ಶಾಂತಿ ಕುಟೀರ

ಸಮರ್ಥ ಸದ್ಗುರು (ಸ.ಸ) ಶ್ರೀ ಗಣಪತರಾವ ಮಹಾರಾಜರು ಕರ್ನಾಟಕ ಮತ್ತು ಮಹಾರಾಷ್ಟ್ರ ಭಾಗದ ಆಧ್ಯಾತ್ಮ ಗುರುಗಳಾಗಿದ್ದರು.

ಮಹಾರಾಜರು ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಕನ್ನೂರ ಗ್ರಾಮದವರು.

ಶಾಂತಿ ಕುಟೀರ
ಸ.ಸ.ಗಣಪತರಾವ ಮಹಾರಾಜ, ಶಾಂತಿ ಕುಟೀರ ಆಶ್ರಮ, ಕನ್ನೂರ

ಶಾಂತಿ ಕುಟೀರ

ಸ.ಸ ಗಣಪತರಾವ ಮಹಾರಾಜರು ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಕನ್ನೂರ ಗ್ರಾಮದಲ್ಲಿ ಶಾಂತಿ ಕುಟೀರ ಆಶ್ರಮವನ್ನು ಸ್ಥಾಪಿಸಿದ್ದಾರೆ.

ಜನನ

ಶ್ರೀ ಗಣಪತರಾವ ಮಹಾರಾಜರು ಶ್ರೀ ದತ್ತಾತ್ರೆಯ ಭಕ್ತರಾದ ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಕನ್ನೂರ ಗ್ರಾಮದ ಸುಸಂಸ್ಕತ ಮನೆತನದ ಶಿವರಾಮ ಪಂತ ಹಾಗೂ ಸರಸ್ವತಿ ದಂಪತಿಯ ಐದು ಜನ ಪುತ್ರರಲ್ಲಿ ಮೂರನೇಯವರಾಗಿ 1909 ರಲ್ಲಿ ಭಾದ್ರಪದ ಶುದ್ದ ಚತುರ್ಥಿ(ಗಣೇಶ ಚತುರ್ಥಿ) ಯಂದು ಬೆಳಿಗ್ಗೆ 5 ಗಂಟೆಗೆ ಜನಿಸಿದರು.

ವಿದ್ಯಾಭ್ಯಾಸ

ಮೆಟ್ರಿಕ್‌ವರೆಗೆ ವಿಜಯಪುರದ ಪಿ.ಡಿ.ಜೆ ಹೈಸ್ಕೂಲದಲ್ಲಿ ಓದಿದ ಇವರು ಆಧ್ಯಾತ್ಮಿಕ ಸಾಧನೆ ಮಾಡುತ್ತಲೇ ವಿದ್ಯಾಭ್ಯಾಸವನ್ನು ಮುಂದುವರೆಸಿ ಸಾಂಗ್ಲಿಯ ವೆಲ್ಲಿಂಗಟನ್ ಕಾಲೇಜ್, ಧಾರವಾಡದ ಕರ್ನಾಟಕ ಕಾಲೇಜ್ ಮತ್ತು 1932ರಲ್ಲಿ ಪುಣೆಯ ಫಗ್ರ್ಯೂಸನ್ ಕಾಲೇಜಿನಿಂದ ಬಿ.ಎಸ್‍.ಸಿ. ಪದವಿಯನ್ನು ಪಡೆದರು.

