ನವರಾತ್ರಿ

ನವರಾತ್ರಿ ಇದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ.

ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು (ನವ) ರಾತ್ರಿಗಳು, ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೇಯ ದಿನ 'ವಿಜಯ ದಶಮಿ', ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವುದು ಕರ್ನಾಟಕದ ಆಚರಣೆಯ ಪದ್ಧತಿ. ಇದೇ ದಿನ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೂರ್ತಿಯ ಮೆರವಣಿಗೆಯು ಮೈಸೂರಿನಲ್ಲಿ ನಡೆಯುತ್ತದೆ. ಮೈಸೂರು ದಸರಾ ಉತ್ಸವವು ಜಗತ್ಪ್ರಸಿದ್ಧಿಯನ್ನು ಪಡೆದಿದೆ. ಈ ಹಬ್ಬವು ಹಿಂದು ಪಂಚಾಂಗದ ಆಶ್ವಯುಜ ಶುದ್ಧ ಪ್ರತಿಪದೆಯ ದಿನ ಪ್ರಾರಂಭವಾಗುತ್ತದೆ.

ನವರಾತ್ರಿ
Devi Shakthi at Parashakthi Temple, Pontiac, USA adorned as Goddesses Lakshmi, Durga and Saraswathi during Navarathri
ನವರಾತ್ರಿ
Women and men performing Garba as part of Navaratri celebrations in Vadodara
ನವರಾತ್ರಿ
Garba dance in Ahmedabad during navaratri festivities
ನವರಾತ್ರಿ
Durga Puja at Bagbazar Sarbajanin, North ಕೊಲ್ಕತ್ತ.
ನವರಾತ್ರಿ
Navaratri Golu, dolls and figurine display festival for girls and women in South India

ನವರಾತ್ರಿಯ ವೈಶಿಷ್ಟ್ಯತೆಗಳು

  • ನವರಾತ್ರಿ ಒಂಭತ್ತು ರಾತ್ರಿಗಳ ಸಮೂಹ. ಹಿಂದೆ ಐದು ನವರಾತ್ರಿ ಆಚರಣೆ ವಿಶೇಷವಾಗಿತ್ತು. ಈಗ ಎರಡು ನವರಾತ್ರಿ ವಿಶೇಷವಾಗಿದ್ದು, ಆಚರಣೆಯಲ್ಲಿದೆ. ಒಂದು ಶರನ್ನವರಾತ್ರಿ ಇನ್ನೊಂದು ಚೈತ್ರ ನವರಾತ್ರಿ. ಈಗ ನಾವು ಆಚರಿಸುವುದು ಶರನ್ನವರಾತ್ರಿ. ನವರಾತ್ರಿ ಎಲ್ಲ ಜನರೂ ಆಚರಿಸುವ ಒಂದು ವಿಶಿಷ್ಟವಾದ ಹಬ್ಬ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನವರಾತ್ರಿಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಶಕ್ತಿಯ ಆರಾಧನೆ ಈ ಹಬ್ಬದ ವೈಶಿಷ್ಟ್ಯ. ಮಂಗಳವಾರದಿಂದ ೯ ದಿನಗಳ ಕಾಲ ಆಚರಿಸುವ ಈ ಪರ್ವಕ್ಕೆ ದುರ್ಗೋತ್ಸವ ಎಂದೂ ಕರೆಯುತ್ತಾರೆ.
  • "ನವರಾತ್ರಿಯ ಶುಭಾಶಯಗಳು! ನಿಮ್ಮ ಜೀವನವು ಸುಖಮಯವಾಗಲಿ ಮತ್ತು ನವರಾತ್ರಿಯ ಹಬ್ಬದ ಆನಂದಗಳು ನಿಮ್ಮ ಬಳಿ ಇರಲಿ." For more Read these Navratri Wishes in Kannada
  • ವಿಜಯನಗರದ ಅರಸರು ಹಾಗೂ ಮೈಸೂರು ಅರಸರು ಜೈತ್ರಯಾತ್ರೆಯಲ್ಲಿ ಗೆಲುವು ಪಡೆದು ಸಂಭ್ರಮದಿಂದ ನಡೆಸುವ ವಿಶಿಷ್ಟ ಹಬ್ಬ ಎಂಬುದು ಇತಿಹಾಸದ ಉಲ್ಲೇಖ. ಪುರಾಣದ ಪ್ರಕಾರ ಜಗನ್ಮಾತೆ ರಾಕ್ಷಸರನ್ನು ಸಂಹಾರ ಮಾಡಲು ಒಂದೊಂದು ಅವತಾರವೆತ್ತಿ ರಾಕ್ಷಸರನ್ನು ಸಂಹರಿಸಿ ಲೋಕವನ್ನು ಕಾಪಾಡುತ್ತಾಳೆ. ನವರಾತ್ರಿಯ ಒಂದೊಂದು ದಿನವೂ ಬಹಳ ವಿಶೇಷವಾಗಿ ನಿಲ್ಲುತ್ತದೆ. ೯ ದಿನಗಳ ಕಾಲ ಆದಿ ಶಕ್ತಿಯನ್ನು ನವ ವಿಧದಲ್ಲಿ ಪೂಜಿಸಲಾಗುತ್ತದೆ.
  1. ಮೊದಲ ದಿನ ಅಂದರೆ ಪಾಡ್ಯದ ದಿನ ಯೋಗನಿದ್ರಾ ದುರ್ಗಾ ಪೂಜಾ.
  2. ಎರಡನೇ ದಿನ ಆಂದರೆ ಬಿದಿಗೆ ದಿನ ದೇವಜಾತ ದುರ್ಗಾಪೂಜಾ.
  3. ಮೂರನೇ ದಿನ ತದಿಗೆ - ಮಹಿಷಾಸುರ ಮರ್ಧಿನಿ ದುರ್ಗಾಪೂಜಾ.
  4. ನಾಲ್ಕನೇ ದಿನ ಚತುರ್ದಶಿ - ಶೈಲ ಜಾತಾ ದುರ್ಗಾಪೂಜಾ.
  5. ಐದನೇ ದಿನ ಪಂಚಮಿ - ದೂಮೃಹಾ ದುರ್ಗಾಪೂಜಾ.
  6. ಆರನೇ ದಿನ ಶಷ್ಠಿ - ಚಂಡ-ಮುಂಡ ಹಾ ದುರ್ಗಾಪೂಜಾ.
  7. ಏಳನೇ ದಿನ ಸಪ್ತಮಿ - ರಕ್ತ ಬೀಜ ಹಾ ದುರ್ಗಾಪೂಜಾ.
  8. ಎಂಟನೇ ದಿನ ಅಷ್ಟಮಿ - ನಿಶುಂಭ ಹಾ ದುರ್ಗಾಪೂಜಾ.(ದುರ್ಗಾಷ್ಠಮಿ)
  9. ಒಂಭತ್ತನೇ ದಿನ ಮಹಾನವಮಿ -ಶುಂಭ ಹಾ ದುರ್ಗಾಪೂಜಾ.

ಏಳನೇ ದಿನ ಅಂದರೆ ಸಪ್ತಮಿಯಿಂದ ತ್ರಿದಿನ ದುರ್ಗಾಪೂಜಾ ಎಂದೂ ಮಾಡುತ್ತಾರೆ. ಅಂದರೆ ಮಹಾಕಾಳಿ, ಮಹಾಲಕ್ಷ್ಮಿ, ಮಹಾಸರಸ್ವತಿ ಪೂಜೆ ಮಾಡಲಾಗುತ್ತದೆ. ನವರಾತ್ರಿಯಲ್ಲಿ ಸಪ್ತಮಿಗೆ ವಿಶೇಷ ಸ್ಥಾನವಿದೆ. ಸಪ್ತಮಿಯ ಮೂಲಾನಕ್ಷತ್ರದಂದು ಪುಸ್ತಕ, ಪವಿತ್ರಗ್ರಂಥಗಳನ್ನು, ಚಿನ್ನ, ಬೆಳ್ಳಿ ಪೂಜೆಗಿಡಲಾಗುತ್ತದೆ. ಹಾಗೂ ನವಮಿಯಂದು ಆಯುಧಗಳನ್ನು ಪೂಜಿಸಲಾಗುತ್ತದೆ. ಅಂದೇ ಪುಸ್ತಕಗಳನ್ನಿಟ್ಟು ಪೂಜಿಸಲಾಗುತ್ತದೆ ಇದಕ್ಕೆ ಸರಸ್ವತಿ ಪೂಜೆ ಎಂದೂ ಕರೆಯುತ್ತಾರೆ.

