ಪಾರ್ವತಿ

ಪಾರ್ವತಿ ಹಿಂದೂ ಪುರಾಣದ ಪ್ರಕಾರ ಹಿಮಾಲಯದ ಪುತ್ರಿ (ಪರ್ವತರಾಜ ಮೇನಕೆಯರ ಮಗಳು) ಮತ್ತು ಶಿವನ ಪತ್ನಿ.

ಈಕೆ ಗಣೇಶ ಮತ್ತು ಸುಬ್ರಹ್ಮಣ್ಯರ ತಾಯಿ.

ಪಾರ್ವತಿ
ಜಗನ್ಮಾತೆ ಮತ್ತು ಸರ್ವೋಚ್ಛ ದೇವತೆ (ಶೈವ)
Goddess of
  • ಶಕ್ತಿ
  • ಪೋಷಣೆ
  • ಆರೋಗ್ಯ
  • ಮಾತೃತ್ವ
  • ಫಲವತ್ತತೆ
  • ಸಾಮರಸ್ಯ
Member of ತ್ರಿದೇವಿ
ಪಾರ್ವತಿ
ಪಾರ್ವತಿ ಪರಮೇಶ್ವರ
ಇತರ ಹೆಸರುಗಳು
  • ಗೌರಿ
  • ಈಶ್ವರಿ
  • ಜಗದಂಬೆ
  • ಉಮಾ
  • ಶಂಕರಿ
  • ಮಹೇಶ್ವರಿ
  • ಪರಮೇಶ್ವರಿ
  • ಭುವನೇಶ್ವರಿ
  • ಸತಿ
  • ಭದ್ರಕಾಳಿ
  • ದುರ್ಗಾ
  • ಕಾಳಿ
  • ಮಹಾಕಾಳಿ
ಸಂಲಗ್ನತೆ
ನೆಲೆಕೈಲಾಸ ಪರ್ವತ
ಮಂತ್ರ
  • ಓಂ ಪಾರ್ವತ್ಯೈ ನಮಃ
  • ಓಂ ನಮಃ ಶಿವಾಯ
ದಿನಮಂಗಳವಾರ
ಸಂಗಾತಿಶಿವ
ಒಡಹುಟ್ಟಿದವರು
ಮಕ್ಕಳುಕಾರ್ತಿಕೇಯ
ಗಣೇಶ
ವಾಹನಸಿಂಹ ಮತ್ತು ಹುಲಿ
ಗ್ರಂಥಗಳುಶಿವ ಪುರಾಣ
ಹಬ್ಬಗಳು
  • ಮಹಾಶಿವರಾತ್ರಿ
  • ಶ್ರಾವಣ
  • ಗೌರಿ ಹಬ್ಬ
  • ನವರಾತ್ರಿ
  • ವಿಜಯದಶಮಿ
  • ದುರ್ಗಾ ಪೂಜಾ
  • ಕಾಳಿ ಪೂಜಾ
ತಂದೆತಾಯಿಯರು
  • ಹಿಮಾವನ್ (ತಂದೆ)
  • ಮೈನಾವತಿ (ತಾಯಿ)

ಪಾರ್ವತಿಯ ಜನನದ ಹಿನ್ನೆಲೆ

ತಾರಕಸುರ ರಕ್ಕಸರ ನಾಯಕ, ಅರಸ, ಅತುಳ ಪರಾಕ್ರಮಿ. ಸಿಂಹಾಸನವೇರುತ್ತಲೆ ಅವನು ಮಾಡಿದ ಕೆಲಸವೆಂದರೆ ತನ್ನ ರಕ್ಷಣೆಗಾಗಿ ಶಕ್ತಿವರ್ದನೆಗಾಗಿ ಪರಬ್ರಹ್ಮನನ್ನ ಕುರಿತು ಮಾಡಿದ ಕಠಿಣ ತಪಸ್ಸು.ಹಲವು ವರ್ಷ ಒಂಟಿಕಾಲಿನಲ್ಲಿ ನಿಂತು ಧ್ಯಾನ ಮಾಡಿದ ನಂತರ ಮರದಿಂದ ಕಾಲುಗಳಲ್ಲಿ ಕೊಂಬೆಹಿಡಿದು ತಲೆಕೆಳಗಾಗಿ ನೇತಾಡುತ್ತ ಕೆಲವು ವರ್ಷ ತಪಸ್ಸನ್ನು ಆಚರಿಸಿದ. ನಿರಾಹಾರನಾದ, ಕಡೆಗೆ ತನ್ನ ಪ್ರಾಣವನ್ನು ಅರ್ಪಿಸಲು ಸಿದ್ದನಾದ. ಆಗ ಬ್ರಹ್ಮನು ಬರಲೇ ಬೇಕಾಯಿತು, ಬಂದವನು ಕೇಳಿದ "ತಾರಕ ಏಕಾಗಿ ಈ ಕಠಿಣ ತಪ ನಿನಗೆ ಏನು ಬೇಕು ಹೇಳು? " ತಾರಕ ಕೇಳಿದ ವರವಾದರೊ ಅಷ್ಟೆ ವಿಚಿತ್ರವಾಗಿತ್ತು "ನನಗೆ ಏಳು ವರ್ಷದ ಬಾಲಕನಿಂದ ಮಾತ್ರ ಮರಣ ಬರಲಿ, ವಿಷ್ಣು ಆದಿಯಾಗಿ ಉಳಿದ ಯಾರಿಂದಲೂ ಮರಣ ಬಾರದಿರಲಿ" ಎಂದು ಮೊದಲನೆ ವರ ಕೇಳಿದ , ಎರಡನೆಯದಾಗಿ "ಅ ಏಳು ವರ್ಷದ ಬಾಲಕ ಶಿವಪುತ್ರನೇ ಆಗಿರಬೇಕು" ಎಂದು ಬೇಡಿದ. ಬ್ರಹ್ಮನಾದರೊ ತಥಾಸ್ತು ಎಂದ. ದೇವತೆಗಳೆಲ್ಲ ಕಂಗೆಟ್ಟರು. ತಾರಕ ಮೂರು ಲೋಕವನ್ನು ಆಕ್ರಮಿಸಿದ.ಇಂದ್ರಾದಿಗಳು ವಿಷ್ಣುವಿಗೆ ಮೊರೆ ಬಂದರು,ವಿಷ್ಣುವು ತಾನು ಅಸಹಾಯಕನೆಂದ ಶಿವಪುತ್ರನಿಂದಲ್ಲದೆ ತಾರಕನಿಗೆ ಅನ್ಯರಿಂದ ಮರಣವಿಲ್ಲ.

