ಇವರು ೧೯೫೦ರಲ್ಲಿ ಧಾರವಾಡ ಜಿಲ್ಲೆಯ 'ಶಿಗ್ಗಾಂವ್' (ಜಿಲ್ಲೆಯ) (ಈಗ ಹಾವೇರಿ ಜಿಲ್ಲೆಯಲ್ಲಿದೆ) ಗ್ರಾಮದ ಕುಲಕರ್ಣಿ ಮನೆತನದಲ್ಲಿ ೧೯೫೦ ರ ಆಗಸ್ಟ್ ೧೯, ರಂದು ಜನಿಸಿದರು. ಜಯಶ್ರೀ ದೇಶಪಾಂಡೆಸುಧಾಮೂರ್ತಿಯವರ ಸೋದರಿ. ಜಯಶ್ರೀ ದೇಶಪಾಂಡೆ ಮತ್ತು ಅವರ ಪತಿ, ಗುರುರಾಜ ದೇಶಪಾಂಡೆ, ಜೊತೆಗೂಡಿ ಉದ್ಯಮಶೀಲತೆ ಗುಣ ಬೆಳೆಸುವ ಮಹತ್ವದ ಉದ್ದೇಶದೊಂದಿಗೆ 1996ರಲ್ಲಿ ಹುಟ್ಟು ಹಾಕಿದ ‘ದೇಶಪಾಂಡೆ ಪ್ರತಿಷ್ಠಾನ’ ವಿನೂತನ ಕಾರ್ಯಕ್ರಮಗಳಿಂದಾಗಿ ಉತ್ತರ ಕರ್ನಾಟಕದಲ್ಲಿ ಸಾಮಾಜಿಕ ಬದಲಾವಣೆಗೆ ಕಾರಣವಾಗಿದೆ.
ಬಾಲ್ಯ-ಶಿಕ್ಷಣ
ಸುಧಾ ಕುಲಕರ್ಣಿಯವರ ತಂದೆ, ರಾಮಚಂದ್ರ ಕುಲಕರ್ಣಿಯವರು ಹುಬ್ಬಳ್ಳಿಯ ಕೆ.ಎಂ.ಕಾಲೇಜಿನ ಸ್ತ್ರೀ ರೋಗ ತಜ್ಞರು, ಪ್ರಾಧ್ಯಾಪಕರು. ತಾಯಿ ವಿಮಲಾ ಕುಲಕರ್ಣಿಯವರು ಪದವಿ ಪರೀಕ್ಷೆಯಲ್ಲಿ ಚಿನ್ನದ ಪದಕ ಗಳಿಸಿದ್ದರು. ಈ ದಂಪತಿಗಳಿಗೆ ೪ ಜನ ಮಕ್ಕಳು. ಅವರು ಬೆಂಗಳೂರಿನ ಟಾಟಾ ಇನ್ಸ್ಟಿ ಟ್ಯೂಟ್' ನಲ್ಲಿ ಎಮ್.ಇ (ಕಂಪ್ಯೂಟರ್ ಸೈನ್ಸ್) ಪದವಿಗಳಿಸಿದರು. ಚಿನ್ನದ ಪದಕ ಗಳಿಸಿದ ಏಕೈಕ ಮಹಿಳಾ ವಿದ್ಯಾರ್ಥಿನಿ. ಸುಧಾ ಅವರ ಪ್ರಾಥಮಿಕ ಮಾಧ್ಯಮಿಕ ಮತ್ತು ಹೈಸ್ಕೂಲ್ ವಿದ್ಯಾಭ್ಯಾಸವೆಲ್ಲಾ ಅವರ ಹುಟ್ಟೂರಾದ ಹಾವೇರಿ ಜಿಲ್ಲೆಯ ಶಿಗ್ಗಾಂವ್ನಲ್ಲಿ ನಡೆಯಿತು. ೧೯೬೬ರಲ್ಲಿ ಹುಬ್ಬಳ್ಳಿಯ ನ್ಯೂ ಎಜ್ಯುಕೇಶನ್ ಸೊಸೈಟಿ ಯ ಗರ್ಲ್ಸ್ ಇಂಗ್ಲಿಷ್ ಸ್ಕೂಲ್ ನಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದರು..
೧೯೭೨ರಲ್ಲಿ ಹುಬ್ಬಳ್ಳಿಯ ಬಿ.ವಿ.ಬಿ.ಕಾಲೇಜ ಆಫ್ ಇಂಜನಿಯರಿಂಗ್ ನಲ್ಲಿ, ಇಲೆಕ್ಟ್ರಿಕಲ್ ಇಂಜನಿಯರಿಂಗ್ ನ ಎಲ್ಲ ಚತುರ್ಮಾಸಗಳಲ್ಲಿ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾದರು.