ಪುರಾಣಗಳಲ್ಲಿ

  • ನವರಾತ್ರಿಯ ಕುರಿತು ಪುರಾಣಗಳಲ್ಲಿ ಹಲವು ಉಲ್ಲೇಖಗಳಿವೆ. ಹಲವು ಕಥೆಗಳಿವೆ. ನವರಾತ್ರಿಯಲ್ಲಿ ಚಾಮುಂಡೇಶ್ವರಿ / ದುರ್ಗದೇವಿಯು ಮಹಿಷಾಸುರ ಮರ್ಧಿನಿಯಾಗಿ ಮಹಿಷಾಸುರ ಎಂಬ ರಾಕ್ಷಸನನ್ನು ಸಂಹಾರ ಮಾಡಿದಳು. ನವರಾತ್ರಿಯೆಂದರೆ ಒಂಭತ್ತು ದಿನಗಳಿಗೆ ಸೀಮಿತವಾಗಿದ್ದರೂ ಹತ್ತನೇ ದಿನ ವಿಜಯದಶಮಿ. ಮಹಾದುರ್ಗೆ ರಾಕ್ಷಸರನ್ನು ಸಂಹರಿಸಿ ವಿಜಯವನ್ನು ಸಾಧಿಸಿದ ದಿನ. ತ್ರೇತಾಯುಗದಲ್ಲಿ ಶ್ರೀರಾಮನು ರಾವಣನನ್ನು ಸಂಹಾರ ಮಾಡಿದನು. ಅದು ವಿಜಯದಶಮಿಯ ದಿನ ಎಂಬ ನಂಬಿಕೆ ಇದೆ.
  • ದ್ವಾಪರಾಯುಗದಲ್ಲಿ ಪಾಂಡವರು ಒಂದು ವರ್ಷ ಅಜ್ಞಾತವಾಸ ಮಾಡುವಾಗ ತಮ್ಮ ಆಯುಧಗಳನ್ನು ಬನ್ನಿ ಮರದಲ್ಲಿ ಮುಚ್ಚಿಟ್ಟಿದ್ದರು. ದಶಮಿಯ ದಿನಕ್ಕೆ ಅಜ್ಞಾತವಾಸ ಮುಗಿದು, ಅವರು ಬನ್ನಿ ಮರದಿಂದ ತಮ್ಮ ಆಯುಧಗಳನ್ನು ವಾಪಸ್ಸು ಪಡೆದು ಕುರುಕ್ಷೇತ್ರ ಯುದ್ಧದಲ್ಲಿ ಕೌರವರನ್ನು ಸೋಲಿಸಿ ವಿಜಯಸಾಧಿಸಿದರು ಎಂದು ಹೇಳುತ್ತಾರೆ. ಹೀಗಾಗಿ ಈ ದಶಮಿಯನ್ನು ವಿಜಯದಶಮಿ ಎಂದು ಕರೆಯುತ್ತಾರೆ ಆದ್ದರಿಂದ ಇವರೆಲ್ಲರ ವಿಜಯದ ಸಂಕೇತವಾಗಿ ಈ ದಿನವನ್ನು ವಿಜಯದಶಮಿ ಎಂದು ಆಚರಿಸುವುದು ಸಂಪ್ರದಾಯ.
  • ನವರಾತ್ರಿ ಆಚರಣೆಯ ಆಧ್ಯಾತ್ಮಿಕ ಮಹತ್ವ, ಆಚರಣೆಯ ಪದ್ಧತಿ ಹಾಗೂ ಲಾಭಗಳು*

ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದೇವಿಯ ಉತ್ಸವ ಎಂದರೆ ನವರಾತ್ರಿ. ನವರಾತ್ರಿಯಲ್ಲಿ ಶ್ರೀ ದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತತ್ತ್ವದ ಲಾಭವಾಗುತ್ತದೆ. ‘ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ್ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ್ ಋತುವಿನಲ್ಲಿ ‘ದೇವರಾತ್ರಿ’ಗಳಿರುತ್ತವೆ; ಆದುದರಿಂದ ಈ ಕಾಲದಲ್ಲಿನ ಪೂಜೆಗೆ ಅಕಾಲ ಪೂಜೆಯೆಂದು ಹೇಳುತ್ತಾರೆ. ತಾಂತ್ರಿಕ ಸಾಧಕರ ದೃಷ್ಟಿಯಲ್ಲಿ ಈ ‘ರಾತ್ರಿ’ಗಳು ಮಹತ್ವಪೂರ್ಣವಾಗಿರುತ್ತವೆ. ಹೀಗೆ ಬಹಳಷ್ಟು ರೀತಿಯ ರಾತ್ರಿಗಳಿರುತ್ತವೆ, ಉದಾ. ಕಾಲರಾತ್ರಿ, ಶಿವರಾತ್ರಿ, ಮೋಹರಾತ್ರಿ, ವೀರರಾತ್ರಿ, ದಿವ್ಯರಾತ್ರಿ, ದೇವರಾತ್ರಿ ಇತ್ಯಾದಿ. ಇವುಗಳಲ್ಲಿ ಭಗವತಿಯನ್ನು ಜಾಗೃತಗೊಳಿಸಬೇಕಾಗುತ್ತದೆ; ಆದರೆ ವಾಸಂತಿಕ ಪೂಜೆಯಲ್ಲಿ ಜಾಗೃತಗೊಳಿಸುವ ಆವಶ್ಯಕತೆಯಿರುವುದಿಲ್ಲ.’ ಒಂದು ಅಭಿಮತಕ್ಕನುಸಾರ ನವರಾತ್ರಿಯಲ್ಲಿನ ಮೊದಲ ಮೂರು ದಿನಗಳಂದು ತಮೋಗುಣವನ್ನು ಕಡಿಮೆ ಮಾಡಲು ತಮೋಗುಣಿ ಮಹಾಕಾಳಿಯ, ನಂತರದ ಮೂರು ದಿನಗಳಂದು ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮಿಯ ಮತ್ತು ಕೊನೆಯ ಮೂರು ದಿನಗಳಂದು ಸಾಧನೆಯನ್ನು ತೀವ್ರವಾಗಿ ಮಾಡಲು ಸತ್ತ್ವಗುಣಿ ಮಹಾಸರಸ್ವತಿಯ ಪೂಜೆಯನ್ನು ಮಾಡುತ್ತಾರೆ.

ನವರಾತ್ರಿಯ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ ?

ರಾತ್ರಿ’ ಎಂದರೆ ಆಗುತ್ತಿರುವ ಬದಲಾವಣೆ. ದೇವಿಯ ಒಂದು ಹೆಸರು ‘ಕಾಲರಾತ್ರಿ’ ಎಂದಾಗಿದೆ. ‘ಕಾಲರಾತ್ರಿ’ ಎಂದರೆ ಕಾಲಪುರುಷನಲ್ಲಿ ಬದಲಾವಣೆ ಮಾಡುವವಳು. ತಿರುಗುವುದು ಪೃಥ್ವಿಯ ಗುಣಧರ್ಮವಾಗಿದೆ. ಪೃಥ್ವಿಯು ತಿರುಗುತ್ತಿರುವುದರಿಂದ ಬದಲಾವಣೆಗಳು ಆಗುತ್ತಿರುತ್ತವೆ, ಅಂದರೆ ರಾತ್ರಿ ಮತ್ತು ಹಗಲು ಆಗುತ್ತವೆ. ಇಂತಹ ಬದಲಾವಣೆಗಳನ್ನು ಸಹಿಸುವ ಶಕ್ತಿಯು ಶರೀರದಲ್ಲಿರಬೇಕೆಂದು ವ್ರತ-ವೈಕಲ್ಯಗಳನ್ನು ಮಾಡುತ್ತಾರೆ.

ನವರಾತ್ರಿಯ ಇತಿಹಾಸ

ರಾಮನಿಂದ ರಾವಣನ ವಧೆಯಾಗಬೇಕೆಂದು ನಾರದರು ರಾಮನಿಗೆ ಶರವನ್ನರಾತ್ರಿ ವ್ರತವನ್ನು ಮಾಡಲು ಹೇಳಿದ್ದರು. ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ವಧಿಸಿದನು.

ದೇವಿಯು, ಮಹಿಷಾಸುರನೆಂಬ ರಾಕ್ಷಸನೊಂದಿಗೆ ಪಾಡ್ಯದಿಂದ ನವಮಿಯವರೆಗೆ ಒಂಬತ್ತು ದಿನಗಳ ಕಾಲ ಯುದ್ಧವನ್ನು ಮಾಡಿ ನವಮಿಯ ರಾತ್ರಿ ಅವನನ್ನು ಕೊಂದಳು. ಅಂದಿನಿಂದ ಅವಳಿಗೆ ಮಹಿಷಾಸುರಮರ್ದಿನಿ ಎನ್ನತೊಡಗಿದರು.

