ಇಂಟರ್ ನ್ಯಾಷನಲ್ ಥಿಯೇಟರ್ ಇನ್ ಸ್ಟಿಟ್ಯೂಟ್ ೧೯೬೧ ರಲ್ಲಿ ವ್ಯವಸ್ಥೆಗೊಳಿಸಿದ ವಿಶ್ವ ರಂಗಭೂಮಿ ಸಮಾವೇಶದಲ್ಲಿ ಪ್ರತಿವರ್ಷ ಮಾರ್ಚ್ ೨೭ ರಂದು ವಿಶ್ವ ರಂಗಭೂಮಿ ದಿನ ಎಂದು ಆಚರಿಸಲು ನಿರ್ಧರಿಸಲಾಯಿತು.
೧೯೬೨ ರಲ್ಲಿಪ್ಯಾರಿಸ್ಸಿನಲ್ಲಿ ಅಂತಾರಾಷ್ಟ್ರೀಯ ನಾಟಕೋತ್ಸವದ ಉದ್ಘಾಟನೆಯೊಂದಿಗೆ ಮೊದಲ ವಿಶ್ವ ರಂಗಭೂಮಿ ದಿನವನ್ನು ಆಚರಿಸಲಾಯಿತು.ಅಂದಿನಿಂದ ಪ್ರತಿವರ್ಷ ಮಾರ್ಚ್ ೨೭ ರಂದು ವಿಶ್ವ ರಂಗಭೂಮಿ ದಿನ ಆಚರಿಸಲಾಗುತ್ತದೆ."ನಮನ"
ಕನ್ನಡದಲ್ಲಿ ಜನಪದ ರಂಗಭೂಮಿ, ವ್ರತ್ತಿ ರಂಗಭೂಮಿ ಮತ್ತು ಹವ್ಯಾಸಿ ರಂಗಭೂಮಿಗಳಾಗಿ ವಿಂಗಡಿಸಬಹುದು.ಕನ್ನಡ ಜನಪದ ರಂಗ ಭೂಮಿಯಿಂದ ಪ್ರೇರಣೆ ಪಡೆದ ಮರಾಠಿಯ "ಸೀತಾ ಸ್ವಯಂವರ" ನಾಟಕ ಮಹಾರಾಷ್ಟ್ರದ ಉದ್ದಗಲಕ್ಕೂ ಪ್ರದರ್ಶನ ಕಂಡು ಮುಂಬಯಿ ಪ್ರಾಂತ್ಯ ಕ್ಕೊಳಪಟ್ಟ ಉತ್ತರ ಕರ್ನಾಟಕದ ಪಟ್ಟಣಗಳಿಗೂ ಲಗ್ಗೆ ಇಟ್ಟು ಕನ್ನಡ ನೆಲದಲ್ಲಿ ಮರಾಠಿ ಮತ್ತು ಪಾರ್ಸೀ ಕಂಪನಿಗಳದ್ದೆ ನಾಟಕದಾಟ,ನಾಟಕದೂಟ, ಕಾರುಬಾರುಗಳಾದಾಗ ಕನ್ನಡಿಗರ ಸ್ವಾಭಿಮಾನ ಕೆಣಕುವಂತಾಯಿತು.ಈ ವೇಳೆಗೆ "ಶಾಂತ ಕವಿ'ಗಳೆಂದು ಹೆಸರಾದ ಸಕ್ಕರಿ ಬಾಳಾಚಾರ್ಯರು ಮರಾಠಿ ನಾಟಕಕ್ಕೆ ಪ್ರತಿಯಾಗಿ ಕನ್ನಡ ನಾಟಕಗಳನ್ನು ರಚಿಸುವಲ್ಲಿ ಕಾರಣರಾದರು.ಸಮಗ್ರ ಕರ್ನಾಟಕ ವರ್ತ್ತಿ ರಂಗ ಭೂಮಿ ಇತಿಹಾಸದಲ್ಲಿ ಗದಗಿಗೆ ಪ್ರಥಮ ಕೀರ್ತಿ ಸಲ್ಲುವಂತಾಯಿತು.