೧೯೭೪ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯಲ್ಲಿ ಕಂಪ್ಯೂಟರ್ ಸಾಯನ್ಸ್' ದಲ್ಲಿ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾದರು..
ವೃತ್ತಿ ಜೀವನ
ಸುಧಾ ಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.
೧೯೯೬ರಲ್ಲಿ ತಮ್ಮ ಪತಿ ನಾರಾಯಣ ಮೂರ್ತಿಯವರ ಜೊತೆಗೂಡಿ ಇನ್ಫೋಸಿಸ್ ಫೌಂಡೇಶನ್ ಪ್ರಾರಂಭಿಸಿದರು.
ಸಾಹಿತ್ಯ
ಸುಧಾ ಮೂರ್ತಿಯವರು ಹಲವು ಕೃತಿಗಳನ್ನು ಪ್ರಕಟಿಸಿದ್ದಾರೆ. ಕೆಲವು ಕೃತಿಗಳು ಕನ್ನಡ ಪತ್ರಿಕೆಗಳಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿವೆ.
ಕನ್ನಡ ಕೃತಿಗಳು
ಹಕ್ಕಿಯ ತೆರದಲಿ
ಶಾಲಾ ಮಕ್ಕಳಿಗಾಗಿ ಕಂಪ್ಯೂಟರ್
ಕಾವೇರಿಯಿಂದ ಮೇಕಾಂಗಿಗೆ
ಡಾಲರ್ ಸೊಸೆ
ಮಹಾಶ್ವೇತೆ
ಅತಿರಿಕ್ತೆ
ಪರಿಧಿ
ಮನದ ಮಾತು(ಅಂಕಣ ಬರಹಗಳ ಸಂಗ್ರಹ)
ಗುಟ್ಟೊಂದು ಹೇಳುವೆ
ಸಾಮಾನ್ಯರಲ್ಲಿ ಅಸಾಮಾನ್ಯರು
ದಿ ಸರ್ಪೆಂಟ್ಸ್ ರಿವೇಂಜ್
ತುಮುಲ
ಋಣ
ಯಶಸ್ವಿ
ಸಾಫ್ಟ್ ಮನ
ಏರಿಳಿತದ ದಾರಿಯಲ್ಲಿ
ನೂನಿಯ ಸಾಹಸಗಳು
ಇಂಗ್ಲೀಷ್ ಪುಸ್ತಕಗಳು
The Serpent's Revenge
How I Taught My Grandmother to Read.
Something Happened on the Way to Heaven
The Old Man and His God: Discovering the Spirit of India
The Day I Stopped Drinking Milk
Wise and Otherwise
Gently Falls the Bakula
The Accolades Galore
The Bird with Golden Wings: Stories of Wit and Magic
Dollar Bahu
Grandma's Bag of Stories (children's fiction)
The Magic Drum And Other Favourite Stories (children's stories)
House of Cards
The Mother I Never Knew (two novellas)
Three thousand stitches
The Man from the Egg
Here, There, Everywhere
Magic of the lost Temple
How the earth got its beauty (೨೦೨೧)
ಪ್ರಶಸ್ತಿ/ ಗೌರವ/ ಪುರಸ್ಕಾರ
ಭಾರತ ಸರಕಾರ - ೨೦೦೬ನೆಯ ಸಾಲಿನಲ್ಲಿ ಸುಧಾ ಮೂರ್ತಿಯವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿದೆ
ಬಿ.ಇ.(ಇಲೆಕ್ಟ್ರಿಕಲ್ ಇಂಜನಿಯರಿಂಗ್ ಪರೀಕ್ಷೆ) ಯಲ್ಲಿ ಪ್ರಥಮ ಸ್ಥಾನ ಲಭಿಸಿದಾಗ ಕರ್ನಾಟಕದ ಮುಖ್ಯ ಮಂತ್ರಿಗಳಿಂದ ಬೆಳ್ಳಿಯ ಪದಕ ಲಭಿಸಿತ್ತು.
ಐಐಟಿ ಕಾನ್ಪುರ್ದಿಂದ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ (ಹೊನೊರಿಸ್ ಕಾಸಾ)
ಎಮ್.ಟೆಕ್. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ದೊರೆತಾಗ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇಂಜನಿಯರ್ಸ್ ದಿಂದ ಬಂಗಾರದ ಪದಕ ದೊರೆತಿತ್ತು.
೧೯೯೫ರಲ್ಲಿ ಬೆಂಗಳೂರಿನ ರೋಟರಿ ಕ್ಲಬ್ ನಿಂದ ಅತ್ಯುತ್ತಮ್ಮ ಶಿಕ್ಷಕಿ ಪ್ರಶಸ್ತಿ ದೊರೆತಿದೆ.
