ಬಸವಕಲ್ಯಾಣ ನಗರವು ಕರ್ನಾಟಕ ರಾಜ್ಯದ ಬೀದರ ಜಿಲ್ಲೆಯಲ್ಲಿದೆ.
ಬೀದರ್ ನಗರದಿಂದ ಸುಮಾರು 80 ಕಿಲೊಮೀಟರ್ ದೂರದಲ್ಲಿ ಇರುವ ಇದು ರಾಜ್ಯದ ಅತ್ಯಂತ ಐತಿಹಾಸಿಕ ನಗರಗಳಲ್ಲಿ ಒಂದು.
Basavakalyan ಬಸವಕಲ್ಯಾಣ | |
---|---|
town | |
ದೇಶ | ಭಾರತ |
State | ಕರ್ನಾಟಕ |
District | ಬೀದರ್ |
Elevation | ೬೨೧ m (೨,೦೩೭ ft) |
Population (2011) | |
• Total | ೬೯,೭೧೭ |
ಸಮಯ ವಲಯ | ಯುಟಿಸಿ+5:30 (IST) |
PIN | 585 327 |
Telephone code | 08481 |
ವಾಹನ ನೋಂದಣಿ | KA-56 |
ಪೂಜ್ಯ.ಶ್ರೀ.ಷ.ಬ್ರ.ಡಾ.ಚೆನ್ನವೀರ ಶಿವಾಚಾರ್ಯರು
ಕೃಪೆ: ' ಬೀದರ ಜಿಲ್ಲಾ ಸಾಹಿತಿಗಳ ಪರಿಚಯ' ಎಂಬ ಪುಸ್ತಕದಿಂದ ಆಯ್ದುಕೊಳ್ಳಲಾಗಿದೆ. ಲೇಖಕರು: ಮಚ್ಚೇಂದ್ರ ಪಿ ಅಣಕಲ್.
ಮಚ್ಚೇಂದ್ರ ಅಣಕಲ್ ೩೩ EDITS
ವಿಕಿಪೀಡಿಯ ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್ಟಾಪ್
ಹನ್ನೆರಡನೇ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ಪಟ್ಟಣವೇ ಇಂದಿನ ಬಸವ ಕಲ್ಯಾಣ. ಬೀದರ ಜಿಲ್ಲೆಯ ತಾಲ್ಲೂಕು ಕೇಂದ್ರವಾಗಿರುವ ಈ ಊರಿನ ಜನಸಂಖ್ಯೆ ೫೮,೭೪೨ (೨೦೦೧ರ ಭಾರತದ ಜನಗಣತಿಯ ಪ್ರಕಾರ).ಕಲ್ಯಾಣ ಚಾಲುಕ್ಯರ ರಾಜಧಾನಿಯಾಗಿ ಮೆರೆದಿದ್ದ ಕಲ್ಯಾಣದಿ೦ದ ಸುಮಾರು ೨೫೦ ವರುಷಗಳವರೆಗೆ ಆಳ್ವಿಕೆ ನಡೆಸಿದರು.