೧೮೫೬ನೆ ಜನವರಿ ೧೫ ರಂದು ಹುಟ್ಟಿದ ಸಕ್ಕರಿ ಬಾಳಾಚಾರ್ಯರು ಗದಗಿನ ಶ್ರೀಮಂತ ಉಮಚಗಿ ಲಚಪ್ಪ ನಾಯಕ ಎಂಬವರ ಪ್ರೋತ್ಸಾಹದಿಂದ ಹಲವಾರು ರುವಕರ ನೆರವಿನಿಂದ ೧೮೭೨ ರಲ್ಲಿ 'ವೀರ ನಾರಾಯಣ ಪ್ರಸಾದಿತ ನಾಟಕ ಮಂಡಳಿ' ಸ್ತಾಪಿಸಿದರು.ಈ ಮಂಡಳಿ ಉತ್ತರ ಕರ್ನಾಟಕದ ಪ್ರಥಮ ವ್ರತ್ತಿ ನಾಟಕ ಸಂಸ್ಥೆ. ಮುಂದೆಯೂ ಪಾರಸಿ ಕಂಪನಿಗಳ ಪಾರಮ್ಯ ಮೈಸೂರು ಪ್ರಾಂತ್ಯದಲ್ಲಿ ಮುಂದುವರೆದಾಗ ಮೈಸೂರಿನ ಕೆಲವು ಮಂದಿ ಕಲಾವಿಲಾಸಿಗಳು ಸುಮಾರು ೧೮೭೯-೮೦ ರಲ್ಲಿ ಸಿ.ಆರ್.ರಘುನಾಥ ರಾಯರ ನೇತ್ರತ್ವದಲ್ಲಿ ಒಂದು ಕನ್ನಡ ನಾಟಕ ಸಂಘವನ್ನು ಆರಂಭಿಸಿ "ಶ್ರೀ ಶಾಕುಂತಲ ಕರ್ನಾಟಕ ನಾಟಕ ಸಬಾ"ಎಂದು ಹೆಸರಿಟ್ಟುಕಾರ್ಯ ನಿರತರಾದರು.ಮುಂದೆ ಮೈಸೂರು ಒಡೆಯರಾದ ಚಾಮರಾಜೇಂದ್ರ ರ ನೆರವಿನೊಂದಿಗೆ ೧೮೮೦ರಲ್ಲಿ " ಶ್ರೀ ಚಾಮರಾಜೇಂದ್ರ ಕರ್ನಾಟಕ ನಾಟಕ ಸಭಾ" ಎಂಬ ಹೆಸರಿನಿಂದ ನಾಟಕ ಮಂಡಳಿಯೊಂದನ್ನು ಸ್ಥಾಪಿಸಿ ಕನ್ನಡ ರಂಗ ಭೂಮಿಗೆ ಭದ್ರ ಬುನಾದಿ ಹಾಕಿ ಸತ್ ಸಂಪ್ರ್ತದಾಯವೊಂದನ್ನು ನಿರ್ದಿಷ್ಟವಾಗಿ ರೂಪಿಸಿದರು."ನಮನ"
೧೮೮೨ರಲ್ಲಿ ಅರಮನೆಗೆ ಸೇರಿದ ವಿಧ್ಯಾರ್ಥಿಗಳು ಸೇರಿ "ಮೈಸೂರ್ ರಾಯಲ್ ಸ್ಕೂಲ್ ಡ್ರಾಮ್ಯಟಿಕ್ ಕಂಪನಿ"ಸ್ಥಾಪನೆಯಾಯಿತು,ಮುಂದೆ ಪೆರಿಸ್ವಾಮಿ ಅಯ್ಯಂಗಾರ್ -ಚಿನ್ನ ಸ್ವಾಮೀ ಅಯ್ಯಂಗಾರ್ ಸಹೋದರರ "ರಸಿಕ ಮನೋಲ್ಲಾಸಿನಿ ನಾಟಕ ಕಂಪನಿ"ಜನ್ಮ ತಾಳಿತು. ಮುಂದೆ ಚಾಮರಾಜೇಂದ್ರ ಕರ್ನಾಟಕ ನಾಟಕ ಸಭಾ ನಿಂತ ಮೇಲೆ ಅದರಲ್ಲಿನ ಕೆಲವರು ಸೇರಿ ೧೯೧೯ ರಲ್ಲಿ "ಶ್ರೀ ಚಾಮುಂಡೇಶ್ವರಿ ಕರ್ನಾಟಕ ನಾಟಕ ಸಭಾ"ಎಂದು ಏನ್,ಸುಬ್ಬಣ್ಣನವರ ನೇತ್ರತ್ವದಲ್ಲಿ ಮುನ್ನಡೆಯಿತು.ಇದರಲ್ಲಿ ಮುಂದೆ ಆರ್,ನಾಗೇಂದ್ರ ರಾವ್ ,ಮಳವಳ್ಳಿ ಸುಂದರಮ್ಮನವರು ಬೇರೆ ಬೇರೆ ಕಾಲದಲ್ಲಿ ಆಡಳಿತ ಹೊಣೆ ಹೊತ್ತರು.