ತಾರಕನು ಯೋಚಿಸಿಯೆ ವರಬೇಡಿದ್ದ. ಪರಶಿವನೀಗ ಒಂಟಿ, ಅವನು ಮದುವೆಯಾಗುವುದು ಅಸಂಭವ. ಒಂದುವೇಳೆ ಮದುವೆಯಾದರು ದೀರ್ಘತಪಸ್ಸಿನಲ್ಲಿ ಮುಳುಗಿ ಸನ್ಯಾಸಿಯಂತಿರುವ ಅವನು ಸಂಸಾರಿಯಾಗಿ ಮಕ್ಕಳನ್ನು ಪಡೆಯುವುದು ಸಾದ್ಯವೆ ಇಲ್ಲ ಎಂದು ತಾರಕನ ಲೆಕ್ಕ.ಅವನ ಯೋಚನೆಯು ಸರಿ ಇತ್ತು. ಆದಿದೇವನಾದ ಪರಶಿವನು ಸತಿಯನ್ನು ವರಿಸಿದ್ದ. ಸತಿಯಾದರೊ ದಕ್ಷಬ್ರಹ್ಮನ ಪುತ್ರಿ. ಅದೇನೊ ಸದಾ ಮಾವನಿಗೆ ತನ್ನ ಅಳಿಯ ಶಿವನನ್ನು ಕಂಡರೆ ಎಂತದೊ ತಿರಸ್ಕಾರ. ಸದಾ ಸ್ಮಶಾನವಾಸಿಯಾದ, ಬೂದಿಯನ್ನು ವಿಭೂತಿಯಾಗಿ ಬಳಿದುಕೊಳ್ಳುವ, ಪ್ರೇತಗಣಗಳೊಡನೆ ವಾಸಿಸುವ ಶಿವನನ್ನು ತನ್ನ ಸರಿಸಮಾನವಾಗಿ ಕಾಣಲು ಒಪ್ಪದ ದುರಭಿಮಾನ.ಅಂತಹ ದುರಂಹಕಾರ ಅವನ ಪುತ್ರಿಯ ಮರಣಕ್ಕೆ ಕಾರಣವಾಗಿತ್ತು.

ತನ್ನ ಅರಮನೆಯಲ್ಲಿ ನಡೆದ ಮಹಾಯಾಗಕ್ಕೆ ದೇವ ದೇವತೆಗಳನ್ನು ಸಮಸ್ತರನ್ನು ಅಹ್ವಾನಿಸಿ ಬೇಕೆಂದೆ ಅಳಿಯನನ್ನು ಕರೆಯದೆ ಅಲಕ್ಷ ಮಾಡಿದ. ಯಾಗದ ವಿಷಯ ಅರಿತ ಸತಿಗೆ ತವರಿನ ವ್ಯಾಮೋಹ, ಶಿವನು ಬೇಡವೆಂದು ಸೂಕ್ಷ್ಮವಾಗಿ ತಿಳಿಸಿದರು ಅರಿಯದೆ ತವರಿಗೆ ಬಂದಳು.ಸಮಸ್ತರೆದುರು ದಕ್ಷರಾಜನು ಅಳಿಯನನ್ನು ಹಳಿದ ಮಗಳನ್ನು ತಿರಸ್ಕರಿಸಿದ. ತಂದೆಯ ನಡತೆಯಿಂದ ಕಂಗೆಟ್ಟಳು ಸತಿ. ತನ್ನಿಂದ ಪತಿಗೆ ಅವಮಾನವಾಯ್ತೆಂದು ಮರುಗಿದಳು. ಅಭಿಮಾನಧನೆಯಾದ ಆಕೆ ಎಲ್ಲರೂ ಬೆಚ್ಚಿಬೀಳುವಂತೆ ತನ್ನನ್ನೆ ಯಜ್ಙಕುಂಡಕ್ಕೆ ಅರ್ಪಿಸಿಕೊಂಡು ದೇಹತ್ಯಾಗ ಮಾಡಿದಳು. ವಿಷಯವರಿತ ಶಿವ ರೌದ್ರನಾದ, ಅವನ ಗಣಗಳು ಅಬ್ಬರಿಸಿ ಬಂದರು ದಕ್ಷ ಹತನಾಗಿ ಹೋದ.

