ಕೋಲ್ಹಾರ: ವಿಜಯಪುರ

ಕೊಲ್ಹಾರ ಒಂದು ಪಟ್ಟಣ.

ಇದು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿದೆ. ಕೊಲ್ಹಾರ ಗ್ರಾಮವು ವಿಜಯಪುರ - ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ - ೨೧೮ರಲ್ಲಿ ಇದೆ. ಜಿಲ್ಲಾ ಕೇಂದ್ರ ವಿಜಯಪುರದಿಂದ ಸುಮಾರು ೪೦ ಕಿ. ಮಿ. ದೂರದಲ್ಲಿದೆ. ಕರ್ನಾಟಕ ಸರ್ಕಾರವು ಫೆಬ್ರುವರಿ ೮, ೨೦೧೩ ರಂದು ವಾರ್ಷಿಕ ಮುಂಗಡ ಪತ್ರದ ಪ್ರಕಾರ ವಿಜಯಪುರ ಜಿಲ್ಲೆಯಲ್ಲಿ ಕೊಲ್ಹಾರ ನಗರವನ್ನು ಹೊಸ ತಾಲ್ಲೂಕೆಂದು ರಚಿಸಿದೆ.

ಕೋಲ್ಹಾರ
ಕೊಲ್ಹಾರ
village
Population
 (೨೦೧೨)
 • Total೧೫೦೦೦

ಚರಿತ್ರೆ

ಕೊಲ್ಹಾರದಲ್ಲಿ ಒಳ್ಳೆಯ ಶಿಕ್ಷಣ, ವ್ಯಾಪಾರ, ಹಣಕಾಸು, ನೆಮ್ಮದಿ ಕೇಂದ್ರ, ಉಪ ತಹಶಿಲ್ದಾರರ ಕಚೇರಿ, ಬಿ.ಎಸ್.ಎನ್.ಎಲ್ ಕಚೇರಿ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣ, ಪೋಲಿಸ್ ಠಾಣೆ, ಅಂಚೆ ಕಚೇರಿ, ಎಸ್.ಬಿ.ಐ ಬ್ಯಾಂಕ್ ಹಾಗೂ ಇತರೆ ಕಚೇರಿಗಳಿವೆ.

ಭೌಗೋಳಿಕ

ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.

ಹವಾಮಾನ

  • ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಏಪ್ರಿಲ್‍ನಲ್ಲಿ), ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
  • ಬೇಸಿಗೆಕಾಲ - ೩೫°C - ೪೨°C ಡಿಗ್ರಿ ಸೆಲ್ಸಿಯಸ್
  • ಚಳಿಗಾಲ ಮತ್ತು
  • ಮಳೆಗಾಲ - ೧೮°C - ೨೮°C ಡಿಗ್ರಿ ಸೆಲ್ಸಿಯಸ್.
  • ಮಳೆ - ಪ್ರತಿ ವರ್ಷ ೩೦೦ - ೬೦೦ಮಿಮೀಗಳಷ್ಟು ಮಳೆ ಆಗಿರುತ್ತದೆ.
  • ಗಾಳಿ -ಗಾಳಿ ವೇಗ ೧೮.೨ ಕಿಮೀ/ಗಂ (ಜೂನ್), ೧೯.೬ ಕಿಮೀ/ಗಂ (ಜುಲೈ)ಹಾಗೂ ೧೭.೫ ಕಿಮೀ/ಗಂ (ಆಗಸ್ಟ್) ಇರುತ್ತದೆ.

ಜನಸಂಖ್ಯೆ

೨೦೧೧ರ ಜನಸಂಖ್ಯೆ ಪ್ರಕಾರ ಗ್ರಾಮದಲ್ಲಿ ೧೬೫೬೮ ಜನಸಂಖ್ಯೆ ಇದೆ. ಅದರಲ್ಲಿ ೮೪೭೧ ಪುರುಷರು ಮತ್ತು ೮೦೯೭ ಮಹಿಳೆಯರು ಇದ್ದಾರೆ.

