ವಿಜಯನಗರದ ಕರ್ನಾಟಕ ರಾಜ್ಯದ ಒಂದು ಪ್ರಮುಖ ಜಿಲ್ಲೆ; ಇದೇ ಹೆಸರಿನ ನಗರ ಜಿಲ್ಲೆಯ ರಾಜಧಾನಿ.
ಇಲ್ಲಿನ ಪ್ರಸಿದ್ಧ ಸ್ಥಳಗ ಳಲ್ಲಿ ಹಂಪೆ ಮತ್ತು ಅಲ್ಲಿರುವ ವಿಜಯನಗರ ಸಾಮ್ರಾಜ್ಯದ ಅವಶೇಷಗಳು ಮುಖ್ಯವಾದವು. ಬಳ್ಳಾರಿ ಜಿಲ್ಲೆಯ ಇನ್ನೊಂದು ಪ್ರಮುಖ ಪಟ್ಟಣ ಎಂದರೆ ಹೊಸಪೇಟೆ - ಇಲ್ಲಿರುವ ತುಂಗಭದ್ರಾ ಅಣೆಕಟ್ಟು ಕೃಷಿಗೆ ನೀರನ್ನು ಒದಗಿಸುತ್ತದೆ.ಬಳ್ಳಾರಿ ಜಿಲ್ಲೆಯು ೧೯೫೬ ಕ್ಕಿಂತ ಮುಂಚೆ ಮದ್ರಾಸ್ ಪ್ರಾಂತ್ಯದಲ್ಲಿತ್ತು. ಜಿಂದಾಲ್ ಕಂಪನಿ ಸಹಾಭಾಗೀತ್ವದಲ್ಲಿ ಬಳ್ಳಾರಿಯು ೧೯೩೨ ರಲ್ಲಿ ಪ್ರಪ್ರಥಮ ಭಾರಿ ವಿಮಾನ ಸಂಪರ್ಕ ಪಡೆದ ಸ್ಥಳವಾಗಿದೆ.ಶಾಸನಗಳ ಪಿತಾಮಹ ಎಂದು ಕರೆಯಲಾದ ಅಶೋಕನ ೯ ಶಾಸನಗಳು ಕಂಡು ಬಂದಿವೆ. ಕರ್ನಾಟಕದಲ್ಲಿ ಒಟ್ಟು ೧೭ ಕಡೆ ಅಶೋಕನ ಶಾಸನಗಳು ಕಂಡುಬಂದಿವೆ. ಬಳ್ಳಾರಿಯಲ್ಲಿ ಅಶೋಕನ ಎರಡು ಶಾಸನಗಳು ಕಂಡುಬಂದಿವೆ ಅವು ಯಾವುವೆಂದರೆ: ೧)ಉದಯಗೋಳ ೨)ನಿಟ್ಟೂರು ನಲ್ಲಿ ಕಂಡುಬದಿವೆ.
ಇಲ್ಲಿಯ ಶ್ರೀ ಹುಲಿಕುಂಟೇರಾಯ ದೇವಸ್ಥಾನವು ಪ್ರಸಿದ್ಧವಾಗಿದೆ. ಇಲ್ಲಿ ಪ್ರತೀ ವರ್ಷ ಪಾಲ್ಗುಣ ಶುಕ್ಲದ ದಶಮಿಯಂದು ರಥೋತ್ಸವ ಇರುತ್ತದೆ ಹಾಗೂ ಸಂಡೂರು ತಾಲೂಕಿನ ಸೋವೇನಹಳ್ಳಿಯಲ್ಲಿ ಸಾರಿದುರ್ಗಾಂಭ ಹಾಗೂ ಶ್ರೀ ಸಿದ್ದಲಿಂಗೇಶ್ವರ ರಥೋತ್ಸವಗಳು ವೈಭವದಿಂದ ಜರುಗುತ್ತವೆ.
ಚರಿತ್ರೆ
ಚಾರಿತ್ರಿಕವಾಗಿ, ಬಳ್ಳಾರಿ ಜಿಲ್ಲೆಗೆ ಪ್ರಾಮುಖ್ಯತೆಗೆ ಬಂದದ್ದು ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ. ಇದಕ್ಕೆ ಮೊದಲು ಈ ಪ್ರದೇಶ ಶಾತವಾಹನ, ಕಲ್ಯಾಣಿ ಚಾಲುಕ್ಯರು, ಕದಂಬರು, ಸೇವುಣರು ಮತ್ತು ಹೊಯ್ಸಳರ ನಿಯಂತ್ರಣದಲ್ಲಿತ್ತು. ವಿಜಯನಗರ ಸಾಮ್ರಾಜ್ಯ ಬಳ್ಳಾರಿ ಜಿಲ್ಲೆಯಲ್ಲೇ ರಾಜಧಾನಿಯನ್ನು ಹೊಂದಿದ್ದರಿಂದ ಆ ಸಮಯದಲ್ಲಿ ಈ ಜಿಲ್ಲೆ ಪ್ರಾಮುಖ್ಯತೆಗೆ ಬಂದಿತು. ಬ್ರಿಟಿಷ್ ಆಡಳಿತದ ಕಾಲದಲ್ಲಿ ಮದರಾಸು ಪ್ರಾಂತ್ಯಕ್ಕೆ ಸೇರಿದ್ದ ಬಳ್ಳಾರಿ ಜಿಲ್ಲೆ ೧೯೫೩ ರಲ್ಲಿ ಮೈಸೂರು ರಾಜ್ಯಕ್ಕೆ ವರ್ಗಾಯಿಸಲ್ಪಟ್ಟಿತು.