ಪೂಜೆ, ಉಪಾಸನೆ, ಆರಾಧನೆಗಳು ಮಾನವನ ಆದಿ ಸಂಸ್ಕೃತಿಯ ಭಾಗ. ಯಾವುದೋ ಕಾಮಿತಾರ್ಥವಾಗಿ, ಫಲಪ್ರಾಪ್ತಿಗಾಗಿ, ಭೀತಿ ನಿವಾರಣೆಗಾಗಿ, ಸಾಧನೆಯ ಮಾರ್ಗವಾಗಿ- ಹೀಗೆ ಹಲವು ಕಾರಣಗಳಿಗಾಗಿ ಉಪಾಸನೆಗಳನ್ನು ಕೈಗೊಳ್ಳುವುದು ಸಾಮಾನ್ಯ. ಅದರಲ್ಲೂ ಉಪಾಸನೆಗೊಳ್ಳುವ ಪೀಠದ ಶಕ್ತಿ ಹೆಚ್ಚು ಎಂದಷ್ಟಕ್ಕೂ ಆರಾಧನೆಯ ಪ್ರಮಾಣ ಮತ್ತು ಆರಾಧಕರ ಸಂಖ್ಯೆಯೂ ಹೆಚ್ಚು. ಹಾಗೆ ನೋಡಿದರೆ, ಶಕ್ತಿ ಪೀಠಗಳೆಂಬ ಉಲ್ಲೇಖಗಳು ಸಾಮಾನ್ಯವಾಗಿ ದೇವಿಯ ಪೀಠಗಳನ್ನೇ ಉದ್ದೇಶಿಸಿದ್ದಾಗಿರುತ್ತದೆ. ಈ ಪೀಠಗಳ ಶಕ್ತಿಯೋ, ಉಪಾಸಕರ ಭಕ್ತಿಯೋ ಅಂತೂ ಭವದ ಮಾಯೆಗಳನ್ನು ದಾಟಲು ಅಗೋಚರ ಸೇತುವೆಗಳು ಇಲ್ಲಿ ಹೆಣೆದುಕೊಳ್ಳುತ್ತವೆ. ಶಕ್ತಿ ಸ್ವರೂಪಿಣಿಯ ಆರಾಧನೆಯ ಈ ದಿನಗಳಲ್ಲಿ (Navaratri 2023), ಮಾಯೆಗಳೆಂಬ ಆಸುರೀ ಪಾಶಗಳನ್ನು ಕಳೆದುಕೊಳ್ಳುವ ಬಗ್ಗೆ, ಅದರ ಸುತ್ತ ಹರಡಿರುವ ಕುತೂಹಲಗಳ ಬಗೆಗೆ ಒಂದಿಷ್ಟು ಜಿಜ್ಞಾಸೆಯಿದು.

ಯಾವುದನ್ನೇ ಆರಾಧಿಸುವಾಗಲೂ ಅದರಲ್ಲೊಂದು ಪ್ರಸ್ತುತತೆಯನ್ನು ಹುಡುಕುವುದು ಸಹಜ. ನವರಾತ್ರಿಯ ನೆವದಲ್ಲಿ ಒಂಬತ್ತು ದೇವಿಯರ ಸ್ವರೂಪಗಳನ್ನು ಆರಾಧಿಸುವಾಗಲೂ ಇದು ಸತ್ಯ. ಈ ವಿಷಯದಲ್ಲಿ ದೇವ- ದೇವಿ ಎಂಬ ಲಿಂಗಭೇದವೆಂದು ಭಾವಿಸದೆ ಸಹಜ ಕುತೂಹಲದಲ್ಲಿ ನೋಡುವುದಾದರೆ- ದೇವಿಯರ ಆರಾಧಕರಲ್ಲಿ ಹೆಚ್ಚು ಭಿನ್ನತೆ ಕಾಣುವುದಿಲ್ಲ. ಇದನ್ನು ಸ್ಪಷ್ಟವಾಗಿ ಹೇಳಬೇಕೆಂದರೆ, ಹರಿ ಪಾರಮ್ಯವನ್ನು ಒಪ್ಪುವವರು ವೈಷ್ಣವರು, ಶಿವನ ಆರಾಧಕರು ಶೈವರು, ಗಣಪತಿಯ ಉಪಾಸಕರು ಗಾಣಪತ್ಯರು ಎಂದೆಲ್ಲಾ ವಿಭಾಗಗಳನ್ನು ಕಾಣಬಹುದು. ತ್ರಿಮೂತ್ರಿಗಳಲ್ಲೂ ಬ್ರಹ್ಮನ ಆರಾಧಕರು ವಿರಳ; ಉಳಿದಿಬ್ಬರು ದೇವರ ಆರಾಧಕರಲ್ಲಿ ಭಿನ್ನತೆ ಬಹಳ. ಆದರೆ ಶಕ್ತಿಯ ಆರಾಧಕರನ್ನೆಲ್ಲಾ ಶಾಕ್ತರು ಎಂದು ಕರೆಯಬಹುದಾದರೆ- ಅವರೆಲ್ಲಾ ಬಹುತೇಕ ಒಂದೇ. ಅಂದರೆ ಲಕ್ಷ್ಮಿ, ಸರಸ್ವತಿ, ಪಾರ್ವತಿ, ದುರ್ಗೆ ಎಂದು ಬೇರೆಯೇ ವ್ರತ-ಹಬ್ಬಗಳನ್ನು ಆಚರಿಸಿದರೂ, ಇವರದ್ದೆಲ್ಲಾ ಪ್ರತ್ಯೇಕ ಪಂಥವಲ್ಲ. ಅವರೆಲ್ಲಾ ದೇವಿಯ ಭಕ್ತರು ಮಾತ್ರ. ಹೀಗೆ ಸಂಪತ್ತು, ವಿದ್ಯೆ, ಶಕ್ತಿ ಎಂಬಿತ್ಯಾದಿ ಹಲವು ಸ್ವರೂಪಗಳಲ್ಲಿ ಆವಿರ್ಭವಿಸುವ ಶಕ್ತಿಯನ್ನು ಭಿನ್ನಗೊಳಿಸದೆ, ಭಕ್ತಿಯ ಮೂಲಕ ಏಕತ್ರಗೊಳಿಸುವ ಸಾಧ್ಯತೆಯು ಅನನ್ಯ ಎನಿಸುವುದು ಈ ಕಾರಣಕ್ಕೆ.

ಹಲವು ಕೃತಿಗಳಲ್ಲಿ ಉಲ್ಲೇಖ

ದೇವಿಗೆ ಸಂಬಂಧಿಸಿದ ಸಂಗತಿಗಳನ್ನು ಮಾರ್ಕಂಡೇಯ ಪುರಾಣ, ಶ್ರೀದೇವಿ ಭಾಗವತ, ಸ್ಕಾಂದ ಪುರಾಣ, ಕಾಲಿಕಾ ಪುರಾಣ, ವರಾಹ ಪುರಾಣ ಮುಂತಾದ ಕೃತಿಗಳಲ್ಲಿ ಕೊಂಚ ವ್ಯತ್ಯಾಸಗಳೊಂದಿಗೆ ನಿರೂಪಿಸಲಾಗಿದೆ. ಚಂಡಿ, ಚಾಮುಂಡಿ, ಕಾಳಿ, ಕಾತ್ಯಾಯನಿ, ಅಂಬಾ, ದುರ್ಗಾ, ಈಶ್ವರಿ ಮುಂತಾದ ಹಲವು ಹೆಸರುಗಳಿಂದ ಆಕೆಯನ್ನು ಕರೆಯಲಾಗಿದೆ. ಆದರೆ ಈ ಎಲ್ಲಾ ಕೃತಿಗಳ ಪ್ರಕಾರ, ದೇವತೆಗಳ ರಕ್ಷಣೆಗಾಗಿ ಆವಿರ್ಭವಿಸುವ ದೇವಿ, ಶಿಷ್ಟರಿಗೆಲ್ಲ ಕಂಟಕನಾಗಿದ್ದ ಮಹಿಷಾಸುರನನ್ನು ಸಂಹರಿಸುತ್ತಾಳೆ. ಇದಕ್ಕಾಗಿ ಎಲ್ಲಾ ದೇವಾಧಿದೇವತೆಗಳ ತೇಜಸ್ಸು ಏಕತ್ರಗೊಂಡು, ಸರ್ವಶಕ್ತಳಾದ ದೇವಿಯ ಸ್ವರೂಪ ಪಡೆಯುತ್ತದೆ. ಮಹಿಷನನ್ನು ಮಾತ್ರವಲ್ಲದೆ, ಚಂಡ-ಮುಂಡರು, ರಕ್ತಬೀಜ, ಶುಂಭ-ನಿಶುಂಭರನ್ನೂ ವಧಿಸುತ್ತಾಳೆ ಈ ದೇವಿ. ನವರಾತ್ರಿ ಆಚರಣೆಯ ಪ್ರಮುಖ ಹಿನ್ನೆಲೆಯೇ ಈ ಸರ್ವಶಕ್ತಿಯ ಆರಾಧನೆ.