ಆಧ್ಯಾತ್ಮ

ಬಾಲ್ಯದಲ್ಲೇ ಆಧ್ಯಾತ್ಮದ ಕಡೆಗೆ ಒಲವುಳ್ಳವರಾಗಿದ್ದ ಗಣಪತರಾವ್ ಮಹಾರಾಜರು ಚಿಕ್ಕ ದೇವರ ದರ್ಶನದ ಹಂಬಲವುಳ್ಳವರಾಗಿ ನಿತ್ಯವೂ ವಿಜಯಪುರದ ಶ್ರೀ ದತ್ತಾತ್ರೆಯ ದೇವಸ್ಥಾನಕ್ಕೆ ಹೋಗಿ ಪ್ರಾರ್ಥಿಸುತ್ತಿದ್ದರು. ತಮ್ಮ 13ನೇ ವಯಸ್ಸಿನಲ್ಲೇ ಗುರುಗಳಾದ ಶ್ರೀ ಸಿದ್ದರಾಮೇಶ್ವರ ಮಹಾರಾಜರ ಪ್ರವಚನಗಳಿಂದ ಪ್ರಭಾವಿತರಾಗಿ ಅವರಿಂದ ಶಿಷ್ಯತ್ವ ಸ್ವೀಕರಿಸಿದರು. ಮನೆಯ ಬಾಗಿಲಿಗೆ ಬಂದ ನೌಕರಿಯನ್ನು ನಿರಾಕರಿಸಿ ಕನ್ನೂರಿನ ತಮ್ಮ ಸ್ವಂತ ಹೊಲದಲ್ಲಿಯೇ ಬಂದು ನೆಲೆಸಿ ಆಧ್ಯಾತ್ಮ ಸಾಧನೆಯನ್ನು ಮುಂದುವರಿಸಿದರು. ಅಲ್ಲಿ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತ ಮೊದಲಿದ್ದ ಪುಟ್ಟ ಮನೆ ಬದಲಾಗುತ್ತ ಹೋಗಿ ಭಕ್ತರ ಆಶ್ರಮವಾಯಿತು. ಈಗ ಸುಮಾರು 2000 ಭಕ್ತರು ಕೂಡುವಂತಹ ದೊಡ್ಡ ಪ್ರವಚನ ಮಂದಿರ, ವಿಶಾಲ ಭೋಜನ ಶಾಲೆ, ಉಳಿದುಕೊಳ್ಳಲು ನೂರಕ್ಕೂ ಹೆಚ್ಚು ಕೋಣೆಗಳನ್ನು ಆಶ್ರಮವು ಹೊಂದಿದೆ.

ತಮ್ಮ ಸದ್ಗುರು ಶ್ರೀ ಸಿದ್ದರಾಮೇಶ್ವರ ಮಹಾರಾಜರು 1936 ರಲ್ಲಿ ದೇಹತ್ಯಾಗ ಮಾಡಿದ ನಂತರ ಸದ್ಗುರುಗಳ ಕೃಪಾರ್ಶಿವಾದದಿಂದ 1942 ರಲ್ಲಿ ಗುರುಸ್ಥಾನದಲ್ಲಿ ಭೂಷಿತರಾಗಿ 1962 ರವರೆಗೆ ಶ್ರೀ ಕ್ಷೇತ್ರ ಇಂಚಗೇರಿ ಮಠದಲ್ಲಿಯೇ ಇದ್ದರು. ಶ್ರೀ ಸದ್ಗುರು ಗಣಪತರಾವ ಮಹಾರಾಜರ ಅಮೃತವಾಣಿಯು ಜನರಿಗೆ ಪ್ರಿಯವಾಗಿ ಕರ್ನಾಟಕ, ಮಹಾರಾಷ್ಟ್ರ ಭಾಗದ ಸಹಸ್ರ ಸಹಸ್ರ ಜನರು ಅವರ ಶಿಷ್ಯರಾದರು. ಶಿಷ್ಯರ ಸಾಧನಕ್ಕೆ ಪುಷ್ಠಿಯಾಗುವದಕ್ಕಾಗಿ ಸ್ವಾನುಭವದ ಗ್ರಂಥಗಳನ್ನು ಕನ್ನಡ, ಮರಾಠಿಯಲ್ಲಿ ರಚಿಸಿದರು. ಕೆಲವು ಗ್ರಂಥಗಳು ಹಿಂದಿ, ಇಂಗ್ಲೀಷ, ಭಾಷೆಗೆ ತುರ್ಜುಮೆಯಾದ್ದರಿಂದ ದೇಶ ವಿದೇಶದವರು ಸಹ ಕನ್ನೂರ ಆಶ್ರಮಕ್ಕೆ ಬಂದು ಹೋಗುತ್ತಿದ್ದರು. ಆಜನ್ಮ ಬ್ರಹ್ಮಚಾರಿಗಳಾಗಿ, ಸ್ವಾನುಭವಿಗಳಾಗಿ ಶಿಷ್ಯರ ಕಲ್ಯಾಣ ಬಯಸುತ್ತ ಭಕ್ತರ ಪಾಲಿಗೆ ನಡೆದಾಡುವ ದೇವರೆನಿಸಿದರು. ಆದ್ದರಿಂದ ಇಂದ್ರಿಯ ಸುಖಕ್ಕೆ ಅತಿಯಾಗಿ ಬಲಿಯಾಗದೇ, ಪ್ರಾರಬ್ಧಾನುಕಾರವಾಗಿ ಬಂದ ವಿಷಯಗಳನ್ನು ಆನಂದದಿಂದ ಸ್ವೀಕರಿಸಬೇಕು ಮತ್ತು ಪ್ರಯತ್ನದಿಂದ ಪರಮಾರ್ಥ ಸಾಧಿಸಬೇಕು. ನಾವು ಎಲ್ಲಿಯೇ ಇದ್ದರೂ ಮತ್ತು ಎಂಥದ್ದೇ ಪರಿಸ್ಥಿತಿಯಲ್ಲಿದ್ದರೂ ಆನಂದದಿಂದಿರುವುದನ್ನು ಮಾಡಿಕೊಳ್ಳಬೇಕು