ಭೌಗೋಳಿಕತೆ
ಕರ್ನಾಟಕದ ಪೂರ್ವದ ಗಡಿಯಲ್ಲಿರುವ ಬಳ್ಳಾರಿ ಜಿಲ್ಲೆಯ ಉತ್ತರಕ್ಕೆ ರಾಯಚೂರು ಮತ್ತು ಕೊಪ್ಪಳ, ಪಶ್ಚಿಮಕ್ಕೆ ಹಾವೇರಿ ಮತ್ತು ಗದಗ್, ದಕ್ಷಿಣಕ್ಕೆ ದಾವಣಗೆರೆ ಮತ್ತು ಚಿತ್ರದುರ್ಗ ಮತ್ತು ಪೂರ್ವಕ್ಕೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕರ್ನೂಲು ಜಿಲ್ಲೆಗಳಿವೆ. ಈ ಜಿಲ್ಲೆಯ ವಿಸ್ತೀರ್ಣ ೮೪೪೭ ಚ.ಕಿಮೀ ಮತ್ತು ವಾರ್ಷಿಕ ಮಳೆ ೬೩.೯ ಸೆಮೀ. ಬಳ್ಳಾರಿ ಜಿಲ್ಲೆಯಲ್ಲಿ ಕಬ್ಬಿಣ, ಮ್ಯಾಂಗನೀಸ್, ತಾಮ್ರ ಮತ್ತು ಸೀಸದ ಗಣಿಗಳು ಸಾಕಷ್ಟಿವೆ.
ಆಕರ್ಷಣೀಯ ಸ್ಥಳಗಳು
ಬಳ್ಳಾರಿಯು ಗಣಿನಾಡು ಎಂದೇ ಪ್ರಸಿದ್ಧಿ
1.ಬಳ್ಳಾರಿ: ಬಳ್ಳಾರಿ ಕೋಟೆ, ಬಳ್ಳಾರಿಯ ಕನಕದುರ್ಗಮ್ಮ ಗುಡಿ, ಮಹದೇವತಾತನವರ ಮಠ
2. ಸಂಡೂರು: ಕುಮಾರಸ್ವಾಮಿ ದೇವಸ್ಥಾನ, ನಾರಿಹಳ್ಳ, ಗಣಿಗಾರಿಕೆ
3. ಕುರುಗೋಡು: ದೊಡ್ಡಬಸವೇಶ್ವರ ದೇವಸ್ಥಾನ
ತಾಲ್ಲೂಕುಗಳು:
ಬಳ್ಳಾರಿ, ಕಂಪ್ಲಿ, ಸಂಡೂರು, ಸಿರುಗುಪ್ಪ, ಕುರುಗೋಡು
ಬಳ್ಳಾರಿ ಜಿಲ್ಲೆಯ ಪ್ರಸಿದ್ಧ ಸ್ಥಳಗಳಲ್ಲಿ ಹಂಪೆ ಸಿಂಧಿಗೇರಿ ಮತ್ತು ಅಲ್ಲಿರುವ ವಿಜಯನಗರ ಸಾಮ್ರಾಜ್ಯದ ಅವಶೇಷಗಳು ಮುಖ್ಯವಾದವು. ಬಳ್ಳಾರಿ ಜಿಲ್ಲೆಯ ಇನ್ನೊಂದು ಪ್ರಮುಖ ಪಟ್ಟಣ ಎಂದರೆ ಹೊಸಪೇಟೆ - ಇಲ್ಲಿರುವ ತುಂಗಭದ್ರಾ ಅಣೆಕಟ್ಟು ಕೃಷಿಗೆ ನೀರನ್ನು ಒದಗಿಸುತ್ತದೆ. ಬೊಮ್ಮಘಟ್ಟ ಇಲ್ಲಿಯ ಶ್ರೀ ಹುಲಿಕುಂಟೇರಾಯ ದೇವಸ್ಥಾನವು ಪ್ರಸಿದ್ಧವಾಗಿದೆ. ಇಲ್ಲಿ ಪ್ರತೀ ವರ್ಷ ಪಾಲ್ಗುಣ ಶುಕ್ಲದ ದಶಮಿಯಂದು ರಥೋತ್ಸವ ಇರುತ್ತದೆ ಹಾಗೂ ಸಂಡೂರು ತಾಲೂಕಿನ ಸೋವೇನಹಳ್ಳಿಯಲ್ಲಿ ಸಾರಿದುರ್ಗಾಂಭ ಹಾಗೂ ಶ್ರೀ ಸಿದ್ದಲಿಂಗೇಶ್ವರ ರಥೋತ್ಸವಗಳು ವೈಭವದಿಂದ ಜರುಗುತ್ತವೆ.