ನವದುರ್ಗೆಯರು

ಒಂಬತ್ತು ದಿನ ಉಪಾಸನೆಗೊಳ್ಳುವ ಒಂಬತ್ತು ದೇವಿಯರದ್ದು ಭಿನ್ನ ಪ್ರವೃತ್ತಿ ಮತ್ತು ಅನುಪಮ ಶಕ್ತಿ. ಮೊದಲ ದಿನ ಶೈಲಪುತ್ರಿ ಎನಿಸಿಕೊಳ್ಳುವ ಈಕೆಯ ಹಿಂದೆ ಅಗ್ನಿಯಲ್ಲಿ ದಹಿಸಿ ಹೋಗುವ ದಾಕ್ಷಾಯಿಣಿಯ ಕಥೆಯಿದೆ. ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದನ್ನ ಸಹಿಸದ ದಾಕ್ಷಾಯಿಣಿ, ತಂದೆಯ ವಿರುದ್ಧವೇ ಸಿಡಿದೇಳುವ ಕಥೆಯಿದು. ʻದಕ್ಷನ ಮಗಳು ದಾಕ್ಷಾಯಿಣಿʼ ಎನಿಸಿಕೊಳ್ಳುವುದನ್ನೇ ವಿರೋಧಿಸಿ, ಯೋಗಾಗ್ನಿಯಲ್ಲಿ ದಹಿಸಿಕೊಂಡು, ಶೈಲಪುತ್ರಿಯಾಗಿ ಮತ್ತೆ ಹುಟ್ಟಿಬಂದು ಶಿವನನ್ನು ಸೇರಿದಳೆನ್ನುತ್ತವೆ ಪುರಾಣಗಳು. ಎರಡನೇ ದಿನ ಆಕೆ ಬ್ರಹ್ಮಚಾರಿಣಿ. ಪಾರ್ವತಿಯಾಗಿ ಹುಟ್ಟಿದ ಮರುಜನ್ಮದಲ್ಲಿ ಶಿವನನ್ನೇ ಸೇರಬೇಕೆಂಬ ಏಕೋದ್ದೇಶದಿಂದ ಕಠಿಣ ತಪಸ್ಸನ್ನಾಚರಿಸಿ, ಗುರಿ ಸಾಧಿಸಿದ ಛಲದ ಸಂಕೇತವಾಗಿ ಆಕೆ ಅಂದು ಪೂಜಿಸಲ್ಪಡುತ್ತಾಳೆ. ಮೂರನೇ ದಿನ ಚಂದ್ರಘಂಟಾ ಎನಿಸಿಕೊಳ್ಳುವ ಆಕೆ, ಶಿವನಲ್ಲಿದ್ದ ಘೋರ ಸ್ವರೂಪವನ್ನು ಶಮನ ಮಾಡಿ, ಸಾತ್ವಿಕ ಸ್ವರೂಪವನ್ನು ಉದ್ದೀಪಿಸಿದ ಕಾರಣಕ್ಕೆ ಮಹತ್ವ ಪಡೆಯುತ್ತಾಳೆ. ನಾಲ್ಕನೇ ದಿನ ಕೂಷ್ಮಾಂಡವೆನಿಸಿಕೊಳ್ಳುವ ಆಕೆಯಿಂದ, ಉಮೆ, ರಮೆ, ವಾಣಿಯರ ಉದ್ಭವ ಎನ್ನಲಾಗುತ್ತದೆ.

ಶಕ್ತಿ ಸ್ವರೂಪಗಳ ಉಗಮ

ಶಕ್ತಿ ಸ್ವರೂಪಗಳ ಉಗಮ-ಸಂಗಮಗಳು ಹೀಗೆ ಒಂದೇ ಎನಿಸಿಕೊಂಡ ಕಾರಣದಿಂದಲೇ ಶಕ್ತಿಯ ಆರಾಧಕರಲ್ಲಿ ಭಿನ್ನತೆ ಇಲ್ಲದೆ ಇರಬಹುದು. ಐದನೇ ದಿನ ಸ್ಕಂದಮಾತಾ ಎಂಬ ಹೆಸರಿನಿಂದ ಮಾತೃಸ್ವರೂಪಿಣಿಯಾಗಿ ಪೂಜೆಗೊಳ್ಳುತ್ತಾಳೆ. ಆರನೇ ದಿನ ಆಕೆ ಕಾತ್ಯಾಯನಿ. ಋಷಿ ಕಾತ್ಯಾಯನನ ಸಂತಾನದ ರೂಪದಲ್ಲಿ ದೈವೀಶಕ್ತಿಯು ಭೂಮಿಗೆ ಅವತರಿಸುವ ಹಿನ್ನೆಲೆ ಈ ಕಥೆಗಿದೆ. ಆಸುರೀ ಮಾಯೆಗಳ ನಿರ್ಮೂಲನೆಗೆ ದೈವೀಶಕ್ತಿಗೆ ಇರಬಹುದಾದ ಮಾನುಷ ಪ್ರವೃತ್ತಿಯನ್ನು ಇದು ಪ್ರತಿನಿಧಿಸುತ್ತದೆನ್ನಬಹುದು. ಏಳನೇ ದಿನಕ್ಕೆ ಕಾಳರಾತ್ರಿಯ ಅವತಾರಿಣಿ. ಚಂಡ-ಮುಂಡರನ್ನು ವಧಿಸಿ ಈಗಾಗಲೇ ಚಾಮುಂಡಿ ಎನಿಸಿಕೊಂಡಿದ್ದಾಳೆ.

ಘೋರ ಅವತಾರ ದೇವಿಯ ಅವತಾರಗಳಲ್ಲೇ ಕಾಳರಾತ್ರಿಯನ್ನು ಘೋರ ಎನ್ನಬಹುದು. ಈಕೆ ರಕ್ತಬೀಜನ ಸಂಹಾರಿಣಿ. ಸಪ್ತಮಿಯ ದಿನವೇ ವಿದ್ಯಾಧಿದೇವತೆ ಸರಸ್ವತಿಯ ಪೂಜೆಯೂ ನಡೆಯುತ್ತದೆ. ಕಾಳರಾತ್ರಿಯ ಅವತಾರವನ್ನು ತೊರೆದು ತನ್ನ ಮೊದಲಿನ ಸ್ವರೂಪಕ್ಕೆ ಮರಳುವ ಆಕೆ ಕರೆಸಿಕೊಳ್ಳುವುದು ಮಹಾಗೌರಿ ಎಂದು- ಇದು ಎಂಟನೇ ದಿನದಂದು. ಇದೇ ದಿನ ನಿಶುಂಭನ ಸಂಹಾರವೂ ನಡೆಯುತ್ತದೆ. ಮಹಾನವಮಿಯಂದು ಶುಂಭನ ವಧೆ. ಸಿದ್ಧಿಧಾತ್ರಿಯೆಂದು ಕರೆಸಿಕೊಳ್ಳುವ ಆಕೆ ಸಿದ್ಧಿಪ್ರದಾಯಿನಿ ಎಂದೇ ಪೂಜಿತಳಾಗುತ್ತಾಳೆ. ವಿಜಯದಶಮಿಯಂದು ಮಹಿಷಾಸುರ ಮರ್ದಿನಿಯ ಉಪಾಸನೆ. ಹೀಗೆ ಸ್ವಾಭಿಮಾನ, ಛಲ, ಸಹನೆ, ಸಾತ್ವಿಕತೆ, ಶಕ್ತಿ, ಮಮತೆ, ಕ್ರೋಧ, ವಿದ್ಯೆ, ಸಿದ್ಧಿಯಂಥ ಹಲವು ಗುಣಗಳ ಅಪೂರ್ವ ಎರಕದಂತೆ ಕಾಣುತ್ತಾಳೆ ಚಾಮುಂಡೇಶ್ವರಿ.

ನವರಾತ್ರಿಯ ಆಚರಣೆಯ ಮಹತ್ವ

  • ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ, ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ. ಇದು ಆ ದೇವಿಯ ವ್ರತವಾಗಿದೆ.

ನವರಾತ್ರಿಯಲ್ಲಿ ದೇವಿತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ದೇವಿತತ್ತ್ವದ ಲಾಭವನ್ನು ಆದಷ್ಟು ಹೆಚ್ಚು ಪಡೆದುಕೊಳ್ಳಲು ನವರಾತ್ರಿಯ ಕಾಲದಲ್ಲಿ ‘ಶ್ರೀ ದುರ್ಗಾದೇವ್ಯೈ ನಮಃ|’ ಎಂಬ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು.

  • ನವರಾತ್ರಿ ವ್ರತವನ್ನು ಆಚರಿಸುವ ಪದ್ಧತಿ - ‘ಅಖಂಡ ದೀಪಪ್ರಜ್ವಲನೆ ಅಂದರೆ ನವರಾತ್ರಿಯ ೯ ದಿನಗಳಲ್ಲಿಯೂ ಸತತವಾಗಿ ದೀಪವನ್ನು ಉರಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನವನ್ನು ಕೇಳುವುದು, ಲಲಿತಾಪೂಜೆ, ಸರಸ್ವತಿಪೂಜೆ, ಉಪವಾಸ, ಜಾಗರಣೆ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ನಡೆಸಿ ಅವರವರ ಶಕ್ತಿಸಾಮರ್ಥ್ಯಕ್ಕನುಸಾರವಾಗಿ ನವರಾತ್ರಿ ಮಹೋತ್ಸವವನ್ನು ಆಚರಿಸುತ್ತಾರೆ.