ಸಾಂಸ್ಕೃತಿಕ

ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.

ಕಲೆ ಮತ್ತು ಸಂಸ್ಕೃತಿ

ಕೋಲ್ಹಾರ: ಚರಿತ್ರೆ, ಭೌಗೋಳಿಕ, ಹವಾಮಾನ 
ಉತ್ತರ ಕರ್ನಾಟಕದ ಊಟ

ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.

ಧರ್ಮ

ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.

ಭಾಷೆ

ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ ಹಾಗೂ ಮರಾಠಿ ಭಾಷೆಗಳನ್ನು ಮಾತನಾಡುತ್ತಾರೆ.

ದೇವಾಲಯಗಳು

ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಪಾಂಡುರಂಗ - ವಿಠ್ಠಲ ದೇವಸ್ಥಾನ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.

ಮಸೀದಿಗಳು

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ಹಬ್ಬಗಳು

ಪ್ರತಿವರ್ಷ ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ನೀರಾವರಿ

ಗ್ರಾಮದ ಪ್ರತಿಶತ ೮೦ ಭಾಗ ಭೂಮಿ ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಕಾಲುವೆ

ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟುಯಿಂದ ಮುಳವಾಡ ಏತ ನೀರಾವರಿ ಕಾಲುವೆ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ.

ಕೃಷಿ ಮತ್ತು ತೋಟಗಾರಿಕೆ

ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ.

ಆರ್ಥಿಕತೆ

ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ ಉತ್ತಮ ಸ್ಥಿತಿಯಲ್ಲಿದೆ.

ಉದ್ಯೋಗ

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.

ಬೆಳೆಗಳು

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಅಕ್ಕಿ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ

ವಾಣಿಜ್ಯ ಬೆಳೆಗಳು

ದ್ರಾಕ್ಷಿ, ದಾಳಿಂಬೆ, ಚಿಕ್ಕು, ನಿಂಬೆ, ಮಾವು, ಬಾಳೆ,ಬಾರಿಹಣ್ಣು, ಕಬ್ಬು, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.

ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರಿಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.

ಶಿಕ್ಷಣ

  • ಸರಕಾರಿ ಹಿರಿಯ ಗಂಡು ಮಕ್ಕಳ ಪ್ರಾಥಮಿಕ ಶಾಲೆ
  • ಸರಕಾರಿ ಹಿರಿಯ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ
  • ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆ
  • ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ, ಕೊಲ್ಹಾರ, ಬಸವನ ಬಾಗೇವಾಡಿ
  • ಶ್ರೀ ಸಂಗಮೇಶ್ವರ ಪ್ರೌಢ ಶಾಲೆ, ಕೊಲ್ಹಾರ
  • ಶ್ರೀ ಮಾರುತಿ ಪ್ರೌಢ ಶಾಲೆ, ಕೊಲ್ಹಾರ
  • ಶ್ರೀ ಸರಕಾರಿ ಪ್ರೌಢ ಶಾಲೆ, ಕೊಲ್ಹಾರ
  • ಸಿಕ್ಯಾಬ್ ಉರ್ದು ಪ್ರೌಢ ಶಾಲೆ, ಕೊಲ್ಹಾರ
  • ಶ್ರೀ ಸಂಗಮೇಶ್ವರ ಪದವಿಪೂರ್ವ ಮಹಾವಿದ್ಯಾಲಯ, ಕೊಲ್ಹಾರ
  • ಸಿಕ್ಯಾಬ್ ಪದವಿಪೂರ್ವ ಮಹಾವಿದ್ಯಾಲಯ, ಕೊಲ್ಹಾರ
  • ಶ್ರೀ ಸಂಗಮೇಶ್ವರ ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿ ಮಹಾವಿದ್ಯಾಲಯ, ಕೊಲ್ಹಾರ
  • ಅಂಜುಮನ್ ಎ - ಇಸ್ಲಾಂ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿ ಮಹಾವಿದ್ಯಾಲಯ, ಕೊಲ್ಹಾರ
  • ಶ್ರೀ ಕೃಷ್ಣ ಕೈಗಾರಿಕಾ ತರಬೇತಿ ಕೇಂದ್ರ, ಕೊಲ್ಹಾರ
  • ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ, ಕೊಲ್ಹಾರ