ಪಾರ್ವತಿಯ ಜನನ

ತನ್ನ ಸತಿ ಹೋದ ಕೊರಗು ಶಿವನನ್ನು ಬಾದಿಸತೊಡಗಿತು, ಪ್ರಪಂಚವನ್ನೆ ತೊರೆದ ಅವನು ಏಕಾಂಗಿಯಾದ, ಕೈಲಾಸದ ಉನ್ನತ ಶೃಂಗ ಒಂದನ್ನೇರಿ ದ್ಯಾನಕ್ಕೆ ಕುಳಿತ.ಸಮಾದಿಗೆ ಇಳಿದ, ಪ್ರಕೃತಿಯೊಡನೆ ಒಂದಾಗಿ ಬೆರೆತುಹೋದ.ಕೈಲಾಸ ಅನಾಥವಾಯಿತು. ಸತಿಯಿಲ್ಲದ ಶಿವನಿಲ್ಲದ ಪ್ರಮುಥಗಣಗಳಾದರು ಏನು ಮಾಡಿಯಾರು. ಎಲ್ಲರೂ ಕಂಗೆಟ್ಟರು. ಇತ್ತ ದಕ್ಷಯಾಗದಲ್ಲಿ ದೇಹತ್ಯಾಗ ಮಾಡಿದ ಸತಿ , ಪರ್ವತರಾಜನಿಗೆ ಮಗಳಾಗಿ ಹುಟ್ಟಿದಳು. ಪರ್ವತರಾಜನಿಗೆ ಮೂವರು ಹೆಣ್ಣುಮಕ್ಕಳು - ಪಾರ್ವತಿ, ಏಕಪರ್ಣಾ, ಏಕಪಾಟಲಾ ಎಂದು, ಒಬ್ಬ ಮಗ - ಮೈನಾಕಾ ಎಂದು. ಕನ್ಯೆಯಾಗಿ ಬೆಳೆದು ಪಾರ್ವತಿ ಎಂದು ಪ್ರಖ್ಯಾತಳಾಗಿದ್ದಳು.ದೇವತೆಗಳೆಲ್ಲ ಚಿಂತಿಸಿದರು ಹೇಗಾದರು ಶಿವ ಪಾರ್ವತಿಯರನ್ನು ಸೇರಿಸಬೇಕಿದ್ದು ಅದಕ್ಕೆ ಲೋಕಸಂಚಾರಿ ನಾರದರ ರಾಯಬಾರವಾಯಿತು.ನಾರದರು ಪರ್ವತರಾಜನಲ್ಲಿಗೆ ಬಂದು ಪಾರ್ವತಿಯನ್ನು ಬೇಟಿಮಾಡಿ ಅವಳಿಗೆ ಸೂಕ್ತ ವರನೆಂದರೆ ಪರಶಿವನೆಂದು. ಅವನೀಗ ಒಂಟಿಯೆಂದು, ತಪದಲ್ಲಿರುವನೆಂದು ಹೇಗಾದರು ಅವನನ್ನು ಒಲಿಸಿಕೊಳ್ಳೆಂದು ಬೋಧಿಸಿದರು. ತಂದೆಯ ಒಪ್ಪಿಗೆ ಪಡೆದ ಪಾರ್ವತಿ ಸಖಿಯರನ್ನು ಕೂಡಿಕೊಂಡು ನಾರದರ ಜೊತೆ ಶಿವನಿರುವಲ್ಲಿಗೆ ತಲುಪಿದಳು.