ನವದುರ್ಗೆಯರು

ಮಾರ್ಕಂಡೇಯ ಋಷಿಗಳು ಬರೆದಿರುವ ದುರ್ಗಾಸಪ್ತಶತಿ ಎಂಬ ಗ್ರಂಥವು ತಂತ್ರ ಮತ್ತು ಮಂತ್ರ ಈ ಎರಡೂ ಮಾರ್ಗಗಳಲ್ಲಿ ಪ್ರಸಿದ್ಧವಾಗಿದ್ದು ಭಾರತದಲ್ಲಿ ಇಂದು ಲಕ್ಷಾಂತರ ಜನರು ಸಪ್ತಶತಿಯ ಪಠಣ ಮಾಡುತ್ತಿರುವುದು ಕಂಡುಬರುತ್ತದೆ. ಭಗವಾನ ಹಿರಣ್ಯಗರ್ಭ ಮುನಿಗಳು ಮಂತ್ರಯೋಗ ಸಮೀಕ್ಷೆಯಲ್ಲಿ ಹೇಳಿರುವ ಶ್ರೀ ದುರ್ಗಾಸಪ್ತಶತಿಯಲ್ಲಿನ ದೇವಿಯ ಹೆಸರುಗಳ ಶಾಸ್ತ್ರೀಯ ಅರ್ಥ ಮತ್ತು ಇಂದಿನ ಭೌತಿಕ ವಿಜ್ಞಾನವು ಮಾಡಿರುವ ಪ್ರಗತಿಯ ಬಗ್ಗೆ ಇಲ್ಲಿ ನಾವು ವಿಚಾರ ಮಾಡೋಣ.

