ವಾದಿರಾಜರು (ಕ್ರಿ.ಶ.
೧೪೮೦ - ೧೬೦೦) ಕನ್ನಡ ಹರಿದಾಸ ಪಂಥದ ಪ್ರಮುಖರಲ್ಲೊಬ್ಬರು.ಇವರು ವ್ಯಾಸರಾಯರ ಪ್ರಮುಖ ಶಿಷ್ಯರಲ್ಲಿ ಸೋದೆಯ ಮಠಾಧಿಪತಿಗಳಾಗಿದ್ದ ವಾದಿರಾಜರೂ ಒಬ್ಬರು.ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ ಅಪಾರ ಪಾಂಡಿತ್ಯವನ್ನು ಪಡೆದಿದ್ದರು. ಆತನು ಕವಿತೆ ತರ್ಕಬದ್ಧವಾದುದು.ಇವರ ವಾಗ್ವೈಖರಿಯನ್ನು ಮೆಚ್ಚಿದ ವಿಜಯನಗರ ಸಾಮ್ರಾಜ್ಯದ ರಾಜ ಶ್ರೀಕೃಷ್ಣದೇವರಾಯನು ಇವರಿಗೆ ಪ್ರಸಂಗಾಭರಣ ತೀರ್ಥ ಎಂಬ ಬಿರುದನ್ನು ನೀಡಿ ಗೌರವಿಸಿದರು.ಶ್ರೀಹರಿ ಭಕ್ತಿಯನ್ನು ಕೀರ್ತನೆಗಳ ಮೂಲಕ ಜನ ಸಾಮಾನ್ಯರಿಗೆ ತಿಳಿಕನ್ನಡದಲ್ಲಿ ಸರಳವಾಗಿ ಅರ್ಥವಾಗುವಂತೆ ಮಾಡಿದರು.ಅಷ್ಟ ಮಠಗಳಲ್ಲಿ ಈಗ ನಡೆಯುವ ಪರ್ಯಾಯೋತ್ಸವ ಪದ್ಧತಿಯನ್ನು ಪ್ರಾರಂಭಿಸಿದರು.
ಉಡುಪಿ ಜಿಲ್ಲೆಯಲ್ಲಿರುವ ಹೂವಿನಕೆರೆ ಎಂಬ ಗ್ರಾಮದಲ್ಲಿ ಜನನ. ತಂದೆ ರಾಮಾಚಾರ್ಯ ಮತ್ತು ತಾಯಿ ಸರಸ್ವತಿದೇವಿ. ಪೂರ್ವಾಶ್ರಮದ ಹೆಸರು ಭೂವರಾಹ.
ಅವರ ಇಷ್ಟ ದೈವ ಶ್ರೀಹರಿ ಅವರಿಗೆ ಹಯವದನ ಅಥವಾ ಕುದುರೆಯ ರೂಪದಲ್ಲಿ ದರ್ಶನ ಕೊಟ್ಟನಂತೆ.ತಮ್ಮ ಎಂಟನೆಯ ವಯಸ್ಸಿನಲ್ಲಿ ಸನ್ಯಾಸಾಶ್ರಮವನ್ನು ಸ್ವೀಕರಿಸಿದ ವಾದಿರಾಜರ ಸನ್ಯಾಸ ಜೀವನದ ಅವಧಿ ೧೧೨ ವರ್ಷಗಳು. ಉತ್ತರ ಕನ್ನಡ ಜಿಲ್ಲೆಯ ಸಿರ್ಸಿ ತಾಲೂಕಿನ ಸೋಂದಾ ಕ್ಷೇತ್ರದಲ್ಲಿ ಮಠ ಮತ್ತು ಇವರ ಬೃಂದಾವನವಿದೆ.
ಕನ್ನಡದಲ್ಲಿ ಹಯವದನ ಎಂಬ ಅಂಕಿತ ನಾಮದಲ್ಲಿ ಅನೇಕ ದೇವರನಾಮಗಳು, ಕೀರ್ತನೆಗಳು, ಸುಳಾದಿ, ಉಗಾಭೋಗ,ವೃತ್ತನಾಮಗಳನ್ನು ರಚಿಸಿದ್ದಾರೆ.ಶಾಸ್ತ್ರೀಯ ಯುಕ್ತಿಗಳನ್ನು ಸಾಹಿತ್ಯ ಮುದ್ರೆಯಿಂದ ಮನಸ್ಸಿಗೆ ನೆಡುವಂತೆ ಸರಳವಾದ ಪ್ರೌಢ ಕನ್ನಡ ನುಡಿಯಲ್ಲಿ ಮುಖ್ಯ ಪ್ರಮೇಯವಾದ ಭಕ್ತಿಯಿಂದ ಶ್ರೀಹರಿಯನ್ನು ಒಲಿಸಿ ಮುಕ್ತಿಯನ್ನು ಪಡೆಯಬೇಕೆಂಬುದನ್ನು ಸಿದ್ಧಾಂತಿಸಿದ್ದಾರೆ.