ಶಿವನನ್ನು ಒಲಿಸಿಕೊಂಡ ಕಥೆ

ಶಿವನಾದರೋ ಅಚಲ, ಎಚ್ಚರಗೊಳ್ಳುವುದು ದೂರವೆ ಉಳಿಯಿತು. ತಪಸ್ಸಿನಲ್ಲಿರುವ ಅವನ ಸೇವೆಗೆ ನಿಂತಳು ಪಾರ್ವತಿ. ಅವನಿಗೆ ಯಾವುದೆ ತೊಂದರೆಯಾಗದಂತೆ ಸುತ್ತಲು ಶೃಂಗರಿಸುವುದು,ಹೂವ ಹಾಸುವುದು.ಬಿಸಿಲಿನಲ್ಲಿ ನೆರಳು ಮಾಡುವುದು ಇಂತವೆ.ಸದಾ ಮೌನವಾಗಿ ಅವನ ಜೊತೆಯಲ್ಲಿರುತ್ತಿದ್ದಳು.ದೇವತೆಗಳಿದಾದರೊ ಎಂತದೋ ಆತುರ.ಒಂದಡೆ ತಾರಕನ ಕಾಟವಾದರೆ, ಮೊತ್ತೊಂದಡೆ ಕಣ್ಮುಚ್ಚಿ ಕುಳಿತ ಶಿವ. ಪಾರ್ವತಿಯಂತೆ ಅನಂತ ಕಾಲದವರೆಗು ಕಾಯಲು ಅವರಿಗೆ ನೆಮ್ಮದಿಯಿಲ್ಲ. ಹಾಗಾಗಿ ಎಲ್ಲರೂ ಸೇರಿ ಮನ್ಮಥನನ್ನು ಕಳಿಸಿದರು ಏನಾದರು ಮಾಡಿ ಶಿವನನ್ನು ಎಚ್ಚರಗೊಳಿಸಿ ಅವನ ಗಮನ ಪಾರ್ವತಿ ಕಡೆಗೆ ತಿರುಗುವಂತೆ ಮಾಡು ಎಂದು. ಅವರ ಕಾರ್ಯ ಸುಗಮವಾಗಲಿ ಎಂದು. ಅದೋ ವಸಂತಕಾಲ ಮನ್ಮಥನು ಉತ್ಸಾಹದಿಂದ ಬಂದ ಅವನ ಪತ್ನಿ ರತಿಯೊಡನೆ. ಅವನಿಗೆ ಎಂತದೊ ಉನ್ಮಾದ ತನ್ನ ಶರಬಾಣವನ್ನು ಹೂಡಿದ, ಅವನಿಗೆ ಅಹಂ ಅತಿವಿಶ್ವಾಸ ತನ್ನ ಬಾಣಕ್ಕೆ ಸೃಷ್ಟಿಯಲ್ಲಿ ಎದುರೆ ಇಲ್ಲ ಎಂದು. ಇದ್ದಕಿದ್ದಂತೆ ತನ್ನಲ್ಲಾದ ಬದಲಾವಣೆಯಿಂದ ಶಿವ ಎಚ್ಚೆತ್ತ, ತನ್ನ ತಪಸ್ಸಿಗೆ ಬಂಗ ಬಂದುದ್ದಕ್ಕೆ ಆತ ಕ್ರೋದಗೊಂಡಿದ್ದ. ಎದುರಿಗೆ ಮನ್ಮಥನನ್ನು ನೋಡುವಾಗಲೆ ತಿಳಿಯಿತು ಇದು ಯಾರ ಕಾರ್ಯವೆಂದು. ಹೊತ್ತಿ ಉರಿಯಿತು ಅವನ ಹಣೆಗಣ್ಣು ನಿಂತಲ್ಲಿಯೆ ಭಸ್ಮವಾಗಿ ಹೋದ ಮನ್ಮಥ. ಸೃಷ್ಟಿಯೆ ನಡುಗಿಹೋಯ್ತು ನಡೆದ ಅಚಾತುರ್ಯಕ್ಕೆ, ದೇವತೆಗಳು ತಮ್ಮಿಂದಾದ ತಪ್ಪಿಗೆ ಬಿಚ್ಚಿಬಿದ್ದರು.ಶಿವನ ಎದುರು ನಿಂತ ಪಾರ್ವತಿ ಅವನನ್ನು ಅನುನಯದಿಂದ ಪ್ರಾರ್ಥಿಸಿದಳು ಶಾಂತನಾಗಬೇಕೆಂದು, ಲೋಕಕಲ್ಯಾಣಕ್ಕಾಗಿ ತಪೋವಿಮುಖನಾಗೆಂದು ಬೇಡಿಕೊಂಡಳು. ಶಿವನ ಕೋಪ ಇಳಿದಿರನಲಿಲ್ಲ. ಅವನ ತಪಸಿನ ದಾಹವಿನ್ನು ತೀರಿರಲಿಲ್ಲ. ಶಿವನು ಪಾರ್ವತಿಗೆ ತಕ್ಷಣವೆ ಅಲ್ಲಿಂದ ಹೊರಡಬೇಕೆಂದು ,ಯಾರು ತನ್ನ ಹತ್ತಿರ ಸುಳಿಯಬಾರದೆಂದು ಕಟ್ಟಪ್ಪಣೆ ವಿದಿಸಿ ಪುನಃ ಅದೇ ಅನಂತ ತಪಸ್ಸಿನಲ್ಲಿ ಮುಳುಗಿಹೋದ. ಅಪರ್ಣ: ಪಾರ್ವತಿ ಅಲ್ಲಿಂದ ಹೊರಟಳು, ತಂದೆ ಪರ್ವತ ರಾಜ ಬಂದ "ಮಗಳೆ ಬಾ" ಎಂದು. ಆದರೆ ಅವಳೀಗ ಶಿವನಲ್ಲಿಯೆ ತನ್ನ ಮನಸ್ಸನು ಅರ್ಪಿಸಿದ್ದಳು, ಪರಶಿವನಿಲ್ಲದ ಬಾಳು ಇಲ್ಲವೆಂದು ಅರಿತಿದ್ದಳು, ತಂದೆಯ ಜೊತೆ ಹೊರಡಲು ನಿರಾಕರಿಸಿ ಶಿವನಂತೆ ತಾನು ಸಹ ಕಠಿಣ ತಪದಲ್ಲಿ ತೊಡಗುವುದೆಂದು ನಿರ್ದರಿಸಿದಳು. ಅನ್ನಾಹಾರವನ್ನು ತೊರೆದ ಆಕೆ ಪರ್ಣಕುಟಿಯಲ್ಲಿ ನೆಲೆಸಿ ಬದುಕಲು ದಿನ ಒಂದು ಹಸಿ ಎಲೆಯನ್ನಷ್ಟೆ ತಿಂದಳು. ಹಲವು ವರ್ಷ ಹಾಗಿದ್ದ ಅವಳು ನಂತರ ಒಣಗಿದ ಎಲೆಯನ್ನಷ್ಟೆ ತಿಂದಳು ನಂತರ ಅದನ್ನು ತೊರೆದು ಅಪರ್ಣಳಾದಳು. ಮನಸ್ಸು ಶಿವನಲ್ಲಿಯೆ ದೃಡವಾಯಿತು. ದೇಹಬಾವ ತೊರೆದು ಹೋಯ್ತು, ಶಿವನಿಗೆ ತಕ್ಕ ಶಿವೆಯಾಗಿ ನಿಶ್ಚಲಳಾದಳು, ಸ್ಥಿರವಾದಳು.