  1. ಶೈಲಪುತ್ರಿ :‘ಶೈಲಮ್’ ಅಂದರೆ ಯಾವ ಪರ್ವತದಲ್ಲಿ ಮಾಣಿಕ್ಯ, ರತ್ನ ಮತ್ತಿತರ ಅತ್ಯಮೂಲ್ಯ ವಸ್ತುಗಳ ಸಂಗ್ರಹವಿದೆಯೋ, ಅಂತಹ ಪರ್ವತ. ಈ ಅತ್ಯಮೂಲ್ಯ ವಸ್ತುಗಳ ಸಂಗ್ರಹವನ್ನು ನೋಡಿಯೂ ಭೌತಿಕ ಸುಖದೆಡೆಗೆ ಆಕರ್ಷಿತಗೊಳ್ಳದೆ, ಭೌತಿಕತೆಯ ತ್ಯಾಗವನ್ನು ಮಾಡಿ ಆತ್ಮಜ್ಞಾನವನ್ನು ಪಡೆಯಲು ಪ್ರವೃತ್ತವಾಗುವವಳೆಂದರೆ ಶೈಲಪುತ್ರಿ.
  2. ಬ್ರಹ್ಮಚಾರಿಣಿ :‘ಬ್ರಹ್ಮಚಾರಯಿತುಂ ಶೀಲಂ ಯಸ್ಯಾಃ ಸಾ ಬ್ರಹ್ಮಚಾರಿಣಿ|’ ಅಂದರೆ ಬ್ರಹ್ಮರೂಪವಾಗುವುದು ಯಾರ ಶೀಲವಾಗಿದೆಯೋ ಮತ್ತು ಯಾರ ಆಚಾರಗಳು ಅದರಂತಿವೆಯೋ ಅವಳೇ ಬ್ರಹ್ಮಚಾರಿಣಿ.
  3. ಚಂದ್ರಘಂಟಾ: ‘ಚಂದ್ರಃ ಘಂಟಾಯಾಂ ಯಸ್ಯಾ ಸಾ ಚಂದ್ರಘಂಟಾ| ಆಹ್ಲಾದಯತಿ ಇತಿ ಚಂದ್ರಃ|’ ಅಂದರೆ ಆಹ್ಲಾದಕಾರಕ ಚಂದ್ರನು ಯಾರ ದ್ವಾರದಲ್ಲಿ ಸ್ಥಿರವಾಗಿದ್ದಾನೆಯೋ ಅವಳೇ ಚಂದ್ರಘಂಟಾ. ಆಹ್ಲಾದವೆಂದರೆ ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ ಈ ಮೂರೂ ಗುಣಗಳ ಸಮ್ಮಿಲಿತ ಸ್ಥಿತಿ.
  4. ಕೂಷ್ಮಾಂಡಾ  : ‘ಕುತ್ಸಿತಃ ಉಷ್ಮಾಃ ಕೂಷ್ಮಾಃ|’ ಕುತ್ಸಿತಃ ಅಂದರೆ ಸಹಿಸಲು ಕಠಿಣ ವಾದುದು. ಉಷ್ಮಾ ಎಂದರೆ ಸೂಕ್ಷ್ಮ ಲಹರಿಗಳ ಗೊಂದಲ (ಧ್ವನಿ). ‘ತ್ರಿವಿಧತಾಪಯುಕ್ತಃ ಸಂಸಾರಃ ಸ ಅಂಡೇ ಮಾಂಸಪೇಶ್ಯಾಮ್ ಉದರರೂಪಾಯಾಂ ಯಸಾಃ ಸಾ ಕೂಷ್ಮಾಂಡಾ|’ ಇದರ ಅರ್ಥವು ಹೀಗಿದೆ ? ತ್ರಿವಿಧತಾಪಗಳೆಂದರೆ ಉತ್ಪತ್ತಿ (ಜನ್ಮ), ಸ್ಥಿತಿ (ಬೆಳವಣಿಗೆ) ಮತ್ತು ಲಯ (ಮೃತ್ಯು). ‘ಮೃತ್ಯು (ಮೋಕ್ಷ) ಅಂದರೆ ಅನಿಶ್ಚಿತ ಕಾಲಾವಧಿಯವರೆಗೆ ವಿಶಿಷ್ಟ ಪದ್ಧತಿಯಿಂದ ನಾಶವಾಗುವುದು’. ‘ಸಂಸಾರ’ವೆಂದರೆ ‘ಪುನಃಪುನಃ’ ಮತ್ತು ‘ಅಂಡಃ’ ಅಂದರೆ ‘ವಿಶಿಷ್ಟ ನಿಯಂತ್ರಣದಿಂದ ಯುಕ್ತವಾಗಿರುವ ಕೋಶ.’ ಮಾಂಸ, ಜೀವಕೋಶಗಳು, ಉದರ ಮತ್ತು ರೂಪ ಇವುಗಳಿಂದ ಯುಕ್ತಸಂಪನ್ನವಾದ ಜೀವಗಳು ಈ ಕೋಶದಲ್ಲಿ ತ್ರಿವಿಧ ತಾಪಗಳ ಪುನರಾವೃತ್ತಿಯ ಅವಸ್ಥೆಯಿಂದ ಪುನಃಪುನಃ ಹೋಗುತ್ತಾರೆ. ಈ ಪ್ರಕ್ರಿಯೆಯಿಂದ ಬಿಡುಗಡೆ ಹೊಂದಲು ಯಾರ ಕೃಪೆಯ ಆವಶ್ಯಕತೆಯಿದೆಯೋ ಅವಳೇ ಕೂಷ್ಮಾಂಡಾ.
  5. ಸ್ಕಂದಮಾ : ‘ಭಗಃ’ ಎಂದರೆ ತೇಜಸ್ಸು. ‘ಭಗವತಿ’ ಎಂದರೆ ‘ವಿಶಿಷ್ಟ ಯೋಗ್ಯತೆ ಯುಳ್ಳ ಸ್ಪಂದನ ಲಹರಿಗಳಿಂದ ಯುಕ್ತವಾದಂತಹ ತೇಜಸ್ಸು’. ಬ್ರಹ್ಮದೇವ ಮತ್ತು ಭಗವತಿ ದೇವಿಯ ಸಮ್ಮಿಲಿತ ಅವಸ್ಥೆಯಿಂದ ಸನತ್ಕುಮಾರ ಅಥವಾ ಸ್ಕಂದ ಎಂಬ ಹೆಸರಿನ ವಿಶಿಷ್ಟ ರಚನೆಯ ಕಿರಣ ಸಮೂಹವು ಉತ್ಪನ್ನವಾಯಿತು. ಭೂಲೋಕದಿಂದ ಸತ್ಯಲೋಕದ ವರೆಗಿನ ಲೋಕಗಳನ್ನು ‘ಸ್ಕಂದರೇಷೆ’ ಎನ್ನುತ್ತಾರೆ. ಭೂಲೋಕದಿಂದ ಸತ್ಯಲೋಕದವರೆಗಿನ ವ್ಯಾಹ್ಯತಿಗಳ ಮೇಲೆ ಸ್ಕಂದರೇಷೆಯ ನಿಯಂತ್ರಣವಿದೆ. ವ್ಯಾಹ್ಯತಿ ಅಂದರೆ ಗೂಢ ಸ್ವರ ಅಥವಾ ಮಂತ್ರ. ಸಪ್ತಲೋಕಗಳ ಹೆಸರುಗಳಂತೆ ಅನುಕ್ರಮವಾಗಿ ಭೂಃ, ಭುವಃ, ಸ್ವಃ, ಮಹಃ, ಜನಃ, ತಪಃ ಮತ್ತು ಸತ್ಯ ಇವು ಏಳು ವ್ಯಾಹ್ಯತಿಗಳಾಗಿವೆ. ಈ ಏಳೂ ಲೋಕಗಳ ನಿಯಂತ್ರಕರ ಮಾತೆಯೇ ಸ್ಕಂದಮಾತೆ. ಈ ಏಳೂ ಲೋಕಗಳಿಂದ ಪಾರಾಗಿ ಹೋಗಲು ಯಾರ ಸಹಾಯ ಬೇಕಾಗುತ್ತದೆಯೋ ಅವಳಿಗೆ ಸ್ಕಂದಮಾತೆ ಎನ್ನುತ್ತಾರೆ.
  6. ಕಾತ್ಯಾಯನಿ : ‘ಕಾತ್ಯಾಯನಸ್ಯ ಅಪತ್ಯಂ ಸ್ತ್ರೀ ಕಾತ್ಯಾಯನಿ|’ (ಕಾತ್ಯಾಯನನ ಮಗಳು ಕಾತ್ಯಾಯನಿ) ‘ಅಯನ’ ಎಂದರೆ ‘ಹಲವಾರು ನಕ್ಷತ್ರ ಸಮೂಹಗಳಿಂದ ಯುಕ್ತವಾಗಿರುವ ಭಾಗ’. ಕಾತ್ಯಾಯನ ಋಷಿಗಳು ಇಂತಹ ಒಂದು ಅಯನದ ಪಾಲಕರಾಗಿದ್ದರು. ಒಮ್ಮೆ ಕಾತ್ಯಾಯನರ ಅಯನಗಳಲ್ಲಿನ ದೇವತೆಗಳ ಮೇಲೆ (ತೇಜಸ್ಸಿನ ಮೇಲೆ) ಅವರದ್ದೇ ಅಯನದಲ್ಲಿನ ಅಯೋಗ್ಯ ಸ್ಪಂದನಲಹರಿಗಳ ಒಂದು ಶಕ್ತಿಯುತ ಸಮೂಹವು ಆಕ್ರಮಣ ಮಾಡಿತು. ಘರ್ಷಣೆಯಿಂದ ಬಹುದೊಡ್ಡ ಉತ್ಪಾತವಾಗುವ ಸಮಯ ಬಂದಿತು. ಆಗ ಕಾತ್ಯಾಯನ ಋಷಿಗಳ ಆಶ್ರಮದಲ್ಲಿ ಸೂಕ್ಷ್ಮಾತಿಸೂಕ್ಷ್ಮ ಶಕ್ತಿಲಹರಿಗಳ ಒಂದು ಅಂಶವು ಒಬ್ಬ ಚಿಕ್ಕ ಬಾಲಕಿಯ ಆಕಾರದಲ್ಲಿ ಪ್ರವೇಶಿಸಿತು. ಈ ಬಾಲಕಿಯನ್ನು ಕಾತ್ಯಾಯನ ಋಷಿಗಳು ತಮ್ಮ ಸಂತಾನವೆಂದು ಪರಿಗಣಿಸಿದರು; ಆದುದರಿಂದ ಅವಳು ‘ಕಾತ್ಯಾಯನಿ’ ಎಂಬ ಹೆಸರಿನಿಂದ ಪ್ರಸಿದ್ಧಿ ಹೊಂದಿದಳು. ಕಾತ್ಯಾಯನಿಯು ಶಕ್ತಿಯುತ ಅಯೋಗ್ಯ ಸ್ಪಂದನಲಹರಿಗಳನ್ನು ಯೋಗ್ಯ ಸ್ಪಂದನಲಹರಿಗಳನ್ನಾಗಿ ಪರಿವರ್ತಿಸಿ ದೇವತೆಗಳಿಗೆ (ತೇಜಸ್ಸಿಗೆ) ಸಹಾಯ ಮಾಡಿದಳು.
    ಜಗತ್ಪ್ರಸಿದ್ಧ ಅಮೇರಿಕನ್ ಶಾಸ್ತ್ರಜ್ಞರಾದ ಡಾ.ಕಾರ್ಲ್ ಸೇಗನ್ ಹೇಳುತ್ತಾರೆ, ‘ಓರ್ವ ಹೆಸರಾಂತ ರಷ್ಯಾದ ವೈಜ್ಞಾನಿಕರು ಮಾಡಿರುವ ಸಂಶೋಧನೆಯಲ್ಲಿ ಕಂಡು ಬಂದಿರುವುದೇ ನೆಂದರೆ ಕೆಲವು ಸ್ಪಂದನಗಳು ಆಕಾಶದಲ್ಲಿ (ಸ್ಪೇಸ್‌ನಲ್ಲಿ) ಅಘನೀಕರಣಗೊಂಡು (ಡೀಮೆಟೀರಿಯಲೈಜೇಶನ್ ಆಗಿ) ಪುನಃ ಯಾವಾಗ ಬೇಕಾದರೂ ಅವುಗಳ ಘನೀಕರಣ (ಮೆಟೀರಿಯಲೈಜೇಶನ್) ಆಗುತ್ತದೆ; ಆದರೆ ಈ ಪ್ರಕ್ರಿಯೆಯು ಯಾವ ವಿಧದಿಂದ ಆಗುತ್ತದೆ ಎಂಬುದನ್ನು ಈಗಲೂ ಖಚಿತವಾಗಿ ಹೇಳಲು ಆಗುವುದಿಲ್ಲ.’
  7. ಕಾಳರಾತ್ರಿ  : ಹಲವಾರು ಅಯೋಗ್ಯ ಸ್ಪಂದನಲಹರಿಗಳು ಒಟ್ಟು ಸೇರಿ ಸಿದ್ಧವಾಗುವ ಶಕ್ತಿಯೆಂದರೆ ‘ಕಾಲ’. ವ್ಯಕ್ತಿಯ (ಅಥವಾ ಪ್ರಾಣಿಗಳ) ಅಯೋಗ್ಯ ಸ್ಪಂದನಲಹರಿಗಳು ಆ ವ್ಯಕ್ತಿಯಲ್ಲಿ ಭಯವನ್ನುಂಟು ಮಾಡುತ್ತವೆ. ಆ ಸ್ಪಂದನಲಹರಿಗಳಲ್ಲಿ ವಿಶಿಷ್ಟ ಕ್ಷಮತೆ ಉಂಟಾಯಿತೆಂದರೆ ವಾತಾವರಣದಲ್ಲಿನ ಇದೇ ಜಾತಿಯ ಇತರ ಸ್ಪಂದನಗಳನ್ನು ವ್ಯಕ್ತಿಯ (ಅಥವಾ ಆ ಪ್ರಾಣಿಯ) ಶರೀರದೆಡೆ ಆಕರ್ಷಿಸುತ್ತವೆ. ಈ ರೀತಿ ಅಯೋಗ್ಯ ಸ್ಪಂದನಲಹರಿಗಳ ಶಕ್ತಿಯು ಹೆಚ್ಚಾಯಿತೆಂದರೆ ಆಗಬಾರದಂತಹ ಘಟನೆಗಳು ಮತ್ತು ಕೃತಿಗಳು ಆ ವ್ಯಕ್ತಿಯಿಂದ ಆಗುತ್ತವೆ. ಅವುಗಳ ಪ್ರತಿಕ್ರಿಯೆಗಳನ್ನು ನಾವು ಆಪತ್ತು ಅಥವಾ ಸಂಕಟ ಎನ್ನುತ್ತೇವೆ. ಇಂತಹ ಆಪತ್ತನ್ನು ಅಥವಾ ಸಂಕಟವನ್ನು ತರುವ ಅಯೋಗ್ಯ ಸ್ಪಂದನಲಹರಿಗಳ ಸಾಮೂಹಿಕ ಶಕ್ತಿಯ, ಅಂದರೆ ಕಾಲದ ರಾತ್ರಿಯೇ (ಅಂದರೆ ವಿನಾಶಿಕಾ ಅರ್ಥಾತ್ ವಿನಾಶ ಮಾಡುವವಳು) ‘ಕಾಳರಾತ್ರಿ’. ‘ವಿನಾಶಿಕಾ’ ಅಂದರೆ ‘ವಿಶೇಷೇಣ ನಾಶಯತಿ ಇತಿ|’ (ಸಂಪೂರ್ಣವಾಗಿ ನಾಶ ಮಾಡುವವಳು). ‘ವಿಶೇಷ’ ಎಂದರೆ ‘ವಿಗತಃ ಶೇಷಃ ಯಸ್ಮಾತ್|’ (ವಿಶಿಷ್ಟ) ಶೇಷವೂ ಇಲ್ಲದಂತೆ ನಾಶ ಮಾಡುವುದು.
  8. ಮಹಾಗೌರಿ  : ತಪಸ್ಯೇನೆ ಮಹಾನ್ ‘ಗೌರಃ’, ಅಂದರೆ ‘ತೇಜಸ್ಸ’ನ್ನು ಪ್ರಾಪ್ತಮಾಡಿ ಕೊಂಡವಳೇ ಮಹಾಗೌರಿ’. ಮಂತ್ರಯೋಗಸಮಿಕ್ಷೆಯಲ್ಲಿ ‘ಸಮಾಧಿ’ ಎಂಬ ಪದದ ವ್ಯುತ್ಪತ್ತಿಯನ್ನು ‘ಸಮ್ + ಆ + ಅಧಿ’ ಎಂದು ಹೇಳಲಾಗಿದೆ. ‘ಸಮ್’ ಅಂದರೆ ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳ ಸಮ್ಯಕ್, ‘ಆ’ ಅಂದರೆ ‘ವರೆಗೆ’ ಮತ್ತು ‘ಧಿ’ ಅಂದರೆ ‘ಮಾನವನ ಶರೀರದಿಂದ ನಿರಂತರವಾಗಿ ಉತ್ಸರ್ಜಿತಗೊಳ್ಳುವ ಸ್ಪಂದನಲಹರಿಗಳು’. ಧೀ ಎಂಬ ಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮಶಕ್ತಿ ಲಹರಿಗಳ ಸಮ್ಯಕ್ ಅವಸ್ಥೆಯ ತನಕ ಕೊಂಡೊಯ್ಯುವ ಪ್ರಕ್ರಿಯೆಯನ್ನು ಸಮಾಧಿ ಎನ್ನುತ್ತಾರೆ. ಈ ರೀತಿ ಪುನಃ ಪುನಃ ಸಮಾಧಿಯನ್ನು ಸಾಧಿಸುವುದಕ್ಕೆ ‘ತಪಸ್ಯಾ’ ಎನ್ನುತ್ತಾರೆ. ಇಂತಹ ತಪಸ್ಸನ್ನು ವಿಶಿಷ್ಟ ಕಾಲಾವಧಿಯ ತನಕ ಮಾಡುವುದರಿಂದ ‘ಗೌರ’ ಅಥವಾ ‘ತೇಜಸ್ಸು’ ಪ್ರಾಪ್ತವಾಗುತ್ತದೆ. ಇಂತಹ ತೇಜಸ್ಸಿನ ಅತ್ಯುಚ್ಚ ತೇಜಸ್ಸನ್ನು ಅಂದರೆ ಮಹಾನ್ ಗೌರವನ್ನು ಯಾವಳು ಪಡೆದುಕೊಂಡಿದ್ದಾಳೆಯೋ ಅವಳು ಮತ್ತು ಯಾರ ಪ್ರಸಾದದಿಂದ ಸಮಾಧಿಯನ್ನು ಸಾಧಿಸಬಹುದೋ ಅವಳೇ ‘ಮಹಾಗೌರಿ’.
  9. ಸಿದ್ಧಿದಾತ್ರಿ : ಸಾಮಾನ್ಯ ಸ್ಪಂದನಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳಲ್ಲಿ ಶಾಶ್ವತವಾಗಿ ಸೇರಿಸುವುದಕ್ಕೆ ‘ಮೋಕ್ಷ ಅಥವಾ ಸಿದ್ಧಿ’ ಎನ್ನುತ್ತಾರೆ. ಸಿದ್ಧಿಯನ್ನು ನೀಡುವವಳು ಸಿದ್ಧಿದಾತ್ರಿ.’