ಪಬ್ಲಿಕ್ ರಿಲೇಶನ್ಸ್ ಸೊಸೈಟಿ ಆಫ್ ಇಂಡಿಯಾದವರಿಂದ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ.
ಸಮಾಜಸೇವೆಗಾಗಿ ಹುಬ್ಬಳ್ಳಿ ದಕ್ಷಿಣ ಭಾಗದ ರೋಟರಿ ಕ್ಲಬ್ ನಿಂದ ಪುರಸ್ಕಾರ ದೊರೆತಿದೆ.
೨೦೦೦ ನೆಯ ಸಾಲಿನ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ ಲಭಿಸಿದೆ.
ಸಮಾಜಸೇವೆಗಾಗಿ ೨೦೦೦ ಸಾಲಿನ ಓಜಸ್ವಿನಿ ಪ್ರಶಸ್ತಿ ದೊರೆತಿದೆ.
“ಮಿಲೆನಿಯಮ್ ಮಹಿಳಾ ಶಿರೋಮಣಿ' ಪ್ರಶಸ್ತಿ ಲಭಿಸಿದೆ.
ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಎಂಜನಿಯರಿಂಗ್ ಪ್ರತಿಷ್ಠಾನ ಪ್ರಶಸ್ತಿ (೨೦೦೧),
“ಶಾಲೆ ಮಕ್ಕಳಿಗಾಗಿ ಕಂಪ್ಯೂಟರ್” ಈ ಕೃತಿಗೆ ಅತ್ತಿಮಬ್ಬೆ ಪ್ರಶಸ್ತಿ ದೊರೆತಿದೆ.
ರೇಡಿಯೊ ಸಿಟಿ ಬೆಂಗಳೂರಿನಿಂದ ೨೦೦೨ರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯೆಂದು “ವರ್ಷದ ಮಹಿಳೆ ಪ್ರಶಸ್ತಿ ಲಭಿಸಿದೆ,
ಬೆಂಗಳೂರಿನ ಲೇಡೀಸ್ ಸರ್ಕಲ್ನಿಂದ ಅಚೀವರ್ಸ್ ವಿಥ್ ಎ ಹಾರ್ಟ್ ಪ್ರಶಸ್ತಿ (೨೦೦೨),
ಸಮಾಜ ಸೇವೆಗಾಗಿ, ಚೆನ್ನೈದ ಶ್ರೀ ರಾಜ-ಲಕ್ಷ್ಮಿ ಫೌಂಡೇಶನ್ ನವರು ೨೦೦೪ ರ ರಾಜ-ಲಕ್ಷ್ಮಿ ಪ್ರಶಸ್ತಿಯನ್ನು ನೀಡಿದ್ದಾರೆ.
ದೆಹಲಿಯ ಸಹಸ್ರಮಾನ ಮಹಿಳಾ ಶಿರೋಮಣಿ ಪ್ರಶಸ್ತಿ,
ಗುಲಬರ್ಗಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್,
ಶಿವಮೊಗ್ಗ ಕರ್ನಾಟಕ ಸಂಘದಿಂದ ಎಂ.ಕೆ. ಇಂದಿರಾ ಪ್ರಶಸ್ತಿ ಕೆಂಪೇಗೌಡ ಪ್ರಶಸ್ತಿ,
ಡಾ.ಸಾ.ಶಿ. ಮರುಳಯ್ಯ ಪ್ರಶಸ್ತಿ (೨೦೦೪),
ಇಂದೂರ್ ನ ದೇವಿ ಅಹಲ್ಯಾಬಾಯಿ ರಾಷ್ಟ್ರೀಯ ಪ್ರಶಸ್ತಿ (೨೦೦೫),
ಮಹಾರಾಷ್ಟ್ರದ ಶಿವಾಜಿ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ (೨೦೦೭),
ಫಾಯ್ ಫೌಂಡೇಶನ್ನಿಂದ (ಮಹಾರಾಷ್ಟ್ರ) ರಾಷ್ಟ್ರಭೂಷಣ ಪ್ರಶಸ್ತಿ,
ಆಳ್ವಾಸ್ ನುಡಿಸಿರಿ ಪ್ರಶಸ್ತಿ (೨೦೦೯),
ಬಸವಶ್ರೀ ಪ್ರಶಸ್ತಿ .
ತುಮಕೂರು ವಿ.ವಿ.ದ ಗೌರವ ಡಾಕ್ಟರೇಟ್ (೨೦೧೦) ಮುಂತಾದ ಪ್ರಶಸ್ತಿಗಳು ಸಂದಿವೆ.
This article uses material from the Wikipedia ಕನ್ನಡ article ಸುಧಾ ಮೂರ್ತಿ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses. ®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.