ಪಾರ್ವತಿಯ ವಿವಾಹ

ಹೌದು ಶಿವನೀಗ ಪ್ರಕೃತಕ್ಕೆ ಬರುತ್ತಿದ್ದ,ಅವನ ಮುಖದಲ್ಲಿನ ರೌದ್ರ ಭಾವ ಕರಗಿ ಅಲ್ಲಿ ಎಂತದೋ ಶಾಂತ ಭಾವ ಲಾಸ್ಯ ತುಂಬಿಕೊಳ್ಳುತ್ತಿತ್ತು.ಶಿವನ ಹೃದಯ ಬುದ್ದಿಗಳು ಎಚ್ಚೆತ್ತವು. ಸುತ್ತ ನಡೆಯುತ್ತಿದ್ದ, ನಡೆದಿದ್ದ ಎಲ್ಲ ಘಟನೆಗಳು ಅವನ ಜ್ಝಾನನೇತ್ರಕ್ಕೆ ಗೋಚರಿಸಿದವು. ತನಗಾಗಿ ಪಾರ್ವತಿ ಅಪರ್ಣಳಾಗಿ ಕಠಿಣ ತಪದಲ್ಲಿರುವುದು ಅವನ ಅರಿವಿಗೆ ಬಂದಿತು. ತನ್ನ ಎಚ್ಚರಕ್ಕಾಗಿ ಸೃಷ್ಟಿಯೆ ಕಾದುಕುಳಿತಿರುವುದು ಅವನಿಗೆ ಭೋದೆಯಾಯ್ತು. ನಿದಾನವಾಗಿ ಕಣ್ಣು ತೆರೆದ ಪರಮೇಶ್ವರ. ಎಲ್ಲೆಲ್ಲು ಸಂಭ್ರಮ, ಪ್ರಕೃತಿ ನಲಿಯಿತು. ಶಿವಗಣ ಸಂತೋಷದಿಂದ ನೃತ್ಯಮಾಡಿತು. ದೇವ ದೇವಾದಿಗಳು ಋಷಿಮುನಿಗಳು ಶಿವನನ್ನು ಸ್ತುತಿಸುತ್ತ ಉಘೇ ಉಘೇ ಎಂದರು. ಅವನಿಗಾಗಿ ತಪೋನಿರತಳಾಗಿರುವ ಸತಿಯ ಪುನರ್ಜನ್ಮ ರೂಪವಾದ ಪಾರ್ವತಿಯನ್ನು ಅನುಗ್ರಹಿಸಿ ಲೋಕವನ್ನು ಪಾಲಿಸಬೇಕೆಂದು ಬೇಡಿಕೊಂಡರು. ಒಲಿದ ಶಿವ ಈಗ ಅರಗಿಳಿಯಂತೆ. ಅವರೆಲ್ಲರ ಮಾತಿಗೆ ಅಸ್ತು ಎಂದ. ಪಾರ್ವತಿಯತ್ತ ಹೊರಟ. ಅಷ್ಟು ಸುಲುಭದಲ್ಲಿ ಒಲಿಯುವನೆ ಅವನು? . ಒಬ್ಬ ಸನ್ಯಾಸಿಯಂತೆ ವೇಶದಾರಿಯಾದ. ದಾರಿಹೋಕನಂತೆ ಅವಳತ್ತ ನಡೆದ. ಪಾರ್ವತಿ ಎಂದಿನಂತೆ ತನ್ನ ಶಿವಪೂಜೆಯಲ್ಲಿ ಮುಳುಗಿದ್ದಳು. ಅತಿಥಿಯಂತೆ ಬಂದ ಸನ್ಯಾಸಿಯನ್ನು ಸ್ವಾಗತಿಸಿದಳು. ಶಿವ ಅವಳಿಂದ ಅತಿಥ್ಯ ಸ್ವಿಕರಿಸಿ ನಂತರ ನುಡಿದ "ರಾಜಕುಮಾರಿ ನೀನು ಶಿವನಿಗಾಗಿ ತಪ ಮಾಡುತ್ತಿರುವೆ ಎಂದು ತಿಳಿಯಿತು. ನಿನಗಾರು ಇದನ್ನು ಭೋದಿಸಿದರು? ತಿಳಿಯದು. ಅವನಾದರೊ ಸನ್ಯಾಸಿ ಎಲ್ಲವನ್ನು ತೊರೆದವನು. ಸುಕೋಮಲೆಯಾದ ನೀನು ಮಸಣದಲ್ಲಿ ವಾಸಿಸುವ, ಅಲ್ಲಿನ ಬೂದಿಯನ್ನೆ ವಿಭೂತಿಯಾಗಿ ಧರಿಸುವ, ಮೂರು ಕಣ್ಣುಗಳೊಡನೆ ವಿಕಾರಿಯಾದ,ಪ್ರೇತ ಪಿಶಾಚಿಗಳೊಡನೆ ವಾಸಿಸುವ ಅವನನ್ನು ಏಕೆ ಬಯಸುವೆ. ಯಾರಾದರು ಸುಂದರರಾದರು ತರುಣರು ಆದ ನನ್ನಂತವರನ್ನು ಒಲಿದು ವರಿಸಬಾರದೇಕೆ?" ಎಂದು ನಗುತ್ತ ಪ್ರಶ್ನಿಸಿದನು. ಶಿವನಿಂದೆಯಿಂದ ಪಾರ್ವತಿ ಕೋಪಗೊಂಡಳು,ಅವನನ್ನು ಕುರಿತು "ಎಲವೊ ಹುಸಿ ಸನ್ಯಾಸಿ ನಿನ್ನ ನಾಲಿಗೆಯನ್ನು ಬಿಗಿಹಿಡಿ, ಲೌಕಿಕ ಆಸೆಗಳಿಂದ ತುಂಬಿರುವ ನಿನ್ನ ಕಣ್ಣುಗಳು ಪರಶಿವನ ಮಹಿಮೆ ಅರಿಯಲಾರದು. ಬದುಕಿರುವ ಪ್ರತಿಜೀವಿಯ ಕಡೆಯ ಜಾಗ ನಮ್ಮನ್ನು ಸದಾ ಎಚ್ಚರಿಸುವ ಸ್ಮಶಾನವಾಸದ ಗುಟ್ಟು ನೀನರಿಯಲಾರೆ. ನಿನ್ನ ಆಸೆಗಳನ್ನು ಸುಡು ಎನ್ನುತ್ತ ಶವ ಸುಟ್ಟ ಬೂದಿಯನ್ನೆ ದರಿಸುವ ಅವನ ಮನ ನಿನಗೆ ಗೋಚರಿಸುವುದಿಲ್ಲ.ನಿನ್ನಂತ ಶಿವನಿಂದಕರು ಇರಬಾರದು" ಎನ್ನುತ್ತ ಶಪಿಸಲು ಮುಂದಾದಾಗ ಶಿವ ತನ್ನ ನಿಜ ಸ್ವರೂಪದಿಂದ ಪಾರ್ವತಿದೇವಿಯ ಎದುರು ನಿಂತನು. ಶಿವನನ್ನು ಕಂಡ ಪಾರ್ವತಿ ಪರವಶಳಾದಳು. ಎಲ್ಲ ಸುಖಾಂತವಾಯಿತು.