ನಾಟ್ಯ ಶಿರೋಮಣಿ ವರದಾಚಾರ್ಯರು "ರತ್ನಾವಳಿ ನಾಟಕ ಸಭಾ" ೧೯೦೨ ರಲ್ಲಿ ಸ್ಥಾಪಿಸಿದರು,ಮೈಸೂರು ರಂಗ ಭೂಮಿಯಲ್ಲಿ ಮೊತ್ತ ಮೊದಲು ವಿದ್ಯುತ್ ಶಕ್ತಿಯ ಸಹಾಯದಿಂದ ದೀಪಾಲಂಕಾರ,ಬಣ್ಣಗಳ ವಿಧವನ್ನು ಅಳವಡಿಸಿದರು.
ಮೈಸೂರು ಪ್ರಾಂತ್ಯದಲ್ಲಿ ಇನ್ನೊಂದು ಹೆಸರಾಂತ ಸಂಸ್ಥೆ ಗುಬ್ಬಿ. "ಶ್ರೀ ಗುಬ್ಬಿ ಚೆನ್ನ ಬಸವೇಶ್ವರ ಕ್ರಪಾ ಪೋಷಿತ ನಾಟಕ ಮಂಡಳಿ Archived 2015-06-04 ವೇಬ್ಯಾಕ್ ಮೆಷಿನ್ ನಲ್ಲಿ."೧೮೮೪ರಲ್ಲಿ ಗುಬ್ಬಿ ಚಂದಣ್ಣನವರ ನೇತ್ರತ್ವದಲ್ಲಿ ಹುಟ್ಟಿತು.
ಹೀಗೆ ಹಲವಾರು ಕಂಪನಿಗಳು ಹೆಸರಿಸಬಹುದು,ಕನ್ನಡ ರಂಗಭೂಮಿಯಲ್ಲಿ ಮಹಿಳೆಯರು ಪುರುಷನಿಗೆ ಸರಿಸಾಟಿಯಾಗಿ ಬೆಳೆದು,ಮಹಿಳಾ ನಾಟಕ ತಂಡಗಳನ್ನು ಕಟ್ಟಿ ನಡೆಸಿದ್ದಾರೆ. "ನಮನ"
ರಂಗಭೂಮಿ ಯಲ್ಲಿ ಮಹಿಳೆ ಪುರುಷನಿಗೆ ಸರಿಸಾಟಿ ಎಂದು ಹೇಳಿದರೆ ಹಲವರಿಗೆ ಅಚ್ಹರಿಯಾಗಬಹುದು.ಪುರುಷ ಪ್ರಧಾನ ಸಮಾಜದಲ್ಲಿ ಇದು ಹೇಗೆ ಸಾದ್ಯ?ಎಂದೇ ಶಿಕ್ಷಿತ ಸಮುದಾಯದ ಕೆಲವರಾದರೂ ಕೇಳಬಹುದು.ಆದರೆ ಪುರುಷರಿಗಿಂತ ನಾವೇನು ಕಮ್ಮಿ ಎಂದು ಸವಾಲೆಸೆದು ಪುರುಷರಿಗಿಂತ ಮಿಗಿಲಾದ ಸಾದನೆಗೈದದ್ದು ವಿಚಿತ್ರವಾದರೂ ಸತ್ಯ.