ಸಪ್ತಾಹ

ಆಶ್ರಮದಲ್ಲಿ ಪ್ರತಿ ವರ್ಷ ಗಣೇಶ ಚೌತಿ, ದತ್ತ ಜಯಂತಿ ಹಾಗೂ ಯುಗಾದಿ ಸಪ್ತಾಹಗಳು ನಡೆಯುತ್ತವೆ. ಗಣೇಶ ಚತುರ್ಥಿಯಂದು ಜನಿಸಿದ ಸದ್ಗುರುಗಳ ಜನ್ಮೋತ್ಸವವನ್ನು ಜ್ಞಾನಸತ್ರದ ರೂಪದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.

ನಿಧನ

ಯಾವದೇ ಭೇದಭಾವವಿಲ್ಲದೇ ಎಲ್ಲ ವರ್ಗದ ಜನರನ್ನು ಅತ್ಯಂತ ಪ್ರೀತಿಯಿಂದ ಕಾಣುತ್ತಿದ್ದ, ಕರ್ನಾಟಕ ಮತ್ತು ಮಹಾರಾಷ್ಟ್ರದ ಸಂತರೆಲ್ಲರಿಗೂ ಬಹು ಆತ್ಮೀಯರಾಗಿದ್ದ ಶ್ರೀ ಗಣಪತರಾವ್ ಮಹಾರಾಜರು ಅಗಷ್ಟ್ 18, 2004ರಲ್ಲಿ ಭಾದ್ರಪದ ಶಷ್ಠಿಯಂದು ತಮ್ಮ ಇಚ್ಚೆಯಂತೆ ದೇಹತ್ಯಾಗ ಮಾಡಿದರು.

ಸಂದೇಶ

ನೀವೆಲ್ಲ ಮೂಲತಃ ಆನಂದಸ್ವರೂಪರೇ ಇದ್ದೀರಿ, ಆನಂದದಿಂದ ಬಾಳಿ ಬದುಕಿರಿ, ಎಲ್ಲರ ಮೇಲೆ ಪ್ರೇಮ ಮಾಡಿರಿ, ಆನಂದದ ಮೂಲಾಧಾರದಿಂದಲೇ ಸಹಜಸ್ಥಿತಿ ಹೊಂದಿರಿ ಎಂದು ಸಂದೇಶ ನೀಡಿದವರು ನಡೆದಾಡುವ ದೇವರೆಂದೆನಿಸಿದ್ದ ವಿಜಯಪುರ ತಾಲಲ್ಲೂಕಿನ ಸುಕ್ಷೇತ್ರ ಕನ್ನೂರ ಶಾಂತಿಕುಟೀರ ಆಶ್ರಮದ ಸ್ಥಾಪಕರಾದ ಸಮರ್ಥ ಸದ್ಗುರು ಶ್ರೀ ಗಣಪತರಾವ ಮಹಾರಾಜರು.

ಉಲ್ಲೇಖಗಳು

Tags:

ಶಾಂತಿ ಕುಟೀರ ಶಾಂತಿ ಕುಟೀರ ಜನನಶಾಂತಿ ಕುಟೀರ ವಿದ್ಯಾಭ್ಯಾಸಶಾಂತಿ ಕುಟೀರ ಆಧ್ಯಾತ್ಮಶಾಂತಿ ಕುಟೀರ ಸಪ್ತಾಹಶಾಂತಿ ಕುಟೀರ ನಿಧನಶಾಂತಿ ಕುಟೀರ ಸಂದೇಶಶಾಂತಿ ಕುಟೀರ ಉಲ್ಲೇಖಗಳುಶಾಂತಿ ಕುಟೀರಕನ್ನೂರಕರ್ನಾಟಕಮಹಾರಾಷ್ಟ್ರವಿಜಯಪುರ

