೧೯೩೧ರಲ್ಲಿ ಲಂಡನ್ ನಲ್ಲಿ ನಡೆದ ಎರಡನೇ ದುಂಡು ಮೇಜಿನ ಸಭೆಗಿಂತಲೂ ಮುಂಚೆ ಮಾರ್ಚ್ ೫, ೧೯೩೧ ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪರವಾಗಿ ಮಹಾತ್ಮ ಗಾಂಧಿ ಹಾಗು ಬ್ರಿಟೀಷರ ಪರವಾಗಿ ಆಗಿನ ಭಾರತದ ವೈಸ್ ರಾಯ್ ಲಾರ್ಡ್ ಇರ್ವಿನ್ ಒಪ್ಪಂದವೊಂದಕ್ಕೆ ಸಹಿ ಮಾಡುತ್ತಾರೆ.
ಇದನ್ನೇ ಗಾಂಧಿ-ಇರ್ವಿನ್ ಒಪ್ಪಂದವೆನ್ನಲಾಗುತ್ತದೆ.
1930ರ ಏಪ್ರಿಲ್ 6ರಂದು ಗಾಂಧಿಯವರು ಆರಂಭಿಸಿದ ಕಾನೂನು ಭಂಗ ಚಳವಳಿಯ ಪ್ರತಿಭಟನೆಯನ್ನು ಹತ್ತಿಕ್ಕಿ ತನ್ನ ಅಧಿಕಾರವನ್ನು ಉಳಿಸಿಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿತ್ತು. ಭಾರತೀಯ ಜನರ ಮೇಲೆ ಕಾಂಗ್ರೆಸ್ ಹೊಂದಿದ್ದ ಪ್ರಭಾವವನ್ನು ಸರ್ಕಾರ ಸರಿಯಾಗಿ ಅರಿತಿರಲಿಲ್ಲ. ಕಾಂಗ್ರೆಸಿನಷ್ಟು ಪ್ರಭಾವಶಾಲಿಯಲ್ಲದ, ಪ್ರತಿಗಾಮಿಯಾಗಿದ್ದ ಹಲವಾರು ಸಣ್ಣಪುಟ್ಟ ಪಕ್ಷಗಳಿಗೆ ಅದು ವಿಶೇಷವಾಗಿ ಉತ್ತೇಜನ ನೀಡಲು ಯತ್ನಿಸಿತು. ಸರ್ಕಾರದ ದಮನನೀತಿಯಿಂದ ಸ್ವಾತಂತ್ರ್ಯ ಹೋರಾಟ ಇನ್ನೂ ಬಿರುಸಾಯಿತು. ಭಾರತದ ರಾಜಕೀಯ ಭವಿಷ್ಯದ ಬಗ್ಗೆ ಸಮಾಲೋಚಿಸಲು 1930ರ ನವೆಂಬರಿನಲ್ಲಿ ಸಮಾವೇಶಗೊಂಡಿದ್ದ ದುಂಡು ಮೇಜಿನ ಪರಿಷತ್ತಿನಲ್ಲಿ ಕಾಂಗ್ರೆಸ್ ಪ್ರತಿನಿಧಿ ಯಾರೂ ಇರಲಿಲ್ಲ. ಕಾಂಗ್ರೆಸ್ ಇಲ್ಲದ ಯಾವ ಸಮಾಲೋಚನೆಯೂ ಫಲಪ್ರದವಾಗುವಂತಿರಲಿಲ್ಲ. ಪರಿಷತ್ತಿನ ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಭಾಗವಹಿಸುವುದೆಂಬುದು ಬ್ರಿಟಿಷ್ ಪ್ರಧಾನಿಯ ಆಶಯವಾಗಿತ್ತು. 1931ರ ಫೆಬ್ರವರಿ 17ರಂದು ಗಾಂಧೀ ಇರ್ವಿನರ ನಡುವೆ ಮಾತುಕತೆಗಳು ಆರಂಭವಾದುವು. ಮಾರ್ಚ್ 5ರಂದು ಒಪ್ಪಂದಕ್ಕೆ ಸಹಿಯಾಯಿತು.
ಇರ್ವಿನರ ಅಭಿಲಾಷೆಗಳು ಪ್ರಾಮಾಣಿಕವಾಗಿವೆಯೆಂದು ಗಾಂಧಿಯವರಿಗೆ ಖಚಿತವಾಗಿತ್ತು. ಲಿಬರಲ್ ಪಕ್ಷದ ನಾಯಕರಾದ ತೇಜ್ಬಹದ್ದೂರ್ ಸಪ್ರು, ಎಂ.ಆರ್. ಜಯಕರ್, ವಿ. ಎಸ್. ಶ್ರೀನಿವಾಸ ಶಾಸ್ತ್ರಿ ಇವರು ಸಂಧಾನ ಫಲಪ್ರದವಾಗಲು ಪ್ರಮುಖ ಪಾತ್ರ ವಹಿಸಿದ್ದರು.