ಇದು ಕೂಡ ಬಸವಕಲ್ಯಾಣದಿಂದ 15 ಕಿ.ಮೀ. ದೂರ ಪಶ್ಚಿಮ ದಿಕ್ಕಿಗಿದೆ. ಇಲ್ಲಿ ಉಮಾಮಹೇಶ್ವರ ದೇಗುಲದ ಸಂಕೀರ್ಣವು ಕಾಣಬಹುದಾಗಿದ್ದು ಪೂರ್ತಿ ಜರ್ಝರಿತವಾಗಿದೆ. ಇದು ಕೂಡ ಕಲಾಶಿಲ್ಪ ವೈಭವಕ್ಕೆ ಸಾಕ್ಷಿಯಾಗಿದೆ. (ಶಿಲ್ಪ ಕಲಾ ವೈಭವಕ್ಕೆ ಸಾಕ್ಷಿಯಾಗಿ ನಿಂತಿರು ಉಮಾಮಹೇಶ್ವರ ದೇಗುಲ ಸಂಕೀರ್ಣ )
ಬಸವಣ್ಣನವರು ಮಾಂಡಲಿಕ ಬಿಜ್ಜಳನೊಂದಿಗೆ ಮಂಗಳವೇಡೆಯಿಂದ ಕಲ್ಯಾಣಪುರಕ್ಕೆ ಬಂದು ಅದನ್ನು ತಮ್ಮ ಕರ್ಮಭೂಮಿಯನ್ನಾಗಿಸಿ ಕೊಂಡರು. ಸಾಮಾಜಿಕ, ಧಾರ್ಮಿಕ ಕ್ರಾಂತಿಯನ್ನು ನಡೆಸಿದರು. ಕಲ್ಯಾಣ ಶರಣರ ನಾಡು, ಭಕ್ತಿಯ ಬೀಡು ಆಯಿತು. ಬಲದೇವ ಮಂತ್ರಿಯ ನಂತರ ಬಸವಣ್ಣನವರಿಗೆ ಪ್ರಧಾನಿ ಹುದ್ದೆಯನ್ನು ನೀಡಲಾಯಿತು. ಅವರು ಬಿಜ್ಜಳ ಅರಸರ ಭಾಂಡಾರಿಯಷ್ಟೇ ಆಗಿರದೆ ಭಕ್ತಿ ಭಾಂಡಾರಿಯೂ ಆದರು. ನೆಲ ಪಾವನವಾಯಿತು. ಜನಮನ ನೆಲೆ ಕಂಡಿತು. ಈ ಆಧುನಿಕ ದೇವಾಲಯ ಸಾಂಸ್ಕೃತಿಕ ಕೇಂದ್ರವೂ ಆಗಿದೆ. (ಚಿತ್ರದಲ್ಲಿ ಕಾಣುತ್ತಿರುವದು ಬೊಮ್ಮಗೊಂಡೇಶ್ವರ ಕೆರೆ)
ಬಸವೇಶ್ವರ ದೇವಾಲಯದ ಸಮೀಪ ಇರುವ ಈ ಸ್ಮಾರಕ ಕಟ್ಟೆಯೊಂದರ ರೂಪದಲ್ಲಿದೆ. ಇದರ ಸಂಬಂಧ ಬಸವಣ್ಣನವರೊಂದಿಗೆ ಇದ್ದಿತೆಂದು ತಿಳಿದುಬರುತ್ತದೆ.
ಬಸವ ಕಲ್ಯಾಣದ ಹೊರವಲಯದಲ್ಲಿರುವ ಇದು ಸ್ಮಾರಕ ಗುಹೆಯ ಮಾದರಿಯಲ್ಲಿದೆ. ಬಸವಣ್ಣನವರ ಮಹಾಮನೆ ಎಂದೇ ಜನರು ಇದನ್ನು ಕಾಣುತ್ತಾರೆ.
ಅರಿವಿನ ಮನೆಯ ಪಕ್ಕದಲ್ಲಿಯೇ ಈ ಗುಹೆ ಇದ್ದು , ತಂಪಾದ ನೆಲೆಯಾಗಿದೆ. ಹಡಪದ ಅಪ್ಪಣನವರು ಬಸವಣ್ಣನವರ ನಿಕಟವರ್ತಿಗಳಾಗಿದ್ದರು. ತಾಂಬೂಲವನ್ನು ಸಲ್ಲಿಸುವ ಕಾಯಕ ಅವರದ್ದಾಗಿತ್ತೆಂದು ತಿಳಿದುಬರುತ್ತದೆ.
ಈ ಎರಡೂ ಗವಿಗಳು ಅಕ್ಕಪಕ್ಕದಲ್ಲಿವೆ. ಚೆನ್ನಬಸವಣ್ಣನವರು ತಮ್ಮ ಬಾಲ್ಯದ ದಿನಗಳನ್ನು ಕಳೆದದ್ದು ಇಲ್ಲಿಯೇ ಎಂಬುದು ಅಭಿಪ್ರಾಯ. ಈ ಗವಿಗಳು ಹನ್ನೆರಡನೇ ಶತಮಾನದ ಮಹಿಳೆಯರ ಆಧ್ಯಾತ್ಮಿಕ ಸಾಧನೆಯ ಕುರುಹುಗಳು.ಐತಿಹಾಸಿಕ ಬಸವಕಲ್ಯಾಣ[ಶಾಶ್ವತವಾಗಿ ಮಡಿದ ಕೊಂಡಿ]
This article uses material from the Wikipedia ಕನ್ನಡ article ಬಸವಕಲ್ಯಾಣ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.