🔥 Trending searches on Wiki ಕನ್ನಡ:

ವಿಜ್ಞಾನಮಂಗಳೂರುಕೊಡಗುಸಾರಾ ಅಬೂಬಕ್ಕರ್ಕನ್ನಡ ರಾಜ್ಯೋತ್ಸವವಿರೂಪಾಕ್ಷ ದೇವಾಲಯಜ್ಯೋತಿಷ ಶಾಸ್ತ್ರವಚನ ಸಾಹಿತ್ಯಹಗ್ಗಕ್ಷಯಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುರಜಪೂತಮುಖ್ಯ ಪುಟಕರ್ತವ್ಯಜ್ಞಾನಪೀಠ ಪ್ರಶಸ್ತಿತತ್ಸಮ-ತದ್ಭವಹಲ್ಮಿಡಿ ಶಾಸನಪುರಾಣಗಳುಅಷ್ಟಾಂಗ ಯೋಗಸಮುಚ್ಚಯ ಪದಗಳುರಾಯಲ್ ಚಾಲೆಂಜರ್ಸ್ ಬೆಂಗಳೂರುಜೈಮಿನಿ ಭಾರತಬೇವುಕನ್ನಡದಲ್ಲಿ ಸಣ್ಣ ಕಥೆಗಳುಹೊನೊಲುಲುಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗುಪ್ತಗಾಮಿನಿ (ಧಾರಾವಾಹಿ)ಮೂಲಧಾತುಭಾರತದ ಆರ್ಥಿಕ ವ್ಯವಸ್ಥೆಅಭಿಮನ್ಯುರಾಜ್ಯಕನ್ನಡದಲ್ಲಿ ವಚನ ಸಾಹಿತ್ಯಇಂಡೋನೇಷ್ಯಾಶಬ್ದ ಮಾಲಿನ್ಯಸರ್ಕಾರೇತರ ಸಂಸ್ಥೆಆರ್ಯಭಟ (ಗಣಿತಜ್ಞ)ಸೇನಾ ದಿನ (ಭಾರತ)ಚೋಮನ ದುಡಿಆದಿ ಶಂಕರರು ಮತ್ತು ಅದ್ವೈತಹೊಯ್ಸಳಜಾತಿಕನ್ನಡ ಕಾಗುಣಿತಪ್ರಜಾಪ್ರಭುತ್ವದ ಲಕ್ಷಣಗಳುಚೆನ್ನಕೇಶವ ದೇವಾಲಯ, ಬೇಲೂರುಕುದುರೆಮುಖಜಿ.ಪಿ.ರಾಜರತ್ನಂಉಡುಪಿ ಜಿಲ್ಲೆಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳುಕಲಿಯುಗಜೀವಸತ್ವಗಳುಸಿಂಗಾಪುರಶಿರ್ಡಿ ಸಾಯಿ ಬಾಬಾಕನ್ನಡಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷೀಯ ಚುನಾವಣೆ ೨೦೧೬ಶನಿಬ್ಲಾಗ್ಕರ್ನಾಟಕದ ವಾಸ್ತುಶಿಲ್ಪಕಥೆಗೃಹರಕ್ಷಕ ದಳಸದಾನಂದ ಮಾವಜಿಧರ್ಮಸ್ಥಳಭಾರತೀಯ ಭೂಸೇನೆಆಡಮ್ ಸ್ಮಿತ್ಪ್ರೇಮಾವ್ಯಾಪಾರಡಾ ಬ್ರೋಹೃದಯಆಧುನಿಕ ವಿಜ್ಞಾನಜವಾಹರ‌ಲಾಲ್ ನೆಹರುಕರ್ನಾಟಕದ ನದಿಗಳುಕನ್ನಡ ಸಾಹಿತ್ಯ ಪರಿಷತ್ತುವಾಟ್ಸ್ ಆಪ್ ಮೆಸ್ಸೆಂಜರ್ಕಲೆಕೆ. ಅಣ್ಣಾಮಲೈವೆಂಕಟೇಶ್ವರ ದೇವಸ್ಥಾನಸಂಚಿ ಹೊನ್ನಮ್ಮಜ್ವರನಿರ್ವಹಣೆ, ಕಲೆ ಮತ್ತು ವಿಜ್ಞಾನ🡆 More