೩೨ ಗಂಟೆಗಳ ಅವಧಿಯೊಳಗೆ ಎಂಟು ಸಭೆಗಳಿಗೆ ಹಾಜರಾದ ಗಾಂಧಿ ಹಾಗು ಇರ್ವಿನ್ ಅವರನ್ನು ಸರೋಜಿನಿ ನಾಯ್ಡು 'ಉಭಯ ಮಹಾತ್ಮರು' ಎಂದೇ ಸಂಭೋದಿಸುತ್ತಾರೆ. ಇರ್ವಿನ್ ತಮ್ಮ ನಡೆತೆಯಿಂದಲೇ ಗಾಂಧೀಜಿಯವರಿಗೆ ಬಹಳ ಪ್ರೀತಿ ಪಾತ್ರರಾಗಿದ್ದರು.
ಒಪ್ಪಂದಕ್ಕಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬ್ರಿಟಿಷ್ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ ಅಂಶಗಳು
ಭಾರತ ಹಾಗು ಇಂಗ್ಲೆಂಡ್ ನಲ್ಲಿದ್ದ ಹಲವಾರು ಬ್ರಿಟಿಷ್ ಅಧಿಕಾರಿಗಳಿಗೆ ಈ ಮೇಲಿನ ಒಪ್ಪಂದ ಕರಾರುಗಳು ನುಂಗಲಾರದ ತುತ್ತಾದವು. ಈ ಒಪ್ಪಂದದಿಂದ ಇಡೀ ಬ್ರಿಟಿಷ್ ರಾಜ್ ವ್ಯವಸ್ಥೆಯನ್ನೇ ಭಾರತೀಯರು ಸುಲಭವಾಗಿ ಅಲುಗಾಡಿಸಬಹುದು ಎಂದು ಹಲವಾರು ಅಧಿಕಾರಿಗಳು ಅರಿಹಾಯ್ದರು. ವಿನ್ ಸ್ಟನ್ ಚರ್ಚಿಲ್ ಇದೆ ಸಂಧರ್ಭದಲ್ಲಿ ಗಾಂಧೀಜಿಯವರ ಕುರಿತಾಗಿ ಆಕ್ಷೇಪಾರ್ಹ ಹೇಳಿಕೆಗಳನ್ನು ಕೊಟ್ಟು ಭಾರತೀಯರಿಗೆ ಅಪಮಾನವಾಗುವಂತೆ ನಡೆದುಕೊಂಡಿದ್ದರು.
ಬ್ರಿಟಿಷ್ ಸರ್ಕಾರ ಒಪ್ಪಿದ ಅಂಶಗಳು
ಆಧುನಿಕ ಭಾರತದ ಇತಿಹಾಸದಲ್ಲಿ ಇದು ಒಂದು ಮುಖ್ಯ ಘಟನೆ. ಬ್ರಿಟಿಷ್ ಸಾಮ್ರಾಜ್ಯದ ಪ್ರತಿನಿಧಿ ವೈಸ್ರಾಯಿಗೂ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುತ್ತಿದ್ದ ರಾಷ್ಟ್ರೀಯ ಕಾಂಗ್ರೆಸಿನ ನೇತಾರರಾದ ಗಾಂಧಿಯವರಿಗೂ ಪ್ರಥಮ ಬಾರಿಗೆ ಸಮಾನ ಅಂತಸ್ತಿನಲ್ಲಿ ವಿಚಾರವಿನಿಮಯ ನಡೆದು ಅದು ಈ ಒಪ್ಪಂದದಲ್ಲಿ ಪರ್ಯವಸಾನ ವಾಯಿತು. ಇದರಿಂದ ಕಾಂಗ್ರೆಸಿಗೆ ಪ್ರಾಮುಖ್ಯ ಅಧಿಕವಾಗಿ ಅದರ ಕೀರ್ತಿಯೂ ಹೆಚ್ಚಿತು. ದುಂಡುಮೇಜಿನ ಪರಿಷತ್ತಿನ ಎರಡನೆಯ ಅಧಿವೇಶನದಲ್ಲಿ ಕಾಂಗ್ರೆಸ್ ಭಾಗವಹಿಸಲು ಅವಕಾಶವಾಯಿತು.
This article uses material from the Wikipedia ಕನ್ನಡ article ಗಾಂಧಿ- ಇರ್ವಿನ್ ಒಪ್ಪಂದ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.