ಸಂಘ ಸಂಸ್ಥೆಗಳು, ಹವ್ಯಾಸಿ ರಂಗ ತಂಡಗಳು ನಾಟಕ ಮಾಡಲೆಂದು ಸಿದ್ದವಾಗುವ ಸಂದರ್ಭದಲ್ಲಿ ಎದುರಾಗುವ ಹಲವು ತೊಡಕುಗಳಲ್ಲಿ ಕಲಾವಿದೆಯರು ಸಿಗುವುದಿಲ್ಲ ಎಂಬ ಸಮಸ್ಯೆ ಇದ್ದ ಕಾಲದಲ್ಲಿ ಮಹಿಳೆಯರ ಪಾತ್ರವನ್ನು ಅದ್ಭುತವಾಗಿ ಅಭಿನಯಿಸಿದ ಪುರುಷರ ದೊಡ್ಡ ಪಟ್ಟಿಯೇ ಇದೆ, ಕೆಲವು ನಾಟಕಕಾರರು ಮಹಿಳೆಯರ ಪಾತ್ರವೇ ಇಲ್ಲದ ನಾಟಕಗಳನ್ನು ಬರೆದಿದ್ದಾರೆ. ೧೪೦ ವರ್ಷಗಳ ಇತಿಹಾಸವಿರುವ ವೃತ್ತಿ ರಂಗಭೂಮಿಯಲ್ಲಿ ಮಹಿಳೆಯರು ಆರಂಭದ ಒಂದೆರಡು ದಶಕಗಳಲ್ಲಿ ರಂಗ ಪ್ರವೆಶಿಸಿರಲಿಲ್ಲ. ಸ್ರೀಯರ ನಯ, ನಾಜೂಕಿನ ಹಾವ ಭಾವಗಳಿಗೆ ಸಹಜತೆ ಬರಬೇಕಾದರೆ ಸ್ರೀಯೇ ಅಭಿನಯಿಸಬೇಕು ಎಂಬ ತೀರ್ಮಾನಕ್ಕೆ ಬಂದ ಕೋಣ್ಣೂರು ನಾಟಕ ಕಂಪನಿಯ ಶಿವಮೂರ್ತಿ ಸ್ವಾಮಿಗಳು ೧೯೦೧ ರಲ್ಲಿಯೇ ಗುಳೇದಗುಡ್ಡದಿಂದ "ಯಲ್ಲೂ ಬಾಯಿ "ಎಂಬ ಮಹಿಳೆಯನ್ನು ಕರೆಸಿ ಆಕೆಯಿಂದ ಮಹಿಳೆಯ ಪಾತ್ರ ಮಾಡಿಸುತ್ತಾರೆ. ಗಾಯನ ಮತ್ತು ಅಭಿನಯದಲ್ಲಿ ತನ್ನ ಅದ್ವಿತೀಯ ಪಾತ್ರ ತೋರಿದ "ಯಲ್ಲೂಬಾಯಿ"ಯನ್ನೇ ವ್ರತ್ತಿ ರಂಗ ಭೂಮಿಯ ಮೊದಲ ನಟಿ ಎಂದು ವಿದ್ವಾಂಸರು ಹೇಳುತ್ತಾ ಬಂದಿದ್ದರೂ ೧೮೯೮ರಲ್ಲಿ ಪಾಪಸಾನಿ ಎಂಬಾಕೆ ಸ್ಥಾಪಿಸಿದ ಸ್ರೀ ನಾಟಕ ಮಂಡಳಿ "ಪ್ರಭಾವತಿ ದರ್ಬಾರು "ಹರಿಶ್ಚಂದ್ರ'ಮುಂತಾದ ನಾಟಕ ಪ್ರದರ್ಶಿಸುತ್ತಿತ್ತೆಂದೂ ಹಾಗಾಗಿ ಇದೇ ಮೊದಲ ನಾಟಕ ಮಂಡಳಿ ಎಂದೂ ಹೇಳಲಾಗುತ್ತದೆ, ೧೯೦೮ರಲ್ಲಿ ಲಕ್ಹ್ಷ್ಮಿಮೇಶ್ವರದ ಬಚ್ಚಸಾನಿ ಸ್ಥಾಪಿಸಿದ ಮಹಿಳಾ ನಾಟಕ ಮಂಡಳಿಯಲ್ಲಿ ಪುರುಷ ಪಾತ್ರ ಸೇರಿದಂತೆ ಎಲ್ಲಾ ಪಾತ್ರಗಳನ್ನೂ ಮಹಿಳೆಯರೇ ಅಭಿನಯಿಸುತ್ತಿದ್ದರು.ಇದು ಬರೀ ಮಹಿಳೆಯರೇ ಅಭಿನಯಿಸುವ ಇಂತಹ ಸಂಪ್ರದಾಯ ಹಾಕಿಕೊಟ್ಟ ಮೊದಲ ಮಹಿಳಾ ನಾಟಕ ತಂಡ.
This article uses material from the Wikipedia ಕನ್ನಡ article ರಂಗಭೂಮಿ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.