ಪಾರ್ವತಿದೇವಿಯ ತಂದೆ ತಾಯಿಯರು ಓಡೋಡಿ ಬಂದರು, ದೇವದೇವತೆಗಳೆಲ್ಲ ನೆರೆದರು. ಸಂಭ್ರಮದಿಂದ ಶಿವ ಪಾರ್ವತಿಯರ ಕಲ್ಯಾಣ ನೆರವೇರಿಸಿದರು. ಅದೇ ಸಂದರ್ಪದಲ್ಲಿ ದೇವತೆಗಳೆಲ್ಲ ಶಿವನನ್ನು ಪ್ರಾರ್ಥಿಸಿದರು, ಮನ್ಮಥನಿಲ್ಲದಿದ್ದರೆ ಲೋಕದ ಸೃಷ್ಟಿಕಾರ್ಯವೆ ನಡೆಯದು, ಹಾಗಾಗಿ ಅವನನ್ನು ಬದುಕಿಸು ಎಂದರು. ಶಿವ ಒಪ್ಪಿಕೊಂಡ, ಮನ್ಮಥ ಬದುಕಿದ ಆದರೆ ಶರೀರವೆ ಇಲ್ಲದೆ ಅನಂಗನಾದ. ಅವನ ಪತ್ನಿ ರತಿದೇವಿಯು ಸಂತೋಷಿಸಿದಳು. ಮದುವೆಯ ನಂತರ ಶಿವ ಪಾರ್ವತಿಯರು ತಮ್ಮ ವೈವಾಹಿಕ ಜೀವನಕ್ಕಾಗಿ ಗಂಧಮಂದನ ಪರ್ವತದತ್ತ ನಡೆದರು.

ಪಾರ್ವತಿ ಶಿವನಿಂದ ಗಣಪತಿಯನ್ನು ಷಣ್ಮುಖನನ್ನು ಪಡೆದಳು. ಮುಂದೆ ಷಣ್ಮುಖ ತಾರಕಾಸುರರನ್ನು ಸಂಹಾರ ಮಾಡಿದ.