ದಸರಾ ಹಬ್ಬದ ಮಹತ್ವ

ಮಹಿಷಾಸುರನ ಮಾಯೆಯನ್ನು ಗುರುತಿಸಿ ಅವನ ಅಸುರೀ ಪಾಶದಿಂದ ಮುಕ್ತರಾಗಲು ಶಕ್ತಿ ಉಪಾಸನೆಯ ಆವಶ್ಯಕತೆಯಿದೆ. ಇದಕ್ಕಾಗಿ ನವರಾತ್ರಿಯ ಒಂಭತ್ತು ದಿನ ಶಕ್ತಿಯ ಉಪಾಸನೆಯನ್ನು ಮಾಡಬೇಕು. ದಶಮಿಯಂದು ವಿಜಯೋತ್ಸವವನ್ನು ಆಚರಿಸಬೇಕು. ಇದನ್ನೇ ದಸರಾ (ದಶಹರಾ)/ವಿಜಯದಶಮಿ ಎನ್ನುತ್ತಾರೆ.

ದಸರಾ ಶಬ್ದದ ಉತ್ಪತ್ತಿ

ದಸರಾ ಎನ್ನುವ ಶಬ್ದದ ಒಂದು ವ್ಯುತ್ಪತ್ತಿಯು ದಶಹರಾ ಎಂದೂ ಇದೆ. ದಶ ಎಂದರೆ ಹತ್ತು, ಹರಾ ಎಂದರೆ ಸೋತಿವೆ. ದಸರಾದ ಮೊದಲ ಒಂಬತ್ತು ದಿನಗಳ ನವರಾತ್ರಿಗಳಲ್ಲಿ ಹತ್ತೂ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತವೆ ಮತ್ತು ನಿಯಂತ್ರಣಕ್ಕೊಳಪಟ್ಟಿರುತ್ತವೆ. ಅಂದರೆ ಹತ್ತೂ ದಿಕ್ಕುಗಳಲ್ಲಿನ ದಿಕ್ಪಾಲಕರು, ಗಣರು ಮುಂತಾದವರ ಮೇಲೆ ನಿಯಂತ್ರಣವಿರುತ್ತದೆ. ಹತ್ತೂ ದಿಕ್ಕುಗಳ ಮೇಲೆ ವಿಜಯವು ದೊರಕಿರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಈ ದಿನಕ್ಕೆ ದಶಹರಾ, ದಸರಾ, ವಿಜಯ ದಶಮಿ ಮುಂತಾದ ಹೆಸರುಗಳಿವೆ ಮಾಡಿ ಇದೇ ದಿನ ವಿಜಯವನ್ನು ಸಂಪಾದಿ ಸಿದ್ದನು. ಈ ದಿನದಂದೇ ಶ್ರೀರಾಮಚಂದ್ರನು ರಾವಣನ ಮೇಲೆ ವಿಜಯ ಪಡೆದು ಆತನನ್ನು ವಧಿಸಿದ್ದನು ಎಂದು ನಂಬಲಾಗುತ್ತದೆ. ಈ ಘಟನೆಗಳ ಸಂಕೇತವಾಗಿ ಈ ದಿನಕ್ಕೆ ವಿಜಯದಶಮಿ ಎಂದು ಹೆಸರು ಬಂದಿದೆ. ಹಾಗೆ ನೋಡಿದರೆ ಈ ಹಬ್ಬವು ಬಹಳ ಪ್ರಾಚೀನ ಕಾಲದಿಂದ ನಡೆದು ಬಂದಂತಿದೆ. ಪ್ರಾರಂಭದ ಕಾಲದಲ್ಲಿ ಇದು ಕೃಷಿಗೆ ಸಂಬಂಧಪಟ್ಟ ಒಂದು ಲೋಕೋತ್ಸವವಾಗಿತ್ತು. ಮಳೆಗಾಲದಲ್ಲಿ ಬಿತ್ತಿದ ಪ್ರಥಮ ಪೈರು ಮನೆಗೆ ಬಂದಾಗ ರೈತರು ಈ ಉತ್ಸವವನ್ನು ಆಚರಿಸುತ್ತಿದ್ದರು. ಕಲಶ ಸ್ಥಾಪನೆಯ ದಿನ ಕಲಶದ ಕೆಳಗಿನ ಪೀಠದಲ್ಲಿ ಒಂಭತ್ತು ಧಾನ್ಯಗಳನ್ನು ಬಿತ್ತುತ್ತಾರೆ. ದಸರಾದಂದು ಈ ಧಾನ್ಯದ ಮೊಳಕೆಗಳನ್ನು ತೆಗೆದು ದೇವರಿಗೆ ಅರ್ಪಿಸುತ್ತಾರೆ. ಅನೇಕ ಕಡೆ ಗದ್ದೆಯಲ್ಲಿ ಬೆಳೆದ ಭತ್ತದ ತೆನೆಗಳನ್ನು ಕೊಯ್ದು ತಂದು ಅವುಗಳನ್ನು ಮನೆಯ ಪ್ರವೇಶದ್ವಾರಕ್ಕೆ ತೋರಣದಂತೆ ಕಟ್ಟುತ್ತಾರೆ. ಈ ಪದ್ಧತಿಯಿಂದ ಕೃಷಿಗೆ ಸಂಬಂಧಪಟ್ಟ ಈ ಹಬ್ಬದ ಸ್ವರೂಪ ಸ್ಪಷ್ಟವಾಗುತ್ತದೆ. ಮುಂದೆ ಈ ಹಬ್ಬಕ್ಕೆ ಧಾರ್ಮಿಕ ಸ್ವರೂಪವನ್ನು ಕೊಡಲಾಯಿತು ಮತ್ತು ಇತಿಹಾಸ ಕಾಲದಲ್ಲಿ ಇದು ರಾಜಕೀಯ

