡೆದಿದ್ದು, 70 ಕಾರ್ಯಕರ್ತರು ಮತ್ತು ಮುಖಂಡರಿಗೆ ಅಧ್ಯಕ್ಷ ಸ್ಥಾನ ಲಭಿಸಿದೆ.
ಮಂಡಳಿಗಳಿಗೆ ಅಧ್ಯಕ್ಷರ ಭತ್ಯೆಗಳು
- ಶಾಸಕರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ
- ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಕ ಆಗಿರುವ 21 ಶಾಸಕರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಮುಂದಿನ 18 ತಿಂಗಳಲ್ಲಿ ರೂ.17.33 ಕೋಟಿ ಹೊರೆ ಬೀಳಲಿದೆ. 14 ನೇ ವಿಧಾನಸಭೆ ಅವಧಿ 2018ರ ಮೇ ತಿಂಗಳಿಗೆ ಮುಕ್ತಾಯವಾಗಲಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿ ಇರುವವರೆಗೆ ನೂತನ ಅಧ್ಯಕ್ಷರ ಅವಧಿ ಇರಲಿದ್ದು, ಹೀಗಾಗಿ ಮುಂದಿನ 18 ತಿಂಗಳು ಇವರೆಲ್ಲರೂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಧ್ಯಕ್ಷರ ತಿಂಗಳ ವೇತನ, ಆತಿಥ್ಯ ವೆಚ್ಚ, ಗೃಹ, ಸಾರಿಗೆ ಭತ್ಯೆಗಳು ಮತ್ತು ಆಪ್ತ ಸಿಬ್ಬಂದಿ ವೇತನ ಸೇರಿ ತಿಂಗಳಿಗೆ ರೂ.2.97 ಲಕ್ಷ ವೆಚ್ಚವನ್ನು ಸರ್ಕಾರ ಭರಿಸಬೇಕಾಗುತ್ತದೆ. ರಾಜ್ಯ ಮತ್ತು ಹೊರ ರಾಜ್ಯ ಪ್ರವಾಸಕ್ಕೆ ತೆರಳಿದಾಗ ದಿನಭತ್ಯೆ ಸಿಗಲಿದೆ. ವಿಮಾನದಲ್ಲಿ ಓಡಾಡುವುದಕ್ಕೆ ಯಾವುದೇ ಮಿತಿ ಇರುವುದಿಲ್ಲ. ಪ್ರತಿ ಕಿ.ಮೀ. ವಿಮಾನ ಪ್ರಯಾಣಕ್ಕೆ ರೂ.30 ರಂತೆ ನೀಡಲಾಗುತ್ತದೆ. ಇದಲ್ಲದೆ ಇವರ 18 ತಿಂಗಳ ಅವಧಿಗೆ ಒಂದು ಕಾರು (ದರ ರೂ.19 ಲಕ್ಷ ಮೀರದಂತೆ) ಮತ್ತು ಮನೆಗೆ ರೂ.10 ಲಕ್ಷ ಮೌಲ್ಯದ ಪೀಠೋಪಕರಣಗಳನ್ನು ಖರೀದಿಸಲು ಅವಕಾಶ ಇದೆ. ಅವಧಿ ಮುಗಿದ ನಂತರ ಇವುಗಳನ್ನು ಸರ್ಕಾರಕ್ಕೆ ವಾಪಸ್ ಮಾಡಬೇಕು.
- ಎಲ್ಲ ಸವಲತ್ತುಗಳು ಮತ್ತು ಕಾರು, ಪೀಠೋಪಕರಣ ಸೇರಿದರೆ 18 ತಿಂಗಳಿಗೆ ಒಬ್ಬ ಅಧ್ಯಕರಿಗೆ ರೂ.82.56 ಲಕ್ಷ ವೆಚ್ಚ ಆಗುತ್ತದೆ. ಇದೇ ರೀತಿ 21 ಅಧ್ಯಕ್ಷರಿಂದ ರೂ.17.33 ಕೋಟಿ ವೆಚ್ಚ ಸರ್ಕಾರಕ್ಕೆ ಬೀಳಲಿದೆ.