ಪಾರ್ವತಿಗೆ ಸಂಬಂಧಿಸಿದ ಕಥೆಗಳು

ಒಮ್ಮೆ ಶಿವಪಾರ್ವತಿ ಕ್ರೀಡಾಸಕ್ತರಾಗಿದ್ದಾಗ ದೇವತೆಗಳು ಹೆದರಿ ಭೂದೇವಿಯನ್ನು ಮುಂದಿಟ್ಟುಕೊಂಡು ಬ್ರಹ್ಮನೇ ಮುಂತಾದವರು ದೇವ, ಪಾರ್ವತಿಯಲ್ಲಿ ಪಿಂಡೋತ್ಪತ್ತಿಯಾದರೆ ಯಾರೂ ತಡೆದುಕೊಳ್ಳಲಾರರು, ಈ ಕಾರ್ಯವನ್ನು ನಿಲ್ಲಿಸು, ತೇಜಸ್ಸನ್ನು ನಿನ್ನಲ್ಲಿಯೇ ಅಡಗಿಸಿಕೊ ಎಂದು ಪ್ರಾರ್ಥಿಸಿದರು. ಆಗ ಪಾರ್ವತಿ ತನಗೆ ಸಂತಾನವಾಗುವುದನ್ನು ತಡೆದಿದ್ದಕ್ಕಾಗಿ ದೇವತೆಗಳನ್ನು ಕುರಿತು ನಿಮಗೆ ನಿಮ್ಮ ಪತ್ನಿಯರಲ್ಲಿ ಸಂತಾನವಾಗದಿರಲಿ ಎಂದು ಭೂದೇವಿಗೆ ನೀನು ನನಗೆ ಸಂತಾನವಾಗದಂತೆ ಭಂಗಪಡಿಸಿದ್ದಕ್ಕಾಗಿ ನೀನು ಆನೇಕ ರೂಪಗಳನ್ನು ಪಡೆದು ಅನೇಕರಿಗೆ ಹೆಂಡತಿಯಾಗೂ ಎಂದು ಶಪಿಸಿದಳು.

ಶಿವನ ಕೋಪದಿಂದ ಲವಣ ಸಮುದ್ರದಲ್ಲಿ ಜನ್ಮತಾಳಿದ ಜಲಂಧರನೆಂಬ ರಕ್ಕಸ ಇಂದ್ರನ ಸಂಪತ್ತನ್ನೆಲ್ಲಾ ಸೂರೆ ಮಾಡಿ ಸುಂದರಿಯಾದ ಪಾರ್ವತಿಯನ್ನು ತನ್ನ ಮಡದಿಯನ್ನಾಗಿ ಮಾಡಿಕೊಳ್ಳಲು ಯತ್ನಿಸಿ ಶಿವನಿಂದ ನಾಶ ಹೊಂದಿದ.

ಪಾರ್ವತಿಯ ಹೆಸರುಗಳು

ಉಮಾ, ಉಮೆ ಎನ್ನುವುದು ಪಾರ್ವತಿಯ ಒಂದು ಹೆಸರು. ಉಗ್ರತಪಸ್ಸಿಲ್ಲಿ ನಿರತಳಾದ ಈಕೆಯನ್ನು ಕುರಿತು ತಾಯಿ ಉ (ಎಲೌ) ಮಾ (ಬೇಡ, ಕಷ್ಟಸಾಧ್ಯವಾದ ತಪಸ್ಸಿಗೆ ಉದ್ಯುಕ್ತಳಾಗಬೇಡ) ಎಂದು ಬಾರಿಬಾರಿಗೂ ಅಡ್ಡಗಿಸಿದ ಕಾರಣ ಉಮಾ ಎಂಬ ಹೆಸರು ರೂಢಿಗೆ ಬಂತು.

ಪಾರ್ವತಿಗೆ ಅಪರ್ಣೆ, ಗಿರಿಜೆ ಎಂಬ ಹೆಸರುಗಳಿವೆ.

ನೋಡಿ

ಉಲ್ಲೇಖಗಳು

  • David Kinsley, Hindu Goddesses: Vision of the Divine Feminine in the Hindu Religious Traditions (ISBN 81-208-0379-5)
  • Vans Kennedy, Researches Into the Nature and Affinity of Ancient and Hindu Mythology; Published 1831; Printed for Longman, Rees, Orme, Brown, and Green; 494 pages; Original from Harvard University; Digitized 11 July 2005 [೧]
  • William J. Wilkins, Uma – Parvati, Hindu Mythology, Vedic and Puranic; Republished 2001 (first published 1882); Adamant Media Corporation; 463 pages; ISBN 1-4021-9308-4
  • Wendy Doniger O'Flaherty, Śiva, the Erotic Ascetic
  • Charles Coleman, Mythology of the Hindus
  • Karen Tate, Sacred Places of Goddess: 108 Destinations
  • Srivastava, A. L. (2004). Umā-Maheśvara: An iconographic study of the divine couple. Kasganj, U: Sukarkshetra Shodh Sansthana.

