ಗಂಗರಾಂ ಚಂಡಾಳ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ಅನುವಾದಕ, ಚತುರ್ಭಾಷಾ ಪರಿಣತ, ಕಲಾವಿದ, ಬಂಡಾಯ ಸಾಹಿತಿ-ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದವರು.
ಗಂಗರಾಂ ಚಂಡಾಳ ೧೮ ಜೂನ್ ೧೯೬೧ರಂದು ಯಡಹಳ್ಳಿ, ಕೋಲಾರ ಜಿಲ್ಲೆಯಲ್ಲಿ ಜನಿಸಿದರು. ತಂದೆ ವೆಂಕಟಪ್ಪ, ತಾಯಿ ವೆಂಕಟಗಿರಿಯಮ್ಮ. ೧೯೮೫ರಲ್ಲಿ ಮಂಡ್ಯದ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದಿ, ೧೯೯೪ರಲ್ಲಿ ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಸಮಾಜಶಾಸ್ತ್ರ ಎಂ.ಎ ಮಾಡಿ, ೨೦೦೫ ರಲ್ಲಿ ಯು.ಆರ್.ಪಿ ವತಿಯಿಂದ ಎಂ.ಟೆಕ್ ವ್ಯಾಸಂಗ ಪೂರೈಸಿದ್ದಾರೆ. ಇವರು ಕನ್ನಡ, ತೆಲುಗು, ಇಂಗ್ಲೀಷ್, ಹಿಂದಿ ಭಾಷೆಗಳನ್ನು ಬಲ್ಲವರಾಗಿದ್ದಾರೆ.
ಕರ್ನಾಟಕ ಅಂಬೇಡ್ಕರ್ ಗ್ರಾಮ ಸಮಾಜ(ರಿ)ವತಿಯಿಂದ ಹಲವಾರು ಸಾಮಾಜಿಕ ಸೇವೆಯಲ್ಲಿ ನಿರತ. ಗೋಕಾಕ್ ಚಳುವಳಿ, ಬಂಡಾಯ ಸಾಹಿತ್ಯ ಚಳುವಳಿ, ದಲಿತ ಚಳುವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ನ ಆಜೀವ ಸದಸ್ಯರು. ೬೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರಶೀಲ ವಿಷಯ ಮಂಡನೆ. ಅಲ್ಲದೆ ೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ, ಮೈಸೂರು ದಸರಾ ಕವಿಗೋಷ್ಠಿಯಲ್ಲಿ, ಪಟ್ಟದ ಕಲ್ಲು ಉತ್ಸವ ಮತ್ತು ಬಂಡಾಯ ಸಾಹಿತ್ಯ ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ.
ಬೆವರ ಬಸಿರ ಬೆಂಕಿ
ಕೋಪರ್ನಿಕಸ್
ಮೀಸಲಾತಿ: ಒಂದು ಪ್ರಶ್ನೆ-ಒಂದು ವಿಶ್ಲೇಷಣೆ.
This article uses material from the Wikipedia ಕನ್ನಡ article ಗಂಗರಾಂ ಚಂಡಾಳ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.