ಅಧ್ಯಕ್ಷ ಸ್ಥಾನ ಪಡೆದಿರುವ ಶಾಸಕರ ಪಟ್ಟಿ
- ಮಾಲಿಕಯ್ಯ ವೆಂಕಯ್ಯ ಗುತ್ತೇದಾರ, ಕರ್ನಾಟಕ ಗೃಹ ಮಂಡಳಿ
- ಆರ್.ವಿ.ದೇವರಾಜ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ
- ಕೆ.ವೆಂಕಟೇಶ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
- ರಾಜಶೇಖರ ಬಿ.ಪಾಟೀಲ, ಕೆ.ಆರ್.ಐ.ಡಿ.ಎಲ್
- ಎನ್.ನಾಗರಾಜ್, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ
- ಫಿರೋಜ್ ಶೇಠ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ
- ಕೆ.ಗೋಪಾಲ ಪೂಜಾರಿ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ
- ಪುಟ್ಟರಂಗಶೆಟ್ಟಿ ಸಿ., ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ
- ರಹೀಂ ಖಾನ್, ಕರ್ನಾಟಕ ರಾಜ್ಯ ಉಗ್ರಾಣ ನಿಗಮ
- ಕೆ.ವಸಂತ ಬಂಗೇರ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
- ಬಿ.ಆರ್.ಯಾವಗಲ್ಲ, ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ
- ಎಂ.ಕೆ.ಸೋಮಶೇಖರ್, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
- ಜಿ.ಎಸ್.ಪಾಟೀಲ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ
- ಶಿವಾನಂದ ಎಸ್.ಪಾಟೀಲ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
- ಹಂಪನಗೌಡ ಬಾದರ್ಲಿ, ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್
- ಹೆಚ್.ಆರ್.ಅಲಗೂರ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ
- ಡಿ.ಸುಧಾಕರ್, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
- ಬಾಬೂರಾವ್ ಚಿಂಚನಸೂರ್, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ
- ಶಾರದಾ ಮೋಹನ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ
- ಎನ್.ವೈ.ಗೋಪಾಲ ಕೃಷ್ಣ, ಸಮಿತಿ ಶಿಫಾರಸುಗಳ ಅನುಷ್ಠಾನ ಸಮಿತಿ
- ಜಿ.ಹಂಪಯ್ಯ ನಾಯಕ್ ಬಲ್ಲಟಗಿ, ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ, ತುಂಗಭದ್ರ ಯೋಜನೆ
- ಬಿ ಜಿ ಗೋವಿಂದಪ್ಪ ಹೊಸದುರ್ಗ ಕರ್ನಾಟಕ ಆಹಾರ ಅಭಿವೃದ್ಧಿ ನಿಗಮದ ಅಧ್ಯಕ್ಷರು
ಕರ್ನಾಟಕದ ಅಕ್ಯಾಡಮಿಗಳು
- ಆರು ಅಕಾಡೆಮಿಗಳು ಮತ್ತು ಎರಡು ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನೇಮಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ. ಅಕಾಡೆಮಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರ ಜತೆಗೆ, ಸದಸ್ಯರನ್ನೂ ನೇಮಕ ಮಾಡಲಾಗಿದೆ.ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಸದಸ್ಯರ ಸಂಖ್ಯೆಯನ್ನು 10 ರಿಂದ 15ಕ್ಕೆ, ತುಳು ಸಾಹಿತ್ಯ ಅಕಾಡೆಮಿ ಮತ್ತು ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯರ ಸಂಖ್ಯೆಯನ್ನು 10 ರಿಂದ 12ಕ್ಕೆ ಹೆಚ್ಚಿಸಲಾಗಿದೆ. ನೇಮಕವಾದ ದಿನದಿಂದ ಮೂರು ವರ್ಷ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷ ಮತ್ತು ಸದಸ್ಯರ ಅವಧಿ ಇರುತ್ತದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ
ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
ಕರ್ನಾಟಕ ಪುಸ್ತಕ ಪ್ರಾಧಿಕಾರ
ಸಂಗೀತ ಮತ್ತು ನೃತ್ಯ ಅಕಾಡೆಮಿ
- ಧಾರವಾಡದ ಪಂಡಿತ್ ಫಯಾಜ್ ಖಾನ್,
ಕರ್ನಾಟಕ ನಾಟಕ ಅಕಾಡೆಮಿ
ಜಾನಪದ ಅಕಾಡೆಮಿ
ಶಿವಮೊಗ್ಗದ ಬಿ. ಟಾಕಪ್ಪ,
ಶಿಲ್ಪಕಲಾ ಅಕಾಡೆಮಿ
ತುಳು ಸಾಹಿತ್ಯ ಅಕಾಡೆಮಿ
- ದಕ್ಷಿಣ ಕನ್ನಡ ಜಿಲ್ಲೆಯ ಎ.ಸಿ.ಭಂಡಾರಿ'
ನೋಡಿ
ಉಲ್ಲೇಖಗಳು
ಉಲ್ಲೇಖ
This article uses material from the Wikipedia ಕನ್ನಡ article ಕರ್ನಾಟಕ ರಾಜ್ಯದ ನಿಗಮ ಮಂಡಳಿಗಳ ನೇಮಕ ೨೦೧೬, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.