ಹೊರಗಿನ ಕೊಂಡಿಗಳು

Tags:

ಪಾರ್ವತಿ ಯ ಜನನದ ಹಿನ್ನೆಲೆಪಾರ್ವತಿ ಯ ಜನನಪಾರ್ವತಿ ಶಿವನನ್ನು ಒಲಿಸಿಕೊಂಡ ಕಥೆಪಾರ್ವತಿ ಯ ವಿವಾಹಪಾರ್ವತಿ ಗೆ ಸಂಬಂಧಿಸಿದ ಕಥೆಗಳುಪಾರ್ವತಿ ಯ ಹೆಸರುಗಳುಪಾರ್ವತಿ ನೋಡಿಪಾರ್ವತಿ ಉಲ್ಲೇಖಗಳುಪಾರ್ವತಿ ಹೊರಗಿನ ಕೊಂಡಿಗಳುಪಾರ್ವತಿಗಣೇಶಶಿವಸುಬ್ರಹ್ಮಣ್ಯಹಿಂದೂ ಪುರಾಣಹಿಮಾಲಯ

🔥 Trending searches on Wiki ಕನ್ನಡ:

ಪಿ.ಲಂಕೇಶ್ಹೆಚ್.ಡಿ.ದೇವೇಗೌಡಗುರುರಾಜ ಕರಜಗಿಕೃಷ್ಣಆಹಾರಛತ್ರಪತಿ ಶಿವಾಜಿಕರ್ನಾಟಕದ ಇತಿಹಾಸಭಾರತೀಯ ಶಾಸ್ತ್ರೀಯ ನೃತ್ಯಭಾರತದ ಪ್ರಧಾನ ಮಂತ್ರಿಗಳ ಪಟ್ಟಿವಿರಾಟ್ ಕೊಹ್ಲಿಬಾದಾಮಿಕಂಸಾಳೆಬೆಂಗಳೂರು ಗ್ರಾಮಾಂತರ ಜಿಲ್ಲೆರಾಮಾಚಾರಿ (ಕನ್ನಡ ಧಾರಾವಾಹಿ)ಪ್ರಾಥಮಿಕ ಶಿಕ್ಷಣಸಂಗೊಳ್ಳಿ ರಾಯಣ್ಣಅಟಲ್ ಬಿಹಾರಿ ವಾಜಪೇಯಿಭಾರತೀಯ ಭಾಷೆಗಳುಎಚ್.ಎಸ್.ಶಿವಪ್ರಕಾಶ್ನೊಬೆಲ್ ಪ್ರಶಸ್ತಿಪ್ರಬಂಧ ರಚನೆತತ್ಪುರುಷ ಸಮಾಸಶಿವರಾಜ್‍ಕುಮಾರ್ (ನಟ)ಸಾರಾ ಅಬೂಬಕ್ಕರ್ಕೇಶಿರಾಜಅಕ್ಕಮಹಾದೇವಿತ್ರಿವೇಣಿಬೃಹದೀಶ್ವರ ದೇವಾಲಯಕೃಷ್ಣರಾಜಸಾಗರರಾಗಿಸಂಯುಕ್ತ ಕರ್ನಾಟಕವಚನ ಸಾಹಿತ್ಯಡಾ ಬ್ರೋಕರ್ನಾಟಕದ ಹೋಬಳಿಗಳುಕರ್ನಾಟಕದ ಜಿಲ್ಲೆಗಳುಅಲ್ಬರ್ಟ್ ಐನ್‍ಸ್ಟೈನ್ಸಂಸ್ಕೃತಕನ್ನಡ ಚಂಪು ಸಾಹಿತ್ಯಭಾರತದಲ್ಲಿ ಮೀಸಲಾತಿಸರೀಸೃಪಶ್ರೀ ಅಣ್ಣಮ್ಮ ದೇವಿ ದೇವಾಲಯ, ಬೆಂಗಳೂರುಋತುಚಕ್ರಚನ್ನವೀರ ಕಣವಿಓಂ (ಚಲನಚಿತ್ರ)ಮಹಾತ್ಮ ಗಾಂಧಿಸರ್ಪ ಸುತ್ತುಕನ್ನಡ ಗುಣಿತಾಕ್ಷರಗಳುಕ್ರಿಶನ್ ಕಾಂತ್ ಸೈನಿಮುದ್ದಣಚಂದ್ರಶೇಖರ ವೆಂಕಟರಾಮನ್ದರ್ಶನ್ ತೂಗುದೀಪ್ತಾಳೀಕೋಟೆಯ ಯುದ್ಧಅರಿಸ್ಟಾಟಲ್‌ಸಂಗೀತಲಕ್ಷ್ಮಿಚನ್ನಬಸವೇಶ್ವರಬಾಗಲಕೋಟೆ ಲೋಕಸಭಾ ಕ್ಷೇತ್ರಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಭಾರತದ ಮುಖ್ಯ ನ್ಯಾಯಾಧೀಶರು೧೮೬೨ಆಲದ ಮರಹೆಚ್.ಡಿ.ಕುಮಾರಸ್ವಾಮಿಹುಣಸೆಕಲ್ಯಾಣ ಕರ್ನಾಟಕಮಂಗಳೂರುಜಯಮಾಲಾಗ್ರಹಗ್ರಾಮಗಳುದ್ವಿಗು ಸಮಾಸಓಂ ನಮಃ ಶಿವಾಯಸೇಂಟ್ ಮಾರ್ಕ್ಸ್ ಕ್ಯಾಥೆಡ್ರಲ್ ಚರ್ಚ್ಆಕ್ಟೊಪಸ್ಸೌರ ಶಕ್ತಿಕನ್ನಡ ಬರಹಗಾರ್ತಿಯರುಪೌರತ್ವ🡆 More