ರಾಜಕೀಯ

ಕೊಲ್ಹಾರ ಗ್ರಾಮವು ವಿಜಯಪುರ ಜಿಲ್ಲೆಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರ ಮತ್ತು ವಿಜಯಪುರ ಲೋಕಸಭಾ ಕ್ಷೇತ್ರ ದ ವ್ಯಾಪ್ತಿಯಲ್ಲಿ ಬರುತ್ತದೆ.

ಮಾಜಿ ಮಂತ್ರಿ ಹಾಗೂ ಶಾಸಕರಾದ ಎಸ್.ಕೆ.ಬೆಳ್ಳುಬ್ಬಿ(ಸಂಗಣ್ಣ ಕಲ್ಲಪ್ಪ ಬೆಳ್ಳುಬ್ಬಿ)ಯವರು ಕೊಲ್ಹಾರ ಗ್ರಾಮದವರು.

ಆರೋಗ್ಯ

ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ.

ಆರಕ್ಷಕ (ಪೋಲಿಸ್) ಠಾಣೆ

ಗ್ರಾಮದ ಪೋಲಿಸ್ ಠಾಣೆಯು ಸುತ್ತಲಿನ ಸುಮಾರು ೪೦ಕ್ಕೂ ಹೆಚ್ಚು ಹಳ್ಳಿಗಳ ವಾಪ್ತಿ ಹೊಂದಿದೆ.

ವಿದ್ಯುತ್ ಪರಿವರ್ತನಾ ಕೇಂದ್ರ

೩೩ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರವು ಗ್ರಾಮದ ಹಾಗೂ ಸುತ್ತಲಿನ ಹಳ್ಳಿಗಳಿಗೆ ವಿದ್ಯುತ್ ಒದಗಿಸುತ್ತದೆ.

ಬ್ಯಾಂಕುಗಳು

  • ಎಸ್.ಬಿ.ಐ.ಬ್ಯಾಂಕ್, ಕೊಲ್ಹಾರ
  • ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ, ಕೊಲ್ಹಾರ
  • ಬ್ಯಾಂಕ್ ಆಫ್ ಇಂಡಿಯಾ, ಕೊಲ್ಹಾರ
  • ಜಿಲ್ಲಾ ಕೇಂದ್ರೀಯ ಸಹಕಾರಿ ಬ್ಯಾಂಕ, ಕೊಲ್ಹಾರ

ಪಟ್ಟಣ ಪಂಚಾಯತಿ

ಕೊಲ್ಹಾರ ಪಟ್ಟಣ ಪಂಚಾಯತಿ ಕಾರ್ಯಾಲಯದ ಅಂತಾರ್ಜಾಲ ತಾಣ Archived 2020-01-26 ವೇಬ್ಯಾಕ್ ಮೆಷಿನ್ ನಲ್ಲಿ.