  • ಆಯುಧಪೂಜೆ (ಶಸ್ತ್ರಪೂಜೆ) ಅಂದರೆ ಏನು?:

ಈ ದಿನ ರಾಜರು, ಸಾಮಂತರು, ಸರದಾರರು ತಮ್ಮತಮ್ಮ ಶಸ್ತ್ರಗಳನ್ನು ಸ್ವಚ್ಛಗೊಳಿಸಿ, ಸಾಲಾಗಿ ಇಟ್ಟು ಪೂಜೆ ಮಾಡುತ್ತಾರೆ. ಹಾಗೆಯೇ ರೈತರು ಮತ್ತು ಕುಶಲ ಕರ್ಮಿಗಳು ತಮ್ಮತಮ್ಮ ಶಸ್ತ್ರಗಳ ಪೂಜೆಯನ್ನು ಮಾಡುತ್ತಾರೆ. ಕೆಲವರು ಈ ಪೂಜೆಯನ್ನು ನವಮಿಯಂದೂ ಮಾಡುತ್ತಾರೆ.

  • ರಾಜವಿಧಾನ : ‘ದಸರಾ’ ವಿಜಯದ ಹಬ್ಬವಾಗಿರುವುದರಿಂದ ಈ ದಿನ ರಾಜರಿಗೆ ವಿಶೇಷ ವಿಧಿಯನ್ನು ಹೇಳಲಾಗಿದೆ. ಇದು ವಿಜಯದ, ಪರಾಕ್ರಮದ ಹಬ್ಬವಾಗಿದೆ. ಅರ್ಜುನನು ಅಜ್ಞಾತವಾಸದಲ್ಲಿ ಶಮಿಯ ಉಡಿಯಲ್ಲಿ ಇಟ್ಟ ಶಸ್ತ್ರಗಳನ್ನು ತೆಗೆದು, ವಿರಾಟನ ಗೋವುಗಳನ್ನು ಸೆರೆ ಹಿಡಿದ ಕೌರವಸೈನ್ಯದ ಮೇಲೆ ಆಕ್ರಮಣ ಸ್ವರೂಪದ ಹಬ್ಬವಾಯಿತು.

ನಾವೆಲ್ಲಾ ಭಕ್ತಿ ಶ್ರದ್ಧೆಯಿಂದ ಶ್ರೀ ದುರ್ಗಾದೇವಿಯ ಉಪಾಸನೆಯನ್ನು ಮಾಡಿ ಶ್ರೀ ದೇವಿಯ ಕೃಪೆಯನ್ನು ಪಡೆಯೋಣ

ಉಲ್ಲೇಖ

Tags:

ನವರಾತ್ರಿ ಯ ವೈಶಿಷ್ಟ್ಯತೆಗಳುನವರಾತ್ರಿ ಪುರಾಣಗಳಲ್ಲಿನವರಾತ್ರಿ ಯ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ ?ನವರಾತ್ರಿ ಯ ಇತಿಹಾಸನವರಾತ್ರಿ ಯ ಆಚರಣೆಯ ಮಹತ್ವನವರಾತ್ರಿ ನವದುರ್ಗೆಯರುನವರಾತ್ರಿ ದಸರಾ ಹಬ್ಬದ ಮಹತ್ವನವರಾತ್ರಿ ದಸರಾ ಶಬ್ದದ ಉತ್ಪತ್ತಿನವರಾತ್ರಿ ಉಲ್ಲೇಖನವರಾತ್ರಿಕರ್ನಾಟಕಚಾಮುಂಡೇಶ್ವರಿದಸರಪಶ್ಚಿಮ ಬಂಗಾಳಮೈಸೂರುಹಿಂದೂ ಧರ್ಮ

🔥 Trending searches on Wiki ಕನ್ನಡ:

ಜಿಪುಣಭಾರತದಲ್ಲಿನ ಚುನಾವಣೆಗಳುಭಾರತೀಯ ಧರ್ಮಗಳುರಚಿತಾ ರಾಮ್ದರ್ಶನ್ ತೂಗುದೀಪ್ಚಂದ್ರಶೇಖರ ವೆಂಕಟರಾಮನ್ಅನುಶ್ರೀಭಾರತದ ಆರ್ಥಿಕ ವ್ಯವಸ್ಥೆಅರಿಸ್ಟಾಟಲ್‌ಉತ್ಪಲ ಮಾಲಾ ವೃತ್ತಚಂದ್ರಯಾನ-೩ವಚನಕಾರರ ಅಂಕಿತ ನಾಮಗಳುಕಾವೇರಿ ನದಿಮೂಕಜ್ಜಿಯ ಕನಸುಗಳು (ಕಾದಂಬರಿ)ಗೌತಮ ಬುದ್ಧಊಟಅಲ್ಲಮ ಪ್ರಭುಭಾರತದ ಸ್ವಾತಂತ್ರ್ಯ ದಿನಾಚರಣೆಅಕ್ಕಮಹಾದೇವಿಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಭಾರತದಲ್ಲಿನ ಜಾತಿ ಪದ್ದತಿಚಂದ್ರಗುಪ್ತ ಮೌರ್ಯಮೂಲಧಾತುಗಳ ಪಟ್ಟಿವಿನಾಯಕ ಕೃಷ್ಣ ಗೋಕಾಕಸಂಸ್ಕೃತ ಸಂಧಿಭಾರತ ಸರ್ಕಾರರಾಜ್‌ಕುಮಾರ್ಮಾರುಕಟ್ಟೆತ್ರಿಪದಿವೆಂಕಟೇಶ್ವರ ದೇವಸ್ಥಾನಭರತೇಶ ವೈಭವಭಾರತೀಯ ಜನತಾ ಪಕ್ಷಕರ್ನಾಟಕದ ಮಹಾನಗರಪಾಲಿಕೆಗಳುಶ್ರವಣಬೆಳಗೊಳಹೊಯ್ಸಳ ವಾಸ್ತುಶಿಲ್ಪಸಂಸದೀಯ ವ್ಯವಸ್ಥೆಮ್ಯಾಕ್ಸ್ ವೆಬರ್ಆಧುನಿಕ ಶೈಕ್ಷಣಿಕ ತಂತ್ರಜ್ಞಾನ ಪರಿಚಯರಾಷ್ಟ್ರೀಯ ಶಿಕ್ಷಣ ನೀತಿಜ್ಯೋತಿಬಾ ಫುಲೆಬುಡಕಟ್ಟುಸುಧಾರಾಣಿಪರೀಕ್ಷೆಸಂಶೋಧನೆಹವಾಮಾನನ್ಯೂಟನ್‍ನ ಚಲನೆಯ ನಿಯಮಗಳುಕರ್ನಾಟಕದ ಮುಖ್ಯಮಂತ್ರಿಗಳುಭಾರತೀಯ ಅಂಚೆ ಸೇವೆರಾಧಿಕಾ ಕುಮಾರಸ್ವಾಮಿಹನುಮಂತದೇವನೂರು ಮಹಾದೇವಮಹಾಕವಿ ರನ್ನನ ಗದಾಯುದ್ಧಲೆಕ್ಕ ಪರಿಶೋಧನೆಗೊರೂರು ರಾಮಸ್ವಾಮಿ ಅಯ್ಯಂಗಾರ್ಶಿವಮೊಗ್ಗನಿರಂಜನಕನ್ನಡ ಅಭಿವೃದ್ಧಿ ಪ್ರಾಧಿಕಾರಉಪ್ಪಿನ ಸತ್ಯಾಗ್ರಹಭಾರತದ ರಾಷ್ಟ್ರಪತಿಕ್ರಿಯಾಪದಹಿಪಪಾಟಮಸ್ಬಸವಲಿಂಗ ಪಟ್ಟದೇವರುಪ್ರೀತಿಕರ್ನಾಟಕ ಸ್ವಾತಂತ್ರ್ಯ ಚಳವಳಿಯೇಸು ಕ್ರಿಸ್ತಕೃಷ್ಣರಾಜಸಾಗರನಾಲ್ವಡಿ ಕೃಷ್ಣರಾಜ ಒಡೆಯರುಕೋಟ ಶ್ರೀನಿವಾಸ ಪೂಜಾರಿಜಾಹೀರಾತುಸೂರ್ಯವ್ಯೂಹದ ಗ್ರಹಗಳುಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಮಧುಮೇಹಮಾರೀಚಹುಲಿಸರ್ವಜ್ಞಕರ್ನಾಟಕದ ಹಬ್ಬಗಳು🡆 More