ಚಾರಿತ್ರಿಕವಾಗಿ, ಬಳ್ಳಾರಿ ಜಿಲ್ಲೆಗೆ ಪ್ರಾಮುಖ್ಯತೆಗೆ ಬಂದದ್ದು ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ. ಇದಕ್ಕೆ ಮೊದಲು ಈ ಪ್ರದೇಶ ಶಾತವಾಹನ, ಕಲ್ಯಾಣಿ ಚಾಲುಕ್ಯರು, ಕದಂಬರು, ಸೇವುಣರು ಮತ್ತು ಹೊಯ್ಸಳರ ನಿಯಂತ್ರಣದಲ್ಲಿತ್ತು. ವಿಜಯನಗರ ಸಾಮ್ರಾಜ್ಯ ಬಳ್ಳಾರಿ ಜಿಲ್ಲೆಯಲ್ಲೇ ರಾಜಧಾನಿಯನ್ನು ಹೊಂದಿದ್ದರಿಂದ ಆ ಸಮಯದಲ್ಲಿ ಈ ಜಿಲ್ಲೆ ಪ್ರಾಮುಖ್ಯತೆಗೆ ಬಂದಿತು. ಬ್ರಿಟಿಷ್ ಆಡಳಿತದ ಕಾಲದಲ್ಲಿ ಮದರಾಸು ಪ್ರಾಂತ್ಯಕ್ಕೆ ಸೇರಿದ್ದ ಬಳ್ಳಾರಿ ಜಿಲ್ಲೆ ೧೯೫೩ ರಲ್ಲಿ ಮೈಸೂರು ರಾಜ್ಯಕ್ಕೆ ವರ್ಗಾಯಿಸಲ್ಪಟ್ಟಿತು.
ಕರ್ನಾಟಕದ ಪೂರ್ವದ ಗಡಿಯಲ್ಲಿರುವ ಬಳ್ಳಾರಿ ಜಿಲ್ಲೆಯ ಉತ್ತರಕ್ಕೆ ರಾಯಚೂರು ಮತ್ತು ಕೊಪ್ಪಳ, ಪಶ್ಚಿಮಕ್ಕೆ ಹಾವೇರಿ ಮತ್ತು ಗದಗ್, ದಕ್ಷಿಣಕ್ಕೆ ದಾವಣಗೆರೆ ಮತ್ತು ಚಿತ್ರದುರ್ಗ ಮತ್ತು ಪೂರ್ವಕ್ಕೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕರ್ನೂಲು ಜಿಲ್ಲೆಗಳಿವೆ. ಈ ಜಿಲ್ಲೆಯ ವಿಸ್ತೀರ್ಣ ೮೪೪೭ ಚ.ಕಿಮೀ ಮತ್ತು ವಾರ್ಷಿಕ ಮಳೆ ೬೩.೯ ಸೆಮೀ. ಬಳ್ಳಾರಿ ಜಿಲ್ಲೆಯಲ್ಲಿ ಕಬ್ಬಿಣ, ಮ್ಯಾಂಗನೀಸ್, ತಾಮ್ರ ಮತ್ತು ಸೀಸದ ಗಣಿಗಳು ಸಾಕಷ್ಟಿವೆ.
ಕೃಷಿ ಬಳ್ಳಾರಿ ಜಿಲ್ಲೆಯ ಮುಖ್ಯ ವೃತ್ತಿ. ಕೃಷಿಗೆ ನೀರಿನ ಸರಬರಾಜು ತುಂಗಭದ್ರಾ ನದಿ ಮತ್ತು ಹೊಸಪೇಟೆಯಲ್ಲಿನ ತುಂಗಭದ್ರಾ ಅಣೆಕಟ್ಟಿನಿಂದ ಆಗುತ್ತದೆ. ಇಲ್ಲಿ ಬೆಳೆಯಲ್ಪಡುವ ಮುಖ್ಯ ಬೆಳೆಗಳು ಹತ್ತಿ, ಜೋಳ, ನೆಲಗಡಲೆ, ಭತ್ತ, ಸೂರ್ಯಕಾಂತಿ.
ವಿಕಿಟ್ರಾವೆಲ್ ನಲ್ಲಿ ಬಳ್ಳಾರಿ ಪ್ರವಾಸ ಕೈಪಿಡಿ (ಆಂಗ್ಲ)
This article uses material from the Wikipedia ಕನ್ನಡ article ಬಳ್ಳಾರಿ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.