ಅಂಚೆ ಕಚೇರಿ ಮತ್ತು ಅಂಚೆ ಸೂಚ್ಯಂಕ ಸಂಖ್ಯೆ

ಪಶು ಆಸ್ಪತ್ರೆ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ

  • ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕೊಲ್ಹಾರ

ರೈತ ಸಂಪರ್ಕ ಕೇಂದ್ರ

ಹಾಲು ಉತ್ಪಾದಕ ಸಹಕಾರಿ ಸಂಘ

ಸೇತುವೆ

ಕೃಷ್ಣಾ ನದಿಗೆ ಅಡ್ಡಲಾಗಿ ಸುಮಾರು ೧೦ಕ್ಕೂ ಹೆಚ್ಚು ಸೇತುವೆ ಮತ್ತು ಬ್ಯಾರೇಜುಗಳನ್ನು ನಿರ್ಮಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಅತಿ ಉದ್ದವಾದ ಸೇತುವೆಯನ್ನು ವಿಜಯಪುರ ಜಿಲ್ಲೆಯ ಕೊಲ್ಹಾರ ಗ್ರಾಮದ ಬಳಿ ಅಡ್ಡಲಾಗಿ ನಿರ್ಮಿಸಲಾಗಿದೆ. ಕೃಷ್ಣಾ ನದಿಯನ್ನು ಉತ್ತರ ಕರ್ನಾಟಕದಲ್ಲಿ ಹಿರಿ ಹೊಳಿಯಂತಲು ಕರೆಯುತ್ತಾರೆ. ಕರ್ನಾಟಕ ರಾಜ್ಯದಲ್ಲಿಯೇ ಅತಿ ದೊಡ್ಡ ನೀರಾವರಿ ಯೋಜನೆಯಾದ ಕೃಷ್ಣಾ ಮೇಲ್ದಂಡೆ ಯೋಜನೆ ನ್ನು ಈ ನದಿಯಿಂದ ಕೈಗಿತ್ತಿಕೊಳ್ಳಲಾಗಿದೆ. ಈ ನದಿಯು ಉತ್ತರ ಕರ್ನಾಟಕದ ಜೀವ ನದಿಯಾಗಿದೆ. ರಾಯಚೂರ ಜಿಲ್ಲೆಯ ಕುಡ್ಲು ಎಂಬಲ್ಲಿ ಭೀಮಾ ನದಿಯು ಕೃಷ್ಣಾ ನದಿಯನ್ನು ಸೇರುತ್ತದೆ.

ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳು

ರಾಷ್ಟ್ರೀಯ ಹೆದ್ದಾರಿ - ೨೧೮ => ಹುಬ್ಬಳ್ಳಿ - ನವಲಗುಂದ - ನರಗುಂದ - ಬಾಗಲಕೋಟೆ (ಗದ್ದನಕೇರಿ ಕ್ರಾಸ್) - ಬೀಳಗಿ(ಕ್ರಾಸ್) - ವಿಜಯಪುರ - ಸಿಂದಗಿ - ಜೇವರ್ಗಿ - ಗುಲಬುರ್ಗಾ - ಹುಮನಾಬಾದ - ಬೀದರ್.

ರಾಜ್ಯ ಹೆದ್ದಾರಿ - ೧೨೪ => ಅಫಜಲಪುರ - ಆಲಮೇಲ - ಸಿಂದಗಿ - ತಾಳಿಕೋಟ - ಮಿಣಜಗಿ - ಢವಳಗಿ - ರೂಡಗಿ - ಬಸವನ ಬಾಗೇವಾಡಿ - ಕೊಲ್ಹಾರ - ಬೀಳಗಿ.

ಸರಕಾರಿ ವಾಹನ ನಿಲ್ದಾಣ

ಗ್ರಂಥಾಲಯಗಳು / ವಾಚನಾಲಯಗಳು

ನೇಕಾರರ ಸಹಕಾರ ಸಂಘ

ಗ್ರಾಮದಲ್ಲಿ ನೇಕಾರರ ಸಹಕಾರ ಸಂಘವಿದೆ.

ಉಲ್ಲೇಖಗಳು

ಕೋಲ್ಹಾರ: ಚರಿತ್ರೆ, ಭೌಗೋಳಿಕ, ಹವಾಮಾನ 
ಬಿಜಾಪುರ ತಾಲ್ಲೂಕುಗಳು
ಇಂಡಿ | ಕೊಲ್ಹಾರ | ಚಡಚಣ | ತಾಳಿಕೋಟಿ | ತಿಕೋಟಾ | ದೇವರ ಹಿಪ್ಪರಗಿ | ನಿಡಗುಂದಿ | ಬಬಲೇಶ್ವರ | ಬಸವನ ಬಾಗೇವಾಡಿ | ಮುದ್ದೇಬಿಹಾಳ | ಸಿಂದಗಿ | ಬಿಜಾಪುರ

Tags:

ಕೋಲ್ಹಾರ ಚರಿತ್ರೆಕೋಲ್ಹಾರ ಭೌಗೋಳಿಕಕೋಲ್ಹಾರ ಹವಾಮಾನಕೋಲ್ಹಾರ ಜನಸಂಖ್ಯೆಕೋಲ್ಹಾರ ಸಾಂಸ್ಕೃತಿಕಕೋಲ್ಹಾರ ಕಲೆ ಮತ್ತು ಸಂಸ್ಕೃತಿಕೋಲ್ಹಾರ ಧರ್ಮಕೋಲ್ಹಾರ ಭಾಷೆಕೋಲ್ಹಾರ ದೇವಾಲಯಗಳುಕೋಲ್ಹಾರ ಮಸೀದಿಗಳುಕೋಲ್ಹಾರ ಹಬ್ಬಗಳುಕೋಲ್ಹಾರ ನೀರಾವರಿಕೋಲ್ಹಾರ ಕಾಲುವೆಕೋಲ್ಹಾರ ಕೃಷಿ ಮತ್ತು ತೋಟಗಾರಿಕೆಕೋಲ್ಹಾರ ಆರ್ಥಿಕತೆಕೋಲ್ಹಾರ ಉದ್ಯೋಗಕೋಲ್ಹಾರ ಬೆಳೆಗಳುಕೋಲ್ಹಾರ ಶಿಕ್ಷಣಕೋಲ್ಹಾರ ರಾಜಕೀಯಕೋಲ್ಹಾರ ಆರೋಗ್ಯಕೋಲ್ಹಾರ ಆರಕ್ಷಕ (ಪೋಲಿಸ್) ಠಾಣೆಕೋಲ್ಹಾರ ವಿದ್ಯುತ್ ಪರಿವರ್ತನಾ ಕೇಂದ್ರಕೋಲ್ಹಾರ ಬ್ಯಾಂಕುಗಳುಕೋಲ್ಹಾರ ಪಟ್ಟಣ ಪಂಚಾಯತಿಕೋಲ್ಹಾರ ಅಂಚೆ ಕಚೇರಿ ಮತ್ತು ಅಂಚೆ ಸೂಚ್ಯಂಕ ಸಂಖ್ಯೆಕೋಲ್ಹಾರ ಪಶು ಆಸ್ಪತ್ರೆಕೋಲ್ಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕೋಲ್ಹಾರ ರೈತ ಸಂಪರ್ಕ ಕೇಂದ್ರಕೋಲ್ಹಾರ ಹಾಲು ಉತ್ಪಾದಕ ಸಹಕಾರಿ ಸಂಘಕೋಲ್ಹಾರ ಸೇತುವೆಕೋಲ್ಹಾರ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳುಕೋಲ್ಹಾರ ಸರಕಾರಿ ವಾಹನ ನಿಲ್ದಾಣಕೋಲ್ಹಾರ ಗ್ರಂಥಾಲಯಗಳು ವಾಚನಾಲಯಗಳುಕೋಲ್ಹಾರ ನೇಕಾರರ ಸಹಕಾರ ಸಂಘಕೋಲ್ಹಾರ ಉಲ್ಲೇಖಗಳುಕೋಲ್ಹಾರಕರ್ನಾಟಕಬಸವನ ಬಾಗೇವಾಡಿವಿಜಯಪುರಹುಬ್ಬಳ್ಳಿ

🔥 Trending searches on Wiki ಕನ್ನಡ:

ಪಾಕಿಸ್ತಾನಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಸಾಮಾಜಿಕ ಸಂಶೋಧನೆ ಅದರ ವಿಧಾನಗಳು ಮತ್ತು ತಂತ್ರಗಳುಕಂದವ್ಯಾಪಾರ ಸಂಸ್ಥೆಭತ್ತಜಲ ಮಾಲಿನ್ಯಕುಕ್ಕೆ ಸುಬ್ರಹ್ಮಣ್ಯ ದೇವಾಲಯಕಪ್ಪೆ ಅರಭಟ್ಟಸಂಸ್ಕೃತ ಸಂಧಿಸೂರ್ಯ ಗ್ರಹಣಜನ್ನಭಾರತೀಯ ಸಂಸ್ಕೃತಿಸಾಮಾಜಿಕ ಸಮಸ್ಯೆಗಳುಮೊದಲನೆಯ ಕೆಂಪೇಗೌಡವಿವಾಹದೇವರ/ಜೇಡರ ದಾಸಿಮಯ್ಯನೀನಾದೆ ನಾ (ಕನ್ನಡ ಧಾರಾವಾಹಿ)ಪಂಚತಂತ್ರಚಾಲುಕ್ಯಕನ್ನಡ ಸಾಹಿತ್ಯ ಸಮ್ಮೇಳನಸ್ವಾಮಿ ವಿವೇಕಾನಂದಶಿಕ್ಷಕದೇವಸ್ಥಾನಯುರೋಪ್ಅಮ್ಮಜಿ.ಎಸ್.ಶಿವರುದ್ರಪ್ಪಹಂಪೆಮಂಜುಳಪೂರ್ಣಚಂದ್ರ ತೇಜಸ್ವಿನುಗ್ಗೆಕಾಯಿಆಟಿಸಂವಿಜಯಪುರಯೋಗ ಮತ್ತು ಅಧ್ಯಾತ್ಮಹಾಸನಅಡೋಲ್ಫ್ ಹಿಟ್ಲರ್ಮಾನವನಲ್ಲಿ ನಿರ್ನಾಳ ಗ್ರಂಥಿಗಳುಸಿದ್ದರಾಮಯ್ಯನಂಜುಂಡೇಶ್ವರ ದೇವಸ್ಥಾನ, ನಂಜನಗೂಡುಸನ್ನಿ ಲಿಯೋನ್ಹೊಯ್ಸಳ ವಿಷ್ಣುವರ್ಧನಸಂಸ್ಕಾರಗುರುರಾಜ ಕರಜಗಿಶುಕ್ರಮಾಸ್ತಿ ವೆಂಕಟೇಶ ಅಯ್ಯಂಗಾರ್ಹೊಯ್ಸಳೇಶ್ವರ ದೇವಸ್ಥಾನಕಾಮಸೂತ್ರಓಂ ನಮಃ ಶಿವಾಯಬ್ಲಾಗ್ಗೋಪಾಲಕೃಷ್ಣ ಅಡಿಗಭಗತ್ ಸಿಂಗ್ಡ್ರಾಮಾ (ಚಲನಚಿತ್ರ)ಭಾರತದ ಸಂವಿಧಾನಇ-ಕಾಮರ್ಸ್ಕರ್ನಾಟಕದ ಮುಖ್ಯಮಂತ್ರಿಗಳುತುಳಸಿಬಸವ ಜಯಂತಿಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ಕಾಳಿದಾಸಶ್ರುತಿ (ನಟಿ)ಸುದೀಪ್ಸರಸ್ವತಿಕಾಲಾಯ ತಸ್ಮೈ ನಮಃ (ಚಲನಚಿತ್ರ)ಮಲ್ಟಿಮೀಡಿಯಾಹೈದರಾಲಿದೇವತಾರ್ಚನ ವಿಧಿಅಂಡವಾಯುಭಾರತದಲ್ಲಿ ಪಂಚಾಯತ್ ರಾಜ್ದಾವಣಗೆರೆಭಾರತದ ಪಂಚಾಯತ್ ರಾಜ್ ವ್ಯವಸ್ಥೆಕರ್ನಾಟಕದ ಸಂಸ್ಕೃತಿಮಲ್ಲಿಕಾರ್ಜುನ್ ಖರ್ಗೆಅಲಂಕಾರಮೈಸೂರು ದಸರಾಮಹಾವೀರಮಲೈ ಮಹದೇಶ್ವರ ಬೆಟ್ಟಮೂಲಧಾತುಗಳ ಪಟ್ಟಿ🡆 More