೧.ವೈಕುಂಠವರ್ಣನೆ - ಸಾಂಗತ್ಯ .
೨.ಸ್ವಪ್ನಗದ್ಯ - ಭಾಮಿನಿ ಷಟ್ಪದಿ.
೩.ಲಕ್ಷ್ಮಿಯ ಶೋಭಾನೆ - ಹಾಡು.
೪.ಕೀಚಕವಧ.
೫.ಕೇಶವನಾಮ.
೫.ಗುಂಡಕ್ರಿಯೆ.
೬.ಭಾರತತಾತ್ಪರ್ಯನಿರ್ಣಯ ಟೀಕೆ - ಟೀಕೆ (ಲಾಕ್ಷಾಭರಣಿ).
ಕಾವ್ಯಗಳೆ ಆಗಲಿ, ಕೀರ್ತನೆಗಳೆ ಆಗಲಿ, ಅವುಗಳ ತಿರುಳು ಒಂದೇ-ದ್ವೈತ ವೇದಾಂತ ತತ್ವಗಳ ನಿರೂಪಣೆ.ಇವರ ಕನ್ನಡ ಸಾಹಿತ್ಯ ಬಹುಮಟ್ಟಿಗೆ ಶಾಸ್ತ್ರೀಯವಾದುದಾಗಿದೆ.
ವಾದಿರಾಜರು ರಚಿಸಿರುವ ಲಕ್ಷೀಶೋಭಾನ ಪದವನ್ನು ಮದುವೆ ಮನೆಯಲ್ಲಿ ಹಾಡಿದರೆ ಮದುಮಕ್ಕಳಿಗೆ ಶುಭವಾಗುತ್ತದೆಂಬ ನಂಬಿಕೆ ಇದೆ. ಲಕ್ಷೀಶೋಭಾನದಲ್ಲಿ ಬರುವ ಈ ಚರಣ ಆದಕ್ಕೆಕಾರಣವಾಗಿರಬಹುದು- "ಮದುವೆಯ ಮನೆಯಲ್ಲಿ ಈ ಪದವ ಪಾಡಿದರೆ ಮದುಮಕ್ಕಳಿಗೆ ಮುದವಹುದು
ವಧುಗಳಿಗೆ ಓಲೆ ಭಾಗ್ಯ ದಿನದಿನಕೆ ಹೆಚ್ಚುವುದು ಮದನನಯ್ಯನ ಕೃಪೆಯಿಂದ".
೧.ತಾಳುವಿಕೆಗಿಂತ ತಪವು ಇಲ್ಲ |ಪ|
ಕೇಳ ಬಲ್ಲವರಿಗೆ ಹೇಳುವೆನು ಸೊಲ್ಲ ||ಅ.ಪ||.
೨.ಹಣವೆ ನಿನ್ನಯ ಗುಣವೇನು ಬಣ್ಣಿಪೆನೊ |ಪ| ಹಣವಿಲ್ಲದವನೊಬ್ಬ ಹೆಣವೇ ಸರಿ ಕಂಡ್ಯಾ ||ಅ.ಪ||.
೩.ಮಂಡೆ ಬೋಳಾದರೇನು ಮನಶ್ಯುಧ್ಧಿಯಿಲ್ಲವು |ಪ|ಕಂಡು ಹಯವದನ ನನ್ನ ಒಲಿಸಿಕೊಂಡು ಧಾನ್ಯ ||ಅ.ಪ||.
೪.ಲಕ್ಷ್ಮೀರಮಣಗೆ ಮಾಡಿದಳು ಉರುಟಾಣಿ |ಪ| ಇಳೆಯೊಳಗತಿಜಾಣಿ ಸುಂದರ ಫಣಿವೇಣಿ ||ಅ.ಪ||.
This article uses material from the Wikipedia ಕನ್ನಡ article ವಾದಿರಾಜರು, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.